Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ನಾಯಕನಾಗಿ ವಿದಾಯದ ಟೆಸ್ಟ್ ಪಂದ್ಯ ಆಡಿ ಎಂದ ಬಿಸಿಸಿಐಗೆ ಕೊಹ್ಲಿ ಹೇಳಿದ್ದೇನು ನೋಡಿ

Virat Kohli Farewell Match: ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವ ತ್ಯಜಿಸಿದ್ದೇ ತಡ ಕ್ರಿಕೆಟ್ ವಲಯದಿಂದ ಸಾಕಷ್ಟು ಮಾತುಗಳು ಕೇಳಿಬರುತ್ತಿವೆ. ಪರ ವಿರೋಧದ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದರ ನಡುವೆ ಕೊಹ್ಲಿ ನಾಯಕತ್ವ ತ್ಯಜಿಸುವ ಬಗ್ಗೆ ಹೇಳಿದಾಗ ಬಿಸಿಸಿಐ ಇವರ ಬಳಿ ವಿಶೇಷ ಮನವಿಯೊಂದನ್ನು ಮಾಡಿತ್ತಂತೆ.

Virat Kohli: ನಾಯಕನಾಗಿ ವಿದಾಯದ ಟೆಸ್ಟ್ ಪಂದ್ಯ ಆಡಿ ಎಂದ ಬಿಸಿಸಿಐಗೆ ಕೊಹ್ಲಿ ಹೇಳಿದ್ದೇನು ನೋಡಿ
Virat Kohli vs BCCI
Follow us
TV9 Web
| Updated By: Vinay Bhat

Updated on: Jan 17, 2022 | 11:00 AM

ಕಳೆದ ಏಳು ವರ್ಷಗಳಿಂದ ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸಿಕೊಂಡು ಬರುತ್ತಿದ್ದ ವಿರಾಟ್ ಕೊಹ್ಲಿಯ (Virat Kohli) ನಾಯಕತ್ವದ ಯುಗ ಇದೀಗ ಅಂತ್ಯಕಂಡಿದೆ. ಕೇವಲ ಮೂರು ತಿಂಗಳ ಒಳಗೆ ಏಕದಿನ, ಟಿ20 ಮತ್ತು ಟೆಸ್ಟ್ ಮೂರೂ ಮಾದರಿಯ ನಾಯಕತ್ವದಿಂದ ಕಿಂಗ್ ಕೊಹ್ಲಿ ನಿರ್ಗಮಿಸಿದ್ದಾರೆ. ಟಿ20 ನಾಯಕತ್ವದಿಂದ ಹಿಂದೆ ಸರಿಯುವ ಬಗ್ಗೆ ಸ್ವತಃ ಕೊಹ್ಲಿ ಅವರೇ ಸೂಚನೆ ನೀಡಿದ್ದರು. ಆದರೆ, ಏಕದಿನ ನಾಯಕತ್ವ ಕೊನೆಗೊಂಡಿದ್ದು ಸ್ವತಃ ಕೊಹ್ಲಿ ಅವರಿಗೇ ಆಘಾತ ಉಂಟು ಮಾಡಿತ್ತು. ಟೆಸ್ಟ್​ ಕ್ರಿಕೆಟ್ (Test Cricket) ನಾಯಕತ್ವದ ರಾಜೀನಾಮೆ ಕೂಡ ಹಠಾತ್ ಆಗಿ ತೆಗೆದುಕೊಂಡರು. ಸಾಮಾಜಿಕ ಜಾಲತಾಣಗಳಲ್ಲಿ ಟೆಸ್ಟ್ ನಾಯಕತ್ವ ನಿವೃತ್ತಿ ಘೋಷಿಸುವ ಹಿಂದಿನ ದಿನ ಕೊಹ್ಲಿ ಅವರು ಈ ಬಗ್ಗೆ ಡ್ರೆಸ್ಸಿಂಗ್ ರೂಮ್​ನಲ್ಲಿ ಆಟಗಾರರಿಗೆ ತಿಳಿಸಿದರಂತೆ. ಜೊತೆಗೆ ಈ ಸುದ್ದಿ ಬಹಿರಂಗಗೊಳಿಸದಂತೆ ಮನವಿ ಮಾಡಿದ್ದರಂತೆ. ನಂತರ ಬಿಸಿಸಿಐಗೆ ತಿಳಿಸಿ ತಮ್ಮ ದೃಢ ನಿರ್ಧಾರವನ್ನು ಜಗತ್ತಿಗೆ ಹಂಚಿಕೊಂಡರು.

ಕೊಹ್ಲಿ ಟೆಸ್ಟ್ ನಾಯಕತ್ವ ತ್ಯಜಿಸಿದ್ದೇ ತಡ ಕ್ರಿಕೆಟ್ ವಲಯದಿಂದ ಸಾಕಷ್ಟು ಮಾತುಗಳು ಕೇಳಿಬರುತ್ತಿವೆ. ಪರ ವಿರೋಧದ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಕೆಲವರು ಇದುಕೂಡ ಬಿಸಿಸಿಐ ಗಿಮಿಕ್ ಎಂದಿದ್ದಾರೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ವಿರಾಟ್ ಕೊಹ್ಲಿ ತೆಗೆದುಕೊಂಡಿರುವುದು ಅವರದ್ದೆ ವೈಯಕ್ತಿಕ ನಿರ್ಧಾರ ಎಂದು ಹೇಳಿದ್ದಾರೆ. ಇದರ ನಡುವೆ ಕೊಹ್ಲಿ ನಾಯಕತ್ವ ತ್ಯಜಿಸುವ ಬಗ್ಗೆ ಹೇಳಿದಾಗ ಬಿಸಿಸಿಐ ಇವರ ಬಳಿ ವಿಶೇಷ ಮನವಿಯೊಂದನ್ನು ಮಾಡಿತ್ತಂತೆ.

ಹೌದು, ಹಿಂದುಸ್ತಾನ್ ಟೈಮ್ಸ್ ಮಾಡಿರುವ ವರದಿ ಪ್ರಕಾರ, ವಿರಾಟ್ ಕೊಹ್ಲಿ ಅಧಿಕೃತವಾಗಿ ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕನ ಜವಾಬ್ದಾರಿಯಿಂದ ಕೆಳಗಿಳಿಯುವ ಮುನ್ನ ನಾಯಕನಾಗಿ ವಿದಾಯದ ಟೆಸ್ಟ್ ಪಂದ್ಯ ಆಡುವಂತೆ ಕೋರಿತ್ತು. ಆದರೆ, ಕೊಹ್ಲಿ ಇದನ್ನು ನಯವಾಗಿ ತಿರಾಸ್ಕಾರ ಮಾಡಿದರಂತೆ. ಭಾರತ ತನ್ನ ಮುಂದಿನ ಟೆಸ್ಟ್ ಪಂದ್ಯವನ್ನು ಶ್ರೀಲಂಕಾ ಎದುರು ಫೆಬ್ರವರಿ 25ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದೆ. ಇದು ಅವರ 100ನೇ ಟೆಸ್ಟ್ ಪಂದ್ಯ ಕೂಡ. ಇಲ್ಲಿ ನಾಯಕನಾಗಿ ವಿದಾಯದ ಟೆಸ್ಟ್ ಪಂದ್ಯ ಆಡಿ ಎಂದು ಬಿಸಿಸಿಐ ಅಧಿಕಾರಿಗಳು ಕೊಹ್ಲಿಗೆ ಕರೆ ಮಾಡಿ ಹೇಳಿದ್ದರಂತೆ. ಆದರೆ, ಇದಕ್ಕೆ ಕೊಹ್ಲಿ “ಒಂದು ಪಂದ್ಯ ದೊಡ್ಡ ಬದಲಾವಣೆ ಮಾಡುವುದಿಲ್ಲ, ನಾನಿರುವುದೇ ಹೀಗೆ” ಎಂದು ಖಡಕ್ ಆಗಿ ಉತ್ತರಿಸಿದ್ದಾರೆ ಎಂದು ಹೇಳಲಾಗಿದೆ.

ಕೊಹ್ಲಿ ನಾಯಕತ್ವದಲ್ಲಿ ಭಾರತ ಅಭೂತಪೂರ್ವ ಯಶಸ್ಸು ಸಾಧಿಸಿದೆ. 2015 ರಿಂದ ನಾಯಕನಾಗಿ 68 ಟೆಸ್ಟ್ ಗಳಲ್ಲಿ, ಕೊಹ್ಲಿ ಶೇ. 58.82 ಗೆಲುವನ್ನು ಸಾಧಿಸಿದ್ದಾರೆ. ಕೊಹ್ಲಿ ನಾಯಕತ್ವದಲ್ಲಿ ಭಾರತ 40 ಟೆಸ್ಟ್ ಗಳನ್ನು ಗೆದ್ದುಕೊಂಡಿದೆ. 17 ಮ್ಯಾಚ್ ಸೋತ್ತಿದ್ದರೆ, 11 ಮ್ಯಾಚ್ ಡ್ರಾ ಆಗಿದೆ. ಕೊಹ್ಲಿ ನಾಯಕತ್ವದಲ್ಲಿ ತಂಡವು ವಿದೇಶಗಳಲ್ಲಿ 16 ಟೆಸ್ಟ್​ಗಳನ್ನು ಗೆದ್ದಿರುವುದು ಬಹುದೊಡ್ಡ ಸಾಧನೆಯಾಗಿದೆ.

ಸದ್ಯ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಭಾರತ ಟೆಸ್ಟ್ ತಂಡಕ್ಕೆ ಹೊಸ ನಾಯಕನ ಘೋಷಣೆ ಮಾಡುವುದರಲ್ಲಿದೆ. ಮೂಲಗಳ ಪ್ರಕಾರ ರೋಹಿತ್ ಶರ್ಮಾ ಅವರೇ ನಾಯಕನಾಗಿ ಆಯ್ಕೆಯಾಗಲಿದ್ದಾರಂತೆ. ಇದರ ನಡುವೆ ಕೆಎಲ್ ರಾಹುಲ್, ರಿಷಭ್ ಪಂತ್ ಮತ್ತು ಆರ್. ಅಶ್ವಿನ್ ಹೆಸರು ಕೂಡ ಕೇಳಿಬರುತ್ತಿದೆ.

South Africa vs India: ಮುಂದಿನ ತಿಂಗಳು ಟೀಮ್ ಇಂಡಿಯಾದಲ್ಲಿ ದೊಡ್ಡ ಬದಲಾವಣೆ ಆಗಲಿದೆ ಎಂದ ಹರ್ಭಜನ್ ಸಿಂಗ್

Virat Kohli: ಕೊಹ್ಲಿ ನಾಯಕತ್ವದಡಿಯಲ್ಲಿ ಏಕದಿನ, ಟಿ20, ಟೆಸ್ಟ್​ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದವರು ಯಾರೆಲ್ಲ ಗೊತ್ತೇ?

ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು