AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳಿಗೆ ನಿರಾಸೆ ಮಾಡಿದ ವಿರಾಟ್; ಒಂದಂಕಿಗೆ ಕ್ಲೀನ್​ ಬೋಲ್ಡ್

ವಿರಾಟ್ ಕೊಹ್ಲಿ ಅವರ ರಣಜಿ ಟ್ರೋಫಿ ಪದಾರ್ಪಣೆ ನಿರಾಶಾದಾಯಕವಾಗಿದೆ. ಡೆಲ್ಲಿ ತಂಡದ ಪರ ಆಡಿದ ಅವರು ಕೇವಲ 6 ರನ್ ಗಳಿಸಿ ಬೌಲ್ಡ್ ಆದರು. 13 ವರ್ಷಗಳ ಬಳಿಕ ರಣಜಿ ಕ್ರಿಕೆಟ್​ಗೆ ಮರಳಿದ್ದ ಕೊಹ್ಲಿ ಅವರ ಕಳಪೆ ಫಾರ್ಮ್ ಮುಂದುವರಿದಿದೆ. ಇದರಿಂದ ಅಭಿಮಾನಿಗಳು ನಿರಾಶರಾಗಿದ್ದಾರೆ.

ಅಭಿಮಾನಿಗಳಿಗೆ ನಿರಾಸೆ ಮಾಡಿದ ವಿರಾಟ್; ಒಂದಂಕಿಗೆ ಕ್ಲೀನ್​ ಬೋಲ್ಡ್
ವಿರಾಟ್
ರಾಜೇಶ್ ದುಗ್ಗುಮನೆ
|

Updated on:Jan 31, 2025 | 11:24 AM

Share

ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಅವರು ರಣಜಿ ಕ್ರಿಕೆಟ್​ನಲ್ಲಿ ಆಡೋಕೆ ಬಂದಿದ್ದಾರೆ. ಡೆಲ್ಲಿ ತಂಡದ ಪರ ಅವರು ಆಡುತ್ತಿದ್ದಾರೆ. ಕೊಹ್ಲಿ ಆಟವನ್ನು ನೋಡಲು ಬಂದ ಅಭಿಮಾನಿಗಳಿಗೆ ಅವರು ನಿರಾಸೆ ಮಾಡಿದ್ದಾರೆ. ಬೌಂಡರಿ ಸಿಡಿಸಿದ ಮರು ಬಾಲ್​ನಲ್ಲಿ ಕೊಹ್ಲಿ ಬೋಲ್ಡ್ ಆಗಿದ್ದಾರೆ. ಆರು ರನ್​ಗೆ ವಿಕೆಟ್ ಒಪ್ಪಿಸಿ ಅವರು ಪೆವಿಲಿಯನ್ ಸೇರಿದ್ದಾರೆ. ಈ ಮೂಲಕ ಇಲ್ಲಿಯೂ ಅವರು ಕಳಪೆ ಫಾರ್ಮ್​ ಮುಂದುವರಿದಿದೆ.

ವಿರಾಟ್ ಕೊಹ್ಲಿ ಅವರು ಸುಮಾರು 13 ವರ್ಷಗಳ ಬಳಿಕ ರಣಜಿ ಕ್ರಿಕೆಟ್ ಆಡಿದ್ದಾರೆ. ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ರೈಲ್ವೆ ತಂಡ ಕೇವಲ 241 ರನ್​ಗಳಿಗೆ ಆಲ್​ಔಟ್ ಆಯಿತು.  ಮೊದಲ ದಿನ ಕೊಹ್ಲಿ ಮೈದಾನಕ್ಕೆ ಇಳಿಯಲಿಲ್ಲ. ಹೀಗಾಗಿ, ಅಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ನಿರಾಸೆ ಆಯಿತು. ಎರಡನೇ ದಿನ ಕೊಹ್ಲಿ ಅವರು ಡೆಲ್ಲಿ ಪರ ಬ್ಯಾಟ್ ಬೀಸಿದರು. ಇಲ್ಲಿಯೂ ಆಗಿದ್ದು ನಿರಾಸೆಯೇ.

ಇದನ್ನೂ ಓದಿ: ಮೈದಾನಕ್ಕೆ ನುಗ್ಗಿದ ವಿರಾಟ್ ಕೊಹ್ಲಿ ಫ್ಯಾನ್: ಅರೆ ಸೇನಾ ಪಡೆಯನ್ನು ಕರೆಸಿದ DDCA

ಕೊಹ್ಲಿ ಬ್ಯಾಟಿಂಗ್​​ಗೆ ಇಳಿಯುತ್ತಿದ್ದಂತೆ ಅಲ್ಲಿ ನೆರೆದಿದ್ದ ಅಭಿಮಾನಿಗಳು ಹರ್ಷೋದ್ಘಾರ ಮಾಡಿದರು. ಮೊದಲು ನಿಧಾನ ಗತಿಯಲ್ಲಿ ಬ್ಯಾಟ್ ಬೀಸಿದ ಕೊಹ್ಲಿ ಒಂದು ಬೌಂಡರಿ ಸಿಡಿಸಿದರು. ಮತ್ತೆ ಅದೇ ರೀತಿಯಲ್ಲಿ ಬ್ಯಾಟ್ ಬೀಸಲು ಹೋಗಿ ಕ್ಲೀನ್ ಬೌಲ್ಡ್ ಆಗಿ ವಿಕೆಟ್ ಒಪ್ಪಿಸಿದರು. ಹಿಮಾಂಶು ಸಂಗ್ವಾನ್ ಅವರ ಮಾರಕ ದಾಳಿಗೆ ಕೊಹ್ಲಿ ತತ್ತರಿಸಿ ಹೋದರು. ಈ ಮೂಲಕ ಇಲ್ಲಿಯೂ ಕೊಹ್ಲಿ ಕಳಪೆ ಪ್ರದರ್ಶನ ಮುಂದುವರಿದಿದೆ.

ವಿರಾಟ್ ಕೊಹ್ಲಿ ಅವರು ಔಟ್ ಆಗುತ್ತಿದ್ದಂತೆ ಅಲ್ಲಿ ನೆರೆದಿದ್ದ ಅಭಿಮಾನಿಗಳು ಬೇಸರದಿಂದ ಹೊರ ನಡೆಯಲು ಆರಂಭಿಸಿದರು. ಅವರ ಆಟ ನೋಡಬೇಕು ಎಂದು ಸ್ಟೇಡಿಯಂನಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ಸಾಕಷ್ಟು ನಿರಾಸೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:19 am, Fri, 31 January 25

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್