AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳಿಗೆ ನಿರಾಸೆ ಮಾಡಿದ ವಿರಾಟ್; ಒಂದಂಕಿಗೆ ಕ್ಲೀನ್​ ಬೋಲ್ಡ್

ವಿರಾಟ್ ಕೊಹ್ಲಿ ಅವರ ರಣಜಿ ಟ್ರೋಫಿ ಪದಾರ್ಪಣೆ ನಿರಾಶಾದಾಯಕವಾಗಿದೆ. ಡೆಲ್ಲಿ ತಂಡದ ಪರ ಆಡಿದ ಅವರು ಕೇವಲ 6 ರನ್ ಗಳಿಸಿ ಬೌಲ್ಡ್ ಆದರು. 13 ವರ್ಷಗಳ ಬಳಿಕ ರಣಜಿ ಕ್ರಿಕೆಟ್​ಗೆ ಮರಳಿದ್ದ ಕೊಹ್ಲಿ ಅವರ ಕಳಪೆ ಫಾರ್ಮ್ ಮುಂದುವರಿದಿದೆ. ಇದರಿಂದ ಅಭಿಮಾನಿಗಳು ನಿರಾಶರಾಗಿದ್ದಾರೆ.

ಅಭಿಮಾನಿಗಳಿಗೆ ನಿರಾಸೆ ಮಾಡಿದ ವಿರಾಟ್; ಒಂದಂಕಿಗೆ ಕ್ಲೀನ್​ ಬೋಲ್ಡ್
ವಿರಾಟ್
ರಾಜೇಶ್ ದುಗ್ಗುಮನೆ
|

Updated on:Jan 31, 2025 | 11:24 AM

Share

ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಅವರು ರಣಜಿ ಕ್ರಿಕೆಟ್​ನಲ್ಲಿ ಆಡೋಕೆ ಬಂದಿದ್ದಾರೆ. ಡೆಲ್ಲಿ ತಂಡದ ಪರ ಅವರು ಆಡುತ್ತಿದ್ದಾರೆ. ಕೊಹ್ಲಿ ಆಟವನ್ನು ನೋಡಲು ಬಂದ ಅಭಿಮಾನಿಗಳಿಗೆ ಅವರು ನಿರಾಸೆ ಮಾಡಿದ್ದಾರೆ. ಬೌಂಡರಿ ಸಿಡಿಸಿದ ಮರು ಬಾಲ್​ನಲ್ಲಿ ಕೊಹ್ಲಿ ಬೋಲ್ಡ್ ಆಗಿದ್ದಾರೆ. ಆರು ರನ್​ಗೆ ವಿಕೆಟ್ ಒಪ್ಪಿಸಿ ಅವರು ಪೆವಿಲಿಯನ್ ಸೇರಿದ್ದಾರೆ. ಈ ಮೂಲಕ ಇಲ್ಲಿಯೂ ಅವರು ಕಳಪೆ ಫಾರ್ಮ್​ ಮುಂದುವರಿದಿದೆ.

ವಿರಾಟ್ ಕೊಹ್ಲಿ ಅವರು ಸುಮಾರು 13 ವರ್ಷಗಳ ಬಳಿಕ ರಣಜಿ ಕ್ರಿಕೆಟ್ ಆಡಿದ್ದಾರೆ. ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ರೈಲ್ವೆ ತಂಡ ಕೇವಲ 241 ರನ್​ಗಳಿಗೆ ಆಲ್​ಔಟ್ ಆಯಿತು.  ಮೊದಲ ದಿನ ಕೊಹ್ಲಿ ಮೈದಾನಕ್ಕೆ ಇಳಿಯಲಿಲ್ಲ. ಹೀಗಾಗಿ, ಅಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ನಿರಾಸೆ ಆಯಿತು. ಎರಡನೇ ದಿನ ಕೊಹ್ಲಿ ಅವರು ಡೆಲ್ಲಿ ಪರ ಬ್ಯಾಟ್ ಬೀಸಿದರು. ಇಲ್ಲಿಯೂ ಆಗಿದ್ದು ನಿರಾಸೆಯೇ.

ಇದನ್ನೂ ಓದಿ: ಮೈದಾನಕ್ಕೆ ನುಗ್ಗಿದ ವಿರಾಟ್ ಕೊಹ್ಲಿ ಫ್ಯಾನ್: ಅರೆ ಸೇನಾ ಪಡೆಯನ್ನು ಕರೆಸಿದ DDCA

ಕೊಹ್ಲಿ ಬ್ಯಾಟಿಂಗ್​​ಗೆ ಇಳಿಯುತ್ತಿದ್ದಂತೆ ಅಲ್ಲಿ ನೆರೆದಿದ್ದ ಅಭಿಮಾನಿಗಳು ಹರ್ಷೋದ್ಘಾರ ಮಾಡಿದರು. ಮೊದಲು ನಿಧಾನ ಗತಿಯಲ್ಲಿ ಬ್ಯಾಟ್ ಬೀಸಿದ ಕೊಹ್ಲಿ ಒಂದು ಬೌಂಡರಿ ಸಿಡಿಸಿದರು. ಮತ್ತೆ ಅದೇ ರೀತಿಯಲ್ಲಿ ಬ್ಯಾಟ್ ಬೀಸಲು ಹೋಗಿ ಕ್ಲೀನ್ ಬೌಲ್ಡ್ ಆಗಿ ವಿಕೆಟ್ ಒಪ್ಪಿಸಿದರು. ಹಿಮಾಂಶು ಸಂಗ್ವಾನ್ ಅವರ ಮಾರಕ ದಾಳಿಗೆ ಕೊಹ್ಲಿ ತತ್ತರಿಸಿ ಹೋದರು. ಈ ಮೂಲಕ ಇಲ್ಲಿಯೂ ಕೊಹ್ಲಿ ಕಳಪೆ ಪ್ರದರ್ಶನ ಮುಂದುವರಿದಿದೆ.

ವಿರಾಟ್ ಕೊಹ್ಲಿ ಅವರು ಔಟ್ ಆಗುತ್ತಿದ್ದಂತೆ ಅಲ್ಲಿ ನೆರೆದಿದ್ದ ಅಭಿಮಾನಿಗಳು ಬೇಸರದಿಂದ ಹೊರ ನಡೆಯಲು ಆರಂಭಿಸಿದರು. ಅವರ ಆಟ ನೋಡಬೇಕು ಎಂದು ಸ್ಟೇಡಿಯಂನಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ಸಾಕಷ್ಟು ನಿರಾಸೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:19 am, Fri, 31 January 25

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ