AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಅದು ನನ್ನ ವೃತ್ತಿಜೀವನದ ಅತ್ಯಂತ ಖುಷಿಯ ಅವಧಿ: ಧೋನಿ ನೆನೆದು ಭಾವುಕರಾದ ವಿರಾಟ್ ಕೊಹ್ಲಿ

MS Dhoni: ಮಹೇಂದ್ರ ಸಿಂಗ್ ಧೋನಿ ಜೊತೆ ಆಡಿರುವುದು ನನ್ನ ಜೀವನದಲ್ಲೇ ಅತ್ಯಂತ ಸ್ಮರಣೀಯ ಕ್ಷಣ ಎಂಬಂತೆ ಬರೆದುಕೊಂಡಿರುವ ವಿರಾಟ್ ಕೊಹ್ಲಿ, ಇದಕ್ಕೆ ಬಲದವಾದ ಕಾರಣ ಕೂಡ ನೀಡಿದ್ದಾರೆ.

Virat Kohli: ಅದು ನನ್ನ ವೃತ್ತಿಜೀವನದ ಅತ್ಯಂತ ಖುಷಿಯ ಅವಧಿ: ಧೋನಿ ನೆನೆದು ಭಾವುಕರಾದ ವಿರಾಟ್ ಕೊಹ್ಲಿ
MS Dhoni and Virat Kohli
TV9 Web
| Edited By: |

Updated on:Aug 26, 2022 | 8:43 AM

Share

ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಇದೀಗ ಏಷ್ಯಾಕಪ್​ಗಾಗಿ ದುಬೈನಲ್ಲಿ ಬೀಡುಬಿಟ್ಟಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಆಗಸ್ಟ್ 28 ರಂದು ನಡೆಯಲಿರುವ ಪಾಕಿಸ್ತಾನ (IND vs PAK) ವಿರುದ್ಧದ ಕದನಕ್ಕೆ ಸಜ್ಜಾಗುತ್ತಿದ್ದಾರೆ. ಹೀಗಿರುವಾಗ ಕೊಹ್ಲಿ ತಮ್ಮ ಟ್ವಿಟರ್ ಖಾತೆಯಲ್ಲಿ ವಿಶೇಷವಾದ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ತನ್ನ ವೃತ್ತಿಜೀವನದ ಅತ್ಯಂತ ಖುಷಿಯ ಅವಧಿಯ ಬಗ್ಗೆ ವಿವರಿಸಿದ್ದಾರೆ. ಮಹೇಂದ್ರ ಸಿಂಗ್ ಧೋನಿ (MS Dhoni) ಜೊತೆ ಆಡಿರುವುದು ನನ್ನ ಜೀವನದಲ್ಲೇ ಅತ್ಯಂತ ಸ್ಮರಣೀಯ ಕ್ಷಣ ಎಂಬಂತೆ ಬರೆದುಕೊಂಡಿರುವ ಕೊಹ್ಲಿ, ಇದಕ್ಕೆ ಬಲದವಾದ ಕಾರಣ ಕೂಡ ನೀಡಿದ್ದಾರೆ.

ಕೊಹ್ಲಿ 2014 ರಲ್ಲಿ ಟೆಸ್ಟ್​ ನಾಯಕತ್ವ ಮತ್ತು 2017 ರಲ್ಲಿ ಏಕದಿನ, ಟಿ20 ನಾಯಕತ್ವ ವಹಿಸುವ ಮುನ್ನ ಎಂಎಸ್ ಧೋನಿ ಅಡಿಯಲ್ಲಿ ಪಳಗಿದ್ದರು. ಈ ಬಗ್ಗೆ ಬರೆದುಕೊಂಡಿರುವ ಕೊಹ್ಲಿ, ”ಈ ವ್ಯಕ್ತಿಯ ವಿಶ್ವಾಸಾರ್ಹ ಉಪನಾಯಕನಾಗಿರುವುದು ನನ್ನ ವೃತ್ತಿಜೀವನದಲ್ಲಿ ಅತ್ಯಂತ ಆನಂದದಾಯಕವಾದ ಅವಧಿಯಾಗಿದೆ. ನಮ್ಮ ಪಾಲುದಾರಿಕೆ ಎಂದೆಂದಿಗೂ ವಿಶೇಷವಾಗಿರುತ್ತದೆ. 7+18,” ಎಂದು ಬರೆದುಕೊಂಡಿದ್ದಾರೆ. ಇಲ್ಲಿ ಧೋನಿಯ ಜೆರ್ಸಿ ನಂಬರ್ 7 ಮತ್ತು ಕೊಹ್ಲಿಯದ್ದು 18 ಆಗಿದೆ. ಇದನ್ನು ಕೂಡಿಸಿದಾಗ 25 ಆಗುತ್ತದೆ. ನಿನ್ನೆ ಆಗಸ್ಟ್ 25 ಆಗಿರುವುದರಿಂದ ಕೊಹ್ಲಿ ಈ ಫೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ
Image
Deepak Chahar: ಏಷ್ಯಾಕಪ್​ಗೆ ಟೀಮ್ ಇಂಡಿಯಾದಲ್ಲಿ ದಿಢೀರ್ ಬದಲಾವಣೆ: ತಂಡ ಸೇರಿದ ಹೊಸ ಆಟಗಾರ
Image
Asia Cup 2022: ಏಷ್ಯಾಕಪ್​ನಲ್ಲಿ ಸಚಿನ್, ಗಪ್ಟಿಲ್ ಜೊತೆಗೆ ಕೊಹ್ಲಿ ದಾಖಲೆಯನ್ನು ಮುರಿಯಲಿದ್ದಾರೆ ರೋಹಿತ್..!
Image
Asia Cup 2022: ಪಾಕ್ ತಂಡಕ್ಕೆ ಆಘಾತದ ಮೇಲೆ ಆಘಾತ; ತಂಡದ ಮತ್ತೊಬ್ಬ ವೇಗದ ಬೌಲರ್​ಗೆ ಇಂಜುರಿ..!
Image
US Open: ಮೂರು ಬಾರಿಯ ಚಾಂಪಿಯನ್‌ ನೊವಾಕ್‌ ಜೊಕೊವಿಕ್‌ ಯುಎಸ್‌ ಓಪನ್‌ನಿಂದ ಔಟ್..!

ಧೋನಿ ಹಾಗೂ ಕೊಹ್ಲಿ ಜೊತೆಯಾಗಿ ನಿಂತು ಅದೆಷ್ಟೋ ಬಾರಿ ಸ್ಮರಣೀಯ ಆಟವನ್ನು ಆಡಿದ್ದಾರೆ. ಅನೇಕ ಬಾರಿ ಇವರಿಬ್ಬರೇ ನಿಂತು ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ಟ್ವಿಟರ್​ನಲ್ಲಿ ಕೊಹ್ಲಿ ಹಂಚಿಕೊಂಡಿರುವ ಫೋಟೋ ಕೂಡ 2016 ಟಿ20 ವಿಶ್ವಕಪ್​ನ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ್ದಾಗಿದೆ. ಇಲ್ಲಿ ಕೊಹ್ಲಿ ಕೇವಲ 51 ಎಸೆತಗಳಲ್ಲಿ 82 ರನ್ ಸಿಡಿಸಿದ್ದರು. ಈ ಪಂದ್ಯದಲ್ಲಿ ಭಾರತ 6 ವಿಕೆಟ್​ಗಳ ಜಯ ಕೂಡ ಸಾಧಿಸಿತ್ತು.

ಕಳೆದ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಿಂದ ವಿಶ್ರಾಂತಿ ಪಡೆದುಕೊಂಡು ಇದೀಗ ಏಷ್ಯಾಕಪ್​ನಲ್ಲಿ ಕಣಕ್ಕಿಳಿಯಲಿರುವ ವಿರಾಟ್ ಕೊಹ್ಲಿಗೆ ಈ ಟೂರ್ನಿ ಮಹತ್ವದ್ದಾಗಿದೆ. ಇದಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ಕೂಡ ನಿರತರಾಗಿದ್ದಾರೆ. ಟ್ರೈನಿಂಗ್ ಸೆಷನ್​ನಲ್ಲಿ ಕೊಹ್ಲಿಯ ಹೊಡೆತವನ್ನು ಕಂಡು ಅಭಿಮಾನಿಗಳಂತು ಶಾಕ್ ಆಗಿದ್ದಾರೆ. ಯುಜ್ವೇಂದ್ರ ಚಹಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ ಅವರ ಬೌಲಿಂಗ್​ಗೆ ಮುಂದೆ ಬಂದು ಭರ್ಜರಿ ಶಾಟ್ ಹೊಡೆದಿದ್ದು ಚೆಂಡು ಬೌಂಡರಿ ಗೆರೆ ದಾಟಿದೆ.

ಏಷ್ಯಾಕಪ್ 2022ಕ್ಕೆ ಆಗಸ್ಟ್ 27ರಂದು ಚಾಲನೆ ಸಿಗಲಿದ್ದು ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ತಂಡ ಮುಖಾಮುಖಿ ಆಗಲಿದೆ. ಭಾರತ ಆ. 28 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಬಳಿಕ ಆಗಸ್ಟ್ 31 ರಂದು ಹಾಂಗ್​ಕಾಂಗ್ ವಿರುದ್ಧ ಸೆಣೆಸಾಟ ನಡೆಸಲಿದೆ. ಈ ಟೂರ್ನಿಯ ಎಲ್ಲ ಪಂದ್ಯಗಳು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.

Published On - 8:43 am, Fri, 26 August 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?