AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಸಂಭ್ರಮಿಸುತ್ತಿದ್ದರೆ ಫೋನ್​ನಲ್ಲೇ ಮೈಮರೆತ ವಿರಾಟ್ ಕೊಹ್ಲಿ

India vs England, 3rd ODI: ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಶುಭ್​ಮನ್ ಗಿಲ್ (112) ಶತಕ ಸಿಡಿಸಿದರೆ, ವಿರಾಟ್ ಕೊಹ್ಲಿ (52) ಹಾಗೂ ಶ್ರೇಯಸ್ ಅಯ್ಯರ್ (78) ಅರ್ಧಶತಕ ಬಾರಿಸಿದರು. ಈ ಭರ್ಜರಿ ಬ್ಯಾಟಿಂಗ್​ ನೆರವಿನಿಂದ ಟೀಮ್ ಇಂಡಿಯಾ 50 ಓವರ್​ಗಳಲ್ಲಿ 356 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ 34.2 ಓವರ್​ಗಳಲ್ಲಿ 214 ರನ್​ಗಳಿಸಿ ಆಲೌಟ್ ಆಗಿದೆ.

ಟೀಮ್ ಇಂಡಿಯಾ ಸಂಭ್ರಮಿಸುತ್ತಿದ್ದರೆ ಫೋನ್​ನಲ್ಲೇ ಮೈಮರೆತ ವಿರಾಟ್ ಕೊಹ್ಲಿ
Virat Kohli
ಝಾಹಿರ್ ಯೂಸುಫ್
|

Updated on: Feb 13, 2025 | 10:13 AM

Share

ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಟೀಮ್ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ನಾಗ್ಪುರದಲ್ಲಿ ನಡೆದ ಈ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 4 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ಕಟಕ್​ನಲ್ಲಿ ಜರುಗಿದ ದ್ವಿತೀಯ ಪಂದ್ಯದಲ್ಲೂ ಇಂಗ್ಲೆಂಡ್ ತಂಡವನ್ನು 4 ವಿಕೆಟ್​ಗಳಿಂದ ಸೋಲಿಸುವಲ್ಲಿ ಭಾರತೀಯರು ಯಶಸ್ವಿಯಾಗಿದ್ದರು. ಇನ್ನು ಅಹಮದಾಬಾದ್​ನಲ್ಲಿ ನಡೆದ ಮೂರನೇ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 142 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

ಈ ಗೆಲುವಿನ ಬಳಿಕ ಐಸಿಸಿ ಅಧ್ಯಕ್ಷ ಜಯ್ ಶಾ ಅವರ ಕೈಯಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟ್ರೋಫಿ ಸ್ವೀಕರಿಸಿದರು. ಆ ಬಳಿಕ ನಡೆದ ಫೋಟೋಶೂಟ್​ ವೇಳೆ ಭಾರತೀಯ ಆಟಗಾರರ ಸಂಭ್ರಮ ಮುಗಿಲು ಮುಟ್ಟಿತ್ತು.

ಆದರೆ ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲದಂತೆ ವಿರಾಟ್ ಕೊಹ್ಲಿ ಮಾತ್ರ ಫೋನ್​ನಲ್ಲೇ ಮೈಮರೆತಿದ್ದರು. ಇದೀಗ ಟೀಮ್ ಇಂಡಿಯಾ ಸಂಭ್ರಮಿಸುತ್ತಿದ್ದರೂ, ಕೊಹ್ಲಿ ಫೋನ್​ನಲ್ಲಿ ಮಾತನಾಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿರಾಟ್ ಕೊಹ್ಲಿ ಫೋನ್ ಕಾಲ್ ವಿಡಿಯೋ:

ಈ ಬಗ್ಗೆ ಪರ ವಿರೋಧ ಪ್ರತಿಕ್ರಿಯೆಗಳು ಕೂಡ ವ್ಯಕ್ತವಾಗುತ್ತಿದೆ. ಕೆಲವರು ಕೊಹ್ಲಿಯನ್ನು ಫ್ಯಾಮಿಲಿ ಮ್ಯಾನ್ ಎಂದು ಹಾಡಿ ಹೊಗಳಿದರೆ, ಮತ್ತೆ ಕೆಲವರು ವಿರಾಟ್ ಕೊಹ್ಲಿಯ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಫಾರ್ಮ್​ಗೆ ಮರಳಿದ ಕಿಂಗ್ ಕೊಹ್ಲಿ:

ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಕರ್ಷಕ ಅರ್ಧಶತಕ ಬಾರಿಸಿ ಮತ್ತೆ ಲಯ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವೈಫಲ್ಯ ಅನುಭವಿಸಿದ್ದ ಕೊಹ್ಲಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆತ್ಮ ವಿಶ್ವಾಸದಿಂದಲೇ ಬ್ಯಾಟ್ ಬೀಸಿದ್ದರು.

ಇದನ್ನೂ ಓದಿ: ಭಾರತದಲ್ಲಿ ಇತಿಹಾಸ ನಿರ್ಮಿಸಿದ ಜೇಕಬ್ ಬೆಥೆಲ್

ಅಲ್ಲದೆ 55 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 52 ರನ್ ಬಾರಿಸಿ ಭಾರತ ತಂಡದ ಬೃಹತ್ ಮೊತ್ತಕ್ಕೆ ತನ್ನದೆಯಾದ ಕೊಡುಗೆ ನೀಡಿದ್ದರು. ಇದೀಗ ಫಾರ್ಮ್​ಗೆ ಮರಳಿರುವ ಕಿಂಗ್ ಕೊಹ್ಲಿ ಚಾಂಪಿಯನ್ಸ್ ಟ್ರೋಫಿಯಲ್ಲೂ ಇದೇ ಲಯವನ್ನು ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ. ಈ ಮೂಲಕ 12 ವರ್ಷಗಳ ಬಳಿಕ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆದ್ದು ಕೊಡುವ ಭರವಸೆ ಮೂಡಿಸಿದ್ದಾರೆ.

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ