AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ತಂಡದಲ್ಲಿ ವಿರಾಟ್ ಕೊಹ್ಲಿ: 25 ವರ್ಷದ ಆಟಗಾರನಿಗೆ ನಾಯಕತ್ವ

Virat Kohli Ranji Trophy: ರಣಜಿ ಟೂರ್ನಿಯ ದ್ವಿತೀಯಾರ್ಧದ 2ನೇ ಪಂದ್ಯದಲ್ಲಿ ದೆಹಲಿ ಹಾಗೂ ರೈಲ್ವೇಸ್ ತಂಡಗಳು ಮುಖಾಮುಖಿಯಾಗಲಿದೆ. ಜನವರಿ 30 ರಂದು ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಆದರೆ ಈ ಪಂದ್ಯದಿಂದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಹೊರಗುಳಿದಿದ್ದಾರೆ.

ದೆಹಲಿ ತಂಡದಲ್ಲಿ ವಿರಾಟ್ ಕೊಹ್ಲಿ: 25 ವರ್ಷದ ಆಟಗಾರನಿಗೆ ನಾಯಕತ್ವ
Virat Kohli
ಝಾಹಿರ್ ಯೂಸುಫ್
|

Updated on: Jan 28, 2025 | 9:53 AM

Share

ಜನವರಿ 30 ರಂದು ಪ್ರಾರಂಭವಾಗಲಿರುವ ರೈಲ್ವೇಸ್ ವಿರುದ್ಧದ ರಣಜಿ ಟ್ರೋಫಿ ಪಂದ್ಯಕ್ಕಾಗಿ ದೆಹಲಿ ತಂಡವನ್ನು ಪ್ರಕಟಿಸಲಾಗಿದೆ. 20 ಸದಸ್ಯರ ಈ ತಂಡದಲ್ಲಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ 12 ವರ್ಷಗಳ ಬಳಿಕ ಕಿಂಗ್ ಕೊಹ್ಲಿ ರಣಜಿ ಟೂರ್ನಿಯಲ್ಲಿ ಕಣಕ್ಕಿಳಿಯುತ್ತಿರುವುದು ಖಚಿತವಾಗಿದೆ.

ವಿಶೇಷ ಎಂದರೆ ವಿರಾಟ್ ಕೊಹ್ಲಿ ಒಳಗೊಂಡಿರುವ ಈ ತಂಡವನ್ನು ಮುನ್ನಡೆಸುತ್ತಿರುವುದು 25 ವರ್ಷದ ಆಯುಷ್ ಬದೋನಿ. ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಿಂದ ಆಯುಷ್ ದೆಹಲಿ ತಂಡವನ್ನು ಮುನ್ನಡೆಸುತ್ತಿದ್ದು, ಹೀಗಾಗಿ ರಣಜಿ ಟೂರ್ನಿಯಲ್ಲೂ ನಾಯಕನ್ನಾಗಿ ಮುಂದುವರೆಸಲಾಗಿದೆ. ಅದರಂತೆ ವಿರಾಟ್ ಕೊಹ್ಲಿ ಆಯುಷ್ ಬದೋನಿ ಅವರ ನಾಯಕತ್ವದಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ವಿರಾಟ್ ಕೊಹ್ಲಿ ಕೊನೆಯ ರಣಜಿ ಟೂರ್ನಿ ಪಂದ್ಯವಾಡಿದ್ದು ಯಾವಾಗ?

ವಿರಾಟ್ ಕೊಹ್ಲಿ ದೆಹಲಿ ಪರ ಕೊನೆಯ ಬಾರಿ ರಣಜಿ ಪಂದ್ಯವಾಡಿದ್ದು 2012 ರಲ್ಲಿ. ಉತ್ತರ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಂಡಿದ್ದ ಕೊಹ್ಲಿ ಮೊದಲ ಇನಿಂಗ್ಸ್​ನಲ್ಲಿ 14 ಮತ್ತು ದ್ವಿತೀಯ ಇನಿಂಗ್ಸ್​ನಲ್ಲಿ 43 ರನ್ ಬಾರಿಸಿದ್ದರು.

ವಿಶೇಷ ಎಂದರೆ ಅಂದು ದೆಹಲಿ ತಂಡವನ್ನು ಮುನ್ನಡೆಸಿದ್ದು ವೀರೇಂದ್ರ ಸೆಹ್ವಾಗ್. ಹಾಗೆಯೇ ಆರಂಭಿಕನಾಗಿ ಕಾಣಿಸಿಕೊಂಡಿದ್ದು ಪ್ರಸ್ತುತ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್.

ಈ ಪಂದ್ಯದ ಬಳಿಕ ಟೀಮ್ ಇಂಡಿಯಾದ ಖಾಯಂ ಸದಸ್ಯರಾದ ಕೊಹ್ಲಿ ಮತ್ತೆ ದೇಶೀಯ ಟೂರ್ನಿಯತ್ತ ಮುಖ ಮಾಡಿರಲಿಲ್ಲ. ಇದೀಗ 12 ವರ್ಷಗಳ ಬಳಿಕ ಕಿಂಗ್ ಕೊಹ್ಲಿ ಮತ್ತೆ ದೇಶೀಯ ಅಂಗಳದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ರಿಷಭ್ ಪಂತ್ ಇಲ್ಲ..!

ರೈಲ್ವೇಸ್ ವಿರುದ್ಧದ ಪಂದ್ಯದಿಂದ ದೆಹಲಿ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಹೊರಗುಳಿದಿದ್ದಾರೆ. ಸೌರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಪಂತ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಇದಕ್ಕೆ ಮುಖ್ಯ ಕಾರಣ ಚಾಂಪಿಯನ್ಸ್ ಟ್ರೋಫಿಗಾಗಿ ಸಿದ್ಧತೆ. ಹೀಗಾಗಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿರುವ ಪಂದ್ಯದಲ್ಲಿ ರಿಷಭ್ ಪಂತ್ ಕಾಣಿಸಿಕೊಳ್ಳುವುದಿಲ್ಲ.

ಇದನ್ನೂ ಓದಿ: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ವಿಶೇಷ ದಾಖಲೆ ಬರೆದ ಫಾಫ್ ಡುಪ್ಲೆಸಿಸ್

ದೆಹಲಿ ರಣಜಿ ತಂಡ:  ಆಯುಷ್ ಬದೋನಿ (ನಾಯಕ), ವಿರಾಟ್ ಕೊಹ್ಲಿ, ಪ್ರಣವ್ ರಾಜವಂಶಿ (ವಿಕೆಟ್ ಕೀಪರ್), ಸನತ್ ಸಾಂಗ್ವಾನ್, ಅರ್ಪಿತ್ ರಾಣಾ, ಮಯಾಂಕ್ ಗುಸೇನ್, ಶಿವಂ ಶರ್ಮಾ, ಸುಮಿತ್ ಮಾಥುರ್, ವಂಶ್ ಬೇಡಿ (ವಿಕೆಟ್ ಕೀಪರ್), ಮನಿ ಗ್ರೆವಾಲ್, ಹರ್ಷ್ ತ್ಯಾಗಿ, ಸಿದ್ಧಾಂತ್ ಶರ್ಮಾ, ನವದೀಪ್ ಸೈನಿ , ಯಶ್ ಧುಲ್, ಗಗನ್ ವತ್ಸ್, ಜಾಂಟಿ ಸಿಧು, ಹಿಮ್ಮತ್ ಸಿಂಗ್, ವೈಭವ್ ಕಂಡ್ಪಾಲ್, ರಾಹುಲ್ ಗೆಹ್ಲೋಟ್, ಜಿತೇಶ್ ಸಿಂಗ್.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ