AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli Retirement: ಭಾರತೀಯ ಕ್ರಿಕೆಟ್​ನಲ್ಲಿ ಸಂಚಲನ: ರೋಹಿತ್ ಬಳಿಕ ನಿವೃತ್ತಿ ನೀಡಲು ಮುಂದಾದ ವಿರಾಟ್ ಕೊಹ್ಲಿ

Virat Kohli Retirement: ರೋಹಿತ್ ಶರ್ಮಾ ಬಳಿಕ ಟೀಮ್ ಇಂಡಿಯಾದ ಮತ್ತೋರ್ವ ಬ್ಯಾಟರ್ ವಿರಾಟ್ ಕೊಹ್ಲಿ ನಿವೃತ್ತಿಯ ಬಗ್ಗೆಯೂ ಮಾತುಗಳು ಕೇಳಿ ಬರುತ್ತಿವೆ. ಈ ಹಿಂದೆ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯ ನಂತರ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ಭವಿಷ್ಯದ ಬಗ್ಗೆ ಯೋಚಿಸಲು ಪ್ರಾರಂಭಿಸಿದರು. ಸದ್ಯ ಬಿಸಿಸಿಐಗೆ ಕೊಹ್ಲಿ ನಿವೃತ್ತಿ ಬಗ್ಗೆ ತಿಳಿಸಿದ್ದಾರಂತೆ.

Virat Kohli Retirement: ಭಾರತೀಯ ಕ್ರಿಕೆಟ್​ನಲ್ಲಿ ಸಂಚಲನ: ರೋಹಿತ್ ಬಳಿಕ ನಿವೃತ್ತಿ ನೀಡಲು ಮುಂದಾದ ವಿರಾಟ್ ಕೊಹ್ಲಿ
Virat Kohli Retirement
Follow us
Vinay Bhat
|

Updated on: May 10, 2025 | 9:33 AM

ಬೆಂಗಳೂರು (ಮೇ. 10): ಭಾರತ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಕೆಲವು ದಿನಗಳ ಹಿಂದೆ ಅಚ್ಚರಿ ಎಂಬಂತೆ ನಿವೃತ್ತಿ ಘೋಷಿಸಿದ್ದರು. ಬಾಂಗ್ಲಾದೇಶ, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಸರಣಿಗಳಲ್ಲಿ ವಿಫಲವಾದ ನಂತರ ರೋಹಿತ್ ಈ ನಿರ್ಧಾರ ತೆಗೆದುಕೊಂಡರು. ಈಗ ಟೀಮ್ ಇಂಡಿಯಾದ ಮತ್ತೋರ್ವ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ನಿವೃತ್ತಿಯ ಬಗ್ಗೆಯೂ ಮಾತುಗಳು ಕೇಳಿ ಬರುತ್ತಿವೆ. ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ವಿರಾಟ್ ಟೆಸ್ಟ್‌ನಿಂದ ನಿವೃತ್ತಿ ಹೊಂದಲು ಬಯಸಿದ್ದಾರೆ. ಆದರೆ ಈ ನಿರ್ಧಾರವನ್ನು ಪುನರ್ವಿಮರ್ಶಿಸುವಂತೆ ಬಿಸಿಸಿಐ ಅವರನ್ನು ಕೇಳಿದೆ ಎಂದು ಹೇಳಲಾಗಿದೆ. ಇಬ್ಬರೂ ಆಟಗಾರರು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಒಟ್ಟಿಗೆ ನಿವೃತ್ತರಾಗಿದ್ದರು.

ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ಪ್ರವಾಸದ ಬಳಿಕ ನಿವೃತ್ತಿ ಬಗ್ಗೆ ಯೋಚನೆ

ಮುಂದಿನ ತಿಂಗಳು ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಐದು ಟೆಸ್ಟ್‌ಗಳ ಸರಣಿಗೆ ತಂಡವನ್ನು ಆಯ್ಕೆ ಮಾಡಲು ಆಯ್ಕೆದಾರರು ಶೀಘ್ರದಲ್ಲೇ ಸಭೆ ಸೇರಲಿದ್ದಾರೆ. ಈ ಹಿಂದೆ ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿಯ ನಂತರ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ಭವಿಷ್ಯದ ಬಗ್ಗೆ ಯೋಚಿಸಲು ಪ್ರಾರಂಭಿಸಿದರು. ಆ ಸರಣಿಯ ಮೊದಲ ಟೆಸ್ಟ್‌ನಲ್ಲಿ ಶತಕ ಗಳಿಸಿದ ನಂತರ ಅವರ ಪ್ರದರ್ಶನ ಉತ್ತಮವಾಗಿರಲಿಲ್ಲ. ಸದ್ಯ ಕೊಹ್ಲಿ ನಿವೃತ್ತಿ ವಿಚಾರದಲ್ಲಿ ತಮ್ಮ ಮನಸ್ಸನ್ನು ಬದಲಾಯಿಸದಿದ್ದರೆ, ಇಂಗ್ಲೆಂಡ್ ಪ್ರವಾಸದಲ್ಲಿ ಭಾರತದ ಬ್ಯಾಟಿಂಗ್ ಕ್ರಮಾಂಕವು ಸಾಕಷ್ಟು ಅನನುಭವಿಗಳಿಂದ ಕೂಡಿರುವುದು ಖಚಿತ.

2014 ರ ಕೊನೆಯಲ್ಲಿ ವಿರಾಟ್ ಕೊಹ್ಲಿ ಭಾರತೀಯ ಟೆಸ್ಟ್ ತಂಡದ ನಾಯಕತ್ವ ವಹಿಸಿಕೊಂಡರು. ಮಹೇಂದ್ರ ಸಿಂಗ್ ಧೋನಿ ನಿವೃತ್ತಿಯ ನಂತರ ಅವರನ್ನು ಭಾರತದ ನಾಯಕರನ್ನಾಗಿ ಮಾಡಲಾಯಿತು. 2022 ರ ಆರಂಭದಲ್ಲಿ, ವಿರಾಟ್ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದರು. ಅದಾದ ನಂತರ, ಬಿಸಿಸಿಐ ಈ ಜವಾಬ್ದಾರಿಯನ್ನು ಅವರಿಗಿಂತ ಹಿರಿಯರಾದ ರೋಹಿತ್ ಶರ್ಮಾ ಅವರಿಗೆ ವಹಿಸಿತು. ವಿರಾಟ್ ಟೆಸ್ಟ್ ನಿಂದ ನಿವೃತ್ತರಾದರೆ, ಟೀಮ್ ಇಂಡಿಯಾಗೆ ಇಂಗ್ಲೆಂಡ್ ಟೆಸ್ಟ್​ಗೆ ಇಬ್ಬರು ಅತ್ಯಂತ ಅನುಭವಿ ಆಟಗಾರರ ಮಾರ್ಗದರ್ಶನ ಸಿಗುವುದಿಲ್ಲ.

ಇದನ್ನೂ ಓದಿ
Image
ಧರ್ಮಶಾಲಾ ಪರ್ವತಗಳಲ್ಲಿ ಮಜಾ ಮಾಡುತ್ತಿರುವ ಡೆಲ್ಲಿ ಆಟಗಾರರು: VIDEO
Image
ತನ್ನ ನಿರ್ಧಾರದಿಂದ ಯು ಟರ್ನ್​ ಹೊಡೆದ ಯಶಸ್ವಿ ಜೈಸ್ವಾಲ್
Image
ಪಾಕ್ ಸೂಪರ್ ಲೀಗ್ ನಡೆಸಲು ಒಪ್ಪದ ಯುಎಇ
Image
ಐಪಿಎಲ್ ರದ್ದಾದರೆ ಬಿಸಿಸಿಐ, ಫ್ರಾಂಚೈಸಿಗಳಿಗೆ ಯಾವ ನಷ್ಟವೂ ಆಗುವುದಿಲ್ಲ..!

ಸ್ವಲ್ಪವೂ ಭಯವಿಲ್ಲ… ಧರ್ಮಶಾಲಾ ಪರ್ವತಗಳಲ್ಲಿ ಮಜಾ ಮಾಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರರು: ವಿಡಿಯೋ ವೈರಲ್

ವಿರಾಟ್ ಇನ್ನೂ ಉತ್ತರಿಸಿಲ್ಲ

ಮೂಲಗಳ ಪ್ರಕಾರ, ಕೊಹ್ಲಿ ತಮ್ಮ ನಿರ್ಧಾರವನ್ನು ಮರುಪರಿಶೀಲಿಸಬೇಕೆಂದು ಬಿಸಿಸಿಐ ಬಯಸಿದೆ. ಮಂಡಳಿಯ ಮನವಿಗೆ ಅವರು ಇನ್ನೂ ಪ್ರತಿಕ್ರಿಯಿಸಿಲ್ಲ. “ಅವರು ಈಗಾಗಲೇ ನಿರ್ಧರಿಸಿದ್ದಾರೆ ಮತ್ತು ಟೆಸ್ಟ್ ಕ್ರಿಕೆಟ್‌ನಿಂದ ಹಿಂದೆ ಸರಿಯುತ್ತಿರುವುದಾಗಿ ಮಂಡಳಿಗೆ ತಿಳಿಸಿದ್ದಾರೆ” ಎಂದು ಮೂಲಗಳು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ. ನಿರ್ಣಾಯಕ ಇಂಗ್ಲೆಂಡ್ ಪ್ರವಾಸ ಬರುತ್ತಿರುವುದರಿಂದ ಮತ್ತೊಮ್ಮೆ ಯೋಚಿಸುವಂತೆ ಬಿಸಿಸಿಐ ಅವರನ್ನು ಒತ್ತಾಯಿಸಿದೆ. ಆದರೆ, ಅವರು ಇನ್ನೂ ಮನವಿಗೆ ಸ್ಪಂದಿಸಿಲ್ಲ ಎಂದು ಬಿಸಿಸಿಐ ಮೂಲಗಳು ಹೇಳಿವೆ.

36 ವರ್ಷದ ವಿರಾಟ್ ಕೊಹ್ಲಿ ಭಾರತ ಪರ 123 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅವರು 46.85 ಸರಾಸರಿಯಲ್ಲಿ 9230 ರನ್ ಗಳಿಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಅವರ ಸರಾಸರಿ ಕುಸಿದಿದೆ. ಈ ಅವಧಿಯಲ್ಲಿ, ಅವರು 37 ಪಂದ್ಯಗಳಲ್ಲಿ ಮೂರು ಶತಕಗಳು ಸೇರಿದಂತೆ 1990 ರನ್ ಗಳಿಸಿದ್ದಾರಷ್ಟೆ. 2019ರ ಅಂತ್ಯದ ವೇಳೆಗೆ ಅವರ ಟೆಸ್ಟ್ ಸರಾಸರಿ 55 ರ ಆಸುಪಾಸಿನಲ್ಲಿತ್ತು. ಆಸ್ಟ್ರೇಲಿಯಾ ಪ್ರವಾಸದಲ್ಲಿ, ಅವರು ಐದು ಟೆಸ್ಟ್ ಪಂದ್ಯಗಳಲ್ಲಿ 23.75ರ ಸರಾಸರಿಯಲ್ಲಿ ಸ್ಕೋರ್ ಗಳಿಸಿದರು. ಆ ಪ್ರವಾಸದಲ್ಲಿ ಅವರು ಎಂಟು ಬಾರಿ ಔಟಾಗಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ