AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021, KKR vs RCB: ಇಂದು ವಿಶೇಷ ಕಾರಣದೊಂದಿಗೆ ಕಣಕ್ಕಿಳಿಯುತ್ತಿದೆ ಆರ್​ಸಿಬಿ: ಮಾಹಿತಿ ಹಂಚಿಕೊಂಡ ವಿರಾಟ್ ಕೊಹ್ಲಿ

RCB Blue Jersey: ಕಳೆದೊಂದು ವರ್ಷದಿಂದ ಪಿಪಿಇ ಕಿಟ್ ಧರಿಸಿ ಕೆಲಸ ಮಾಡುತ್ತಿರುವ ಕೋವಿಡ್ ವಾರಿಯರ್ಸ್​ಗೆ ಗೌರವ ಸೂಚಿಸುವ ಕಾರಣಗಳಿಂದ ಆರ್​ಸಿಬಿ ಇಂದು ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ನೀಲಿ ಜೆರ್ಸಿ ಧರಿಸಿ ಆಡಲಿದೆ.

IPL 2021, KKR vs RCB: ಇಂದು ವಿಶೇಷ ಕಾರಣದೊಂದಿಗೆ ಕಣಕ್ಕಿಳಿಯುತ್ತಿದೆ ಆರ್​ಸಿಬಿ: ಮಾಹಿತಿ ಹಂಚಿಕೊಂಡ ವಿರಾಟ್ ಕೊಹ್ಲಿ
Virat Kohli RCB
TV9 Web
| Updated By: Vinay Bhat|

Updated on: Sep 20, 2021 | 9:34 AM

Share

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2021) ಎರಡನೇ ಚರಣಕ್ಕೆ ಭರ್ಜರಿ ಚಾಲನೆ ದೊರಕಿದೆ. ಭಾನುವಾರ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ (CSK vs MI) ನಡುವೆ ಮೊದಲ ಪಂದ್ಯ ನಡೆಯಿತು. ಇದರಲ್ಲಿ ಧೋನಿ ಪಡೆ 20 ರನ್​ಗಳ ಗೆಲುವು ಸಾಧಿಸಿ ಅಗ್ರಸ್ಥಾನಕ್ಕೇರಿದೆ. ಇಂದು ಎರಡನೇ ಪಂದ್ಯ ನಡೆಯಲಿದ್ದು ವಿರಾಟ್ ಕೊಹ್ಲಿ (Virat Kohli) ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಇಯಾನ್ ಮಾರ್ಗನ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ (KKRvsRCB) ತಂಡಗಳು ಮುಖಾಮುಖಿ ಆಗುತ್ತಿದೆ. ಈ ಪಂದ್ಯದಲ್ಲಿ ಆರ್​ಸಿಬಿ ವಿಶೇಷ ಕಾರಣದೊಂದಿಗೆ ಕಣಕ್ಕಿಳಿಯುತ್ತಿದೆ. ಕೆಕೆಆರ್ ವಿರುದ್ಧ ಕೊಹ್ಲಿ ಪಡೆ ಹೊಸ ನೀಲಿ ಜೆರ್ಸಿಯಲ್ಲಿ ಪಂದ್ಯವನ್ನು ಆಡುತ್ತಿದೆ. ಪ್ರತಿ ಸೀಸನ್​ನಲ್ಲಿ ರೆಡ್ ಮತ್ತು ಗ್ರೀನ್ ಜೆರ್ಸಿಯಲ್ಲಿ ಕಾಣಿಸಿಕೊಳ್ಳುವ ಕೊಹ್ಲಿ ಸೈನ್ಯ ಈ ಬಾರಿ ಬ್ಲೂ ಜೆರ್ಸಿಯಲ್ಲಿ (Blue Jersey) ತನ್ನ ಮೊದಲ ಪಂದ್ಯವನ್ನು ಆಡಲಿದೆ.

ಕಳೆದೊಂದು ವರ್ಷದಿಂದ ಪಿಪಿಇ ಕಿಟ್ ಧರಿಸಿ ಕೆಲಸ ಮಾಡುತ್ತಿರುವ ಕೋವಿಡ್ ವಾರಿಯರ್ಸ್​ಗೆ ಗೌರವ ಸೂಚಿಸುವ ಕಾರಣಗಳಿಂದ ಆರ್​ಸಿಬಿ ನೀಲಿ ಜೆರ್ಸಿ ಧರಿಸಿ ಆಡಲಿದೆ. ಇದು ಅವರ ಅಮೂಲ್ಯ ಸೇವೆಗೆ ಗೌರವ ಸಲ್ಲಿಸುವ ಉದ್ದೇಶವಾಗಿದೆ. ಪಿಪಿಇ ಕಿಟ್‌ಗಳ ಬಣ್ಣವನ್ನು ಹೋಲುವ ನೀಲಿ ಜೆರ್ಸಿಯಲ್ಲಿ ಕಣಕ್ಕಿಳಿದು ಆರ್‌ಸಿಬಿ ಗೌರವ ಸೂಚಿಸಲಿದೆ. ಈ ಬಗ್ಗೆ ತಂಡದ ನಾಯಕ ವಿರಾಟ್ ಕೊಹ್ಲಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ಆರ್​ಸಿಬಿ ತಂಡ ಒಟ್ಟು ಏಳು ಪಂದ್ಯಗಳನ್ನು ಆಡಿದ್ದು ಐದರಲ್ಲಿ ಗೆಲುವು ಸಾಧಿಸಿ ಕೇವಲ ಎರಡರಲ್ಲಷ್ಟೆ ಸೋತಿದೆ. 10 ಅಂಕದೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಆದರೆ, ಆರ್​ಸಿಬಿಯ ನೆಟ್ ರನ್​ರೇಟ್ -0.171 ಇಂದು ಇದನ್ನು ಪ್ಲಸ್ ಆಗಿ ಕನ್ವರ್ಟ್ ಮಾಡಬೇಕಿದೆ.

ಮೊದಲ ಚರಣದಲ್ಲಿ ಆರ್​ಸಿಬಿ ಬ್ಯಾಟಿಂಗ್-ಬೌಲಿಂಗ್ ಎರಡರಲ್ಲೂ ಬಲಿಷ್ಠವಾಗಿತ್ತು. ಈಗ ಮೇಲ್ನೋಟಕ್ಕೆ ಕೊಹ್ಲಿ ಪಡೆಯ ಬೌಲಿಂಗ್ ವಿಭಾಗ ಮತ್ತಷ್ಟು ಕಠಿಣವಾಗಿದೆ. ಇದು ತಂಡದ ದೊಡ್ಡ ಪ್ಲಸ್ ಪಾಯಿಂಟ್ ಆಗಿದೆ. ಯುಜ್ವೇಂದ್ರ ಚಾಹಲ್​ಗೆ ಸಾಥ್ ನೀಡಲು ಲಂಕಾ ಸ್ಪಿನ್ನರ್ ವಾನಿಂದು ಹಸರಂಗ ಇದ್ದು ಇವರ ಪ್ರದರ್ಶನದ ಮೇಲೆ ಎಲ್ಲರ ಕಣ್ಣಿದೆ. ವೇಗಿಗಳ ಪೈಕಿ ಹರ್ಷಲ್ ಪಟೇಲ್ ಈ ಬಾರಿ ಗರಿಷ್ಠ ವಿಕೆಟ್ ಪಡೆದವರ ಸಾಲಿನಲ್ಲಿ ಮುಂಚೂಣಿಯಲ್ಲಿದ್ದಾರೆ. ಕೈಲ್ ಜೇಮಿಸನ್ ಹಾಗೂ ಮೊಹಮ್ಮದ್ ಸಿರಾಜ್ ಮಾರಕವಾಗಿ ಗೋಚರಿಸಲಿದ್ದಾರೆ.

ಇನ್ನೂ ಬ್ಯಾಟಿಂಗ್ ವಿಭಾಗವೂ ಬಲಿಷ್ಠವಾಗಿದೆ. ಓಪನರ್​ಗಳಾಗಿ ನಾಯಕ ವಿರಾಟ್ ಕೊಹ್ಲಿ ಜೊತೆ ದೇವದತ್ ಪಡಿಕ್ಕಲ್ ಕಣಕ್ಕಿಳಿಯಲಿದ್ದಾರೆ. ರಜತ್ ಪಟಿದಾರ್, ಗ್ಲೆನ್ ಮ್ಯಾಕ್ಸ್​ವೆಲ್, ಎಬಿ ಡಿವಿಲಿಯರ್ಸ್ ತಂಡದ ಪ್ರಮುಖ ಬ್ಯಾಟಿಂಗ್ ಅಸ್ತ್ರ. ಅಭ್ಯಾಸ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಮೊಹಮ್ಮದ್ ಅಜರುದ್ದೀನ್​ಗೆ ಅವಕಾಶ ನೀಡಿದರೆ ಅಚ್ಚರಿ ಪಡಬೇಕಿಲ್ಲ. ಇತ್ತ ಕೆಕೆಆರ್ ತಂಡ ಬಿಗ್ ಹಿಟ್ಟರ್​ಗಳಿಂದ ಕೂಡಿದೆ.

ಉಭಯ ತಂಡಗಳು ಐಪಿಎಲ್​ನಲ್ಲಿ ಈವರೆಗೆ 27 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 13 ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ 14 ಪಂದ್ಯಗಳಲ್ಲಿ ಗೆದ್ದ ಇತಿಹಾಸವಿದೆ.

IPL 2021, KKR vs RCB: ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಕೊಹ್ಲಿಯ ಮಾಸ್ಟರ್ ಪ್ಲಾನ್: ಇಲ್ಲಿದೆ ನೋಡಿ ಸಂಭಾವ್ಯ ಪ್ಲೇಯಿಂಗ್ XI

IPL 2021: ಇಂದು ಬಹುನಿರೀಕ್ಷೆಯ ಆರ್​ಸಿಬಿ ಪಂದ್ಯ: ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ ಕೆಕೆಆರ್

(Virat Kohli RCB will sport the blue jersey in honour of frontline superheroes against KKR IPL 2021)

ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?