AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಏಷ್ಯಾಕಪ್​ ಆರಂಭಕ್ಕೆ 2 ವಾರ ಮುಂಚೆಯೇ ಸಮರಾಭ್ಯಾಸ ಶುರು ಮಾಡಿದ ಕಿಂಗ್ ಕೊಹ್ಲಿ

Virat Kohli: ಈ ಹೈವೊಲ್ಟೇಜ್ ಪಂದ್ಯ ಟೀಂ ಇಂಡಿಯಾಕ್ಕಷ್ಟೇ ಅಲ್ಲ.. ಕೊಹ್ಲಿಗೂ ಪ್ರತಿಷ್ಟೆಯ ಸಮರವಾಗಿದೆ. ಇದೇ ಕಾರಣಕ್ಕೆ ವಿರಾಟ್ 2 ವಾರ ಮುಂಚಿತವಾಗಿಯೇ ಪಾಕ್ ವಿರುದ್ಧದ ಪಂದ್ಯಕ್ಕೆ ಸಮರಾಭ್ಯಾಸ ನಡೆಸೋಕೆ ನಿರ್ಧರಿಸಿದ್ದಾರೆ ಎನ್ನಲಾಗ್ತಿದೆ.

Asia Cup 2022: ಏಷ್ಯಾಕಪ್​ ಆರಂಭಕ್ಕೆ 2 ವಾರ ಮುಂಚೆಯೇ ಸಮರಾಭ್ಯಾಸ ಶುರು ಮಾಡಿದ ಕಿಂಗ್ ಕೊಹ್ಲಿ
TV9 Web
| Edited By: |

Updated on: Aug 10, 2022 | 6:38 PM

Share

ಪ್ರತಿಷ್ಟಿತ ಏಷ್ಯಾಕಪ್ (Asia Cup 2022) ಸಮರಕ್ಕೆ ಟೀಂ ಇಂಡಿಯಾ ಆಯ್ಕೆಯಾಗಿದೆ. ಅದ್ರೆ ಕ್ರಿಕೆಟ್ ಜಗತ್ತಿನ ಮಾತ್ರ ರನ್ ಮಷೀನ್ ವಿರಾಟ್ ಕೊಹ್ಲಿ (Virat Kohli) ಮೇಲೆ ನೆಟ್ಟಿದೆ. ಅರಬ್ಬರ ನಾಡಿನಲ್ಲಾದ್ರೂ ಕೊಹ್ಲಿ ಬ್ಯಾಟ್ ರನ್ ಮಳೆ ಹರಿಸುತ್ತಾ ಅನ್ನೋ ಚರ್ಚೆ ಶುರುವಾಗಿರುವಾಗಲೇ ಕಿಂಗ್ ಕೊಹ್ಲಿ ಮೈಗೊಡವಿ ಎದ್ದು ನಿಂತಿದ್ದಾರೆ. ಸಾಕಷ್ಟು ವಿಶ್ರಾಂತಿ ಬಳಿಕ ಈಗ ಕೆಲಸಕ್ಕೆ ಮರಳುವ ಸಮಯ ಬಂದಿದೆ. ಮಾಜಿ ನಾಯಕ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ವಿಶ್ರಾಂತಿಯ ನಂತರ ನಿರೀಕ್ಷೆಯಂತೆ ತಂಡಕ್ಕೆ ಮರಳಿದ್ದಾರೆ.

ಕಳದೆರಡು ವರ್ಷಗಳಿಂದ ಶತಕದ ಬರ ಎದುರಿಸುತ್ತಿರುವ ವಿರಾಟ್ ಕೊಹ್ಲಿಗೆ, ವಿಶ್ರಾಂತಿ ನೀಡಬೇಕು ಅನ್ನೋ ಕೂಗು ಜೋರಾಗಿತ್ತು. ಇದೇ ಕಾರಣಕ್ಕೆ ವೆಸ್ಟ್ ಇಂಡೀಸ್, ಮತ್ತು ಜಿಂಬಾಬ್ವೆ ಪ್ರವಾಸಕ್ಕೆ ಆಯ್ಕೆ ಮಾಡದೇ ರೆಸ್ಟ್ ನೀಡಲಾಗಿತ್ತು. ಆದ್ರೀಗ ಏಷ್ಯಾಕಪ್ ಟಿಟ್ವೆಂಟಿ ಸಮರಕ್ಕೆ ಆಯ್ಕೆಯಾಗಿರುವ ವಿರಾಟ್, ಹಳೆ ಫಾರ್ಮ್​ಗೆ ಮರಳ್ತಾರೆ ಅನ್ನೋ ಬಿಸಿ ಬಿಸಿ ಚರ್ಚೆ ಶುರುವಾಗಿದೆ. ಹೀಗೆ ಬಿಸಿ ಬಿಸಿ ಚರ್ಚೆ ಶುರುವಾಗಿರುವಾಗಲೇ ವಿರಾಟ್, ಸಮರಾಭ್ಯಾಸಕ್ಕೆ ಸಜ್ಜಾಗುತ್ತಿದ್ದಾರೆ.

ಇದನ್ನೂ ಓದಿ
Image
Asia Cup 2022: ಏಷ್ಯಾಕಪ್​ನಲ್ಲಿ ಭಾರತದ್ದೇ ಸಿಂಹಪಾಲು; ಈ ಟೂರ್ನಿಯಲ್ಲಿ ದಾಖಲಾದ ಹಲವು ದಾಖಲೆಗಳಿವು
Image
Asia Cup 2022: ಜಸ್ಪ್ರೀತ್ ಬುಮ್ರಾ ಬಳಿಕ ಮತ್ತೊಬ್ಬ ಸ್ಟಾರ್ ಬೌಲರ್ ಏಷ್ಯಾಕಪ್​ನಿಂದ ಔಟ್..!
Image
Asia Cup 2022: ಏಷ್ಯಾಕಪ್​ನಲ್ಲಿ ಬರೋಬ್ಬರಿ 3 ಬಾರಿ ಮುಖಾಮುಖಿಯಾಗಲಿವೆ ಭಾರತ- ಪಾಕಿಸ್ತಾನ..! ಹೇಗೆ ಗೊತ್ತಾ?

ಮೂಲಗಳ ಪ್ರಕಾರ ವಿರಾಟ್ ಕೊಹ್ಲಿ, ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಎಂಸಿಎ ಒಳಾಂಗಣದಲ್ಲಿ ಇದೇ ವಾರ ಏಷ್ಯಾಕಪ್​ಗಾಗಿ ಅಭ್ಯಾಸ ನಡೆಸಲಿದ್ದಾರೆ. ಸದ್ಯ ಕೊಹ್ಲಿ ವೊರ್ಲಿ ಓಂಕಾರ್ ಬಿಲ್ಡಿಂಗ್‌ನಲ್ಲಿ ವಾಸವಿದ್ದು, ಇಲ್ಲಿಗೆ ಕುರ್ಲಾ ಕಾಂಪ್ಲೆಕ್ಸ್‌ ಇಪ್ಪತ್ತು ನಿಮಿಷಗಳ ಪ್ರಯಾಣವಾಗಿದೆ. ಇದೇ ಕಾರಣಕ್ಕೆ ವಿರಾಟ್ ಇಲ್ಲಿ ಅಭ್ಯಾಸ ನಡೆಸಲು ಮುಂದಾಗಿದ್ದಾರೆ.

ಇನ್ನು ಆಗಸ್ಟ್ 27ರಂದು ಏಷ್ಯಾಕಪ್ ಆರಂಭವಾಗಲಿದ್ದು, ಆಗಸ್ಟ್ 28ರಂದು ಟೀಂ ಇಂಡಿಯಾ ಅಭಿಯಾನ ಆರಂಭವಾಗಲಿದೆ. ಅದ್ರಲ್ಲೂ ಟೀಂ ಇಂಡಿಯಾ ಆಗಸ್ಟ್ 28ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧವೇ ಮುಖಾಮುಖಿಯಾಗ್ತಿದೆ. ಹೀಗಾಗಿ ಈ ಹೈವೊಲ್ಟೇಜ್ ಪಂದ್ಯ ಟೀಂ ಇಂಡಿಯಾಕ್ಕಷ್ಟೇ ಅಲ್ಲ.. ಕೊಹ್ಲಿಗೂ ಪ್ರತಿಷ್ಟೆಯ ಸಮರವಾಗಿದೆ. ಇದೇ ಕಾರಣಕ್ಕೆ ವಿರಾಟ್ 2 ವಾರ ಮುಂಚಿತವಾಗಿಯೇ ಪಾಕ್ ವಿರುದ್ಧದ ಪಂದ್ಯಕ್ಕೆ ಸಮರಾಭ್ಯಾಸ ನಡೆಸೋಕೆ ನಿರ್ಧರಿಸಿದ್ದಾರೆ ಎನ್ನಲಾಗ್ತಿದೆ.

ಮತ್ತೊಂದೆಡೆ ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ, ಪಾಕಿಸ್ತಾನ ವಿರುದ್ಧದ ಪಂದ್ಯ ಕೊಹ್ಲಿ ಪಾಲಿಗೆ ನಿರ್ಣಾಯಕವಾಗಿದೆ. ಈ ಪಂದ್ಯದಿಂದ ಕೊಹ್ಲಿ ಕ್ರಿಕೆಟ್ ಬದುಕಿನಲ್ಲಿ ಮತ್ತೆ ಗತವೈಭವದ ದಿನಗಳು ಮರಳಲಿವೆ. ನನ್ನ ಪ್ರಕಾರ ಈ ಗುಡುಗು ಸಿಡಿಲಿನ ಘರ್ಷಣೆಯಲ್ಲಿ ಕೊಹ್ಲಿ ಫಿನಿಕ್ಸ್ ಹಕ್ಕಿಯಂತೆ ಎದ್ದು ಬರ್ತಾರೆ ಅಂತ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಒಟ್ನಲ್ಲಿ 41 ದಿನಗಳ ಬಳಿಕ ಪಾಕ್ ವಿರುದ್ಧ ಕಣಕ್ಕಿಳಿಯುವ ಕೊಹ್ಲಿ ಮೇಲೆ, ಭಾರತದ ಗೆಲುವಿನಷ್ಟೇ ಬೆಟ್ಟದಷ್ಟು ನಿರೀಕ್ಷೆಯನ್ನು ಇಡಲಾಗಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ