AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ನೆಲೆಸಿರುವ ಖಾಸಗಿ ರೂಮ್​ನ ವಿಡಿಯೋ ಸೋರಿಕೆ: ಇನ್​ಸ್ಟಾಗ್ರಾಮ್​ನಲ್ಲಿ ಕೋಪಗೊಂಡ ಕಿಂಗ್

ಭಾನುವಾರ ಪರ್ತ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಪಂದ್ಯ ಆಯೋಜಿಸಲಾಗಿತ್ತು. ಈ ಸಂದರ್ಭ ಹೋಟೇಲ್​ನಲ್ಲಿರುವ ಕೊಹ್ಲಿಯ ರೂಮ್​ಗೆ ಅನಾಮಿಕ ವ್ಯಕ್ತಿ ತೆರಳಿದ್ದು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ.

Virat Kohli: ವಿರಾಟ್ ಕೊಹ್ಲಿ ನೆಲೆಸಿರುವ ಖಾಸಗಿ ರೂಮ್​ನ ವಿಡಿಯೋ ಸೋರಿಕೆ: ಇನ್​ಸ್ಟಾಗ್ರಾಮ್​ನಲ್ಲಿ ಕೋಪಗೊಂಡ ಕಿಂಗ್
Virat Kohli Room Video
TV9 Web
| Edited By: |

Updated on:Oct 31, 2022 | 11:46 AM

Share

ಐಸಿಸಿ ಟಿ20 ವಿಶ್ವಕಪ್​ಗಾಗಿ (T20 World Cup) ಆಸ್ಟ್ರೇಲಿಯಾದಲ್ಲಿರುವ ಭಾರತ ಕ್ರಿಕೆಟ್ ತಂಡಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಅವಮಾನ ಕಾಡುತ್ತಿದೆ. ಇತ್ತೀಚೆಗಷ್ಟೆ ಟೀಮ್ ಇಂಡಿಯಾ ಆಟಗಾರರಿಗೆ ಬೇಕಾದ ಆಹಾರ ವ್ಯವಸ್ಥೆ ಇರಲಿಲ್ಲ ಎಂಬುದು ದೊಡ್ಡ ಸುದ್ದಿಯಾಗಿತ್ತು. ಅಲ್ಲದೆ ಸ್ಟೇಡಿಯಂನಿಂದ ತಂಗಿರುವ ಹೋಟೆಲ್​ಗೆ ಸಾಕಷ್ಟು ದೂರ ಪ್ರಯಾಣಿಸ ಬೇಕಿತ್ತು. ಇವುಗಳ ನಡುವೆ ಇದೀಗ ಟೀಮ್ ಇಂಡಿಯಾದ (Team India) ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗೆ (Virat Kohli) ಕೋಪ ಬಂದಂತಹ ಮತ್ತೊಂದು ಘಟನೆ ನಡೆದಿದೆ. ಯಾರೂ ಇಲ್ಲದ ಸಮಯದಲ್ಲಿ ಹೋಟೇಲ್​ನಲ್ಲಿರುವ ಕೊಹ್ಲಿಯ ರೂಮ್​ಗೆ ಅನಾಮಿಕ ವ್ಯಕ್ತಿ ತೆರಳಿದ್ದು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ.

ಭಾನುವಾರ ಪರ್ತ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಪಂದ್ಯ ಆಯೋಜಿಸಲಾಗಿತ್ತು. ಹೀಗಾಗಿ ಭಾರತದ ಆಟಗಾರರು ಪರ್ತ್​ನಲ್ಲಿ ನೆಲೆಸಿದ್ದ ಹೋಟೆಲ್​ನಿಂದ ಸ್ಟೇಡಿಯಂಗೆ ತೆರಳಿದ್ದರು. ಈ ಸಂದರ್ಭ ವ್ಯಕ್ತಿಯೊಬ್ಬರು ಹೊಟೇಲ್​ನಲ್ಲಿ ಕೊಹ್ಲಿ ನೆಲೆಸಿರುವ ಕೊಠಡಿಯೊಳಗೆ ಪ್ರವೇಶಿಸಿ ವಿಡಿಯೋ ಮಾಡಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಕೋಪಗೊಂಡ ಕೊಹ್ಲಿ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
Image
R Ashwin: ಮಂಕಡಿಂಗ್ ಮಾಡುವ ಸುಲಭ ಅವಕಾಶವಿದ್ದರೂ ಕೈಚೆಲ್ಲಿದ ಆರ್. ಅಶ್ವಿನ್: ವೈರಲ್ ವಿಡಿಯೋ ನೋಡಿ
Image
Dinesh Karthik Injury: ಸೋಲಿನ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಶಾಕ್: ಸ್ಟಾರ್ ಆಟಗಾರನಿಗೆ ಇಂಜುರಿ
Image
Rohit Sharma: ಪಂದ್ಯ ಮುಗಿದ ಬಳಿಕ ತಂಡದ ಸೋಲಿಗೆ ನಾಯಕ ರೋಹಿತ್ ಶರ್ಮಾ ದೂರಿದ್ದು ಯಾರನ್ನು ಗೊತ್ತೇ?
Image
T20 World Cup 2022 Point Table: ಟೀಮ್ ಇಂಡಿಯಾಗೆ ಸೋಲು: ಪಾಯಿಂಟ್ ಟೇಬಲ್​ನಲ್ಲಿ ಮಹತ್ವದ ಬದಲಾವಣೆ

”ಅಭಿಮಾನಿಗಳಿಗೆ ತನ್ನ ಮೆಚ್ಚಿನ ಕ್ರಿಕೆಟಿಗನನ್ನು ನೋಡಬೇಕು, ಬೇಟಿಯಾಗಬೇಕು ಎಂಬ ಆಸೆ ಇರುತ್ತದೆ ನಿಜ. ಆ ಭಾವನೆ ನನಗೆ ಅರ್ಥವಾಗುತ್ತದೆ. ಅದನ್ನು ನಾನು ಗೌರವಿಸುತ್ತೇನೆ ಕೂಡ. ಆದರೆ, ಈ ವಿಡಿಯೋ ಮಾತ್ರ ನನ್ನ ಖಾಸಗಿ ವಿಚಾರಕ್ಕೆ ದಕ್ಕೆ ಬಂದಂತಿದೆ. ನನ್ನ ವೈಯಕ್ತಿಕ ಹೋಟೆಲ್ ರೂಮ್​ನಲ್ಲೇ ನನಗೆ ಪ್ರೈವಸಿ ಇಲ್ಲ ಎಂದಾದರೆ ನನಗೆ ಪರ್ಸನಲ್ ಸ್ಪೇಸ್ ಎಂಬುದು ಎಲ್ಲಿ ಸಿಗುತ್ತದೆ. ಈ ವಿಚಾರದಿಂದ ನಾನು ಸಂತಸವಾಗಿಲ್ಲ. ದಯವಿಟ್ಟು ಜನರ ಖಾಸಗಿ ವಿಚಾರಕ್ಕೆ ಗೌರವ ನೀಡಿ. ಅವರನ್ನು ಮನೋರಂಜನೆ ನೀಡುವ ರೀತಿ ಕಾಣಬೇಡಿ,” ಎಂದು ಬರೆದುಕೊಂಡಿದ್ದಾರೆ.

ಕೊಹ್ಲಿ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕೂಡ ಪ್ರತಿಕ್ರಿಯೆ ನೀಡಿದ್ದು ಬೇಸರ ಹೊರಹಾಕಿದ್ದಾರೆ. ಕೆಲ ಅಭಿಮಾನಿಗಳು ಈ ಹಿಂದೆ ಕೂಡ ಇದೇರೀತಿ ನಡೆದುಕೊಂಡಿದ್ದಾರೆ. ಇದು ನಿಜವಾಗಿಯೂ ಒಳ್ಳೆಯ ಸಂಗತಿಯಲ್ಲ ಎಂದು ಹೇಳಿದ್ದಾರೆ.

View this post on Instagram

A post shared by Virat Kohli (@virat.kohli)

ವೈರಲ್ ಆಗುತ್ತಿರುವ ಕೊಹ್ಲಿ ರೂಮ್​ನ ಈ ವಿಡಿಯೋದಲ್ಲಿ ವಿರಾಟ್ ಅವರ ಕಿಟ್ ಬ್ಯಾಗ್, ಬ್ರಾತ್​ರೂಮ್ ಕೆಲ ವೈಯಕ್ತಿಕ ವಸ್ತುಗಳು ಸೆರೆಯಾಗಿದೆ. ಈ ವಿಡಿಯೋ ವೈರಲ್ ಆಗುತ್ತಿರುವುದಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ ಬ್ಯಾಟರ್ ಡೇವಿಡ್ ವಾರ್ನರ್, ಬಾಲಿವುಡ್ ನಟ ವರುಣ್ ಧವನ್, ನಟಿ ಪರಿಣಿತಿ ಚೋಪ್ರ ಈರೀತಿ ನಡೆಯ ಬಾರದಿತ್ತು ಎಂದು ಹೇಳಿದ್ದಾರೆ.

ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು:

ದಕ್ಷಿಣ ಆಫ್ರಿಕಾ ವಿರುದ್ಧ ಪರ್ತ್​ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಸೋಲು ಕಂಡಿತು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 133 ರನ್ ಕಲೆಹಾಕಿತು. ಸೂರ್ಯಕುಮಾರ್ ಯಾದವ್ 40 ಎಸೆತಗಳಲ್ಲಿ 6 ಫೋರ್, 3 ಸಿಕ್ಸರ್ ಬಾರಿಸಿ 68 ರನ್ ಗಳಿಸಿದರೆ, ನಾಯಕ ರೋಹಿತ್ ಶರ್ಮಾ 15 ರನ್ ಬಾರಿಸಿದ್ದೇ ಹೆಚ್ಚು. ಉಳಿದ ಬ್ಯಾಟರ್​ಗಳು ಸಂಪೂರ್ಣ ಬ್ಯಾಟಿಂಗ್ ವೈಫಲ್ಯ ಅನುಭವಿಸಿ ಪೆವಿಲಿಯನ್ ಸೇರಿಕೊಂಡರು. ಆಫ್ರಿಕಾ ಪರ ಲುಂಗಿ ಎನ್​ಗಿಡಿ 4 ವಿಕೆಟ್ ಕಿತ್ತರು.

ಟಾರ್ಗೆಟ್ ಬೆನ್ನಟ್ಟಿದ ಆಫ್ರಿಕಾ ಆರಂಭದಲ್ಲಿ ವಿಕೆಟ್ ಕಳೆದುಕೊಂಡರೂ ಆ್ಯಡಂ ಮರ್ಕ್ರಮ್ (52) ಹಾಗೂ ಡೇವಿಡ್ ಮಿಲ್ಲರ್ (ಅಜೇಯ 59) ಅವರ 73 ರನ್​ಗಳ ಜೊತೆಯಾಟದ ನೆರವಿನಿಂದ 19.4 ಓವರ್​ನಲ್ಲಿ ಗೆದ್ದು ಬೀಗಿತು. ಈ ಗೆಲುವಿನೊಂದಿಗೆ ಹರಿಣಗಳ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದರೆ ಭಾರತ ದ್ವಿತೀಯ ಸ್ಥಾನಕ್ಕೆ ಕುಸಿದಿದೆ. ಸೆಮಿ ಫೈನಲ್ ರೇಸ್​ನಲ್ಲಿ ಉಳಿದಯಬೇಕಾದರೆ ಟೀಮ್ ಇಂಡಿಯಾಕ್ಕೆ ಮುಂದಿನ ಬಾಂಗ್ಲಾ ಹಾಗೂ ಜಿಂಬಾಬ್ವೆ ವಿರುದ್ಧದ ಎರಡು ಪಂದ್ಯ ಮಹತ್ವದ್ದಾಗಿದೆ.

Published On - 11:46 am, Mon, 31 October 22

Follow Us
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ