AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ‘ಸಾಕಷ್ಟು ಕಲಿತಿದ್ದೇನೆ’; 71ನೇ ಶತಕ ಸಿಡಿಸಿದ ಬಳಿಕ ಕೊಹ್ಲಿ ಹೇಳಿದ್ದೇನು ಗೊತ್ತಾ?

Virat Kohli: ನಾನು ಇಂದು ಇಲ್ಲಿ ನಿಂತಿರುವುದು ಕೇವಲ ಒಬ್ಬ ವ್ಯಕ್ತಿಯಿಂದಾಗಿ, ಆ ವ್ಯಕ್ತಿ ಬೇರ್ಯಾರು ಅಲ್ಲ, ಅವರೇ ಅನುಷ್ಕಾ. ಈ ಶತಕ ಅನುಷ್ಕಾ ಮತ್ತು ನನ್ನ ಮುದ್ದು ಮಗಳು ವಾಮಿಕಾಗೆ ಅರ್ಪಿಸುತ್ತೇನೆ ಎಂದು ಕೊಹ್ಲಿ ಭಾವುಕವಾಗಿ ನುಡಿದಿದ್ದಾರೆ.

Asia Cup 2022: ‘ಸಾಕಷ್ಟು ಕಲಿತಿದ್ದೇನೆ’; 71ನೇ ಶತಕ ಸಿಡಿಸಿದ ಬಳಿಕ ಕೊಹ್ಲಿ ಹೇಳಿದ್ದೇನು ಗೊತ್ತಾ?
Virat Kohli
TV9 Web
| Updated By: ಪೃಥ್ವಿಶಂಕರ|

Updated on:Sep 08, 2022 | 9:59 PM

Share

ವಿರಾಟ್ ಕೊಹ್ಲಿ (Virat Kohli) ಅವರ ಶತಕಗಳ ಬರ ಕೊನೆಗೂ ಅಂತ್ಯಗೊಂಡಿದೆ, 71 ನೇ ಅಂತಾರಾಷ್ಟ್ರೀಯ ಶತಕ ಕಿಂಗ್ ಬ್ಯಾಟ್‌ನಿಂದ ಹೊರಬಂದಿದೆ. ದುಬೈ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿ ಅವರ ಬ್ಯಾಟ್ ಮತ್ತೊಮ್ಮೆ ರನ್ ಮಳೆ ಸುರಿಸಿದೆ. ಕೊಹ್ಲಿ ಪೂರ್ಣ 1021 ದಿನಗಳ ನಂತರ ಅಂತಾರಾಷ್ಟ್ರೀಯ ಶತಕವನ್ನು ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿರಾಟ್ ಕೊಹ್ಲಿ, ಏಷ್ಯಾಕಪ್​ನ (ASIA CUP 2022) ಅಂತಿಮ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ 61 ಎಸೆತಗಳಲ್ಲಿ 122 ರನ್ ಗಳಿಸಿ, ಕೊನೆಯವರೆಗೂ ಅಜೇಯರಾಗಿ ಉಳಿದರು. ತಮ್ಮ ಶತಕದ ನಂತರ ಮಾತನಾಡಿದ ವಿರಾಟ್ ಕೊಹ್ಲಿ, ಮತ್ತೆ ರನ್ ಬಾರಿಸುವಲ್ಲಿ ಹೇಗೆ ಯಶಸ್ವಿಯಾದೆ ಎಂಬುದನ್ನು ವಿವರಿಸಿದ್ದಾರೆ.

ವಿರಾಮದ ಲಾಭ ಪಡೆದ ವಿರಾಟ್ ಕೊಹ್ಲಿ

ಇಂಗ್ಲೆಂಡ್ ಪ್ರವಾಸದ ನಂತರ ತೆಗೆದುಕೊಂಡ 6 ವಾರಗಳ ವಿರಾಮ ನನಗೆ ತುಂಬಾ ಸಹಾಯ ಮಾಡಿತು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ವಿರಾಟ್ ಕೊಹ್ಲಿ, ವಿರಾಮದ ಬಳಿಕ ಕ್ರಿಕೆಟ್​ಗೆ ವಾಪಸ್ಸಾದ ನನಗೆ ರನ್​ ಗಳಿಸಬೇಕೆಂಬ ಯಾವುದೇ ಆತುರವಿರಲಿಲ್ಲ. 6 ವಾರಗಳ ವಿರಾಮದ ನಂತರ ಇಂದು ನಾನು ತುಂಬಾ ಖುಷಿಯಾಗಿದ್ದೇನೆ. ವಿರಾಮದ ಅವದಿಯಲ್ಲಿ ಎಷ್ಟು ದಣಿದಿದ್ದೇನೆ ಎಂಬುದನ್ನು ನಾನು ಅರಿತುಕೊಂಡೆ. ಜೊತೆಗೆ ಈ ಬ್ರೇಕ್ ನನಗೆ ಮತ್ತೆ ಆಟವನ್ನು ಆನಂದಿಸಲು ಅವಕಾಶ ಮಾಡಿಕೊಟ್ಟಿತು.

ಕೆಟ್ಟ ಸಮಯದಿಂದ ಪಾಠ ಕಲಿತಿದ್ದೇನ- ವಿರಾಟ್ ಕೊಹ್ಲಿ

ಕಳೆದ ಎರಡೂವರೆ ವರ್ಷಗಳಲ್ಲಿ ಸಾಕಷ್ಟು ಕಲಿತಿದ್ದೇನೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ಕಳೆದ ಎರಡೂವರೆ ವರ್ಷಗಳಲ್ಲಿ ನಾನು ಸಾಕಷ್ಟು ಕಲಿತಿದ್ದೇನೆ. ನಾನು ಈಗ 34 ವರ್ಷಕ್ಕೆ ಕಾಲಿಡುತ್ತಿದ್ದು, ನನ್ನ ಆಚರಣೆಯ ವಿಧಾನ ಬದಲಾಗಿದೆ. ಟಿ20 ಮಾದರಿಯಲ್ಲಿ ನನ್ನ ಶತಕ ಬಂದಿರುವುದು ನನಗೆ ಆಶ್ಚರ್ಯ ತಂದಿದೆ. ಈ ಶತಕಕ್ಕೆ ನನ್ನ ತಂಡ ನನಗೆ ಸಾಕಷ್ಟು ಸಹಾಯ ಮಾಡಿದೆ.

ನನ್ನ ಈ ಯಶಸ್ಸಿಗೆ ಅನುಷ್ಕಾ ಕಾರಣ – ವಿರಾಟ್

ಇಂದು ನಾನು ಫೀಲ್ಡಿನಲ್ಲಿದ್ದರೆ ಅದಕ್ಕೆ ಅನುಷ್ಕಾ ಕಾರಣ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ವಿರಾಟ್ ಕೊಹ್ಲಿ, ‘ನಾನು ಇಂದು ಇಲ್ಲಿ ನಿಂತಿರುವುದು ಕೇವಲ ಒಬ್ಬ ವ್ಯಕ್ತಿಯಿಂದಾಗಿ, ಆ ವ್ಯಕ್ತಿ ಬೇರ್ಯಾರು ಅಲ್ಲ, ಅವರೇ ಅನುಷ್ಕಾ. ಈ ಶತಕ ಅನುಷ್ಕಾ ಮತ್ತು ನನ್ನ ಮುದ್ದು ಮಗಳು ವಾಮಿಕಾಗೆ ಅರ್ಪಿಸುತ್ತೇನೆ ಎಂದು ಕೊಹ್ಲಿ ಭಾವುಕವಾಗಿ ನುಡಿದಿದ್ದಾರೆ.

Published On - 9:54 pm, Thu, 8 September 22

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ