AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಖ್ಯಾತ ಗಾಯಕನ ಬಂಗಲೆಯನ್ನೇ ರೆಸ್ಟೋರೆಂಟ್ ಮಾಡಿದ ವಿರಾಟ್ ಕೊಹ್ಲಿ..!

Virat Kohli: ಕ್ರಿಕೆಟ್ ಮೂಲಕ ಗಳಿಸಿದ ಆದಾಯವನ್ನು ವಿರಾಟ್ ಕೊಹ್ಲಿ ಕೊಹ್ಲಿ ಬಿಸಿನೆಸ್​ಗೆ ಹೂಡಿಕೆ ಮಾಡುವ ಮೂಲಕ ತಮ್ಮ ವಾರ್ಷಿಕ ಗಳಿಕೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವತ್ತ ಹೆಜ್ಜೆಯನ್ನಿಟ್ಟಿದ್ದಾರೆ.

Virat Kohli: ಖ್ಯಾತ ಗಾಯಕನ ಬಂಗಲೆಯನ್ನೇ ರೆಸ್ಟೋರೆಂಟ್ ಮಾಡಿದ ವಿರಾಟ್ ಕೊಹ್ಲಿ..!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 01, 2022 | 2:00 PM

Share

Virat Kohli: ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಅತ್ಯುತ್ತಮ ಕ್ರಿಕೆಟಿಗ ಎಂಬುದರಲ್ಲಿ ಡೌಟೇ ಅಲ್ಲ. ಅದರ ಜೊತೆಗೆ ಉತ್ತಮ ಬಿಸಿನೆಸ್​ಮ್ಯಾನ್ ಕೂಡ ಹೌದು. ಏಕೆಂದರೆ ಈಗಾಗಲೇ ವಿರಾಟ್ ಕೊಹ್ಲಿ ಆರಂಭಿಸಿರುವ ಉದ್ಯಮಗಳು ಒಂದೊಂದಾಗಿ ಛಾಪು ಮೂಡಿಸುತ್ತಿದೆ. ಇದಕ್ಕೆ ಮತ್ತೊಂದು ಸೇರ್ಪಡೆ ಕೊಹ್ಲಿಯ ಬಂಗಲೆ ರೆಸ್ಟೋರೆಂಟ್. ಈಗಾಗಲೇ ಒನ್ ಯೈಟ್ (18) ಹೆಸರಿನಲ್ಲಿ ರೆಸ್ಟೋರೆಂಟ್ ನಡೆಸುತ್ತಿರುವ ವಿರಾಟ್ ಕೊಹ್ಲಿ ಇದೀಗ ದಿವಂಗತ ಬಾಲಿವುಡ್​ನ ಖ್ಯಾತ ಗಾಯಕ ಕಿಶೋರ್ ಕುಮಾರ್ ಅವರ ಬಂಗಲೆಯಲ್ಲಿ ಮತ್ತೊಂದು ರೆಸ್ಟೋರೆಂಟ್ ಪ್ರಾರಂಭಿಸಲಿದ್ದಾರೆ.

ವರದಿಯ ಪ್ರಕಾರ, ವಿರಾಟ್ ಕೊಹ್ಲಿ ಅವರು ಕಿಶೋರ್ ಕುಮಾರ್ ಅವರ ಜುಹು ಬಂಗಲೆಯ ಆವರಣದ ಪ್ರಮುಖ ಭಾಗವನ್ನು ಗುತ್ತಿಗೆಗೆ ಪಡೆದುಕೊಂಡಿದ್ದಾರೆ. ಅಲ್ಲದೆ ಅದನ್ನು ತ್ವರಿತವಾಗಿ ಉನ್ನತ ದರ್ಜೆಯ ರೆಸ್ಟೋರೆಂಟ್ ಆಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ಕೆಲಸಗಳು ಪ್ರಗತಿಯಲ್ಲಿದ್ದು, ಮುಂದಿನ ತಿಂಗಳು ವಿರಾಟ್ ಕೊಹ್ಲಿ ಈ ರೆಸ್ಟೋರೆಂಟ್ ಅನ್ನು ಪ್ರಾರಂಭಿಸಲಿದ್ದಾರೆ ಎಂಬ ವರದಿಯಾಗಿದೆ. ಇದನ್ನು ದೃಢಪಡಿಸಿರುವ ಕಿಶೋರ್ ಕುಮಾರ್ ಅವರ ಪುತ್ರ ಅಮಿತ್ ಕುಮಾರ್, ಈ ಜಾಗವನ್ನು ವಿರಾಟ್ ಕೊಹ್ಲಿಗೆ 5 ವರ್ಷ ಗುತ್ತಿಗೆ ನೀಡಿದ್ದೇವೆ’ ಎಂದು ತಿಳಿಸಿದ್ದಾರೆ.

2017 ರಲ್ಲಿ, ವಿರಾಟ್ ಕೊಹ್ಲಿ ದೆಹಲಿಯ ಆರ್‌ಕೆ ಪುರಂನಲ್ಲಿ ನ್ಯೂವಾ ಎಂಬ ರೆಸ್ಟೋರೆಂಟ್ ಅನ್ನು ಪ್ರಾರಂಭಿಸಿದ್ದರು. ಇದಲ್ಲದೆ, ಅವರು ದೆಹಲಿಯಲ್ಲಿಯೇ One8commune ಹೆಸರಿನ ಮತ್ತೊಂದು ರೆಸ್ಟೋರೆಂಟ್ ಸಹ ಹೊಂದಿದ್ದಾರೆ.

ಇದಲ್ಲದೆ ತನ್ನದೇ ಆದ ಬಟ್ಟೆ ಬ್ರಾಂಡ್​ನಲ್ಲೂ ಕೊಹ್ಲಿ ಹೂಡಿಕೆ ಮಾಡಿದ್ದಾರೆ. ಈಗಾಗಲೇ ಜನಪ್ರಿಯವಾಗಿರುವ WROGN ಹೆಸರಿನ ಬ್ರಾಂಡ್​ ವಿರಾಟ್ ಕೊಹ್ಲಿ ಒಡೆತನದ್ದು ಎಂಬುದು ವಿಶೇಷ. ಒಟ್ಟಿನಲ್ಲಿ ಕ್ರಿಕೆಟ್ ಮೂಲಕ ಗಳಿಸಿದ ಮೊತ್ತವನ್ನು ಕೊಹ್ಲಿ ಬಿಸಿನೆಸ್​ಗೆ ಹೂಡಿಕೆ ಮಾಡುವ ಮೂಲಕ ತಮ್ಮ ವಾರ್ಷಿಕ ಆದಾಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವತ್ತ ಹೆಜ್ಜೆಯನ್ನಿಟ್ಟಿರುವುದು ವಿಶೇಷ.

Follow Us
Web contact
Web contact

TV9 Kannada

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!