AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಭಾರತ ಟೆಸ್ಟ್ ತಂಡದಲ್ಲಿ ಕೊಹ್ಲಿ ಸ್ಥಾನವನ್ನು ತುಂಬುವವರು ಯಾರು?

Test Cricket Replacement: ರೋಹಿತ್ ಶರ್ಮಾ ಅವರ ನಂತರ ವಿರಾಟ್ ಕೊಹ್ಲಿ ಕೂಡ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಹೊಂದುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಭಾರತ ಟೆಸ್ಟ್ ತಂಡದಲ್ಲಿ ಕೊಹ್ಲಿ ಸ್ಥಾನ ತುಂಬುವವರು ಯಾರು ಎಂಬ ಪ್ರಶ್ನೆ ಮೂಡಿದೆ. ಪ್ರಸ್ತುತ ಕರುಣ್ ನಾಯರ್, ದೇವದತ್ ಪಡಿಕ್ಕಲ್ ಮತ್ತು ರಜತ್ ಪಾಟಿದಾರ್ ಸಂಭಾವ್ಯ ಬದಲಿ ಆಟಗಾರರಾಗಿದ್ದಾರೆ.

Team India: ಭಾರತ ಟೆಸ್ಟ್ ತಂಡದಲ್ಲಿ ಕೊಹ್ಲಿ ಸ್ಥಾನವನ್ನು ತುಂಬುವವರು ಯಾರು?
Virat Kohli
Follow us
ಪೃಥ್ವಿಶಂಕರ
|

Updated on: May 10, 2025 | 10:37 PM

ಭಾರತ ಕ್ರಿಕೆಟ್ ದಿನಗಳ ಅಂತರದಲ್ಲಿ ಎರಡರೆಡು ಆಘಾತ ಎದುರಾಗಿದೆ. ಮೊದಲು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ ರೆ, ಈಗ ಸ್ಟಾರ್ ಬ್ಯಾಟ್ಸ್​ಮನ್ ವಿರಾಟ್ ಕೊಹ್ಲಿ (Virat Kohli) ಕೂಡ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿ ಹೊಂದಬಹುದು ಎಂಬ ಸುದ್ದಿ ಕೇಳಿಬರುತ್ತಿದೆ. ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಬಹುದು ಎಂದು ಹೇಳಲಾಗುತ್ತಿದೆ. ಈಗ ದೊಡ್ಡ ಪ್ರಶ್ನೆ ಏನೆಂದರೆ ಟೆಸ್ಟ್ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಸ್ಥಾನವನ್ನು ಯಾರು ತುಂಬುತ್ತಾರೆ?. ಈ ಪ್ರಶ್ನೆಗೆ ಬಿಸಿಸಿಐ  (BCCI) ಈಗಾಗಲೇ ಉತ್ತರ ಹುಡುಕಲು ಪ್ರಾರಂಭಿಸಿದೆ. ವಿರಾಟ್ ಕೊಹ್ಲಿ ಅವರನ್ನು ಬದಲಾಯಿಸಬಲ್ಲ ಮೂವರು ಆಟಗಾರರಿದ್ದು, ಈ ಆಟಗಾರರಲ್ಲಿ ಒಬ್ಬರು ದೇಶೀಯ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಆದರೆ ಇಬ್ಬರು ಆಟಗಾರರು ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಆ ಮೂವರು ಆಟಗಾರರೆಂದರೆ, ಕರುಣ್ ನಾಯರ್, ದೇವದತ್ ಪಡಿಕ್ಕಲ್ ಮತ್ತು ರಜತ್ ಪಾಟಿದಾರ್.

ದೇಶೀಯ ಕ್ರಿಕೆಟ್‌ನಲ್ಲಿ ಕರುಣ್ ಅಬ್ಬರ

ಇಲ್ಲಿಯವರೆಗೆ ಭಾರತದಿಂದ ಇಬ್ಬರು ಆಟಗಾರರು ಮಾತ್ರ ಟೆಸ್ಟ್ ಕ್ರಿಕೆಟ್‌ನಲ್ಲಿ ತ್ರಿಶತಕ ಗಳಿಸಿದ್ದಾರೆ. ಮಾಜಿ ಆರಂಭಿಕ ಆಟಗಾರರಾದ ವೀರೇಂದ್ರ ಸೆಹ್ವಾಗ್ ಮತ್ತು ಕರುಣ್ ನಾಯರ್. ತ್ರಿಶತಕ ಬಾರಿಸಿದ ನಂತರ ಕರುಣ್ ನಾಯರ್ ಭಾರತ ತಂಡದಿಂದ ಕಣ್ಮರೆಯಾದರೂ, ದೇಶೀಯ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಲೇ ಇದ್ದರು. ವಿರಾಟ್ ಕೊಹ್ಲಿ ಬದಲಿಗೆ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬಹುದು. ಕರುಣ್ ನಾಯರ್ ಇದುವರೆಗೆ ಭಾರತ ಪರ 6 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅವರು ಆಡಿದ 7 ಇನ್ನಿಂಗ್ಸ್‌ಗಳಲ್ಲಿ 62.33 ಸರಾಸರಿಯಲ್ಲಿ 374 ರನ್ ಗಳಿಸಿದ್ದಾರೆ. ಅವರ ಗರಿಷ್ಠ ಸ್ಕೋರ್ ಔಟಾಗದೆ 303 ರನ್‌. ಕರುಣ್ ನಾಯರ್ ಅವರಲ್ಲದೆ, ರಜತ್ ಪಾಟಿದಾರ್ ಮತ್ತು ದೇವದತ್ ಪಡಿಕ್ಕಲ್ ಕೂಡ ಈ ರೇಸ್‌ನಲ್ಲಿದ್ದಾರೆ.

ಈ ಆಟಗಾರರು ಸಹ ರೇಸ್‌ನಲ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ರಜತ್ ಪಾಟಿದಾರ್ ಮತ್ತು ಅದೇ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ಕೂಡ ಟೆಸ್ಟ್ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿಯ ಸ್ಥಾನ ತುಂಬಲು ಸಿದ್ಧರಿದ್ದಾರೆ. ಈ ಇಬ್ಬರೂ ಬ್ಯಾಟ್ಸ್‌ಮನ್‌ಗಳು ಐಪಿಎಲ್ 2025 ರಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಆದರೆ ರಜತ್ ಪಟಿದಾರ್ ಭಾರತ ಪರ 3 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. 10.50 ಸರಾಸರಿಯಲ್ಲಿ ಕೇವಲ 63 ರನ್‌ಗಳನ್ನು ಗಳಿಸಿದ್ದಾರೆ. ಮಧ್ಯಪ್ರದೇಶ ಪರ ದೇಶೀಯ ಕ್ರಿಕೆಟ್ ಆಡುವ ರಜತ್ ದೇಶೀಯ ಕ್ರಿಕೆಟ್‌ನಲ್ಲಿ 68 ಪಂದ್ಯಗಳನ್ನು ಆಡಿದ್ದು, ಇದರಲ್ಲಿ 13 ಶತಕ ಸೇರಿದಂತೆ 43.07 ಸರಾಸರಿಯಲ್ಲಿ 4738 ರನ್ ಗಳಿಸಿದ್ದಾರೆ.

PSL 2025: ‘ನಾನು ಎಂದಿಗೂ ಪಾಕಿಸ್ತಾನಕ್ಕೆ ಹೋಗುವುದಿಲ್ಲ’; ಮಗುವಿನಂತೆ ಕಣ್ಣೀರಿಟ್ಟ ವಿದೇಶಿ ಕ್ರಿಕೆಟಿಗರು

ದೇವದತ್ ಪಡಿಕಲ್ ಬಗ್ಗೆ ಹೇಳುವುದಾದರೆ, ಟೀಂ ಇಂಡಿಯಾ ಪರ ಆಡಿರುವ 2 ಟೆಸ್ಟ್ ಪಂದ್ಯಗಳ ಮೂರು ಇನ್ನಿಂಗ್ಸ್‌ಗಳಲ್ಲಿ, ಅವರು 30.00 ಸರಾಸರಿಯಲ್ಲಿ 90 ರನ್‌ಗಳನ್ನು ಗಳಿಸಿದ್ದಾರೆ. ಇದರಲ್ಲಿ ಅರ್ಧಶತಕವೂ ಸೇರಿದೆ. ಇಲ್ಲಿಯವರೆಗೆ ರಣಜಿಯಲ್ಲಿ 43 ಪಂದ್ಯಗಳನ್ನು ಆಡಿರುವ ದೇವದತ್ 71 ಇನ್ನಿಂಗ್ಸ್‌ಗಳಲ್ಲಿ 57.81 ಸರಾಸರಿಯಲ್ಲಿ 2815 ರನ್ ಗಳಿಸಿದ್ದಾರೆ. ಇದರಲ್ಲಿ 6 ಶತಕಗಳು ಸೇರಿವೆ. ಈ ಇಬ್ಬರೂ ಬ್ಯಾಟ್ಸ್‌ಮನ್‌ಗಳು ತಮ್ಮ ಪ್ರದರ್ಶನದ ಆಧಾರದ ಮೇಲೆ ಟೆಸ್ಟ್ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಬದಲಿಗೆ ತಂಡದಲ್ಲಿ ಸ್ಥಾನ ಪಡೆಯಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ