AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳಿಗೆ ನಿರಾಸೆ ಮಾಡಿದ ವಿರಾಟ್; ಒಂದಂಕಿಗೆ ಕ್ಲೀನ್​ ಬೋಲ್ಡ್

ವಿರಾಟ್ ಕೊಹ್ಲಿ ಅವರ ರಣಜಿ ಟ್ರೋಫಿ ಪದಾರ್ಪಣೆ ನಿರಾಶಾದಾಯಕವಾಗಿದೆ. ಡೆಲ್ಲಿ ತಂಡದ ಪರ ಆಡಿದ ಅವರು ಕೇವಲ 6 ರನ್ ಗಳಿಸಿ ಬೌಲ್ಡ್ ಆದರು. 13 ವರ್ಷಗಳ ಬಳಿಕ ರಣಜಿ ಕ್ರಿಕೆಟ್​ಗೆ ಮರಳಿದ್ದ ಕೊಹ್ಲಿ ಅವರ ಕಳಪೆ ಫಾರ್ಮ್ ಮುಂದುವರಿದಿದೆ. ಇದರಿಂದ ಅಭಿಮಾನಿಗಳು ನಿರಾಶರಾಗಿದ್ದಾರೆ.

ಅಭಿಮಾನಿಗಳಿಗೆ ನಿರಾಸೆ ಮಾಡಿದ ವಿರಾಟ್; ಒಂದಂಕಿಗೆ ಕ್ಲೀನ್​ ಬೋಲ್ಡ್
ವಿರಾಟ್
ರಾಜೇಶ್ ದುಗ್ಗುಮನೆ
|

Updated on:Jan 31, 2025 | 11:24 AM

Share

ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಅವರು ರಣಜಿ ಕ್ರಿಕೆಟ್​ನಲ್ಲಿ ಆಡೋಕೆ ಬಂದಿದ್ದಾರೆ. ಡೆಲ್ಲಿ ತಂಡದ ಪರ ಅವರು ಆಡುತ್ತಿದ್ದಾರೆ. ಕೊಹ್ಲಿ ಆಟವನ್ನು ನೋಡಲು ಬಂದ ಅಭಿಮಾನಿಗಳಿಗೆ ಅವರು ನಿರಾಸೆ ಮಾಡಿದ್ದಾರೆ. ಬೌಂಡರಿ ಸಿಡಿಸಿದ ಮರು ಬಾಲ್​ನಲ್ಲಿ ಕೊಹ್ಲಿ ಬೋಲ್ಡ್ ಆಗಿದ್ದಾರೆ. ಆರು ರನ್​ಗೆ ವಿಕೆಟ್ ಒಪ್ಪಿಸಿ ಅವರು ಪೆವಿಲಿಯನ್ ಸೇರಿದ್ದಾರೆ. ಈ ಮೂಲಕ ಇಲ್ಲಿಯೂ ಅವರು ಕಳಪೆ ಫಾರ್ಮ್​ ಮುಂದುವರಿದಿದೆ.

ವಿರಾಟ್ ಕೊಹ್ಲಿ ಅವರು ಸುಮಾರು 13 ವರ್ಷಗಳ ಬಳಿಕ ರಣಜಿ ಕ್ರಿಕೆಟ್ ಆಡಿದ್ದಾರೆ. ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ರೈಲ್ವೆ ತಂಡ ಕೇವಲ 241 ರನ್​ಗಳಿಗೆ ಆಲ್​ಔಟ್ ಆಯಿತು.  ಮೊದಲ ದಿನ ಕೊಹ್ಲಿ ಮೈದಾನಕ್ಕೆ ಇಳಿಯಲಿಲ್ಲ. ಹೀಗಾಗಿ, ಅಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ನಿರಾಸೆ ಆಯಿತು. ಎರಡನೇ ದಿನ ಕೊಹ್ಲಿ ಅವರು ಡೆಲ್ಲಿ ಪರ ಬ್ಯಾಟ್ ಬೀಸಿದರು. ಇಲ್ಲಿಯೂ ಆಗಿದ್ದು ನಿರಾಸೆಯೇ.

ಇದನ್ನೂ ಓದಿ: ಮೈದಾನಕ್ಕೆ ನುಗ್ಗಿದ ವಿರಾಟ್ ಕೊಹ್ಲಿ ಫ್ಯಾನ್: ಅರೆ ಸೇನಾ ಪಡೆಯನ್ನು ಕರೆಸಿದ DDCA

ಕೊಹ್ಲಿ ಬ್ಯಾಟಿಂಗ್​​ಗೆ ಇಳಿಯುತ್ತಿದ್ದಂತೆ ಅಲ್ಲಿ ನೆರೆದಿದ್ದ ಅಭಿಮಾನಿಗಳು ಹರ್ಷೋದ್ಘಾರ ಮಾಡಿದರು. ಮೊದಲು ನಿಧಾನ ಗತಿಯಲ್ಲಿ ಬ್ಯಾಟ್ ಬೀಸಿದ ಕೊಹ್ಲಿ ಒಂದು ಬೌಂಡರಿ ಸಿಡಿಸಿದರು. ಮತ್ತೆ ಅದೇ ರೀತಿಯಲ್ಲಿ ಬ್ಯಾಟ್ ಬೀಸಲು ಹೋಗಿ ಕ್ಲೀನ್ ಬೌಲ್ಡ್ ಆಗಿ ವಿಕೆಟ್ ಒಪ್ಪಿಸಿದರು. ಹಿಮಾಂಶು ಸಂಗ್ವಾನ್ ಅವರ ಮಾರಕ ದಾಳಿಗೆ ಕೊಹ್ಲಿ ತತ್ತರಿಸಿ ಹೋದರು. ಈ ಮೂಲಕ ಇಲ್ಲಿಯೂ ಕೊಹ್ಲಿ ಕಳಪೆ ಪ್ರದರ್ಶನ ಮುಂದುವರಿದಿದೆ.

ವಿರಾಟ್ ಕೊಹ್ಲಿ ಅವರು ಔಟ್ ಆಗುತ್ತಿದ್ದಂತೆ ಅಲ್ಲಿ ನೆರೆದಿದ್ದ ಅಭಿಮಾನಿಗಳು ಬೇಸರದಿಂದ ಹೊರ ನಡೆಯಲು ಆರಂಭಿಸಿದರು. ಅವರ ಆಟ ನೋಡಬೇಕು ಎಂದು ಸ್ಟೇಡಿಯಂನಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ಸಾಕಷ್ಟು ನಿರಾಸೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:19 am, Fri, 31 January 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ