Virat Kohli: ವಿಶ್ವಕಪ್ ಸೋಲಿನ ನಂತರ ರೋಹಿತ್ ಪತ್ನಿಯ ಸಹೋದರನ ಜೊತೆ ಸಂಬಂಧ ಕೈಬಿಟ್ಟ ಕೊಹ್ಲಿ

Bunty Sajdeh and Virat Kohli: ಕಾರ್ನರ್‌ಸ್ಟೋನ್ ಸಂಸ್ಥೆ, ಕೊಹ್ಲಿಯ ಹಣಕಾಸಿನ ವ್ಯವಹಾರ, ಜಾಹೀರಾತು, ಕ್ರಿಕೆಟ್ ಮೈದಾನದ ಹೊರಗಿನ ಬ್ರ್ಯಾಂಡ್ ಕುರಿತ ಎಲ್ಲ ವ್ಯವಹಾರವನ್ನು ನೋಡಿಕೊಳ್ಳುತ್ತಿತ್ತು. ಆದರೀಗ ವಿರಾಟ್ ಕೊಹ್ಲಿ ಅವರು ಬಂಟಿ ಸಜ್ದೇ ಅವರ ಕಾರ್ನರ್‌ಸ್ಟೋನ್ ಕಂಪನಿ ಜೊತೆಗಿನ ಸಂಬಂಧವನ್ನು ಕೈಬಿಟ್ಟಿದ್ದಾರೆ.

Virat Kohli: ವಿಶ್ವಕಪ್ ಸೋಲಿನ ನಂತರ ರೋಹಿತ್ ಪತ್ನಿಯ ಸಹೋದರನ ಜೊತೆ ಸಂಬಂಧ ಕೈಬಿಟ್ಟ ಕೊಹ್ಲಿ
Virat Kohli Bunty Sajdeh and Rohit Sharma
Follow us
|

Updated on: Nov 21, 2023 | 10:25 AM

ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಏಕದಿನ ವಿಶ್ವಕಪ್ 2023 ಫೈನಲ್ (ICC ODI World Cup 2023) ಪಂದ್ಯದಲ್ಲಿ ಮೂರನೇ ಬಾರಿಗೆ ವಿಶ್ವ ಚಾಂಪಿಯನ್ ಆಗುವ ಟೀಮ್ ಇಂಡಿಯಾದ ಕನಸು ಭಗ್ನಗೊಂಡಿತು. ಭಾರತ ಈ ಆಘಾತದಿಂದ ಹೊರಬಂದಿಲ್ಲ. ಇದರ ನಡುವೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿದೆ. ವಿಶ್ವಕಪ್ ಸೋಲಿನ ನೋವಿನಲ್ಲಿರುವ ಟೀಮ್ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಕೊಹ್ಲಿ ಹತ್ತು ವರ್ಷಗಳ ನಂತರ ಬಂಟಿ ಸಜ್ದೇ ಒಡೆತನದ ಕಾರ್ನರ್‌ಸ್ಟೋನ್ ಸಂಸ್ಥೆಯಿಂದ ಬೇರ್ಪಟ್ಟಿದ್ದಾರೆ.

ಕಾರ್ನರ್‌ಸ್ಟೋನ್ ಸಂಸ್ಥೆ, ಕೊಹ್ಲಿಯ ಹಣಕಾಸಿನ ವ್ಯವಹಾರ, ಜಾಹೀರಾತು, ಕ್ರಿಕೆಟ್ ಮೈದಾನದ ಹೊರಗಿನ ಬ್ರ್ಯಾಂಡ್ ಕುರಿತ ಎಲ್ಲ ವ್ಯವಹಾರವನ್ನು ನೋಡಿಕೊಳ್ಳುತ್ತಿತ್ತು. ಆದರೀಗ ವಿರಾಟ್ ಕೊಹ್ಲಿ ಅವರು ಬಂಟಿ ಸಜ್ದೇ ಅವರ ಕಾರ್ನರ್‌ಸ್ಟೋನ್ ಕಂಪನಿ ಜೊತೆಗಿನ ಸಂಬಂಧವನ್ನು ಕೈಬಿಟ್ಟಿದ್ದಾರೆ. ಮೂಲಗಳ ಪ್ರಕಾರ, ಕೊಹ್ಲಿ ಸ್ವಂತ ಕಂಪನಿ ಆರಂಭಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ”ಕಾರ್ನರ್‌ಸ್ಟೋನ್‌ನೊಂದಿಗಿನ ಒಪ್ಪಂದವನ್ನು ಕೊಹ್ಲಿ ಕೊನೆಗೊಳಿಸಲು ನಿಜವಾದ ಕಾರಣ ಏನು ಎಂಬುದು ತಿಳಿದಿಲ್ಲ. ಆದರೆ, ಭಾರತೀಯ ಬ್ಯಾಟರ್ ಶೀಘ್ರದಲ್ಲೇ ತನ್ನ ಹೊಸ ಕಂಪನಿಯನ್ನು ಆರಂಭಿಸುವ ನಿರೀಕ್ಷೆಯಿದೆ,” ಎಂದು ಉದ್ಯಮದ ಮೂಲವೊಂದು ಕ್ರಿಕೆಟ್ ನೆಕ್ಸ್ಟ್‌ಗೆ ತಿಳಿಸಿದೆ.

ಯಾರು ಈ ಬಂಟಿ ಸಜ್ದೇ?:

ಕಾರ್ನರ್‌ಸ್ಟೋನ್ ಸಂಸ್ಥೆ ಬಂಟಿ ಸಜ್ದೇ ಒಡೆತನದ್ದಾಗಿದೆ. ಇವರು ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇ ಸೋದರ ಸಂಬಂಧಿ. ಬಂಟಿಯವರ ಕಂಪನಿ ಕಾರ್ನರ್‌ಸ್ಟೋನ್ ಬಹಳ ಸಮಯದಿಂದ ಕೊಹ್ಲಿಯ ಎಲ್ಲ ವ್ಯವಹಾರವನ್ನು ನೋಡಿಕೊಳ್ಳುತ್ತಿತ್ತು. ಈ ಹಿಂದೆ ರೋಹಿತ್ ಕೂಡ ಈ ಕಂಪನಿಯಲ್ಲೇ ಇದ್ದರು. ವಿರಾಟ್ ಕೊಹ್ಲಿ ಮತ್ತು ಬಂಟಿ ಸಜ್ದೇ ಉತ್ತಮ ಸ್ನೇಹಿತರು. ದೊಡ್ಡ ಕ್ರಿಕೆಟ್ ಪಂದ್ಯವಳಿ ಇದ್ದಾಗ ಬಂಟಿ ಅಲ್ಲಿ ಹಾಜರಿರುತ್ತಿದ್ದರು. ಕೊಹ್ಲಿ ಮತ್ತು ಬಂಟಿ ನಡುವಿನ ಪಾಲುದಾರಿಕೆಯು ಮೂಲಕವೇ ಸ್ಪೋರ್ಟ್ಸ್ ಬ್ರ್ಯಾಂಡ್ ಪೂಮಾದೊಂದಿಗೆ 100-ಕೋಟಿ ಒಪ್ಪಂದ ನಡೆದಿತ್ತು.

ಇದನ್ನೂ ಓದಿ
Image
ICC ODI World Cup 2027: ಮುಂದಿನ ಐಸಿಸಿ ಏಕದಿನ ವಿಶ್ವಕಪ್ ಯಾವಾಗ, ಎಲ್ಲಿ ನಡೆಯಲಿದೆ ಗೊತ್ತೇ?: ಎಷ್ಟು ತಂಡಗಳಿರುತ್ತವೆ?
Image
IND vs AUS, WC Final: ಮುಂಬೈ ತಲುಪಿದ ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ: ಕ್ಯಾಮೆರಾ ಕಂಡು ಗರಂ ಅನುಷ್ಕಾ
Image
ಭಾರತ-ಆಸ್ಟ್ರೇಲಿಯಾ ಟಿ20 ಸರಣಿ ಯಾವಾಗ ಆರಂಭ?, ಎಷ್ಟು ಗಂಟೆಗೆ?, ಯಾವುದರಲ್ಲಿ ನೇರಪ್ರಸಾರ?
Image
IND vs AUS T20I Series: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಿರಿಯರಿಗೆ ರೆಸ್ಟ್, ಹೊಸ ಮುಖಗಳಿಗೆ ಮಣೆ

ದುರಂಹಕಾರದಿಂದ ವಿಶ್ವಕಪ್ ಮೇಲೆ ಕಾಲಿಟ್ಟು ಕೂತ ಆಸ್ಟ್ರೇಲಿಯದ ಮಿಚೆಲ್ ಮಾರ್ಷ್ ನೆಟ್ಟಿಗರಿಂದ ಉಗಿಸಿಕೊಂಡ!

ಗಮನಿಸಬೇಕಾದ ಸಂಗತಿ ಎಂದರೆ, ಕಳೆದ ಕೆಲವು ವರ್ಷಗಳಲ್ಲಿ ಅನೇಕ ಕ್ರಿಕೆಟಿಗರು ಕಾರ್ನರ್‌ಸ್ಟೋನ್‌ನಿಂದ ಬೇರ್ಪಟ್ಟಿದ್ದಾರೆ. ಇದರಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್, ಅಜಿಂಕ್ಯಾ ರಹಾನೆ, ಶುಭ್​ಮನ್ ಗಿಲ್ ಸೇರಿದಂತೆ ಅನೇಕರು ಇದ್ದಾರೆ. ಆದರೆ ವಿರಾಟ್ ಮತ್ತು ಕಾರ್ನರ್‌ಸ್ಟೋನ್ ನಡುವೆ ಉತ್ತಮ ಬಾಂಧವ್ಯವಿತ್ತು. ಆದರೆ ಈಗ ಈ ಸಂಬಂಧ ಕೂಡ ಕೊನೆಗೊಂಡಿದೆ ಎಂದು ಕ್ರಿಕೆಟ್ ನೆಕ್ಸ್ಟ್ ವರದಿ ಮಾಡಿದೆ. ಮೂಲಗಳ ಪ್ರಕಾರ, ಕಾರ್ನರ್‌ಸ್ಟೋನ್ ಪ್ರಸ್ತುತ ಸಾನಿಯಾ ಮಿರ್ಜಾ, ಪಿವಿ ಸಿಂಧು, ಕುಲ್ದೀಪ್ ಯಾದವ್, ಉಮೇಶ್ ಯಾದವ್ ಸೇರಿದಂತೆ ಕೆಲ ದೊಡ್ಡ ಆಟಗಾರರ ವ್ಯವಹಾರವನ್ನು ನೋಡಿಕೊಳ್ಳುತ್ತಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಕನ್ನಡ ಚಿತ್ರರಂಗದ ಬಗ್ಗೆ, ಶಿವಣ್ಣನ ಬಗ್ಗೆ ನಾನಿ ಮೆಚ್ಚುಗೆಯ ಮಾತು
ಕನ್ನಡ ಚಿತ್ರರಂಗದ ಬಗ್ಗೆ, ಶಿವಣ್ಣನ ಬಗ್ಗೆ ನಾನಿ ಮೆಚ್ಚುಗೆಯ ಮಾತು
ಸದನದಲ್ಲಿ ರೇವಣ್ಣ ಕಾರ್ನರ್ ಆದಾಗ ಅಣ್ಣನ ನೆರವಿಗೆ ಧಾವಿಸಿದ ಕುಮಾರಣ್ಣ
ಸದನದಲ್ಲಿ ರೇವಣ್ಣ ಕಾರ್ನರ್ ಆದಾಗ ಅಣ್ಣನ ನೆರವಿಗೆ ಧಾವಿಸಿದ ಕುಮಾರಣ್ಣ
‘ರಾಕ್ಷಸ’ ವಿನಯ್ ಅಟ್ಟಹಾಸ, ತಲೆ ತಗ್ಗಿಸಿದ ಕಾರ್ತಿಕ್
‘ರಾಕ್ಷಸ’ ವಿನಯ್ ಅಟ್ಟಹಾಸ, ತಲೆ ತಗ್ಗಿಸಿದ ಕಾರ್ತಿಕ್
ರಾಜಕೀಯ ಭವಿಷ್ಯ ಕುರಿತು ವಿ ಸೋಮಣ್ಣ ಗೊಂದಲದಲ್ಲಿರುವುದು ಮಾತುಗಳಿಂದ ಸ್ಪಷ್ಟ
ರಾಜಕೀಯ ಭವಿಷ್ಯ ಕುರಿತು ವಿ ಸೋಮಣ್ಣ ಗೊಂದಲದಲ್ಲಿರುವುದು ಮಾತುಗಳಿಂದ ಸ್ಪಷ್ಟ
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!