AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ತಂಡಕ್ಕಾಗಿ ಸ್ಥಾನ ತ್ಯಾಗ ಮಾಡಲಿದ್ದಾರಾ ಕಿಂಗ್ ಕೊಹ್ಲಿ..?

Virat Kohli: ಮೂರನೇ ಕ್ರಮಾಂಕದ ಅತ್ಯಂತ ಯಶಸ್ವಿ ಬ್ಯಾಟರ್ ಎಂದರೆ ಅದು ವಿರಾಟ್ ಕೊಹ್ಲಿ. ಏಕೆಂದರೆ ಏಕದಿನ ಕ್ರಿಕೆಟ್​ನಲ್ಲಿ ಕೊಹ್ಲಿ ಕಲೆಹಾಕಿರುವ 12898 ರನ್‌ಗಳಲ್ಲಿ 10777 ರನ್‌ಗಳು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ ಬಂದಿವೆ.

Virat Kohli: ತಂಡಕ್ಕಾಗಿ ಸ್ಥಾನ ತ್ಯಾಗ ಮಾಡಲಿದ್ದಾರಾ ಕಿಂಗ್ ಕೊಹ್ಲಿ..?
Virat Kohli
TV9 Web
| Edited By: |

Updated on: Aug 05, 2023 | 4:30 PM

Share

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ (Team India) ಹಲವು ಪ್ರಯೋಗ ನಡೆಸಿತ್ತು. ಅದರಲ್ಲೂ ಬ್ಯಾಟಿಂಗ್​ ಕ್ರಮಾಂಕದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿತ್ತು. ಹೀಗೊಂದು ಪ್ರಯೋಗಕ್ಕಾಗಿಯೇ ವಿರಾಟ್ ಕೊಹ್ಲಿ ಮೊದಲ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್​ಗೆ ಇಳಿದಿರಲಿಲ್ಲ. ಇನ್ನು 2ನೇ ಹಾಗೂ 3ನೇ ಏಕದಿನ ಪಂದ್ಯಗಳಿಂದಲೂ ಹೊರಗುಳಿದಿದ್ದರು. ಅಚ್ಚರಿಯ ವಿಷಯ ಎಂದರೆ ಇಲ್ಲಿ ವಿರಾಟ್ ಕೊಹ್ಲಿ ಸ್ಥಾನದಲ್ಲಿ ಮೂವರು ಆಟಗಾರರು ಬ್ಯಾಟ್ ಬೀಸಿದ್ದರು.

ಅಂದರೆ ಕಿಂಗ್ ಕೊಹ್ಲಿ ಸೀಮಿತ ಓವರ್​ಗಳ ಕ್ರಿಕೆಟ್​ನಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ಇಳಿಯುತ್ತಾರೆ. ಆದರೆ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ ತಂಡದಲ್ಲಿದ್ದರೂ ಸೂರ್ಯಕುಮಾರ್​ ಯಾದವ್​ರನ್ನು ಆ ಕ್ರಮಾಂಕದಲ್ಲಿ ಕಣಕ್ಕಿಳಿಸಲಾಗಿತ್ತು. ಆದರೆ ಕೇವಲ 19 ರನ್​ಗಳಿಸಿ ಸೂರ್ಯ ನಿರಾಸೆ ಮೂಡಿಸಿದ್ದರು.

ಇನ್ನು 2ನೇ ಏಕದಿನ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದು ಸಂಜು ಸ್ಯಾಮ್ಸನ್. ಆದರೆ ಸ್ಯಾಮ್ಸನ್ ಕಲೆಹಾಕಿದ್ದು 9 ರನ್​ಗಳು ಮಾತ್ರ. ಹಾಗೆಯೇ 3ನೇ ಏಕದಿನ ಪಂದ್ಯದಲ್ಲಿ 3ನೇ ಕ್ರಮಾಂಕ ರುತುರಾಜ್ ಗಾಯಕ್ವಾಡ್ ಪಾಲಾಗಿತ್ತು. ಆದರೆ ರುತುರಾಜ್ 8 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

ಇಲ್ಲಿ ಮೂರು ಪಂದ್ಯಗಳಲ್ಲೂ ಮೂವರು ಬ್ಯಾಟರ್​ಗಳನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿಸಲಾಗಿದೆ. ಅಂದರೆ ಮೂರನೇ ಕ್ರಮಾಂಕಕ್ಕಾಗಿ ಟೀಮ್ ಇಂಡಿಯಾ ಹೊಸ ಬ್ಯಾಟರ್​ನ ಹುಡುಕಾಟದಲ್ಲಿರುವುದು ಸ್ಪಷ್ಟ.

ಇತ್ತ ವಿರಾಟ್ ಕೊಹ್ಲಿಗೆ 3ನೇ ಕ್ರಮಾಂಕದ ಖಾಯಂ ಆಗಿದ್ದರೂ, ಮುಂಬರುವ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಮೂರನೇ ಕ್ರಮಾಂಕದ ಪ್ರಯೋಗಕ್ಕೆ ಟೀಮ್ ಇಂಡಿಯಾ ಯಾಕಾಗಿ ಮುಂದಾಗಿದೆ ಎಂಬ ಪ್ರಶ್ನೆ ಹುಟ್ಟಿಕೊಳ್ಳುವುದು ಸಹಜ. ಈ ಪ್ರಶ್ನೆಗಳಿಗೆ ಸಿಗುವ ಉತ್ತರ ಕಿಂಗ್ ಕೊಹ್ಲಿಯ ಸ್ಥಾನ ಪಲ್ಲಟ.

ಕ್ರಮಾಂಕ ತ್ಯಾಗಕ್ಕೆ ಕೊಹ್ಲಿ ಸಿದ್ಧ?

ಟೀಮ್ ಇಂಡಿಯಾದ ಅತೀ ದೊಡ್ಡ ಸಮಸ್ಯೆ 4ನೇ ಕ್ರಮಾಂಕ. ಈ ಕ್ರಮಾಂಕದಲ್ಲಿ ಹಲವು ಬ್ಯಾಟರ್​ಗಳು ವಿಫಲರಾಗಿದ್ದಾರೆ. ಅದರಲ್ಲೂ 2019 ರ ಏಕದಿನ ವಿಶ್ವಕಪ್​ ಸೆಮಿಫೈನಲ್ ಸೋಲಿಗೆ ಮುಖ್ಯ ಕಾರಣ 4ನೇ ಕ್ರಮಾಂಕದ ಬ್ಯಾಟರ್​ನ ವೈಫಲ್ಯತೆ. ಇದೇ ಕಾರಣದಿಂದಾಗಿ ಟೀಮ್ ಇಂಡಿಯಾ 3ನೇ ಹಾಗೂ 4ನೇ ಕ್ರಮಾಂಕದ ಬ್ಯಾಟರ್​ಗಳ ಬದಲಾವಣೆಗೆ ಚಿಂತನೆ ನಡೆಸಿದೆ.

ಅದರ ಮೊದಲ ಮೊದಲ ಭಾಗ ಈ ಪ್ರಯೋಗ. ಅಂದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಯಾವುದಾದರೂ ಬ್ಯಾಟರ್​ ಯಶಸ್ಸು ಸಾಧಿಸಿದರೆ ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದ ಜವಾಬ್ದಾರಿವಹಿಸಿಕೊಳ್ಳಲಿದ್ದಾರೆ.

ಇತ್ತ ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಈ ಹಿಂದೆ ಖಾಯಂ ಆಗಿದ್ದರು. ಆದರೆ ಇದೀಗ ಗಾಯದ ಕಾರಣ ಅವರು ತಂಡದಿಂದ ಹೊರಗುಳಿದಿದ್ದಾರೆ. ಅಲ್ಲದೆ ಅಯ್ಯರ್ ಏಷ್ಯಾಕಪ್​ನಲ್ಲಿ ಕಾಣಿಸಿಕೊಳ್ಳುವುದು ಕೂಡ ಅನುಮಾನ.

ಇದೇ ಕಾರಣದಿಂದಾಗಿ ಇದೀಗ 3ನೇ ಕ್ರಮಾಂಕದಲ್ಲಿ ಹೊಸ ದಾಂಡಿಗನ್ನು ಕಣಕ್ಕಿಳಿಸಲು ಟೀಮ್ ಇಂಡಿಯಾ ಪ್ಲ್ಯಾನ್ ರೂಪಿಸುತ್ತಿದೆ. ಇಲ್ಲಿ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಆರಂಭಿಕರಾದರೆ, ಶುಭ್​ಮನ್ ಗಿಲ್ ಮೂರನೇ ಕ್ರಮಾಂಕದಲ್ಲಿ ಆಡಬಹುದು.

ಇತ್ತ ಗಿಲ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದರೆ ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುವ ಸಾಧ್ಯತೆ ಹೆಚ್ಚು. ಇದೇ ಕಾರಣದಿಂದಾಗಿ ವೆಸ್ಟ್ ಇಂಡೀಸ್ ವಿರುದ್ಧ 3ನೇ ಕ್ರಮಾಂಕದ ಪ್ರಯೋಗ ನಡೆಸಲಾಗಿದೆ. ಆದರೆ ಈ ಪ್ರಯೋಗ ಫಲ ನೀಡಿಲ್ಲ.

ಇದನ್ನೂ ಓದಿ: Tilak Varma: ದಾಖಲೆಯೊಂದಿಗೆ ಹೊಸ ಇನಿಂಗ್ಸ್ ಆರಂಭಿಸಿದ ತಿಲಕ್ ವರ್ಮಾ

ಇದಾಗ್ಯೂ ತಂಡದಲ್ಲಿ ಯುವ ದಾಂಡಿಗ ಶುಭ್​ಮನ್ ಗಿಲ್ ಇದ್ದು, ಏಷ್ಯಾಕಪ್​ನಲ್ಲಿ ಪಂಜಾಬಿ ಬ್ಯಾಟರ್​ನನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಸಿ 4ನೇ ಕ್ರಮಾಂಕದ ಜವಾಬ್ದಾರಿಯನ್ನು ವಿರಾಟ್ ಕೊಹ್ಲಿಗೆ ವಹಿಸುವ ಸಾಧ್ಯತೆ ಇದೆ.

3ನೇ ಕ್ರಮಾಂಕದಲ್ಲಿ ಕೊಹ್ಲಿಯೇ ಕಿಂಗ್:

ಇಲ್ಲಿ ಮತ್ತೊಂದು ಇಂಟ್ರೆಸ್ಟಿಂಗ್ ವಿಷಯ ಎಂದರೆ ಮೂರನೇ ಕ್ರಮಾಂಕದ ಅತ್ಯಂತ ಯಶಸ್ವಿ ಬ್ಯಾಟರ್ ಎಂದರೆ ಅದು ವಿರಾಟ್ ಕೊಹ್ಲಿ. ಏಕೆಂದರೆ ಏಕದಿನ ಕ್ರಿಕೆಟ್​ನಲ್ಲಿ ಕೊಹ್ಲಿ ಕಲೆಹಾಕಿರುವ 12898 ರನ್‌ಗಳಲ್ಲಿ 10777 ರನ್‌ಗಳು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ ಬಂದಿವೆ. ಅಲ್ಲದೆ ಒನ್​ಡೌನ್ ವೇಳೆ ಕಣಕ್ಕಿಳಿದು ಕೊಹ್ಲಿ 39 ಶತಕಗಳನ್ನು ಕೂಡ ಬಾರಿಸಿದ್ದಾರೆ. ಹೀಗಾಗಿ ಕೊಹ್ಲಿಯ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ತಂದರೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯನ್ನೂ ಕೂಡ ತಳ್ಳಿಹಾಕುವಂತಿಲ್ಲ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ