AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ‘ಸಾಕಷ್ಟು ಕಲಿತಿದ್ದೇನೆ’; 71ನೇ ಶತಕ ಸಿಡಿಸಿದ ಬಳಿಕ ಕೊಹ್ಲಿ ಹೇಳಿದ್ದೇನು ಗೊತ್ತಾ?

Virat Kohli: ನಾನು ಇಂದು ಇಲ್ಲಿ ನಿಂತಿರುವುದು ಕೇವಲ ಒಬ್ಬ ವ್ಯಕ್ತಿಯಿಂದಾಗಿ, ಆ ವ್ಯಕ್ತಿ ಬೇರ್ಯಾರು ಅಲ್ಲ, ಅವರೇ ಅನುಷ್ಕಾ. ಈ ಶತಕ ಅನುಷ್ಕಾ ಮತ್ತು ನನ್ನ ಮುದ್ದು ಮಗಳು ವಾಮಿಕಾಗೆ ಅರ್ಪಿಸುತ್ತೇನೆ ಎಂದು ಕೊಹ್ಲಿ ಭಾವುಕವಾಗಿ ನುಡಿದಿದ್ದಾರೆ.

Asia Cup 2022: ‘ಸಾಕಷ್ಟು ಕಲಿತಿದ್ದೇನೆ’; 71ನೇ ಶತಕ ಸಿಡಿಸಿದ ಬಳಿಕ ಕೊಹ್ಲಿ ಹೇಳಿದ್ದೇನು ಗೊತ್ತಾ?
Virat Kohli
TV9 Web
| Edited By: |

Updated on:Sep 08, 2022 | 9:59 PM

Share

ವಿರಾಟ್ ಕೊಹ್ಲಿ (Virat Kohli) ಅವರ ಶತಕಗಳ ಬರ ಕೊನೆಗೂ ಅಂತ್ಯಗೊಂಡಿದೆ, 71 ನೇ ಅಂತಾರಾಷ್ಟ್ರೀಯ ಶತಕ ಕಿಂಗ್ ಬ್ಯಾಟ್‌ನಿಂದ ಹೊರಬಂದಿದೆ. ದುಬೈ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ವಿರಾಟ್ ಕೊಹ್ಲಿ ಅವರ ಬ್ಯಾಟ್ ಮತ್ತೊಮ್ಮೆ ರನ್ ಮಳೆ ಸುರಿಸಿದೆ. ಕೊಹ್ಲಿ ಪೂರ್ಣ 1021 ದಿನಗಳ ನಂತರ ಅಂತಾರಾಷ್ಟ್ರೀಯ ಶತಕವನ್ನು ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿರಾಟ್ ಕೊಹ್ಲಿ, ಏಷ್ಯಾಕಪ್​ನ (ASIA CUP 2022) ಅಂತಿಮ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ 61 ಎಸೆತಗಳಲ್ಲಿ 122 ರನ್ ಗಳಿಸಿ, ಕೊನೆಯವರೆಗೂ ಅಜೇಯರಾಗಿ ಉಳಿದರು. ತಮ್ಮ ಶತಕದ ನಂತರ ಮಾತನಾಡಿದ ವಿರಾಟ್ ಕೊಹ್ಲಿ, ಮತ್ತೆ ರನ್ ಬಾರಿಸುವಲ್ಲಿ ಹೇಗೆ ಯಶಸ್ವಿಯಾದೆ ಎಂಬುದನ್ನು ವಿವರಿಸಿದ್ದಾರೆ.

ವಿರಾಮದ ಲಾಭ ಪಡೆದ ವಿರಾಟ್ ಕೊಹ್ಲಿ

ಇಂಗ್ಲೆಂಡ್ ಪ್ರವಾಸದ ನಂತರ ತೆಗೆದುಕೊಂಡ 6 ವಾರಗಳ ವಿರಾಮ ನನಗೆ ತುಂಬಾ ಸಹಾಯ ಮಾಡಿತು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ವಿರಾಟ್ ಕೊಹ್ಲಿ, ವಿರಾಮದ ಬಳಿಕ ಕ್ರಿಕೆಟ್​ಗೆ ವಾಪಸ್ಸಾದ ನನಗೆ ರನ್​ ಗಳಿಸಬೇಕೆಂಬ ಯಾವುದೇ ಆತುರವಿರಲಿಲ್ಲ. 6 ವಾರಗಳ ವಿರಾಮದ ನಂತರ ಇಂದು ನಾನು ತುಂಬಾ ಖುಷಿಯಾಗಿದ್ದೇನೆ. ವಿರಾಮದ ಅವದಿಯಲ್ಲಿ ಎಷ್ಟು ದಣಿದಿದ್ದೇನೆ ಎಂಬುದನ್ನು ನಾನು ಅರಿತುಕೊಂಡೆ. ಜೊತೆಗೆ ಈ ಬ್ರೇಕ್ ನನಗೆ ಮತ್ತೆ ಆಟವನ್ನು ಆನಂದಿಸಲು ಅವಕಾಶ ಮಾಡಿಕೊಟ್ಟಿತು.

ಕೆಟ್ಟ ಸಮಯದಿಂದ ಪಾಠ ಕಲಿತಿದ್ದೇನ- ವಿರಾಟ್ ಕೊಹ್ಲಿ

ಕಳೆದ ಎರಡೂವರೆ ವರ್ಷಗಳಲ್ಲಿ ಸಾಕಷ್ಟು ಕಲಿತಿದ್ದೇನೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ಕಳೆದ ಎರಡೂವರೆ ವರ್ಷಗಳಲ್ಲಿ ನಾನು ಸಾಕಷ್ಟು ಕಲಿತಿದ್ದೇನೆ. ನಾನು ಈಗ 34 ವರ್ಷಕ್ಕೆ ಕಾಲಿಡುತ್ತಿದ್ದು, ನನ್ನ ಆಚರಣೆಯ ವಿಧಾನ ಬದಲಾಗಿದೆ. ಟಿ20 ಮಾದರಿಯಲ್ಲಿ ನನ್ನ ಶತಕ ಬಂದಿರುವುದು ನನಗೆ ಆಶ್ಚರ್ಯ ತಂದಿದೆ. ಈ ಶತಕಕ್ಕೆ ನನ್ನ ತಂಡ ನನಗೆ ಸಾಕಷ್ಟು ಸಹಾಯ ಮಾಡಿದೆ.

ನನ್ನ ಈ ಯಶಸ್ಸಿಗೆ ಅನುಷ್ಕಾ ಕಾರಣ – ವಿರಾಟ್

ಇಂದು ನಾನು ಫೀಲ್ಡಿನಲ್ಲಿದ್ದರೆ ಅದಕ್ಕೆ ಅನುಷ್ಕಾ ಕಾರಣ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ವಿರಾಟ್ ಕೊಹ್ಲಿ, ‘ನಾನು ಇಂದು ಇಲ್ಲಿ ನಿಂತಿರುವುದು ಕೇವಲ ಒಬ್ಬ ವ್ಯಕ್ತಿಯಿಂದಾಗಿ, ಆ ವ್ಯಕ್ತಿ ಬೇರ್ಯಾರು ಅಲ್ಲ, ಅವರೇ ಅನುಷ್ಕಾ. ಈ ಶತಕ ಅನುಷ್ಕಾ ಮತ್ತು ನನ್ನ ಮುದ್ದು ಮಗಳು ವಾಮಿಕಾಗೆ ಅರ್ಪಿಸುತ್ತೇನೆ ಎಂದು ಕೊಹ್ಲಿ ಭಾವುಕವಾಗಿ ನುಡಿದಿದ್ದಾರೆ.

Published On - 9:54 pm, Thu, 8 September 22

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ