AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಪಾಕ್ ವೇಗಿ ಶಾಹೀನ್ ಅಫ್ರಿದಿಯನ್ನು ಭೇಟಿಯಾದ ಟೀಮ್ ಇಂಡಿಯಾ ಆಟಗಾರರು

India vs Pakistan Asia Cup 202: ಭಾರತ-ಪಾಕಿಸ್ತಾನ್ ತಂಡಗಳು ಆಗಸ್ಟ್ 28 ರಂದು ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಮುಖಾಮುಖಿಯಾಗಲಿದೆ.

IND vs PAK: ಪಾಕ್ ವೇಗಿ ಶಾಹೀನ್ ಅಫ್ರಿದಿಯನ್ನು ಭೇಟಿಯಾದ ಟೀಮ್ ಇಂಡಿಯಾ ಆಟಗಾರರು
Indian Players
TV9 Web
| Edited By: |

Updated on: Aug 27, 2022 | 10:36 AM

Share

Asia Cup 2022: ಒಂದೆಡೆ ಏಷ್ಯಾಕಪ್​ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮತ್ತೊಂದೆಡೆ ಭಾರತ-ಪಾಕಿಸ್ತಾನ್ (India vs Pakistan) ಪಂದ್ಯಕ್ಕಾಗಿ ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇನ್ನೊಂದೆಡೆ ಉಭಯ ತಂಡಗಳು ಭರ್ಜರಿ ಸಿದ್ದತೆಯಲ್ಲಿ ತೊಡಗಿಸಿಕೊಂಡಿದೆ. ಇದರ ನಡುವೆ ಟೀಮ್ ಇಂಡಿಯಾ (Team India) ಆಟಗಾರರು ಪಾಕಿಸ್ತಾನ್ ವೇಗಿ ಶಾಹೀನ್ ಅಫ್ರಿದಿಯನ್ನು ಭೇಟಿಯಾಗಿ ಕುಶಲೋಪರಿ ನಡೆಸಿದರು. ಪಾಕ್ ತಂಡದ ಎಡಗೈ ವೇಗಿ ಅಫ್ರಿದಿ ಮೊಣಕಾಲಿನ ಗಾಯದ ಕಾರಣ ಏಷ್ಯಾಕಪ್​ನಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಅವರ ತಂಡದೊಂದಿಗೆ ಯುಎಇಗೆ ಆಗಮಿಸಿದ್ದರು.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇತ್ತ ಟೀಮ್ ಇಂಡಿಯಾ ಆಟಗಾರರು ಅಭ್ಯಾಸ ಮುಗಿಸಿ ತೆರಳುತ್ತಿದ್ದ ವೇಳೆ ಶಾಹೀನ್ ಅಫ್ರಿದಿ ಮೈದಾನದ ಬಳಿ ಕೂತಿರುವುದನ್ನು ಗಮನಿಸಿದ್ದಾರೆ. ಸಾಂಪ್ರದಾಯಿಕ ಎದುರಾಳಿ ತಂಡದ ಆಟಗಾರನನ್ನು ನೋಡಿದ ಟೀಮ್ ಇಂಡಿಯಾ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಬಂದು ಹಾಸ್ಯಚಟಾಕಿ ಹಾರಿಸುತ್ತಾ ಗಾಯದ ಬಗ್ಗೆ ವಿಚಾರಿಸಿದರು.  ಇದರ ಬೆನ್ನಲ್ಲೇ ಬಂದ ವಿರಾಟ್ ಕೊಹ್ಲಿ ಕೂಡ ಗಾಯಗೊಂಡಿರುವ ಬಗ್ಗೆ ಹಾಗೂ ಗುಣಮುಖರಾಗುವ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು. ಅಲ್ಲದೆ ಗಾಯದ ಬಗ್ಗೆ ಕಾಳಜಿವಹಿಸುವಂತೆ ಸಲಹೆ ನೀಡಿದರು.

ಆ ಬಳಿಕ ಬಂದ ಟೀಮ್ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್, ತುಂಬಾ ದಿನಗಳ ಬಳಿಕ ಹಳೆಯ ಗೆಳೆಯನನ್ನು ಭೇಟಿ ಮಾಡಿದಂತೆ ಸಂಭಾಷಣೆ ನಡೆಸುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ಇನ್ನು ಶಾಹೀನ್ ಅಫ್ರಿದಿ ಮೈದಾನದಿಂದ ತೆರಳುತ್ತಿದ್ದ ವೇಳೆ ಕೆಎಲ್ ರಾಹುಲ್ ಅವರನ್ನು ಭೇಟಿಯಾದರು.

ಈ ಮೂಲಕ ಟೀಮ್ ಇಂಡಿಯಾ ಆಟಗಾರರು ಪಾಕ್ ವೇಗಿಯನ್ನು ಭೇಟಿಯಾಗಿ ಶೀಘ್ರದಲ್ಲೇ ಗಾಯ ಗುಣಮುಖವಾಗಲಿ ಎಂದು ಹಾರೈಸಿದ್ದಾರೆ. ಈ ಅಪೂರ್ವ ಕ್ಷಣಗಳ ವಿಡಿಯೋವನ್ನು ಪಾಕಿಸ್ತಾನ್ ಕ್ರಿಕೆಟ್​ ಬೋರ್ಡ್​ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದೆ. ಈ ವಿಡಿಯೋ ಇದೀಗ ವೈರಲ್ ಆಗಿದ್ದು, ಟೀಮ್ ಇಂಡಿಯಾ ಆಟಗಾರರ ಕ್ರೀಡಾ ಸ್ಪೂರ್ತಿಯ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇನ್ನು ಭಾರತ-ಪಾಕಿಸ್ತಾನ್ ತಂಡಗಳು ಆಗಸ್ಟ್ 28 ರಂದು ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಮುಖಾಮುಖಿಯಾಗಲಿದೆ. ಟಿ20 ವಿಶ್ವಕಪ್​ ಬಳಿಕ ಉಭಯ ತಂಡಗಳು ಇದೇ ಮೊದಲ ಬಾರಿಗೆ ಎದುರು ಬದುರಾಗುತ್ತಿದ್ದು, ಹೀಗಾಗಿ ಬದ್ಧವೈರಿಗಳ ಕ್ರಿಕೆಟ್ ಕದನವನ್ನು ವೀಕ್ಷಿಸಲು ಇಡೀ ವಿಶ್ವವೇ ಕಾದು ಕುಳಿತಿದೆ.

ಪಾಕಿಸ್ತಾನ ತಂಡ ಹೀಗಿದೆ: ಬಾಬರ್ ಆಜಂ (ನಾಯಕ), ಶದಾಬ್ ಖಾನ್, ಆಸಿಫ್ ಅಲಿ, ಫಖರ್ ಝಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕಾರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಝ್ವಾನ್ (ವಿಕೆಟ್‌ಕೀಪರ್), ಹಸನ್ ಅಲಿ, ನಸೀಮ್ ಶಾ, ಮೊಹಮ್ಮದ್ ಹಸ್ನೈನ್, ಶಹನವಾಝ್‌ ದಹಾನಿ, ಉಸ್ಮಾನ್‌ ಖಾದಿರ್‌.

ಟೀಮ್ ಇಂಡಿಯಾ ಹೀಗಿದೆ: ರೋಹಿತ್‌ ಶರ್ಮಾ (ನಾಯಕ), ಕೆ.ಎಲ್‌ ರಾಹುಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ದೀಪಕ್‌ ಹೂಡ, ರಿಷಭ್ ಪಂತ್‌ (ವಿಕೆಟ್‌ಕೀಪರ್‌), ದಿನೇಶ್‌ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್‌ ಕುಮಾರ್‌, ಅರ್ಷದೀಪ್‌ ಸಿಂಗ್‌, ಅವೇಶ್‌ ಖಾನ್‌, ಯುಜ್ವೇಂದ್ರ ಚಹಲ್‌, ಆರ್‌ ಅಶ್ವಿನ್‌, ರವಿ ಬಿಷ್ಣೋಯ್‌. ಮೀಸಲು ಆಟಗಾರರು: ಅಕ್ಷರ್‌ ಪಟೇಲ್‌, ದೀಪಕ್‌ ಚಹರ್‌ ಮತ್ತು ಶ್ರೇಯಸ್‌ ಅಯ್ಯರ್‌.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು