AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಸಂಭ್ರಮಿಸುತ್ತಿದ್ದರೆ ಫೋನ್​ನಲ್ಲೇ ಮೈಮರೆತ ವಿರಾಟ್ ಕೊಹ್ಲಿ

India vs England, 3rd ODI: ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಶುಭ್​ಮನ್ ಗಿಲ್ (112) ಶತಕ ಸಿಡಿಸಿದರೆ, ವಿರಾಟ್ ಕೊಹ್ಲಿ (52) ಹಾಗೂ ಶ್ರೇಯಸ್ ಅಯ್ಯರ್ (78) ಅರ್ಧಶತಕ ಬಾರಿಸಿದರು. ಈ ಭರ್ಜರಿ ಬ್ಯಾಟಿಂಗ್​ ನೆರವಿನಿಂದ ಟೀಮ್ ಇಂಡಿಯಾ 50 ಓವರ್​ಗಳಲ್ಲಿ 356 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ 34.2 ಓವರ್​ಗಳಲ್ಲಿ 214 ರನ್​ಗಳಿಸಿ ಆಲೌಟ್ ಆಗಿದೆ.

ಟೀಮ್ ಇಂಡಿಯಾ ಸಂಭ್ರಮಿಸುತ್ತಿದ್ದರೆ ಫೋನ್​ನಲ್ಲೇ ಮೈಮರೆತ ವಿರಾಟ್ ಕೊಹ್ಲಿ
Virat Kohli
ಝಾಹಿರ್ ಯೂಸುಫ್
|

Updated on: Feb 13, 2025 | 10:13 AM

Share

ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಟೀಮ್ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ನಾಗ್ಪುರದಲ್ಲಿ ನಡೆದ ಈ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 4 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ಕಟಕ್​ನಲ್ಲಿ ಜರುಗಿದ ದ್ವಿತೀಯ ಪಂದ್ಯದಲ್ಲೂ ಇಂಗ್ಲೆಂಡ್ ತಂಡವನ್ನು 4 ವಿಕೆಟ್​ಗಳಿಂದ ಸೋಲಿಸುವಲ್ಲಿ ಭಾರತೀಯರು ಯಶಸ್ವಿಯಾಗಿದ್ದರು. ಇನ್ನು ಅಹಮದಾಬಾದ್​ನಲ್ಲಿ ನಡೆದ ಮೂರನೇ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 142 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

ಈ ಗೆಲುವಿನ ಬಳಿಕ ಐಸಿಸಿ ಅಧ್ಯಕ್ಷ ಜಯ್ ಶಾ ಅವರ ಕೈಯಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟ್ರೋಫಿ ಸ್ವೀಕರಿಸಿದರು. ಆ ಬಳಿಕ ನಡೆದ ಫೋಟೋಶೂಟ್​ ವೇಳೆ ಭಾರತೀಯ ಆಟಗಾರರ ಸಂಭ್ರಮ ಮುಗಿಲು ಮುಟ್ಟಿತ್ತು.

ಆದರೆ ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲದಂತೆ ವಿರಾಟ್ ಕೊಹ್ಲಿ ಮಾತ್ರ ಫೋನ್​ನಲ್ಲೇ ಮೈಮರೆತಿದ್ದರು. ಇದೀಗ ಟೀಮ್ ಇಂಡಿಯಾ ಸಂಭ್ರಮಿಸುತ್ತಿದ್ದರೂ, ಕೊಹ್ಲಿ ಫೋನ್​ನಲ್ಲಿ ಮಾತನಾಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿರಾಟ್ ಕೊಹ್ಲಿ ಫೋನ್ ಕಾಲ್ ವಿಡಿಯೋ:

ಈ ಬಗ್ಗೆ ಪರ ವಿರೋಧ ಪ್ರತಿಕ್ರಿಯೆಗಳು ಕೂಡ ವ್ಯಕ್ತವಾಗುತ್ತಿದೆ. ಕೆಲವರು ಕೊಹ್ಲಿಯನ್ನು ಫ್ಯಾಮಿಲಿ ಮ್ಯಾನ್ ಎಂದು ಹಾಡಿ ಹೊಗಳಿದರೆ, ಮತ್ತೆ ಕೆಲವರು ವಿರಾಟ್ ಕೊಹ್ಲಿಯ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಫಾರ್ಮ್​ಗೆ ಮರಳಿದ ಕಿಂಗ್ ಕೊಹ್ಲಿ:

ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಕರ್ಷಕ ಅರ್ಧಶತಕ ಬಾರಿಸಿ ಮತ್ತೆ ಲಯ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವೈಫಲ್ಯ ಅನುಭವಿಸಿದ್ದ ಕೊಹ್ಲಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆತ್ಮ ವಿಶ್ವಾಸದಿಂದಲೇ ಬ್ಯಾಟ್ ಬೀಸಿದ್ದರು.

ಇದನ್ನೂ ಓದಿ: ಭಾರತದಲ್ಲಿ ಇತಿಹಾಸ ನಿರ್ಮಿಸಿದ ಜೇಕಬ್ ಬೆಥೆಲ್

ಅಲ್ಲದೆ 55 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 52 ರನ್ ಬಾರಿಸಿ ಭಾರತ ತಂಡದ ಬೃಹತ್ ಮೊತ್ತಕ್ಕೆ ತನ್ನದೆಯಾದ ಕೊಡುಗೆ ನೀಡಿದ್ದರು. ಇದೀಗ ಫಾರ್ಮ್​ಗೆ ಮರಳಿರುವ ಕಿಂಗ್ ಕೊಹ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲೂ ಇದೇ ಲಯವನ್ನು ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ. ಈ ಮೂಲಕ 12 ವರ್ಷಗಳ ಬಳಿಕ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆದ್ದು ಕೊಡುವ ಭರವಸೆ ಮೂಡಿಸಿದ್ದಾರೆ.

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ