AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಬಿಗ್ ಶಾಕ್ ನೀಡಲು ಬಿಸಿಸಿಐ ಸಿದ್ಧತೆ

BCCI Central Contract 2026: ಪ್ರತಿ ವರ್ಷ ಬಿಸಿಸಿಐ ಟೀಮ್ ಇಂಡಿಯಾ ಆಟಗಾರರೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತಾರೆ. ಈ ಒಪ್ಪಂದದ ಅನುಸಾರ ಆಟಗಾರರಿಗೆ ವಾರ್ಷಿಕ ಮೊತ್ತವನ್ನು ಪಾವತಿಸಲಾಗುತ್ತದೆ. ಇಲ್ಲಿ ಆಟಗಾರರನ್ನು ಎ+, ಎ, ಬಿ, ಸಿ ಮತ್ತು ಡಿ ಗ್ರೇಡ್ ಎಂದು ವಿಂಗಡಿಸಲಾಗುತ್ತಿದ್ದು, ಈ ಮೂಲಕ ಕೋಟಿ ರೂ. ಮೊತ್ತದ ವೇತನವನ್ನು ಪಾವತಿಸಲಾಗುತ್ತದೆ.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಬಿಗ್ ಶಾಕ್ ನೀಡಲು ಬಿಸಿಸಿಐ ಸಿದ್ಧತೆ
Virat Kohli -Rohit Sharma
ಝಾಹಿರ್ ಯೂಸುಫ್
|

Updated on: Jan 21, 2026 | 8:55 AM

Share

ಟೀಮ್ ಇಂಡಿಯಾ ಆಟಗಾರರ ಜೊತೆಗಿನ 2026ರ ಕೇಂದ್ರ ಒಪ್ಪಂದಕ್ಕೆ ಬಿಸಿಸಿಐ ಸಿದ್ಧತೆಗಳನ್ನು ಶುರು ಮಾಡಿದೆ. ಈ ಬಾರಿಯ ಒಪ್ಪಂದದಲ್ಲಿ ಕೆಲ ಮಹತ್ವದ ಬದಲಾವಣೆ ಕಂಡು ಬರಲಿದೆ. ಈ ಬದಲಾವಣೆಯೊಂದಿಗೆ ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಹಿಂಬಡ್ತಿ ನೀಡುವ ಸಾಧ್ಯತೆಯಿದೆ.

ಪ್ರಸ್ತುತ ಬಿಸಿಸಿಐ ಕೇಂದ್ರ ಒಪ್ಪಂದದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್​ಪ್ರೀತ್ ಬುಮ್ರಾ ಹಾಗೂ ರವೀಂದ್ರ ಜಡೇಜಾ A+ ಗ್ರೇಡ್​ನಲ್ಲಿದ್ದಾರೆ. ಅದರಂತೆ ಈ ನಾಲ್ವರು ಆಟಗಾರರು ವಾರ್ಷಿಕವಾಗಿ ತಲಾ 7 ಕೋಟಿ ರೂ. ಪಡೆಯುತ್ತಿದ್ದಾರೆ.

ಆದರೆ ಇದೀಗ ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಹಾಗೂ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿದ್ದಾರೆ. ಹೀಗಾಗಿ ಈ ಮೂವರನ್ನು ಎ ಪ್ಲಸ್ ಶ್ರೇಣಿಯಿಂದ ಕೈ ಬಿಡಲು ಬಿಸಿಸಿಐ ಮುಂದಾಗಿದೆ ಎಂದು ವರದಿಯಾಗಿದೆ.

ಅಲ್ಲದೆ ಹೊಸ ಒಪ್ಪಂದದಲ್ಲಿ ಈ ಮೂವರನ್ನು ಎ ಗ್ರೇಡ್‌ಗೆ ಸೇರಿಸುತ್ತಾರೋ ಅಥವಾ ಬಿ ಗ್ರೇಡ್‌ಗೆ ಪರಿಗಣಿಸುತ್ತಾರೋ ಎಂಬುದೇ ಈಗ ಕುತೂಹಲ. ಏಕೆಂದರೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಮುಂದುವರೆಯುತ್ತಿದ್ದು, ಹೀಗಾಗಿ ಇಬ್ಬರಿಗೂ ಹಿಂಬಡ್ತಿ ನೀಡಲು ಬಿಸಿಸಿಐ ಮುಂದಾಗಿದೆ ಎಂದು ವರದಿಯಾಗಿದೆ.

A ಗ್ರೇಡ್​ನಲ್ಲಿ ಯಾರಿದ್ದಾರೆ?

ಬಿಸಿಸಿಐನ ಪ್ರಸ್ತುತ ಕೇಂದ್ರ ಒಪ್ಪಂದದಲ್ಲಿ ಒಟ್ಟು 6 ಆಟಗಾರರು ಎ ಗ್ರೇಡ್​ನಲ್ಲಿದ್ದಾರೆ. ಅವರೆಂದರೆ ರಿಷಭ್ ಪಂತ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಕೆಎಲ್ ರಾಹುಲ್, ಶುಭ್​ಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ. ಈ ದರ್ಜೆಯ ಆಟಗಾರರು ಬಿಸಿಸಿಐನಿಂದ ವಾರ್ಷಿಕವಾಗಿ 5 ಕೋಟಿ ರೂ. ಪಡೆಯುತ್ತಿದ್ದಾರೆ. ಆದರೆ ಈ ಬಾರಿ ಗ್ರೇಡ್-ಎ ಯಿಂದ ಮೊಹಮ್ಮದ್ ಶಮಿ ಅವರನ್ನು ಸಹ ಕೈ ಬಿಡುವ ಸಾಧ್ಯತೆಯಿದೆ.

ಅದೇ ರೀತಿ, ಬಿಸಿಸಿಐನ ಪ್ರಸ್ತುತ ಕೇಂದ್ರ ಒಪ್ಪಂದದಲ್ಲಿ, ಗ್ರೇಡ್ ಬಿ ನಲ್ಲಿ 5 ಆಟಗಾರರು ಮತ್ತು ಗ್ರೇಡ್ ಸಿ ನಲ್ಲಿ ಒಟ್ಟು 19 ಆಟಗಾರರಿದ್ದಾರೆ. ಈ ಎರಡೂ ದರ್ಜೆಗಳಲ್ಲಿರುವ ಆಟಗಾರರ ಒಪ್ಪಂದಗಳಲ್ಲೂ ಮಹತ್ವದ ಬದಲಾವಣೆಯಾಗುವ ನಿರೀಕ್ಷೆಯಿದೆ.

ಅಂದರೆ ಇಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಅವರನ್ನು A+  ಗ್ರೇಡ್​ ಒಪ್ಪಂದದಿಂದ ಹೊರಗಿಟ್ಟರೆ, ಉಳಿಯುವುದು ಜಸ್​ಪ್ರೀತ್ ಬುಮ್ರಾ. ಈ ಪಟ್ಟಿಗೆ ಮೂರು ಸ್ವರೂಪಗಳಲ್ಲೂ ಕಣಕ್ಕಿಳಿಯುತ್ತಿರುವ ಆಟಗಾರರನ್ನು ಸೇರ್ಪಡೆಗೊಳಿಸಲಿದ್ದಾರಾ ಅಥವಾ ಗ್ರೇಡ್​ನಲ್ಲಿ ಬದಲಾವಣೆ ಮಾಡಲಿದ್ದಾರಾ ಕಾದು ನೋಡಬೇಕಿದೆ.

2025ರ ಬಿಸಿಸಿಐ ವಾರ್ಷಿಕ ಒಪ್ಪಂದ ಪಟ್ಟಿ:

  • ಎ+ ಗ್ರೇಡ್ (7 ಕೋಟಿ ರೂ.)
  • ವಿರಾಟ್ ಕೊಹ್ಲಿ
  • ರೋಹಿತ್ ಶರ್ಮಾ
  • ಜಸ್​ಪ್ರೀತ್ ಬುಮ್ರಾ
  • ರವೀಂದ್ರ ಜಡೇಜಾ
  • ಎ ಗ್ರೇಡ್ (5 ಕೋಟಿ ರೂ.)
  • ಮೊಹಮ್ಮದ್ ಸಿರಾಜ್
  • ಕೆಎಲ್ ರಾಹುಲ್
  • ಶುಭ್​ಮನ್ ಗಿಲ್
  • ‘ಹಾರ್ದಿಕ್ ಪಾಂಡ್ಯ
  • ಮೊಹಮ್ಮದ್ ಶಮಿ
  • ರಿಷಭ್ ಪಂತ್
  • ಬಿ ಗ್ರೇಡ್ (3 ಕೋಟಿ ರೂ.)
  • ಸೂರ್ಯಕುಮಾರ್ ಯಾದವ್
  • ಕುಲ್ದೀಪ್ ಯಾದವ್
  • ಅಕ್ಷರ್ ಪಟೇಲ್
  • ಯಶಸ್ವಿ ಜೈಸ್ವಾಲ್
  • ಶ್ರೇಯಸ್ ಅಯ್ಯರ್

ಇದನ್ನೂ ಓದಿ: ಬರೋಬ್ಬರಿ ೩೭ ಸಿಕ್ಸ್… ಫಿನ್ ಅಲೆನ್ ಆರ್ಭಟ

  • ಸಿ ಗ್ರೇಡ್ (1 ಕೋಟಿ ರೂ.)
  • ರಿಂಕು ಸಿಂಗ್
  • ತಿಲಕ್ ವರ್ಮಾ
  • ರುತುರಾಜ್ ಗಾಯಕ್ವಾಡ್
  • ಶಿವಂ ದುಬೆ
  • ರವಿ ಬಿಷ್ಣೋಯ್
  • ವಾಷಿಂಗ್ಟನ್ ಸುಂದರ್
  • ಮುಖೇಶ್ ಕುಮಾರ್
  • ಸಂಜು ಸ್ಯಾಮ್ಸನ್
  • ಅರ್ಷದೀಪ್ ಸಿಂಗ್
  • ಪ್ರಸಿದ್ಧ್ ಕೃಷ್ಣ
  • ರಜತ್ ಪಾಟಿದಾರ್
  • ಧ್ರುವ್ ಜುರೆಲ್
  • ಸರ್ಫರಾಝ್ ಖಾನ್
  • ನಿತೀಶ್ ಕುಮಾರ್ ರೆಡ್ಡಿ
  • ಇಶಾನ್ ಕಿಶನ್
  • ಅಭಿಷೇಕ್ ಶರ್ಮಾ
  • ಆಕಾಶ್ ದೀಪ್
  • ವರುಣ್ ಚಕ್ರವರ್ತಿ
  • ಹರ್ಷಿತ್ ರಾಣಾ
Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!