AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ತಂಡದಲ್ಲಿ ವಿರಾಟ್ ಕೊಹ್ಲಿ: 25 ವರ್ಷದ ಆಟಗಾರನಿಗೆ ನಾಯಕತ್ವ

Virat Kohli Ranji Trophy: ರಣಜಿ ಟೂರ್ನಿಯ ದ್ವಿತೀಯಾರ್ಧದ 2ನೇ ಪಂದ್ಯದಲ್ಲಿ ದೆಹಲಿ ಹಾಗೂ ರೈಲ್ವೇಸ್ ತಂಡಗಳು ಮುಖಾಮುಖಿಯಾಗಲಿದೆ. ಜನವರಿ 30 ರಂದು ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಆದರೆ ಈ ಪಂದ್ಯದಿಂದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಹೊರಗುಳಿದಿದ್ದಾರೆ.

ದೆಹಲಿ ತಂಡದಲ್ಲಿ ವಿರಾಟ್ ಕೊಹ್ಲಿ: 25 ವರ್ಷದ ಆಟಗಾರನಿಗೆ ನಾಯಕತ್ವ
Virat Kohli
ಝಾಹಿರ್ ಯೂಸುಫ್
|

Updated on: Jan 28, 2025 | 9:53 AM

Share

ಜನವರಿ 30 ರಂದು ಪ್ರಾರಂಭವಾಗಲಿರುವ ರೈಲ್ವೇಸ್ ವಿರುದ್ಧದ ರಣಜಿ ಟ್ರೋಫಿ ಪಂದ್ಯಕ್ಕಾಗಿ ದೆಹಲಿ ತಂಡವನ್ನು ಪ್ರಕಟಿಸಲಾಗಿದೆ. 20 ಸದಸ್ಯರ ಈ ತಂಡದಲ್ಲಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ 12 ವರ್ಷಗಳ ಬಳಿಕ ಕಿಂಗ್ ಕೊಹ್ಲಿ ರಣಜಿ ಟೂರ್ನಿಯಲ್ಲಿ ಕಣಕ್ಕಿಳಿಯುತ್ತಿರುವುದು ಖಚಿತವಾಗಿದೆ.

ವಿಶೇಷ ಎಂದರೆ ವಿರಾಟ್ ಕೊಹ್ಲಿ ಒಳಗೊಂಡಿರುವ ಈ ತಂಡವನ್ನು ಮುನ್ನಡೆಸುತ್ತಿರುವುದು 25 ವರ್ಷದ ಆಯುಷ್ ಬದೋನಿ. ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಿಂದ ಆಯುಷ್ ದೆಹಲಿ ತಂಡವನ್ನು ಮುನ್ನಡೆಸುತ್ತಿದ್ದು, ಹೀಗಾಗಿ ರಣಜಿ ಟೂರ್ನಿಯಲ್ಲೂ ನಾಯಕನ್ನಾಗಿ ಮುಂದುವರೆಸಲಾಗಿದೆ. ಅದರಂತೆ ವಿರಾಟ್ ಕೊಹ್ಲಿ ಆಯುಷ್ ಬದೋನಿ ಅವರ ನಾಯಕತ್ವದಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ವಿರಾಟ್ ಕೊಹ್ಲಿ ಕೊನೆಯ ರಣಜಿ ಟೂರ್ನಿ ಪಂದ್ಯವಾಡಿದ್ದು ಯಾವಾಗ?

ವಿರಾಟ್ ಕೊಹ್ಲಿ ದೆಹಲಿ ಪರ ಕೊನೆಯ ಬಾರಿ ರಣಜಿ ಪಂದ್ಯವಾಡಿದ್ದು 2012 ರಲ್ಲಿ. ಉತ್ತರ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಂಡಿದ್ದ ಕೊಹ್ಲಿ ಮೊದಲ ಇನಿಂಗ್ಸ್​ನಲ್ಲಿ 14 ಮತ್ತು ದ್ವಿತೀಯ ಇನಿಂಗ್ಸ್​ನಲ್ಲಿ 43 ರನ್ ಬಾರಿಸಿದ್ದರು.

ವಿಶೇಷ ಎಂದರೆ ಅಂದು ದೆಹಲಿ ತಂಡವನ್ನು ಮುನ್ನಡೆಸಿದ್ದು ವೀರೇಂದ್ರ ಸೆಹ್ವಾಗ್. ಹಾಗೆಯೇ ಆರಂಭಿಕನಾಗಿ ಕಾಣಿಸಿಕೊಂಡಿದ್ದು ಪ್ರಸ್ತುತ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್.

ಈ ಪಂದ್ಯದ ಬಳಿಕ ಟೀಮ್ ಇಂಡಿಯಾದ ಖಾಯಂ ಸದಸ್ಯರಾದ ಕೊಹ್ಲಿ ಮತ್ತೆ ದೇಶೀಯ ಟೂರ್ನಿಯತ್ತ ಮುಖ ಮಾಡಿರಲಿಲ್ಲ. ಇದೀಗ 12 ವರ್ಷಗಳ ಬಳಿಕ ಕಿಂಗ್ ಕೊಹ್ಲಿ ಮತ್ತೆ ದೇಶೀಯ ಅಂಗಳದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ರಿಷಭ್ ಪಂತ್ ಇಲ್ಲ..!

ರೈಲ್ವೇಸ್ ವಿರುದ್ಧದ ಪಂದ್ಯದಿಂದ ದೆಹಲಿ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಹೊರಗುಳಿದಿದ್ದಾರೆ. ಸೌರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಪಂತ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಇದಕ್ಕೆ ಮುಖ್ಯ ಕಾರಣ ಚಾಂಪಿಯನ್ಸ್ ಟ್ರೋಫಿಗಾಗಿ ಸಿದ್ಧತೆ. ಹೀಗಾಗಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿರುವ ಪಂದ್ಯದಲ್ಲಿ ರಿಷಭ್ ಪಂತ್ ಕಾಣಿಸಿಕೊಳ್ಳುವುದಿಲ್ಲ.

ಇದನ್ನೂ ಓದಿ: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ವಿಶೇಷ ದಾಖಲೆ ಬರೆದ ಫಾಫ್ ಡುಪ್ಲೆಸಿಸ್

ದೆಹಲಿ ರಣಜಿ ತಂಡ:  ಆಯುಷ್ ಬದೋನಿ (ನಾಯಕ), ವಿರಾಟ್ ಕೊಹ್ಲಿ, ಪ್ರಣವ್ ರಾಜವಂಶಿ (ವಿಕೆಟ್ ಕೀಪರ್), ಸನತ್ ಸಾಂಗ್ವಾನ್, ಅರ್ಪಿತ್ ರಾಣಾ, ಮಯಾಂಕ್ ಗುಸೇನ್, ಶಿವಂ ಶರ್ಮಾ, ಸುಮಿತ್ ಮಾಥುರ್, ವಂಶ್ ಬೇಡಿ (ವಿಕೆಟ್ ಕೀಪರ್), ಮನಿ ಗ್ರೆವಾಲ್, ಹರ್ಷ್ ತ್ಯಾಗಿ, ಸಿದ್ಧಾಂತ್ ಶರ್ಮಾ, ನವದೀಪ್ ಸೈನಿ , ಯಶ್ ಧುಲ್, ಗಗನ್ ವತ್ಸ್, ಜಾಂಟಿ ಸಿಧು, ಹಿಮ್ಮತ್ ಸಿಂಗ್, ವೈಭವ್ ಕಂಡ್ಪಾಲ್, ರಾಹುಲ್ ಗೆಹ್ಲೋಟ್, ಜಿತೇಶ್ ಸಿಂಗ್.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ