Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli Big Bash: ಬಿಗ್ ಬ್ಯಾಷ್​ನಲ್ಲಿ ಆಡಲಿದ್ದಾರೆ ವಿರಾಟ್ ಕೊಹ್ಲಿ: ಸಿಡ್ನಿ ಸಿಕ್ಸರ್ಸ್​ನಿಂದ ಅಧಿಕೃತ ಘೋಷಣೆ

Virat Kohli sydney Sixers: ಸಿಡ್ನಿ ಸಿಕ್ಸರ್ಸ್ ಏಪ್ರಿಲ್ 1 ರಂದು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮುಂದಿನ ಎರಡು ಬಿಗ್ ಬ್ಯಾಷ್ ಲೀಗ್ ಸೀಸನ್‌ಗಳಿಗೆ ಸ್ಟಾರ್ ಬ್ಯಾಟರ್‌ ಜೊತೆ ಒಪ್ಪಂದ ಮಾಡಿಕೊಂಡಿರುವುದಾಗಿ ಹೇಳಿಕೊಂಡಿದೆ. ಮುಂದಿನ ಎರಡು ಸೀಸನ್ನಲ್ಲಿ ಇವರು ಸಿಡ್ಮಿ ಸಿಕ್ಸರ್ಸ್ ತಂಡದ ಪರವಾಗಿ ಕಣಕ್ಕಿಳಿಯಲಿದ್ದಾರಂತೆ. ಹೀಗಾಗಿ ವಿದೇಶಿ ಲೀಗ್‌ನಲ್ಲಿ ಆಡಲಿರುವ ಮೊದಲ ಸಕ್ರಿಯ ಭಾರತೀಯ ಆಟಗಾರ ವಿರಾಟ್ ಕೊಹ್ಲಿ ಆಗಲಿದ್ದಾರೆಯೇ?.

Virat Kohli Big Bash: ಬಿಗ್ ಬ್ಯಾಷ್​ನಲ್ಲಿ ಆಡಲಿದ್ದಾರೆ ವಿರಾಟ್ ಕೊಹ್ಲಿ: ಸಿಡ್ನಿ ಸಿಕ್ಸರ್ಸ್​ನಿಂದ ಅಧಿಕೃತ ಘೋಷಣೆ
Virat Kohli Sydney Sixers
Follow us
Vinay Bhat
|

Updated on:Apr 01, 2025 | 12:36 PM

(ಬೆಂಗಳೂರು, ಏ 01): ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬ್ಯುಸಿಯಾಗಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುತ್ತಿರುವ ಕೊಹ್ಲಿ ಉತ್ತಮ ಲಯದಲ್ಲಿದ್ದಾರೆ. ಇದರ ನಡುವೆ ಕಿಂಗ್ ಕೊಹ್ಲಿ ಆಸ್ಟ್ರೇಲಿಯಾದ ಪ್ರಸಿದ್ಧ ಬಿಗ್ ಬ್ಯಾಷ್ ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ. ಮುಂದಿನ ಎರಡು ಸೀಸನ್​ನಲ್ಲಿ ಇವರು ಸಿಡ್ಮಿ ಸಿಕ್ಸರ್ಸ್ ತಂಡದ ಪರವಾಗಿ ಕಣಕ್ಕಿಳಿಯಲಿದ್ದಾರಂತೆ. ಹೀಗಾಗಿ ವಿದೇಶಿ ಲೀಗ್‌ನಲ್ಲಿ ಆಡಲಿರುವ ಮೊದಲ ಸಕ್ರಿಯ ಭಾರತೀಯ ಆಟಗಾರ ವಿರಾಟ್ ಕೊಹ್ಲಿ ಆಗಲಿದ್ದಾರೆಯೇ?. ಆದರೆ, ಇದರಲ್ಲೊಂದು ಟ್ವಿಸ್ಟ್ ಇದೆ.

ಸಿಡ್ನಿ ಸಿಕ್ಸರ್ಸ್ ಏಪ್ರಿಲ್ 1 ರಂದು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮುಂದಿನ ಎರಡು ಬಿಗ್ ಬ್ಯಾಷ್ ಲೀಗ್ ಸೀಸನ್‌ಗಳಿಗೆ ಸ್ಟಾರ್ ಬ್ಯಾಟರ್‌ ಜೊತೆ ಒಪ್ಪಂದ ಮಾಡಿಕೊಂಡಿರುವುದಾಗಿ ಹೇಳಿಕೊಂಡಿದೆ.

ಇದನ್ನೂ ಓದಿ
Image
ಸತತ ಎರಡು ಪಂದ್ಯ ಗೆದ್ದ RCBಯ ಮುಂದಿನ ಟಾರ್ಗೆಟ್ ಯಾರು?, ಮ್ಯಾಚ್ ಯಾವಾಗ?
Image
ಪೋಸ್ಟ್ ಮ್ಯಾಚ್​ನಲ್ಲಿ ತನ್ನದೇ ತಂಡದ ಆಟಗಾರರಿಗೆ ಗದರಿದ ಅಜಿಂಕ್ಯಾ ರಹಾನೆ
Image
ಪಂದ್ಯ ಮುಗಿದ ಬಳಿಕ ಮುಂಬೈ ಬಸ್ ಏರಿದ ಹಾರ್ದಿಕ್ ಪಾಂಡ್ಯ ಹೊಸ ಗರ್ಲ್ ಫ್ರೆಂಡ್
Image
ಹಾಲಿ ಚಾಂಪಿಯನ್ ಕೆಕೆಆರ್​ಗೆ ಟೂರ್ನಿಯಲ್ಲಿ 2ನೇ ಸೋಲು

ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಪ್ರಮುಖ ಆಟಗಾರರಾಗಿದ್ದು, ಪಂದ್ಯಾವಳಿಯ ಇತಿಹಾಸದಲ್ಲಿ ಇದುವರೆಗೆ 8094 ರನ್ ಗಳಿಸಿ 8 ಶತಕಗಳು ಮತ್ತು 56 ಅರ್ಧಶತಕಗಳನ್ನು ಗಳಿಸಿದ್ದಾರೆ. ಬಿಸಿಸಿಐ ನಿಯಮದ ಪ್ರಕಾರ, ಭಾರತೀಯ ಆಟಗಾರರು ನಿವೃತ್ತರಾಗುವವರೆಗೆ ಬಿಬಿಎಲ್‌ನಂತಹ ವಿದೇಶಿ ಲೀಗ್‌ಗಳಲ್ಲಿ ಆಡಲು ಅವಕಾಶವಿಲ್ಲ. ಭಾರತೀಯ ಆಟಗಾರ ಅಂತರರಾಷ್ಟ್ರೀಯ ಕ್ರಿಕೆಟ್ ಜೊತೆಗೆ ದೇಶೀಯ ಕ್ರಿಕೆಟ್‌ನಿಂದಲೂ ನಿವೃತ್ತರಾದರೆ ಮಾತ್ರ ಹೊರಗೆ ಹೋಗಿ ವಿದೇಶಿ ಲೀಗ್‌ಗಳಲ್ಲಿ ಆಡಲು ಸಾಧ್ಯ. ಆದರೆ ಸಿಡ್ನಿ ಸಿಕ್ಸರ್ಸ್‌ನ ಟ್ವೀಟ್ ಮಂಗಳವಾರ ಬೆಳಿಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೋಲಾಹಲವನ್ನು ಸೃಷ್ಟಿಸಿದೆ.

RCB vs GT, IPL 2025: ಸತತ ಎರಡು ಪಂದ್ಯ ಗೆದ್ದ ಆರ್​ಸಿಬಿಯ ಮುಂದಿನ ಟಾರ್ಗೆಟ್ ಯಾರು?, ಮ್ಯಾಚ್ ಯಾವಾಗ?

“ಕಿಂಗ್ ಕೊಹ್ಲಿ! ವಿರಾಟ್ ಕೊಹ್ಲಿ ಮುಂದಿನ ಎರಡು ಸೀಸನ್‌ಗಳಿಗೆ ಅಧಿಕೃತವಾಗಿ ಸಿಕ್ಸರ್ ಪರ ಆಡಲಿದ್ದಾರೆ!” ಎಂದು ಸಿಕ್ಸರ್ಸ್‌ನ ಟ್ವೀಟ್‌ನಲ್ಲಿ ಹೇಳಲಾಗಿದೆ.

ಆದರೆ, ಈ ಟ್ವೀಟ್ ಜೊತೆಗೆ ಏಪ್ರಿಲ್ ಮೂರ್ಖರ ದಿನವನ್ನು ಆಚರಿಸಲು ಇದು ತಾವು ಮಾಡಿದ ತಮಾಷೆ ಎಂದು ಸಿಕ್ಸರ್ಸ್ ಸ್ವತಃ ಬಹಿರಂಗಪಡಿಸಿದೆ.

ಐಪಿಎಲ್ 2025 ರಲ್ಲಿ ಆರ್‌ಸಿಬಿ ಪರ ಕೊಹ್ಲಿ ಉತ್ತಮ ಆರಂಭ:

ಆರ್‌ಸಿಬಿ ಪ್ರಸ್ತುತ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದರಿಂದ ಕೊಹ್ಲಿ ಐಪಿಎಲ್ 2025 ರಲ್ಲಿ ಭರ್ಜರಿ ಆರಂಭವನ್ನು ಪಡೆದುಕೊಂಡಿದ್ದಾರೆ. ಆರ್‌ಸಿಬಿ ಹಾಲಿ ಚಾಂಪಿಯನ್ ಕೆಕೆಆರ್ ವಿರುದ್ಧ ಅಮೋಘ ಗೆಲುವಿನೊಂದಿಗೆ ತಮ್ಮ ಅಭಿಯಾನವನ್ನು ಆರಂಭಿಸಿತು, ಇದರಲ್ಲಿ ಕೊಹ್ಲಿ ಅಜೇಯ 59 ರನ್ ಗಳಿಸಿ ತಮ್ಮ ತಂಡವನ್ನು ಗೆಲುವಿನ ದಡ ಸೇರಿಸಿದರು. ಬಳಿಕ ಚೆಪಾಕ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಎರಡನೇ ಪಂದ್ಯದಲ್ಲಿ ಕೊಹ್ಲಿ 30 ಎಸೆತಗಳಲ್ಲಿ 31 ರನ್ ಗಳಿಸಿದರು. ಇದರಲ್ಲಿ ಬೆಂಗಳೂರು ತಂಡವು ಚೆನ್ನೈ ತಂಡವನ್ನು 50 ರನ್‌ಗಳಿಂದ ಸೋಲಿಸಿ ಚೆಪಾಕ್‌ನಲ್ಲಿ ಅಪರೂಪದ ಗೆಲುವು ಸಾಧಿಸಿತು.

ಸದ್ಯ ಆರ್​ಸಿಬಿ ತಂಡವು 2025 ರ ಐಪಿಎಲ್‌ನಲ್ಲಿ ತಮ್ಮ ಮುಂದಿನ ಪಂದ್ಯವನ್ನೂ ಗೆದ್ದು ಹ್ಯಾಟ್ರಿಕ್ ಜಯದ ಸಾಧನೆ ಮಾಡುವ ಗುರಿಯನ್ನು ಹೊಂದಿದೆ. ಆರ್‌ಸಿಬಿ ತನ್ನ ಮುಂದಿನ ಪಂದ್ಯಕ್ಕಾಗಿ ತವರು ಬೆಂಗಳೂರಿಗೆ ಬಂದಿದೆ. ಮೂರನೇ ಪಂದ್ಯ ಬುಧವಾರ (ಏಪ್ರಿಲ್ 2) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:35 pm, Tue, 1 April 25

ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ
ಪಾಕಿಸ್ತಾನಕ್ಕೆ ಹೋದ ಅನುಭವವನ್ನು ಬಿಚ್ಚಿಟ್ಟ ಗ್ಲೋಬಲ್ ಕನ್ನಡಿಗ
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ