T20 World Cup 2024: ಒಂದೇ ದಿನ ಮೂವರು ದಿಗ್ಗಜರ ಯುಗಾಂತ್ಯ

T20 World Cup 2024: ವಿಶ್ವಕಪ್ ಗೆಲ್ಲಬೇಕೆಂಬ ರಾಹುಲ್ ದ್ರಾವಿಡ್ ಅವರ ಬಹುದೊಡ್ಡ ಕನಸು ಕೊನೆಗೂ ಈಡೇರಿದೆ. ಈ ಹಿಂದೆ ಭಾರತದ ಪರ ವಿಶ್ವಕಪ್​ ಟೂರ್ನಿಗಳನ್ನು ಆಡಿದರೂ ದ್ರಾವಿಡ್ ಅವರಿಗೆ ವಿಶ್ವ ಕಿರೀಟ ಮುಡಿಗೇರಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದರೆ ತಮ್ಮ ನಿವೃತ್ತಿಗೂ ಮುನ್ನ ವಿಶ್ವಕಪ್ ಎತ್ತಿ ಹಿಡಿಯುವಲ್ಲಿ ಕೊನೆಗೂ ರಾಹುಲ್ ದ್ರಾವಿಡ್ ಸಫಲರಾಗಿದ್ದಾರೆ.

T20 World Cup 2024: ಒಂದೇ ದಿನ ಮೂವರು ದಿಗ್ಗಜರ ಯುಗಾಂತ್ಯ
Virat Kohli-Rohit Sharma-Rahul Dravid
Follow us
|

Updated on: Jun 30, 2024 | 7:51 AM

T20 World Cup 2024: ಟಿ20 ವಿಶ್ವಕಪ್​ನಲ್ಲಿ ಭಾರತ ತಂಡ ವಿಶ್ವ ಚಾಂಪಿಯನ್ ಆಗುತ್ತಿದ್ದಂತೆ ಟೀಮ್ ಇಂಡಿಯಾ ಪರ ಮೂವರು ದಿಗ್ಗಜರ ಯುಗಾಂತ್ಯವಾಗಿದೆ. ಹೌದು, ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರೆ, ಅತ್ತ ರಾಹುಲ್ ದ್ರಾವಿಡ್ ಅವರ ಕೋಚ್ ಸ್ಥಾನದಿಂದ ಕೆಳಗಿಳಿದಿದ್ದಾರೆ. ಈ ಬಾರಿಯ ಟಿ20 ವಿಶ್ವಕಪ್​ನೊಂದಿಗೆ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿದಿದೆ. ಇನ್ಮುಂದೆ ಭಾರತ ತಂಡ ತರಬೇತುದಾರರಾಗಿ ಅವರು ಕಾಣಿಸಿಕೊಳ್ಳುವುದಿಲ್ಲ. ಹೀಗಾಗಿ ಟಿ20 ವಿಶ್ವಕಪ್ ಫೈನಲ್ ಪಂದ್ಯವು ದ್ರಾವಿಡ್ ಪಾಲಿಗೆ ತುಂಬಾ ಮಹತ್ವದ ಪಂದ್ಯವಾಗಿತ್ತು. ಅದರಂತೆ ಇದೀಗ ವಿಶ್ವಕಪ್ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಆಟಗಾರರು ಗುರುವಿಗೆ ಅತ್ಯುತ್ತಮ ಬೀಳ್ಕೊಡುಗೆ ನೀಡಿದ್ದಾರೆ.

ಇನ್ನು ಟಿ20 ವಿಶ್ವಕಪ್ ಗೆದ್ದ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ ಇದುವೇ ನನ್ನ ಕೊನೆಯ ಟಿ20 ವಿಶ್ವಕಪ್ ಪಂದ್ಯ ಎಂದು ತಿಳಿಸಿದರು. ಅಲ್ಲದೆ ಮುಂದಿನ ಪೀಳಿಗೆಯು ಜವಾಬ್ದಾರಿ ಹೊತ್ತುಕೊಳ್ಳಲು ಇದು ಸರಿಯಾದ ಸಮಯ. ಈ ಗೆಲುವಿನೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುವುದಾಗಿ ತಿಳಿಸಿದ್ದಾರೆ.

ಇದರ ಬೆನ್ನಲ್ಲೇ ರೋಹಿತ್ ಶರ್ಮಾ ಕೂಡ ಟಿ20 ಅಂತಾರಾಷ್ಟ್ರೀಯ ಕೆರಿಯರ್​ಗೆ ನಿವೃತ್ತಿ ಘೋಷಿಸಿದ್ದಾರೆ. ವಿಶ್ವಕಪ್ ಗೆದ್ದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಹಿಟ್​ಮ್ಯಾನ್, ಭಾರತದ ಪರ ನನ್ನ ವೃತ್ತಿಜೀವನವು ಟಿ20 ಕ್ರಿಕೆಟ್​ನೊಂದಿಗೆ ಶುರುವಾಗಿತ್ತು. ಈ ಸ್ವರೂಪಕ್ಕೆ ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ಹೀಗಾಗಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳುತ್ತಿರುವುದಾಗಿ ರೋಹಿತ್ ಶರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ: Virat Kohli: ವಿಶ್ವಕಪ್​ ಗೆದ್ದ ಬಳಿಕ ವಿರಾಟ್ ಕೊಹ್ಲಿಯ ಮಸ್ತ್ ಡ್ಯಾನ್ಸ್​: ವಿಡಿಯೋ ವೀಕ್ಷಿಸಿ

ಇದರೊಂದಿಗೆ ಭಾರತದ ಪರ ಒಂದೇ ದಿನ ಮೂವರು ದಿಗ್ಗಜರ ಯುಗಾಂತ್ಯವಾಗಿದೆ. ಇಲ್ಲಿ ಇಬ್ಬರು ಆಟಗಾರರಾದಾದರೆ, ಒಬ್ಬರು ಕೋಚ್ ಎಂಬುದಷ್ಟೇ ವ್ಯತ್ಯಾಸ. ಆದರೆ ಮೂವರು ಕೂಡ ವಿಶ್ವಕಪ್​ ಗೆಲ್ಲುವ ಕನಸು ಹೊತ್ತಿದ್ದರು. ಈ ಕನಸನ್ನು ನನಸು ಮಾಡಿ ಇದೀಗ ವಿದಾಯ ಹೇಳಿರುವುದು ವಿಶೇಷ.

ಫೈನಲ್ ಪಂದ್ಯ:

ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 7 ರನ್​ಗಳ ರೋಚಕ ಜಯ ಸಾಧಿಸಿದೆ.

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ