AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Venkatesh Iyer: ವೆಂಕಟೇಶ್ ಅಯ್ಯರ್ ಸ್ಫೋಟಕ ಹೊಡೆತಕ್ಕೆ ತಬ್ಬಿಬ್ಬಾದ ಭಾರತದ ಡಗೌಟ್: ಇಲ್ಲಿದೆ ರೋಚಕ ವಿಡಿಯೋ

IND vs WI T20, Viral Video: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ 33 ರನ್‌ ಚಚ್ಚಿದ ವೆಂಕಟೇಶ್ ಅಯ್ಯರ್ ತಂಡದ ಮೊತ್ತವನ್ನು ಎರಿಸಿದರು. ಅದರಲ್ಲೂ ವೈಡ್ ಬಾಲ್​​ಗೆ ಬ್ಯಾಟ್ ತಾಗಿಸಿ ಫೈನ್​ ಲೆಗ್​ನಲ್ಲಿ ಇವರು ಬೌಂಡರಿ ಬಾರಿಸಿದ್ದಕ್ಕೆ ಭಾರತದ ಡಗೌಟ್​ನಲ್ಲಿ ಏನಾಯ್ತು ನೋಡಿ.

Venkatesh Iyer: ವೆಂಕಟೇಶ್ ಅಯ್ಯರ್ ಸ್ಫೋಟಕ ಹೊಡೆತಕ್ಕೆ ತಬ್ಬಿಬ್ಬಾದ ಭಾರತದ ಡಗೌಟ್: ಇಲ್ಲಿದೆ ರೋಚಕ ವಿಡಿಯೋ
Venkatesh Iyer and India Dug Out
TV9 Web
| Edited By: |

Updated on: Feb 19, 2022 | 10:48 AM

Share

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಕದನದಲ್ಲಿ ಟೀಮ್ ಇಂಡಿಯಾ (Team India) 8 ರನ್​ಗಳ ರೋಚಕ ಜಯ ಸಾಧಿಸಿ ಸರಣಿ ವಶಪಡಿಸಿಕೊಂಡಿದೆ. ಈಡನ್ ಗಾರ್ಡನ್ಸ್ ಮೈದಾನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ, ರಿಷಭ್ ಪಂತ್ ಅವರ ಹಾಗೂ ವಿರಾಟ್ ಕೊಹ್ಲಿ ಅವರ 52 ರನ್ ಮತ್ತು ವೆಂಕಟೇಶ್ ಅಯ್ಯರ್ (Venkatesh Iyer) ಅವರ ಉಪಯುಕ್ತ ಕಾಣಿಕೆಯ ನೆರವಿನಿಂದ 5 ವಿಕೆಟ್‌ಗೆ 186 ರನ್‌ಗಳಿಸಿದರೆ, ಬಳಿಕ ಗೆಲುವಿಗಾಗಿ ವಿಂಡೀಸ್ ಕಡೇ ಹಂತದವರೆಗೂ ಹೋರಾಡಿದರೂ 3 ವಿಕೆಟ್‌ಗೆ 178 ರನ್‌ಗಳಿಸಲಷ್ಟೇ ಶಕ್ತವಾಯಿತು. ಈ ಪಂದ್ಯದಲ್ಲಿ ಅಂತಿಮ ಹಂತದ ವೇಳೆ ಭಾರತ ಪರ ಮಿಂಚಿದ್ದು ಪಂತ್ (Rishabh Pant) ಜೊತೆ ವೆಂಕಟೇಶ್ ಅಯ್ಯರ್. ಸರಣಿಯ ಮೊದಲ ಪಂದ್ಯದಲ್ಲೂ ಬಿರುಸಿನ 24* ರನ್‌ ಸಿಡಿಸಿದ್ದ ಅಯ್ಯರ್‌, ಎರಡನೇ ಪಂದ್ಯದಲ್ಲಿ ಕೇವಲ 18 ಎಸೆತಗಳಲ್ಲಿ 33 ರನ್‌ ಚಚ್ಚಿ ತಂಡದ ಮೊತ್ತವನ್ನು ಎರಿಸಿದರು.

ಅಯ್ಯರ್ ಬ್ಯಾಟ್​ನಿಂದ 4 ಬೌಂಡರಿ ಮತ್ತು 1 ಸಿಕ್ಸರ್ ಮೂಡಿಬಂತು. ತಮ್ಮ ಸ್ಫೋಟಕ ಬ್ಯಾಟಿಂಗ್‌ ಜೊತೆಗೆ ಅಯ್ಯರ್ ಅಮೋಘ ಹೊಡೆತಗಳ ಮೂಲಕ ಗಮನ ಸೆಳೆದರು. ಅಯ್ಯರ್ ಸ್ಫೋಟಕ ಆಟಕ್ಕೆ ಟೀಮ್ ಇಂಡಿಯಾದ ಡಗೌಟ್ ಕೂಡ ಒಂದು ಕ್ಷಣ ತಬ್ಬಿಬ್ಬಾಯಿತು. ಹೌದು, 183.33ರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ವೆಂಕಟೇಶ್‌ ಅಯ್ಯರ್‌, 16ನೇ ಓವರ್‌ನ ನಾಲ್ಕನೇ ಎಸೆತದಲ್ಲಿ ಎಡಗೈ ವೇಗಿ ಶೆಲ್ಡನ್‌ ಕಾಟ್ರೆಲ್‌ ಲೆಗ್ ಸೈಡ್ ವೈಡ್ ಬಾಲ್​​ಗೆ ಬ್ಯಾಟ್ ತಾಗಿಸಿ ಫೈನ್​ ಲೆಗ್​ನಲ್ಲಿ ಬೌಂಡರಿ ಚಚ್ಚಿದರು.

ಅತಿ ವೇಗವಾಗಿದ್ದ ಚೆಂಡು ಕ್ಷಣಾರ್ಧದಲ್ಲಿ ಫೈನ್​ ಲೆಗ್ ಮೂಲಕ ಸೀದಾ ಭಾರತದ ಡಗೌಟ್ ಕಡೆಗೆ ಬಂತು. ಸೆಕೆಂಡ್​ಗಳ ಸಮಯದಲ್ಲಿ ಚೆಂಡು ಬಂದಿದ್ದನ್ನು ಡಗೌಟ್​ನಲ್ಲಿದ್ದ ಟೀಮ್ ಇಂಡಿಯಾ ಆಟಗಾರರು ಅರಿಯಲು ಸಾಧ್ಯವಾಗದೆ ಕೂತಲ್ಲಿಂದ ಎದ್ದು ಚೆಂಡಿನ ಹೊಡೆತದಿಂದ ತಪ್ಪಿಸಿಕೊಳ್ಳಲು ಮುಂದಾದರು. ಇದನ್ನು ಕಂಡು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಒಂದು ಕ್ಷಣ ದಂಗಾಗಿ ಹೋದರು. ಇಲ್ಲಿದೆ ನೋಡಿ ಆ ವಿಡಿಯೋ.

ರಿಷಭ್ ಪಂತ್ ಜೊತೆ ಭರ್ಜರಿ ಜೊತೆಯಾಟ ಆಡಿದ ವೆಂಕಟೇಶ್ ಅಯ್ಯರ್ 76 ರನ್​ಗಳ ಕಾಣಿಕೆ ನೀಡಿದರು. ರೋಹಿತ್ ಶರ್ಮಾ ಪಂದ್ಯ ಮುಗಿದ ಬಳಿಕ ಅಯ್ಯರ್ ಆಟದ ಬಗ್ಗೆ ಮನಪೂರ್ವಕವಾಗಿ ಹೊಗಳಿದರು. ವೆಂಕಟೇಶ್ ಅಯ್ಯರ್ ಪಂದ್ಯದಿಂದ ಪಂದ್ಯಕ್ಕೆ ಬೆಳೆಯುತ್ತಿರುವುದು ಖುಷಿ ನೀಡುತ್ತದೆ. ಅವರ ಕೌಶಲ್ಯದಲ್ಲಿ ತುಂಬಾ ಬದಲಾವಣೆ ಆಗಿದ್ದು ಪ್ರತಿಯೊಬ್ಬ ನಾಯಕನು ಇದನ್ನೆ ಬಯಸುತ್ತಾನೆ. ಈ ರೀತಿಯ ಆಟಗಾರ ತಂಡಕ್ಕೆ ಅಗತ್ಯವಿದೆ ಎಂದು ಹೇಳಿದ್ದಾರೆ.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಓಟವನ್ನು ಭರ್ಜರಿ ಆಗಿ ಮುಂದುವರೆಸಿದೆ. ಶುಕ್ರವಾರ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲೂ ಭಾರತ 8 ರನ್​ಗಳ ರೋಚಕ ಜಯ ಸಾಧಿಸಿತು. ಇದು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​​ನಲ್ಲಿ ಭಾರತ ತಂಡಕ್ಕೆ ಸಿಕ್ಕ 100ನೇ ಗೆಲುವು ಎಂಬುದು ವಿಶೇಷ. ಸ್ಫೋಟಕ ಬ್ಯಾಟರ್​​ಗಳಾದ ನಿಕೋಲಸ್ ಪೂರನ್ ಹಾಗೂ ರೊವ್ಮನ್ ಪೊವೆಲ್ ಜೋಡಿಯ ಬಿರುಸಿನ ಬ್ಯಾಟಿಂಗ್ ನಡುವೆಯೂ ಕೆರಿಬಿಯನ್ನರಿಗೆ ಗೆಲುವಿನ ದಡ ಸೇರಲು ಸಾಧ್ಯವಾಗಲಿಲ್ಲ. ಭಾರತ ಪರ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾದರು. ಅದರಲ್ಲೂ ಕಳಪೆ ಫಾರ್ಮ್​ನಿಂದ ಕಂಗೆಟ್ಟಿದ್ದ ಕಿಂಗ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ತಕ್ಕ ಉತ್ತರ ನೀಡಿದರು.

Rohit Sharma: ಪಂದ್ಯ ಮುಗಿದ ಬಳಿಕ ಕೊಹ್ಲಿ ಆಟದ ಬಗ್ಗೆ ನಾಯಕ ರೋಹಿತ್ ಶರ್ಮಾ ಹೇಳಿದ್ದೇನು ನೋಡಿ

IND vs WI T20: ಮುಂದುವರೆದ ರೋಹಿತ್ ನಾಯಕತ್ವದ ಗೆಲುವಿನ ಓಟ: ಕೆರಿಬಿಯನ್ನರಿಗೆ ಭಾರೀ ಮುಖಭಂಗ

ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ