ಪ್ರೇಮದಾಸ ಸ್ಟೇಡಿಯಂನಲ್ಲಿ ಕೊಹ್ಲಿಯೇ ಕಿಂಗ್: ಪಾಕ್​ ಬೌಲರ್​ಗಳಿಗೆ ನಡುಕ ಶುರು

India vs Pakistan: ಭಾರತ-ಪಾಕಿಸ್ತಾನ್ ನಡುವಣ ಪಂದ್ಯಕ್ಕೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮೀಸಲು ದಿನವನ್ನು ಘೋಷಿಸಿದೆ. ಅಂದರೆ ಭಾನುವಾರ ನಡೆಯುವ ಪಂದ್ಯವು ಮಳೆಯಿಂದಾಗಿ ಸ್ಥಗಿತಗೊಂಡರೆ ಸೋಮವಾರ ಪಂದ್ಯವನ್ನು ಮುಂದುವರೆಸಲಾಗುತ್ತದೆ. ಹೀಗಾಗಿ ಸೂಪರ್-4 ಹಂತದ ಈ ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿದರೂ ಫಲಿತಾಂಶವನ್ನು ನಿರೀಕ್ಷಿಸಬಹುದು.

ಪ್ರೇಮದಾಸ ಸ್ಟೇಡಿಯಂನಲ್ಲಿ ಕೊಹ್ಲಿಯೇ ಕಿಂಗ್: ಪಾಕ್​ ಬೌಲರ್​ಗಳಿಗೆ ನಡುಕ ಶುರು
Virat Kohli
Follow us
| Updated By: ಝಾಹಿರ್ ಯೂಸುಫ್

Updated on: Sep 09, 2023 | 5:01 PM

ಏಷ್ಯಾಕಪ್​ನ ಸೂಪರ್ ಫೋರ್ ಹಂತದ 3ನೇ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ್ (India vs Pakistan) ತಂಡಗಳು ಮುಖಾಮುಖಿಯಾಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಹೈವೋಲ್ಟೇಜ್ ಪೈಪೋಟಿಯನ್ನು ನಿರೀಕ್ಷಿಸಬಹುದು. ಅದರಲ್ಲೂ ವಿರಾಟ್ ಕೊಹ್ಲಿ ಬ್ಯಾಟ್​ನಿಂದ ಭರ್ಜರಿ ಇನಿಂಗ್ಸ್ ಅನ್ನು ಎದುರು ನೋಡಬಹುದು. ಏಕೆಂದರೆ ಪ್ರೇಮದಾಸ ಮೈದಾನದಲ್ಲಿ ಕಿಂಗ್ ಕೊಹ್ಲಿ ಭರ್ಜರಿ ಪ್ರದರ್ಶನ ನೀಡುತ್ತಾ ಬಂದಿದ್ದಾರೆ.

ಕಿಂಗ್ ಕೊಹ್ಲಿ ಆರ್. ಪ್ರೇಮದಾಸ ಮೈದಾನದಲ್ಲಿ ಒಟ್ಟು 8 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 103.8 ಸರಾಸರಿಯಲ್ಲಿ ರನ್​ಗಳಿಸಿರುವುದು ವಿಶೇಷ. ಅಂದರೆ 8 ಇನಿಂಗ್ಸ್​ಗಳಿಂದ ಕೊಹ್ಲಿ ಕಲೆಹಾಕಿರುವುದು ಬರೋಬ್ಬರಿ 519 ರನ್​ಗಳು. ಇದರಲ್ಲಿ 3 ಭರ್ಜರಿ ಶತಕ ಹಾಗೂ 1 ಅರ್ಧಶತಕ ಸೇರಿದೆ.

ಅದರಲ್ಲೂ ಈ ಮೈದಾನದಲ್ಲಿ ಆಡಿದ ಕೊನೆಯ ಮೂರು ಏಕದಿನ ಇನಿಂಗ್ಸ್​ಗಳಲ್ಲಿ ಕಿಂಗ್ ಕೊಹ್ಲಿ ಶತಕ ಸಿಡಿಸಿದ್ದರು ಎಂಬುದು ವಿಶೇಷ. ಆರ್​. ಪ್ರೇಮದಾಸ ಮೈದಾನದಲ್ಲಿ 128* (119), 131(96), 110* (116) ಕಲೆಹಾಕಿರುವ ಕಿಂಗ್ ಕೊಹ್ಲಿಯನ್ನು ಕಟ್ಟಿಹಾಕುವುದೇ ಈಗ ಪಾಕ್ ಬೌಲರ್​ಗಳ ಮುಂದಿರುವ ದೊಡ್ಡ ಸವಾಲು.

ಏಕೆಂದರೆ ಏಕದಿನ ಕ್ರಿಕೆಟ್​ನಲ್ಲಿ ಪಾಕಿಸ್ತಾನ್ ವಿರುದ್ಧ ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಅದರಲ್ಲೂ ನಿರ್ಣಾಯಕ ಹಂತದಲ್ಲಿ ಒತ್ತಡವನ್ನು ಮೀರಿ ಆಡುವಲ್ಲಿ ಕೊಹ್ಲಿ ನಿಸ್ಸೀಮರು. ಇದೀಗ ತನ್ನ ನೆಚ್ಚಿನ ಸ್ಟೇಡಿಯಂಗಳಲ್ಲಿ ಒಂದಾಗಿರುವ ಆರ್​. ಪ್ರೇಮದಾಸ ಮೈದಾನದಲ್ಲೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ಮುಖಾಮುಖಿಯಾಗುತ್ತಿದೆ. ಹೀಗಾಗಿ ಭಾನುವಾರ ನಡೆಯಲಿರುವ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಬ್ಯಾಟ್​ನಿಂದ ಭರ್ಜರಿ ಪ್ರದರ್ಶನವನ್ನು ಎದುರು ನೋಡಲಾಗುತ್ತಿದೆ.

ಅತ್ತ ಪಾಕಿಸ್ತಾನ್ ವಿರುದ್ಧ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 4 ರನ್​ಗಳಿಸಿ ಔಟಾಗಿದ್ದರು. ಇದೀಗ ಈ ಪಂದ್ಯದ ಮೂಲಕ ಪಾಕ್ ಬೌಲರ್​ಗಳಿಗೆ ವಿರಾಟ ದರ್ಶನ ಮಾಡಲು ಕಿಂಗ್ ಕೊಹ್ಲಿ ಕೂಡ ಸಜ್ಜಾಗಿದ್ದಾರೆ. ಹೀಗಾಗಿ ಆರ್. ಪ್ರೇಮದಾಸ ಮೈದಾನದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್​ನಿಂದ 77ನೇ ಅಂತಾರಾಷ್ಟ್ರೀಯ ಶತಕ ಮೂಡಿ ಬಂದರೂ ಅಚ್ಚರಿಪಡಬೇಕಿಲ್ಲ.

ಇಂಡೊ-ಪಾಕ್ ಕದನಕ್ಕೆ ಮೀಸಲು ದಿನ:

ಭಾರತ-ಪಾಕಿಸ್ತಾನ್ ನಡುವಣ ಪಂದ್ಯಕ್ಕೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮೀಸಲು ದಿನವನ್ನು ಘೋಷಿಸಿದೆ. ಅಂದರೆ ಭಾನುವಾರ ನಡೆಯುವ ಪಂದ್ಯವು ಮಳೆಯಿಂದಾಗಿ ಸ್ಥಗಿತಗೊಂಡರೆ ಸೋಮವಾರ ಪಂದ್ಯವನ್ನು ಮುಂದುವರೆಸಲಾಗುತ್ತದೆ. ಹೀಗಾಗಿ ಸೂಪರ್-4 ಹಂತದ ಈ ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿದರೂ ಫಲಿತಾಂಶವನ್ನು ನಿರೀಕ್ಷಿಸಬಹುದು.

ಪಾಕಿಸ್ತಾನ್ ತಂಡ: ಬಾಬರ್ ಆಝಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಅಬ್ದುಲ್ಲಾ ಶಫೀಕ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾಮ್-ಉಲ್-ಹಕ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಸಲ್ಮಾನ್ ಅಲಿ ಅಘಾ, ಸೌದ್ ಶಕೀಲ್, ಶಾಹೀನ್ ಅಫ್ರಿದಿ ಮತ್ತು ಉಸಾಮಾ ಮಿರ್, ತಯ್ಯಬ್ ತಾಹಿರ್ (ಮೀಸಲು ಆಟಗಾರ).

ಇದನ್ನೂ ಓದಿ: ಏಕದಿನದಲ್ಲಿ ಅತಿ ಹೆಚ್ಚು ಕ್ಯಾಚ್ ಹಿಡಿದವರ ಪೈಕಿ ಕೊಹ್ಲಿಗೆ 4ನೇ ಸ್ಥಾನ..!

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು