Virat Kohli Catch: ವಿರಾಟ್ ಕೊಹ್ಲಿ ಹಿಡಿದ ಸ್ಟನ್ನಿಂಗ್ ಕ್ಯಾಚ್​ ಕಂಡು ದಂಗಾದ ರೋಹಿತ್ ಮಾಡಿದ್ದೇನು ನೋಡಿ

IND vs WI Second ODI: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಹಿಡಿದ ಅದ್ಭುತ ಕ್ಯಾಚ್​ನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಕೊಹ್ಲಿ ಕ್ಯಾಚ್ ಹಿಡಿದ ತಕ್ಷಣ ನಾಯಕ ರೋಹಿತ್ ಶರ್ಮಾ ಏನು ಮಾಡಿದರು ಎಂಬುದನ್ನು ನೋಡಿ.

Virat Kohli Catch: ವಿರಾಟ್ ಕೊಹ್ಲಿ ಹಿಡಿದ ಸ್ಟನ್ನಿಂಗ್ ಕ್ಯಾಚ್​ ಕಂಡು ದಂಗಾದ ರೋಹಿತ್ ಮಾಡಿದ್ದೇನು ನೋಡಿ
Virat Kohli Catch IND vs WI 2nd ODI
Follow us
| Updated By: Vinay Bhat

Updated on:Feb 10, 2022 | 10:47 AM

ಇಂಗ್ಲೆಂಡ್ ವಿರುದ್ಧದ ಸರಣಿ ಗೆದ್ದು ನೇರವಾಗಿ ಭಾರತಕ್ಕೆ ಬಂದ ವೆಸ್ಟ್ ಇಂಡೀಸ್ (West Indies) ತಂಡಕ್ಕೆ ಭಾರೀ ಮುಖಭಂಗವಾಗಿದೆ. ಆಡಿದ ಎರಡೂ ಪಂದ್ಯಗಳಲ್ಲಿ ಸೋಲುಂಡು ಸರಣಿ ಕಳೆದುಕೊಂಡಿದೆ. ಟೀಮ್ ಇಂಡಿಯಾ (Team India) ಆಫ್ರಿಕಾ ನೆಲದಲ್ಲಿ ಅನುಭವಿಸಿದ ಹೀನಾಯ ಸೋಲನ್ನು ಮರೆತು ತವರಿನಲ್ಲಿ ಬೊಂಬಾಟ್ ಕಮ್​​ಬ್ಯಾಕ್ ಮಾಡಿದೆ. ಬುಧವಾರ ನಡೆದ ಎರಡನೇ ಏಕದಿನ ಪಂದ್ಯದಲ್ಲಿ 44 ರನ್​ಗಳ ಭರ್ಜರಿ ಗೆಲುವು ಸಾಧಿಸಿ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿದ್ದು, ಇದೀಗ ಕ್ಲೀನ್​ಸ್ವೀಪ್​ನತ್ತ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಭಾರತ ಬ್ಯಾಟಿಂಗ್​ನಲ್ಲಿ ನಿರೀಕ್ಷೆಗೆ ತಕ್ಕ ಆಟವಾಡಿಲ್ಲವಾದರೂ ಬೌಲಿಂಗ್ ಮತ್ತು ಫೀಲ್ಡಿಂಗ್​ನಲ್ಲಿ ನೀಡಿದ ಸಂಘಟಿತ ಪ್ರದರ್ಶನದಿಂದ ಗೆಲುವು ಕಂಡಿತು. ಪ್ರಸಿದ್ಧ್ ಕೃಷ್ಣ ಬೌಲಿಂಗ್​ನಲ್ಲಿ ಮಿಂಚು ಹರಿಸಿದರೆ, ಭಾರತದ ಫೀಲ್ಡಿಂಗ್​ ಕೂಡ ಅದ್ಭುತವಾಗಿತ್ತು. ಅದರಲ್ಲೂ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಹಿಡಿದ ಒಂದು ಕ್ಯಾಚ್ ಅಮೋಘವಾಗಿತ್ತು.

ಹೌದು, ಭಾರತ ನೀಡಿದ್ದ 238 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡ ಆರಂಭದಲ್ಲಿ ಉತ್ತಮ ಆಟವಾಡಿತಾದರೂ ಬಳಿಕ ಸುದೀರ್ಘವಾಗಿ ವಿಕೆಟ್ ಕಳೆದುಕೊಂಡು ಸಾಗಿತು. ಅಂತಿಮ ಹಂತದಲ್ಲಿ ಭಾರತದ ಗೆಲುವಿಗೆ ಎದುರಾಗಿ ನಿಂತಿದ್ದು ಓಡೆನ್ ಸ್ಮಿತ್. 2 ಸಿಕ್ಸ್ ಸಿಡಿಸಿ ತಂಡಕ್ಕೆ ಆಸೆರಾಗಿದ್ದ ಇವರ ವಿಕೆಟ್ ಟೀಮ್ ಇಂಡಿಯಾಕ್ಕೆ ಮುಖ್ಯವಾಗಿತ್ತು. ಇಂಥಹ ಕಠಿಣ ಸಂದರ್ಭದಲ್ಲಿ ನಾಯಕ ರೋಹಿತ್ 45ನೇ ಓವರ್​ ಅನ್ನು ವಾಷಿಂಗ್ಟನ್ ಸುಂದರ್​ಗೆ ನೀಡಿದರು.

ಸುಂದರ್ ಅವರ ಈ ಓವರ್​ನ ಕೊನೇ ಎಸೆತದಲ್ಲಿ ಸ್ಮಿತ್ ಚೆಂಡನ್ನ ಸಿಕ್ಸ್​ಗೆಂದು ಯತ್ನಿಸಿದರು. ಆದರೆ, ಟಾಪ್ ಎಡ್ಜ್ ಆಗಿ ಚೆಂಡು ಡೀಪ್ ಮಿಡ್ ವಿಕೆಟ್ ಕಡೆ ಸಾಗಿತು. ಫೀಲ್ಡ್​​ನಲ್ಲಿದ್ದ ವಿರಾಟ್ ಕೊಹ್ಲಿ ಓಡಿ ಬಂದು ಸ್ಟನ್ನಿಂಗ್ ಕ್ಯಾಚ್ ಹಿಡಿದರು. ಭಾರತ ತಂಡಕ್ಕೆ ಮಾರಕವಾಗಿದ್ದ ಬ್ಯಾಟರ್​ನ ಅನ್ನು ಕೊಹ್ಲಿ ಅದ್ಭುತ ಕ್ಯಾಚ್ ಹಿಡಿದು ಔಟ್ ಮಾಡಿದ್ದನ್ನು ಕಂಡು ನಾಯಕ ರೋಹಿತ್ ಒಂದು ಕ್ಷಣ ದಂಗಾದರು. ಬಳಿಕ ಕೊಹ್ಲಿ ಬಳಿಕ ನಗುತ್ತಾ ಓಡಿ ಬಂದು ಸಂಭ್ರಮ ಹಂಚಿಕೊಂಡರು. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ, ಆರಂಭಿಕ ಆಘಾತದ ನಡುವೆ ಕನ್ನಡಿಗ ಕೆಎಲ್ ರಾಹುಲ್ (49 ರನ್, 48 ಎಸೆತ, 4 ಬೌಂಡರಿ, 2 ಸಿಕ್ಸರ್) ಹಾಗೂ ಸೂರ್ಯಕುಮಾರ್ ಯಾದವ್ (64ರನ್, 83 ಎಸೆತ, 5 ಬೌಂಡರಿ) ಆಸರೆಯಿಂದ 9 ವಿಕೆಟ್‌ಗೆ 237 ರನ್ ಪೇರಿಸಿತು. ಪ್ರತಿಯಾಗಿ ವಿಂಡೀಸ್ ತಂಡ ಪ್ರಸಿದ್ಧ್ ಕೃಷ್ಣ ಸಾರಥ್ಯದಲ್ಲಿ ಸಂಘಟಿಸಿದ ದಾಳಿಗೆ ನಲುಗಿ46 ಓವರ್‌ಗಳಲ್ಲಿ 193 ರನ್‌ಗಳಿಗೆ ಸರ್ವಪತನ ಕಂಡಿತು. 9 ಓವರ್ ಬೌಲಿಂಗ್ ಮಾಡಿ 3 ಮೇಡನ್ ಓವರ್ ಜೊತೆಗೆ ಕೇವಲ 12 ರನ್ ನೀಡಿದ ಪ್ರಸಿದ್ಧ್ ಕೃಷ್ಣ ವೆಸ್ಟ್ ಇಂಡೀಸ್ ತಂಡದ 4 ವಿಕೆಟ್ ಪಡೆದು ಮಿಂಚಿದರು. ಪಂದ್ಯಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿದರು.

Rohit Sharma: ಪಂದ್ಯ ಮುಗಿದ ಬಳಿಕ ರೋಹಿತ್ ಶರ್ಮಾ ಹೊಗಳಿದ್ದು ಯಾರನ್ನ ನೋಡಿ

IND vs WI: ವೆಸ್ಟ್ ಇಂಡೀಸ್ ವಿರುದ್ಧ ಗೆದ್ದು ಸರಣಿ ವಶಪಡಿಸಿಕೊಂಡು ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ

Published On - 10:12 am, Thu, 10 February 22

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು