AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ರೋಚಕ ಪಂದ್ಯದ ಮಧ್ಯೆ ದೇವರಲ್ಲಿ ವಿರಾಟ್ ಕೊಹ್ಲಿ ಪ್ರಾರ್ಥನೆ: ವೈರಲ್ ಆಗ್ತಿದೆ ವಿಡಿಯೋ

India vs Pakistan, Asia Cup 2022: ಏಷ್ಯಾಕಪ್​ನ ಭಾರತ- ಪಾಕಿಸ್ತಾನ ರೋಚಕ ಪಂದ್ಯದ ಮಧ್ಯೆ ಒಂದು ಹಂತದಲ್ಲಿ ರವೀಂದ್ರ ಜಡೇಜಾ ಔಟಾಗುವುದರಲ್ಲಿದ್ದರು. ಈ ಸಂದರ್ಭ ವಿರಾಟ್ ಕೊಹ್ಲಿ ಅವರು ನೀಡಿದ ರಿಯಾಕ್ಷನ್ ವೈರಲ್ ಆಗುತ್ತಿದೆ.

Virat Kohli: ರೋಚಕ ಪಂದ್ಯದ ಮಧ್ಯೆ ದೇವರಲ್ಲಿ ವಿರಾಟ್ ಕೊಹ್ಲಿ ಪ್ರಾರ್ಥನೆ: ವೈರಲ್ ಆಗ್ತಿದೆ ವಿಡಿಯೋ
Virat Kohli IND vs PAK
TV9 Web
| Edited By: |

Updated on:Aug 29, 2022 | 11:01 AM

Share

ಭಾನುವಾರ ರಾತ್ರಿ ಏಷ್ಯಾಕಪ್​ನಲ್ಲಿ ನಡೆದ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಣ ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿತು. ದೊಡ್ಡ ಮೊತ್ತದ ಟಾರ್ಗೆಟ್ ಇರದಿದ್ದರೂ ಕೊನೆಯ ಓವರ್ ವರೆಗೆ ಪಂದ್ಯ ಸಾಗಿತು. 20ನೇ ಓವರ್​ನ ನಾಲ್ಕನೇ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ (Hardik Pandya) ಸಿಕ್ಸ್ ಸಿಡಿಸಿ ತಂಡಕ್ಕೆ ರೋಚಕ ಜಯ ತಂದಿಟ್ಟರು. ಈ ಮೂಲಕ ಪಾಕ್ ವಿರುದ್ಧ ಸೇಡು ತೀರಿಸಿಕೊಳ್ಳುವ ಜೊತೆ ಟೀಮ್ ಇಂಡಿಯಾ 5 ವಿಕೆಟ್​ಗಳ ಅಮೋಘ ಗೆಲುವು ಕಂಡಿದೆ. ತನಗೆ ನೀಡಿದ್ದ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ಹಾರ್ದಿಕ್ ಆಲ್ರೌಂಡ್ ಪ್ರದರ್ಶನ ತೋರಿದರು. ಇವರಿಗೆ ರವೀಂದ್ರ ಜಡೇಜಾ ಕೂಡ ಉತ್ತಮ ಸಾಥ್ ನೀಡಿದರು. ಬೌಲಿಂಗ್​ನಲ್ಲಿ ಭುವನೇಶ್ವರ್ ಕುಮಾರ್ ಮಿಂಚಿದರು. ವಿರಾಟ್ ಕೊಹ್ಲಿ (Virat Kohli) ಕೂಡ 35 ರನ್ ಸಿಡಿಸಿ ತಂಡದ ಗೆಲುವಿಗೆ ಕೊಡುಗೆ ನೀಡಿದರು.

ಮೇಲ್ನೋಟಕ್ಕೆ ಭಾರತಕ್ಕೆ 148 ರನ್ ಕಠಿಣ ಟಾರ್ಗೆಟ್ ಆಗಿರಲೇ ಇಲ್ಲ. ಆದರೆ, ಮೊದಲ ಓವರ್​ನಲ್ಲೇ ವಿಕೆಟ್ ಕಳೆದುಕೊಳ್ಳುವ ಜೊತೆ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಪೈಕಿ ಯಾರುಕೂಡ ಕೊನೆಯ ವರೆಗೆ ನಿಲ್ಲದೆ ಔಟಾದರು. ಇದು ಆತಂಕ ಉಂಟುಮಾಡಿತ್ತು. ಆದರೆ, ರವೀಂದ್ರ ಜಡೇಜಾ ಹಾಗೂ ಹಾರ್ದಿಕ್ ಪಾಂಡ್ಯ ಕ್ರೀಸ್ ಕಚ್ಚಿ ನಿಂತು ಗೆಲುವಿಗೆ ಹೋರಾಟ ನಡೆಸಿದರು. ಇವರಿಬ್ಬರ ಜೊತೆಯಾಟ ತಂಡಕ್ಕೆ ಮುಖ್ಯವಾಗಿತ್ತು. ಕೊನೆಯ ಹಂತದ ವರೆಗೂ ಜಡ್ಡುಪಾಂಡ್ಯ ನಿತ್ತು ಆಡಬೇಕಿತ್ತು.

ಇದನ್ನೂ ಓದಿ
Image
Rohit Sharma: ಪಂದ್ಯ ಮುಗಿದ ಬಳಿಕ ಓರ್ವ ಆಟಗಾರನನ್ನು ಮಾತ್ರ ಹಾಡಿ ಹೊಗಳಿದ ರೋಹಿತ್ ಶರ್ಮಾ
Image
Hardik Pandya: ಹಾರ್ದಿಕ್ ಪಾಂಡ್ಯ ಸಿಕ್ಸ್ ಸಿಡಿಸಿ ಗೆಲುವು ತಂದುಕೊಟ್ಟಾಗ ದಿನೇಶ್ ಕಾರ್ತಿಕ್ ಏನು ಮಾಡಿದ್ರು ನೋಡಿ
Image
IND vs PAK: ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯದ ಕೊನೆಯ ಓವರ್​ ಹೇಗಿತ್ತು?: ವಿಡಿಯೋ
Image
IND vs PAK: ಫಾಸ್ಟ್ ಬೌಲರ್ಸ್​ ಪರಾಕ್ರಮ; ಪಾಕ್ ವಿರುದ್ಧ ಐತಿಹಾಸಿಕ ದಾಖಲೆ ಬರೆದ ಟೀಂ ಇಂಡಿಯಾ ವೇಗಿಗಳು..!

ಆದರೆ, ಒಂದು ಹಂತದಲ್ಲಿ ಜಡೇಜಾ ಔಟಾಗುವುದರಲ್ಲಿದ್ದರು. ಈ ಸಂದರ್ಭ ವಿರಾಟ್ ಕೊಹ್ಲಿ ಅವರು ನೀಡಿದ ರಿಯಾಕ್ಷನ್ ವೈರಲ್ ಆಗುತ್ತಿದೆ. 18ನೇ ಓವರ್ ಆರಂಭವಾಗುವ ಹೊತ್ತಿಗೆ ಭಾರತದ ಗೆಲುವಿಗೆ 32 ರನ್​ಗಳ ಅವಶ್ಯಕತೆಯಿತ್ತು. ಜಡೇಜಾ ಕ್ರೀಸ್​ನಲ್ಲಿ ಇದ್ದಾಗ ನಸೀಂ ಶಾ ಬೌಲಿಂಗ್​ನ 4ನೇ ಎಸೆತದಲ್ಲಿ ಪಾಕ್ ಆಟಗಾರರು ಎಲ್​ಬಿಗೆ ಮನವಿ ಮಾಡಿದರು. ಅಂಪೈರ್ ಔಟ್ ಎಂದು ತೀರ್ಮಾನ ಕೂಡ ಪ್ರಕಟಿಸಿದರು. ಆದರೆ, ಈ ತೀರ್ಪಿನ ಬಗ್ಗೆ ಅನುಮಾನವಿದ್ದ ಜಡೇಜಾ ರಿವ್ಯೂ ಮೊರೆಹೋದರು.

ಥರ್ಡ್​ ಅಂಪೈರ್ ರಿವ್ಯೂ ಪರೀಕ್ಷಿಸುತ್ತಿದ್ದರೆ ಅತ್ತ ಭಾರತದ ಅಭಿಮಾನಿಗಳಲ್ಲಿ ಹಾಗೂ ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್​ನಲ್ಲಿ ಆತಂಕ ಮನೆಮಾಡಿತ್ತು. ಅದರಲ್ಲೂ ವಿರಾಟ್ ಕೊಹ್ಲಿ ದೇವರ ಮೊರೆ ಹೋದ ಘಟನೆ ಕೂಡ ನಡೆಯಿತು. ಇದು ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ಕೊಹ್ಲಿ ಪ್ರಾರ್ಥಿಸುತ್ತಿರುವ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಜೊತೆಗೆ ಕೊಹ್ಲಿ ಕಾಪಾಡಿಎಂದು ಹೇಳುತ್ತಿರುವುದು ಕಂಡು ಬಂದಿದೆ.

ರಿವ್ಯೂನಲ್ಲಿ ಪರೀಕ್ಷಿಸಿದಾಗ ಚೆಂಡು ಪಿಚ್ ಹೊರಗಡೆ ಇದ್ದಿರುವುದು ತಿಳಿದಿದ್ದು ನಂತರ ನಾಟೌಟ್ ಎಂದು ತೀರ್ಪು ನೀಡಲಾಗಿದೆ. ಇದಾದ ಬಳಿಕ ಜಡೇಜಾ ಸಿಕ್ಸ್ ಸಿಡಿಸಿ ಸ್ಫೋಟಕ ಬ್ಯಾಟಿಂಗ್ ಮಾಡಿದರು. 29 ಎಸೆತಗಳಲ್ಲಿ ತಲಾ 2 ಫೋರ್, ಸಿಕ್ಸರ್ ಸಿಡಿಸಿದ್ದ ಜಡ್ಡು 35 ರನ್​ಗೆ ಔಟಾದರು. ಪಾಂಡ್ಯ ಕೇವಲ 17 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಿಡಿಸಿ ಅಜೇಯ 33 ರನ್ ಬಾರಿಸಿದರು. ಭಾರತ 19.4 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 148 ರನ್ ಗಳಿಸಿ 5 ವಿಕೆಟ್​ಗಳ ಭರ್ಜರಿ ಜಯ ಕಂಡಿತು.

Published On - 11:01 am, Mon, 29 August 22

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ