AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs South Africa: ಟೀಮ್ ಇಂಡಿಯಾ ಉಳಿದುಕೊಳ್ಳಲು ಕ್ರಿಕೆಟ್ ಸೌತ್ ಆಫ್ರಿಕಾ ಮಾಡಿದ ಮಾಸ್ಟರ್ ಪ್ಲಾನ್ ಏನು ನೋಡಿ

India Tour of South Africa: ಭಾರತ- ದಕ್ಷಿಣ ಆಫ್ರಿಕಾ ಸರಣಿ ಅನೇಕ ವಿಘ್ನಗಳ ನಡುವೆ ನಡೆಯುತ್ತಿದೆ. ಆಫ್ರಿಕಾನ್ನರ ನಾಡಿನಲ್ಲಿ ಒಮಿಕ್ರೋನ್ ವೈರಸ್ ತಾಂಡವವಾಡುತ್ತಿದೆ. ಹಾಗಂತ ಕ್ರಿಕೆಟ್ ಸೌತ್ ಆಫ್ರಿಕಾ ಸುಮ್ಮನೆ ಕೂತಿಲ್ಲ. ಪ್ರವಾಸಿ ಟೀಮ್ ಇಂಡಿಯಾ ಆಟಗಾರರಿಗೆ ಆಫ್ರಿಕಾ ಭರ್ಜರಿ ವ್ಯವಸ್ಥೆಯನ್ನೇ ಮಾಡಿದೆ.

India vs South Africa: ಟೀಮ್ ಇಂಡಿಯಾ ಉಳಿದುಕೊಳ್ಳಲು ಕ್ರಿಕೆಟ್ ಸೌತ್ ಆಫ್ರಿಕಾ ಮಾಡಿದ ಮಾಸ್ಟರ್ ಪ್ಲಾನ್ ಏನು ನೋಡಿ
India Tour of South Africa
TV9 Web
| Edited By: |

Updated on:Dec 11, 2021 | 8:00 AM

Share

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಜಯಿಸಿ ವಿಶ್ರಾಂತಿಯಲ್ಲಿರುವ ಟೀಮ್ ಇಂಡಿಯಾ ಸದ್ಯದಲ್ಲೇ ದಕ್ಷಿಣ ಆಫ್ರಿಕಾ (India vs South Africa) ಪ್ರವಾಸ ಬೆಳೆಸಲಿದೆ. ಇಲ್ಲಿ ಮೂರು ಪಂದ್ಯಗಳ ಟೆಸ್ಟ್ ಮತ್ತು ಏಕದಿನ ಸರಣಿ ಆಡಲಿದ್ದು, ಡಿಸೆಂಬರ್ 26 ರಿಂದ ಸೆಂಚೂರಿಯನ್​ನಲ್ಲಿ ಮೊದಲ ಟೆಸ್ಟ್ ಆರಂಭವಾಗಲಿದೆ. ಈ ಪ್ರವಾಸಕ್ಕೂ ಮುನ್ನ ಟೀಮ್ ಇಂಡಿಯಾದಲ್ಲಿ (Team India) ಬಹುದೊಡ್ಡ ಬದಲಾವಣೆಯಾಗಿದೆ. ವಿರಾಟ್ ಕೊಹ್ಲಿ (Virat Kohli) ಅವರನ್ನು ಏಕದಿನ ನಾಯಕತ್ವದಿಂದ ಕೆಳಗಿಳಿಸಿ ರೋಹಿತ್ ಶರ್ಮಾ (Rohit Sharma) ಅವರಿಗೆ ಪಟ್ಟ ನೀಡಲಾಗಿದೆ. ಇತ್ತ ಟೆಸ್ಟ್​ ಕ್ರಿಕೆಟ್​ನಲ್ಲಿ ಅಜಿಂಕ್ಯಾ ರಹಾನೆ (Ajinkya Rahane) ಅವರನ್ನು ಉಪನಾಯಕ ಸ್ಥಾನದಿಂದ ಕೈಬಿಟ್ಟು ರೋಹಿತ್​ಗೆ ಜವಾಬ್ದಾರಿ ನೀಡಲಾಗಿದೆ. ಹೀಗೆ ಹೊಸ ಹುರುಪಿನೊಂದಿಗೆ ಟೀಮ್ ಇಂಡಿಯಾ ಇದೇ ಡಿಸೆಂಬರ್ 17 ರಂದು ಆಫ್ರಿಕಾ ಫ್ಲೈಟ್ ಏರಲಿದೆಯಂತೆ. ಭಾರತೀಯ ಆಟಗಾರರಿಗೆ ಕ್ರಿಕೆಟ್ ಸೌತ್ ಆಫ್ರಿಕಾ (Cricket South Africa) ಅಲ್ಲಿ ವಿಶೇಷ ವ್ಯವಸ್ಥೆಯನ್ನು ಕೂಡ ಮಾಡಿದೆ.

ಹೌದು, ಭಾರತ- ದಕ್ಷಿಣ ಆಫ್ರಿಕಾ ಸರಣಿ ಅನೇಕ ವಿಘ್ನಗಳ ನಡುವೆ ನಡೆಯುತ್ತಿದೆ. ಆಫ್ರಿಕಾನ್ನರ ನಾಡಿನಲ್ಲಿ ಒಮಿಕ್ರೋನ್ ವೈರಸ್ ತಾಂಡವವಾಡುತ್ತಿದ್ದು, ಇದರ ನಡುವೆ ಭಾರತ ಹರಿಣಗಳ ನಾಡಿಗೆ ಪ್ರವಾಸ ಬೆಳೆಸುತ್ತಿದೆ. ಹಾಗಂತ ಕ್ರಿಕೆಟ್ ಸೌತ್ ಆಫ್ರಿಕಾ ಸುಮ್ಮನೆ ಕೂತಿಲ್ಲ. ಪ್ರವಾಸಿ ಟೀಮ್ ಇಂಡಿಯಾ ಆಟಗಾರರಿಗೆ ಆಫ್ರಿಕಾ ಭರ್ಜರಿ ವ್ಯವಸ್ಥೆಯನ್ನೇ ಮಾಡಿದೆ. ವಿರಾಟ್ ಕೊಹ್ಲಿ ಪಡೆಗಾಗಿ ಸೆಂಚೂರಿಯನ್​ನಲ್ಲಿರುವ ಇಡೀ ಹೊಟೇಲ್ ಅನ್ನೇ ಕ್ರಿಕೆಟ್ ಸೌತ್ ಆಫ್ರಿಕಾ ಬುಕ್ ಮಾಡಿದೆ.

ಈ ಬಗ್ಗೆ ಆಫ್ರಿಕಾ ಸ್ಥಳೀಯ ಪತ್ರಿಕೆಯೊಂದು ವರದಿ ಮಾಡಿದೆ. ಸೆಂಚೂರಿಯನ್​ನಲ್ಲಿರುವ ಇರೇನಾ ಕಂಟ್ರಿ ಲಾಡ್ಜ್ ಅನ್ನು ಭಾರತೀಯ ಆಟಗಾರರಿಗಾಗಿ ಉಳಿದುಕೊಳ್ಳು ತಯಾರಿ ಮಾಡಿದೆಯಂತೆ. ವಿಶೇಷ ಎಂದರೆ ಈ ಹೊಟೇಲ್ ಅದಾಗಲೇ ಬಯೋ ಬಬಲ್​ನಿಂದ ಕೂಡಿದೆಯಂತೆ. ಯಾವುದೇ ಹೊರ ಅತಿಥಿಗಳಿಗೆ ಈ ಹೊಟೇಲ್​ ಒಳಗಡೆ ಪ್ರವೇಶವಿಲ್ಲ. ಹೊಟೇಲ್​ನಲ್ಲಿರುವ ಕೆಲಸಗಾರರು ಈಗಾಗಲೇ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ. ಇದಕ್ಕೂ ಮುನ್ನ ಇದೇ ಹೊಟೇಲ್​ನಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡ ಕೂಡ ಸೆಲೆಸಿತ್ತು.

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಈಗಾಗಲೇ ಭಾರತ ತಂಡ ಪ್ರಕಟವಾಗಿದೆ. ಆದರೆ, ಏಕದಿನ ತಂಡ ಇನ್ನಷ್ಟೆ ಆಯ್ಕೆಯಾಗಬೇಕಿದೆ. ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಆಯೋಜನೆಯಾಗಿದ್ದ ನಾಲ್ಕು ಪಂದ್ಯಗಳ ಟಿ20 ಸರಣಿಯನ್ನು ಕೋವಿಡ್ ಕಾರಣದಿಂದ ಕೈಬಿಡಲಾಗಿದೆ. ಆದರೆ, ರದ್ದಾಗಿಲ್ಲ, ಬದಲಾಗಿ ಮುಂದೂಡಿಕೆ ಆಗಿದೆ. ಮುಂದಿನ ವರ್ಷ ಸೂಕ್ತ ಸಮಯ ನೋಡಿ ಟಿ20 ಸರಣಿಯನ್ನ ಆಡಿಸಲಾಗುವುದು ಎಂದು ಕ್ರಿಕೆಟ್ ಸೌತ್ ಆಫ್ರಿಕಾ ಹೇಳಿದೆ. ಸೆಂಚೂರಿಯನ್, ಜೋಹಾನ್ಸ್​ಬರ್ಗ್, ಕೇಪ್​ಟೌನ್ ಮತ್ತು ಪಾರ್ಲ್ ನಗರಗಳಲ್ಲಿ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ ಸರಣಿಗಳ ಪಂದ್ಯಗಳು ನಡೆಯಲಿವೆ.

ದ. ಆಫ್ರಿಕಾ ಮತ್ತು ಭಾರತ ಕ್ರಿಕೆಟ್ ಸರಣಿ ವೇಳಾಪಟ್ಟಿ:

ಟೆಸ್ಟ್ ಸರಣಿ:

1) ಡಿ. 26-30: ಸೂಪರ್ ಸ್ಪೋರ್ಟ್ ಪಾರ್ಕ್, ಸೆಂಚೂರಿಯನ್

2) ಜ. 3-7: ವಾಂಡರರ್ಸ್, ಜೋಹಾನ್ಸ್​ಬರ್ಗ್

3) ಜ. 11-15: ನ್ಯೂಲ್ಯಾಂಡ್ಸ್, ಕೇಪ್ ಟೌನ್

ಏಕದಿನ ಸರಣಿ:

1) ಜ. 19: ಬೋಲ್ಯಾಂಡ್ ಪಾರ್ಕ್, ಪಾರ್ಲ್

2) ಜ. 21: ಬೋಲ್ಯಾಂಡ್ ಪಾರ್ಕ್, ಪಾರ್ಲ್

3) ಜ. 23: ನ್ಯೂಲೆಂಡ್ಸ್, ಕೇಪ್ ಟೌನ್

ಟೆಸ್ಟ್ ತಂಡ: ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ(ಉಪನಾಯಕ), ಕೆ ಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯಾ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಭ್ ಪಂತ್(ವಿಕೆಟ್ ಕೀಪರ್), ವೃದ್ದಿಮಾನ್ ಸಾಹ(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್.

Virat Kohli: ನಾಯಕತ್ವದಿಂದ ಕೆಳಗಿಳಿದ ವಿರಾಟ್ ಕೊಹ್ಲಿಗೆ ಈಗ ಸಿಗುತ್ತಿರುವ ಸಂಬಳ ಎಷ್ಟು ಗೊತ್ತೇ?

Rohit Sharma: ನಾಯಕನಾದ ರೋಹಿತ್ ಶರ್ಮಾಗೆ ಬಿಸಿಸಿಐ ನೀಡುತ್ತಿರುವ ಸಂಬಳ ಎಷ್ಟು ಕೋಟಿ ಗೊತ್ತೇ?

(Virat Kohli team to stay at plush Irene Lodge CSA books complete hotel for the Indian cricket team)

Published On - 10:02 am, Fri, 10 December 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ