AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಗೆಲುವಿನ ಲಯಕ್ಕೆ ಮರಳುತ್ತೇವೆ! ಹೆಡಿಂಗ್ಲಿಯಲ್ಲಿನ ಸೋಲಿನ ನಂತರ ಅಡಿಲೇಡ್ ಟೆಸ್ಟ್ ನೆನಪಿಸಿದ ವಿರಾಟ್ ಕೊಹ್ಲಿ

IND vs ENG: ಕೆಲವು ತಿಂಗಳುಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಕೇವಲ 36 ರನ್ ಗಳಿಗೆ ಆಲೌಟಾಗಿತ್ತು ಆದರೆ ನಂತರ ಮರಳಿ ಬಂದು ಇತಿಹಾಸ ಸೃಷ್ಟಿಸಿತು ಎಂಬುದನ್ನು ನಾವಿಲ್ಲಿ ನೆನೆಯಬೇಕಿದೆ

IND vs ENG: ಗೆಲುವಿನ ಲಯಕ್ಕೆ ಮರಳುತ್ತೇವೆ! ಹೆಡಿಂಗ್ಲಿಯಲ್ಲಿನ ಸೋಲಿನ ನಂತರ ಅಡಿಲೇಡ್ ಟೆಸ್ಟ್ ನೆನಪಿಸಿದ ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ, ಚೇತೇಶ್ವರ್ ಪೂಜಾರ
TV9 Web
| Edited By: |

Updated on: Aug 28, 2021 | 8:25 PM

Share

ಹೆಡಿಂಗ್ಲಿಯಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಇನ್ನಿಂಗ್ಸ್ ಮತ್ತು 76 ರನ್ ಗಳ ಸೋಲನ್ನು ಎದುರಿಸಬೇಕಾಯಿತು. ಈ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ನಿರಾಶೆಗೆ ಕಾರಣವಾಗಿತ್ತು. ಇಂಗ್ಲೆಂಡ್ ಬೌಲರ್‌ಗಳ ಮುಂದೆ, ಭಾರತದ ಬಲಿಷ್ಠ ಬ್ಯಾಟಿಂಗ್ ಕ್ರಮಾಂಕವನ್ನು ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 78 ರನ್ ಗಳಿಗೆ ಆಲ್ಔಟ್ ಮಾಡಲಾಯಿತು. ಇದರ ನಂತರ, ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ ಮೂವರು ಬ್ಯಾಟ್ಸ್‌ಮನ್‌ಗಳು ಮಾತ್ರ ಉತ್ತಮವಾಗಿ ಆಡಿದರು. ಈ ಸೋಲಿನಿಂದ ಭಾರತದ ನಾಯಕ ವಿರಾಟ್ ಕೊಹ್ಲಿ ನಿರಾಶೆಗೊಂಡರು. ಆದರೆ ಕೆಲವು ತಿಂಗಳುಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಕೇವಲ 36 ರನ್ ಗಳಿಗೆ ಆಲೌಟಾಗಿತ್ತು ಆದರೆ ನಂತರ ಮರಳಿ ಬಂದು ಇತಿಹಾಸ ಸೃಷ್ಟಿಸಿತು ಎಂಬುದನ್ನು ನಾವಿಲ್ಲಿ ನೆನೆಯಬೇಕಿದೆ. ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಬಾಕಿಯಿದ್ದು, ಭಾರತಕ್ಕೆ ಸರಣಿ ಗೆಲ್ಲುವ ಅವಕಾಶವಿದೆ.

ಪಂದ್ಯದ ನಂತರ, ಕೊಹ್ಲಿ ಮಾತನಾಡಿ, ಮಧ್ಯಮ ಕ್ರಮಾಂಕದ ಡೆಪ್ತ್ ಚರ್ಚೆಯ ವಿಷಯವಾಗಿದೆ. ಅಗ್ರ ಕ್ರಮಾಂಕವು ಕೆಳ ಮಧ್ಯಮ ಕ್ರಮಾಂಕಕ್ಕೆ ಉತ್ತಮ ರನ್ ಮಾಡಲು ಸಾಕಷ್ಟು ರನ್ ನೀಡಬೇಕು. ಮೊದಲ ಎರಡು ಪಂದ್ಯಗಳಲ್ಲಿ ನಾವು ಉತ್ತಮ ಪ್ರದರ್ಶನ ನೀಡಿದ್ದೇವೆ. ಆದರೆ ಈ ಪಂದ್ಯದಲ್ಲಿ ಕೊಂಚ ವಿಫಲವಾಗಿದ್ದೇವೆ. ಮುಂದಿನ ಪಂದ್ಯದಲ್ಲಿ ತಪ್ಪುಗಳನ್ನು ಸರಿಪಡಿಸಿಕೊಂಡು ಕಣಕ್ಕಿಳಿಯುತ್ತೇವೆ ಎಂದರು.

ಟಾಸ್ ಬಗ್ಗೆ ಈ ವಿಷಯ ಹೇಳಿದರು ಈ ಪಂದ್ಯದಲ್ಲಿ ಟಾಸ್ ಗೆದ್ದ ಕೊಹ್ಲಿ ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಮೊದಲ ಇನ್ನಿಂಗ್ಸ್‌ನಲ್ಲಿ ತಂಡವು 78 ರನ್ ಗಳಿಗೆ ಆಲೌಟಾದಾಗ, ಅವರ ನಿರ್ಧಾರವನ್ನು ಸಾಕಷ್ಟು ಟೀಕಿಸಲಾಯಿತು. ಈ ಬಗ್ಗೆ ಕೊಹ್ಲಿ ಈಗ ಹೇಳಿದ್ದು, ಈ ಬಗ್ಗೆ ನಿರಾಶೆಗೊಂಡಿಲ್ಲ. ಇಲ್ಲ, ಟಾಸ್ ನಿರ್ಧಾರದಿಂದ ನಾನು ನಿರಾಶೆಗೊಂಡಿಲ್ಲ. ಪಿಚ್ ಬ್ಯಾಟಿಂಗ್‌ಗೆ ಚೆನ್ನಾಗಿ ಕಾಣುತ್ತಿತ್ತು. ಇಂಗ್ಲೆಂಡ್ ಬ್ಯಾಟಿಂಗ್ ಮಾಡುವಾಗ ತುಂಬಾ ಭಿನ್ನವಾಗಿತ್ತು ಏಕೆಂದರೆ ನಾವು ಚೆನ್ನಾಗಿ ಬೌಲಿಂಗ್ ಮಾಡಲಿಲ್ಲ ಎಂದಿದ್ದಾರೆ.

ಮುಂದಿನ ಟೆಸ್ಟ್ ಬಗ್ಗೆ ಹೇಳಿದ್ದಿದು ಸರಣಿಯ ನಾಲ್ಕನೇ ಪಂದ್ಯವು ಓವಲ್ ಮೈದಾನದಲ್ಲಿ ನಡೆಯಲಿದೆ ಮತ್ತು ಈ ಪಂದ್ಯದಲ್ಲಿ ತಂಡದ ಆಯ್ಕೆಯ ಬಗ್ಗೆ ಕೊಹ್ಲಿಯನ್ನು ಕೇಳಿದಾಗ, ಪರಿಸ್ಥಿತಿಯನ್ನು ನೋಡಿದ ನಂತರ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದರು. ಓವಲ್‌ನಲ್ಲಿ, ಪರಿಸ್ಥಿತಿಗಳು ಮತ್ತು ಪಿಚ್‌ಗೆ ಅನುಗುಣವಾಗಿ ನಾವು ಇಬ್ಬರು ಸ್ಪಿನ್ನರ್‌ಗಳನ್ನು ಆಡಿಸಲು ನಿರ್ಧರಿಸುತ್ತೇವೆ. ನೀವು ಇಲ್ಲಿನ ಹವಾಮಾನವನ್ನು ಊಹಿಸಲು ಸಾಧ್ಯವಿಲ್ಲ. ನೀವು ಇಬ್ಬರು ಸ್ಪಿನ್ನರ್‌ಗಳನ್ನು ಹೊಂದಿದ್ದರೆ, ನೀವು ಕೇವಲ ಮೂರು ವೇಗದ ಬೌಲರ್‌ಗಳೊಂದಿಗೆ ಹೋಗಬೇಕು. ಇಂಗ್ಲೆಂಡ್‌ನಲ್ಲಿರುವ ಆ ನಾಲ್ಕನೇ ವೇಗದ ಬೌಲರ್ ಆಟವನ್ನು ಬದಲಾಯಿಸಬಹುದು ಎಂದರು.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ