AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

South Africa vs India: ಐತಿಹಾಸಿಕ ಗೆಲುವಿನ ಖುಷಿಯಲ್ಲಿ ಹೋಟೆಲ್​ಗೆ ಬಂದ ಭಾರತಕ್ಕೆ ಶಾಕ್ ನೀಡಿದ ಸಿಬ್ಬಂದಿಗಳು

Team India celebration: ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಅಮೋಘ ಗೆಲುವು ಸಾಧಿಸಿ ಮೈದಾನದಲ್ಲಿ ಎಲ್ಲ ಕಾರ್ಯಕ್ರಮ ಮುಗಿಸಿ ತಾವು ತಂಗುತ್ತಿದ್ದ ಇರೇಲಾ ಲಾಡ್ಜ್ ಹೋಟೆಲ್​ಗೆ ಬಂದಾಗ ವಿರಾಟ್ ಕೊಹ್ಲಿ ಪಡೆಗೆ ಅಚ್ಚರಿಯೊಂದು ಕಾದಿತ್ತು.

South Africa vs India: ಐತಿಹಾಸಿಕ ಗೆಲುವಿನ ಖುಷಿಯಲ್ಲಿ ಹೋಟೆಲ್​ಗೆ ಬಂದ ಭಾರತಕ್ಕೆ ಶಾಕ್ ನೀಡಿದ ಸಿಬ್ಬಂದಿಗಳು
Team India Celebration vs SA
TV9 Web
| Edited By: |

Updated on: Dec 31, 2021 | 9:29 AM

Share

ಅಂದುಕೊಂಡಂತೆ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ (India vs South Africa) ಐತಿಹಾಸಿಕ ಗೆಲುವು ಸಾಧಿಸಿದೆ. ಟೀಮ್ ಇಂಡಿಯಾದ (Team India) ತ್ರಿವಳಿ ವೇಗಿಗಳಾದ ಜಸ್‌ಪ್ರೀತ್ ಬುಮ್ರಾ (jasprit Bumrah), ಮೊಹಮ್ಮದ್ ಶಮಿ (Shami) ಮತ್ತು ಮೊಹಮ್ಮದ್ ಸಿರಾಜ್ ಅವರ ಬೆಂಕಿ ಚೆಂಡಿಗೆ ತರಗೆಲೆಯಂತೆ ಉರುಳಿದ ಆಫ್ರಿಕಾ ಬ್ಯಾಟರ್​ಗಳು ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಸೇರಿಕೊಂಡರು. ಬಾಕ್ಸಿಂಗ್‌ ಡೇ ಟೆಸ್ಟ್‌ (Boxing Day Test) ಪಂದ್ಯದಲ್ಲಿ ಹರಿಣಗಳ ವಿರುದ್ದ 113 ರನ್‌ಗಳ ಭರ್ಜರಿ ಗೆಲುವು ಪಡೆದು ಸೆಂಚೂರಿಯನ್‌ನಲ್ಲಿ ಟೆಸ್ಟ್‌ ಗೆದ್ದ ಏಷ್ಯಾದ ಮೊದಲ ತಂಡ ಎಂಬ ಕೀರ್ತಿಗೆ ವಿರಾಟ್ ಕೊಹ್ಲಿ (Virat Kohli) ಪಡೆ ಭಾಜನವಾಯಿತು. ಬೊಂಬಾಟ್ ಗೆಲುವಿನ ಖುಷಿಯಲ್ಲಿ ಮೈದಾನದಿಂದ ಹೋಟೆಲ್​ಗೆ ಬಂದ ಟೀಮ್ ಇಂಡಿಯಾ ಆಟಗಾರರಿಗೆ ಅಲ್ಲೊಂದು ಶಾಕ್ ಕಾದಿತ್ತು. ಹೋಟೆಲ್ ಸಿಬ್ಬಂದಿಗಳು ಕೊಹ್ಲಿ ಪಡೆಗೆ ಸರ್​ಪ್ರೈಸ್ ನೀಡಿದರು. ಆಟಗಾರರ ಇದನ್ನು ಕನಸಿನಲ್ಲೂ ಊಹಿಸಿರಲಿಲ್ಲವಂತೆ.

ಹೌದು, ವರುಣನ ಭಯದ ನಡುವೆ ಐದನೇ ದಿನದಾಟ ಆರಂಭಿಸಿದ ಭಾರತಕ್ಕೆ ಯಾವುದೇ ಅಡೆತಡೆ ಸಿಗಲಿಲ್ಲ. ಮಳೆಯಂತು ಸೆಂಚುರಿಯನ್ ಕಡೆ ತಲೆಹಾಕಿಯೂ ಮಲಗಲಿಲ್ಲ. ಈ ಅಮೋಘ ಗೆಲುವಿನೊಂದಿಗೆ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 1-0 ಯಿಂದ ಮುನ್ನಡೆ ಪಡೆದುಕೊಂಡಿತು. ಮೈದಾನದಲ್ಲಿ ಎಲ್ಲ ಕಾರ್ಯಕ್ರಮ ಮುಗಿಸಿ ತಾವು ತಂಗುತ್ತಿದ್ದ ಇರೇಲಾ ಲಾಡ್ಜ್ ಹೋಟೆಲ್​ಗೆ ಬಂದಾಗ ಭಾರತೀಯರಿಗೆ ಅಚ್ಚರಿಯೊಂದು ಕಾದಿತ್ತು.

ಹೋಟೆಲ್​ನ ಎಲ್ಲ ಸಿಬ್ಬಂದಿಗಳು ಭಾರತದ ಆಟಗಾರರಿಗೆ ವಿಶೇಷವಾಗಿ ಸ್ವಾಗತಿಸಲು ಸಜ್ಜಾಗಿ ನಿಂತಿದ್ದರು. ಸೌತ್ ಆಫ್ರಿಕಾದ ಪ್ರಸಿದ್ಧ ಝುಲು ಡ್ಯಾನ್ಸ್ ಮಾಡಿ ಟೀಮ್ ಇಂಡಿಯಾದವರನ್ನು ಹೋಟೆಲ್ ಒಳಗಡೆ ಸಿಬ್ಬಂದಿಗಳು ವೆಲ್​ಕಮ್ ಮಾಡಿದರು. ಇವರ ಜೊತೆ ಚೇತೇಶ್ವರ್ ಪೂಜಾರ, ಮೊಹಮ್ಮದ್ ಸಿರಾಜ್ ಮತ್ತು ಆರ್. ಅಶ್ವಿನ್ ಕೂಡ ಒಂದೆರಡು ಹೆಜ್ಜೆ ಹಾಕಿ ಖುಷಿ ಪಟ್ಟರು. ಅಶ್ವಿನ್ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

View this post on Instagram

A post shared by Ashwin (@rashwin99)

ಗುರುವಾರ ಬೆಳಗ್ಗೆ 4 ವಿಕೆಟ್‌ ಕಳೆದುಕೊಂಡು ಪಂದ್ಯದ ಐದನೇ ದಿನದಾಟ ಶುರು ಮಾಡಿದ್ದ ದಕ್ಷಿಣ ಆಫ್ರಿಕಾ ತಂಡ ಗೆಲುವಿಗೆ 211 ರನ್‌ ಅಗತ್ಯವಿತ್ತು. ಆದರೆ, ಭಾರತದ ಬೌಲಿಂಗ್‌ ದಾಳಿಯನ್ನು ಮೆಟ್ಟಿನಿಲ್ಲುವಲ್ಲಿ ವಿಫಲವಾದ ದಕ್ಷಿಣ ಆಫ್ರಿಕಾ ತಂಡ 68 ಓವರ್‌ಗಳಿಗೆ 191 ರನ್‌ಗಳಿಗೆ ಆಲ್‌ಔಟ್‌ ಆಗಿ ಸೋಲು ಒಪ್ಪಿಕೊಂಡಿತು. ದಕ್ಷಿಣ ಆಫ್ರಿಕಾದಲ್ಲಿ ಭಾರತಕ್ಕೆ ನಾಲ್ಕನೇ ಟೆಸ್ಟ್ ಗೆಲುವು ಇದಾಯಿತು.

ಈ ಪಂದ್ಯದಲ್ಲಿ ಭಾರತದ ಮಧ್ಯಮವೇಗಿಗಳು ಒಟ್ಟು 18 ವಿಕೆಟ್‌ಗಳನ್ನು ತಮ್ಮ ಬುಟ್ಟಿಗೆ ಹಾಕಿಕೊಂಡರು. ಮೊದಲ ಇನಿಂಗ್ಸ್‌ನಲ್ಲಿ ಶತಕ ಬಾರಿಸಿದ ಕೆ.ಎಲ್. ರಾಹುಲ್ ಪಂದ್ಯಶ್ರೇಷ್ಠ ಗೌರವ ಗಳಿಸಿದರು. ಭಾರತ ಈ ಗೆಲುವಿನೊಂದಿಗೆ ಸರಣಿಯಲ್ಲಿ ಮುನ್ನಡೆ ಪಡೆಯುವುದರ ಜೊತೆಗೆ ವಿಶ್ವ ವರ್ಲ್ಡ್ ಟೆಸ್ಟ್ ಚಾಂಪಿಯನ್​ಶಿಪ್​ಗೆ ಅಮೂಲ್ಯ 12 ಅಂಕಗಳನ್ನೂ ಬಾಚಿಕೊಂಡಿತು.

Pro Kabaddi League: ಪವನ್ ಪವರ್: ಹರ್ಯಾಣಕ್ಕೆ ಮಣ್ಣು ಮುಕ್ಕಿಸಿದ ಬೆಂಗಳೂರು ಬುಲ್ಸ್​ಗೆ ಹ್ಯಾಟ್ರಿಕ್ ಜಯ

Quinton de Kock retires: ಭಾರತ ವಿರುದ್ಧದ ಸೋಲಿನ ಬೆನ್ನಲ್ಲೇ ಟೆಸ್ಟ್ ಕ್ರಿಕೆಟ್​ಗೆ ದಿಢೀರ್ ವಿದಾಯ ಹೇಳಿದ ಕ್ವಿಂಟನ್ ಡಿಕಾಕ್

(Virat Kohli Team were welcomed with Zulu dance at Irene Lodge after Team India scripted history)

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್