AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಗೂಗಲ್ ಸರ್ಚ್​ನಲ್ಲೂ ವಿರಾಟ್ ಕೊಹ್ಲಿಯೇ ಕಿಂಗ್..!

Virat Kohli: ಗೂಗಲ್ ಸರ್ಚ್​ ಇಂಜಿನ್​ನ ಅತ್ಯಂತ ಜನಪ್ರಿಯ ಕ್ರಿಕೆಟ್ ತಾರೆಯಾಗಿ ವಿರಾಟ್ ಕೊಹ್ಲಿ ಹೊರಹೊಮ್ಮಿದ್ದಾರೆ. ಇನ್ನು ಕ್ರೀಡಾಪಟುಗಳ ಪಟ್ಟಿಯಲ್ಲಿ ಗೂಗಲ್ ಹುಡುಕಾಟದಲ್ಲಿ ಮುಂದಿರುವುದು ಫುಟ್​ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಹೆಸರು.

Virat Kohli: ಗೂಗಲ್ ಸರ್ಚ್​ನಲ್ಲೂ ವಿರಾಟ್ ಕೊಹ್ಲಿಯೇ ಕಿಂಗ್..!
Virat Kohli
TV9 Web
| Edited By: |

Updated on:Dec 12, 2023 | 3:38 PM

Share

ಕ್ರಿಕೆಟ್​ ಅಂಗಳದಲ್ಲಿ ದಾಖಲೆಗಳ ಮೇಲೆ ದಾಖಲೆ ನಿರ್ಮಿಸುತ್ತಾ ನಾಗಾಲೋಟ ಮುಂದುವರೆಸಿರುವ ವಿರಾಟ್ ಕೊಹ್ಲಿ (Virat Kohli) ಮತ್ತೊಂದು ಹಿರಿಮೆಗೆ ಪಾತ್ರರಾಗಿದ್ದಾರೆ. ಅದು ಕೂಡ ಗೂಗಲ್​ನಲ್ಲಿ ಅತೀ ಹೆಚ್ಚು ಬಾರಿ ಹುಡುಕಲ್ಪಟ್ಟ ಕ್ರಿಕೆಟಿಗನಾಗಿ. ಅಂದರೆ 25 ವರ್ಷಗಳ ಗೂಗಲ್​ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಹುಡುಕಲ್ಪಟ್ಟ ಕ್ರಿಕೆಟಿಗ ವಿರಾಟ್ ಕೊಹ್ಲಿ ಎಂದು ಗೂಗಲ್ ಘೋಷಿಸಿದೆ.

ಈ ಮೂಲಕ ಗೂಗಲ್ ಸರ್ಚ್​ ಇಂಜಿನ್​ನ ಅತ್ಯಂತ ಜನಪ್ರಿಯ ಕ್ರಿಕೆಟ್ ತಾರೆಯಾಗಿ ವಿರಾಟ್ ಕೊಹ್ಲಿ ಹೊರಹೊಮ್ಮಿದ್ದಾರೆ. ಇನ್ನು ಕ್ರೀಡಾಪಟುಗಳ ಪಟ್ಟಿಯಲ್ಲಿ ಗೂಗಲ್ ಹುಡುಕಾಟದಲ್ಲಿ ಮುಂದಿರುವುದು ಫುಟ್​ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಹೆಸರು.

ಪೋರ್ಚುಗಲ್​ನ ಖ್ಯಾತ  ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಗೂಗಲ್ ಸರ್ಚ್​ನಲ್ಲಿ ಅತೀ ಹೆಚ್ಚು ಬಾರಿ ಹುಡುಕಲ್ಪಟ್ಟ ಫುಟ್​ಬಾಲ್ ಆಟಗಾರ. ಈ ಪಟ್ಟಿಯಲ್ಲಿ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿ ದ್ವಿತೀಯ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ: IPL 2024 Auction: 2 ಕೋಟಿ ರೂ. ಮೂಲ ಬೆಲೆಯಲ್ಲಿ ಕೇವಲ ಮೂವರು ಭಾರತೀಯರು

ಹಾಗೆಯೇ ಗೂಗಲ್​ನಲ್ಲಿ ಅತೀ ಹೆಚ್ಚು ಹುಡುಕಲ್ಪಟ್ಟ ಕ್ರೀಡೆ ಫುಟ್​ಬಾಲ್. ಕಾಲ್ಚೆಂಡಾಟದ ಕುರಿತಾಗಿ ವಿಶ್ವ ಕ್ರೀಡಾ ಪ್ರೇಮಿಗಳು ಅತೀ ಹೆಚ್ಚು ಬಾರಿ ಸರ್ಚ್​ ಮಾಡಿದ್ದಾರೆ.

2023 ರಲ್ಲಿ ಭಾರತೀಯರು ಗೂಗಲ್​ನಲ್ಲಿ ಹೆಚ್ಚು ಹುಡುಕಿದ್ದೇನು?

ಗೂಗಲ್ 2023 ರಲ್ಲಿ ಭಾರತೀಯರು ಹುಡುಕಿದ ವಿಷಯಗಳ ಪಟ್ಟಿಯನ್ನು ಕೂಡ ಪ್ರಕಟಿಸಿದೆ. ಕ್ರೀಡಾ ವಿಭಾಗದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಅನ್ನು ಅತೀ ಹೆಚ್ಚು ಬಾರಿ ಸರ್ಚ್ ಮಾಡಿದ್ದಾರೆ. ಇನ್ನು ಕ್ರಿಕೆಟ್ ವರ್ಲ್ಡ್​ ಕಪ್, ಏಷ್ಯಾಕಪ್ ಹಾಗೂ ವುಮೆನ್ಸ್ ಪ್ರೀಮಿಯರ್ ಲೀಗ್ ನಂತರದ ಸ್ಥಾನಗಳಲ್ಲಿವೆ. ​

ಭಾರತೀಯರು ಗೂಗಲ್​ನಲ್ಲಿ ಅತೀ ಹೆಚ್ಚು ಹುಡುಕಾಡಿದ ಕ್ರೀಡಾ ವಿಷಯಗಳು:

  1. ಇಂಡಿಯನ್ ಪ್ರೀಮಿಯರ್ ಲೀಗ್
  2. ಕ್ರಿಕೆಟ್ ವರ್ಲ್ಡ್​ ಕಪ್
  3. ಏಷ್ಯಾ ಕಪ್
  4. ವುಮೆನ್ಸ್ ಪ್ರೀಮಿಯರ್ ಲೀಗ್
  5. ಏಷ್ಯನ್ ಗೇಮ್ಸ್
  6. ಇಂಡಿಯನ್ ಸೂಪರ್ ಲೀಗ್
  7. ಪಾಕಿಸ್ತಾನ ಸೂಪರ್ ಲೀಗ್
  8. ಆ್ಯಶಸ್
  9. ವುಮೆನ್ಸ್​ ಕ್ರಿಕೆಟ್ ವಿಶ್ವಕಪ್
  10. SA20 (ಸೌತ್ ಆಫ್ರಿಕಾ 20)

Published On - 3:35 pm, Tue, 12 December 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್