Virat Kohli: ಎಸ್​ಆರ್​ಹೆಚ್ ವಿರುದ್ಧ ಸೋಲು: ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ದೂರಿದ್ದು ಯಾರನ್ನ ಗೊತ್ತಾ?

RCB vs SRH, IPL 2021: ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ರೋಚಕ ಪಂದ್ಯದಲ್ಲಿ ಸೋಲು ಕಂಡ ಬಳಿಕ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಕೆಲವೊಂದಿಷ್ಟು ಮಾತನ್ನು ಹಂಚಿಕೊಂಡಿದ್ದಾರೆ.

Virat Kohli: ಎಸ್​ಆರ್​ಹೆಚ್ ವಿರುದ್ಧ ಸೋಲು: ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ದೂರಿದ್ದು ಯಾರನ್ನ ಗೊತ್ತಾ?
ಸೋಲಿನೊಂದಿಗೆ ಆರ್​ಸಿಬಿ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ವಿದಾಯ ಹೇಳಿದ್ದಾರೆ. 140 ಮ್ಯಾಚ್​ಗಳಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ಕೊಹ್ಲಿ ತಂಡಕ್ಕೆ 66 ಗೆಲುವು ತಂದುಕೊಟ್ಟಿದ್ದರು. ಇದೀಗ ಆರ್​ಸಿಬಿ ಕ್ಯಾಪ್ಟನ್ಸಿಗೆ ರಾಜೀನಾಮೆ ನೀಡಿದ್ದಾರೆ.
Follow us
| Updated By: Vinay Bhat

Updated on: Oct 07, 2021 | 9:13 AM

ಇಂಡಿಯನ್ ಪ್ರೀಮಿಯರ್ ಲೀಗ್ 2021ರ (IPL 2021) ಬುಧವಾರದ ಪಂದ್ಯದಲ್ಲಿ ದಾಖಲೆಯ ಸೋಲುಗಳನ್ನು ಕಂಡ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs SRH) ತಂಡ ಸೋಲು ಅನುಭವಿಸಿತು. ಕೊನೇಯ ಎಸೆತದವರೆಗೂ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ (Kane Williamson) ಪಡೆ 4 ರನ್​ಗಳ ಗೆಲುವು ಪಡೆದುಕೊಂಡರೆ, ವಿರಾಟ್ ಕೊಹ್ಲಿ (Virat Kohli) ಪಡೆಯ ಅಗ್ರಸ್ಥಾನ ಪಡೆಯುವ ಬಯಕ್ಕೆ ಈಡೇರಲಿಲ್ಲ. ಆರ್​ಸಿಬಿ (Royal Challengers Bangalore) ಗೆಲುವಿಗಾಗಿ ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ಹೋರಾಟ ನಡೆಸಿದರೂ ಪ್ರಯೋಜನವಾಗಲಿಲ್ಲ. ಎಬಿ ಡಿವಿಲಿಯರ್ಸ್​ಗೆ (AB de Villiers) ಕೂಡ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಪಂದ್ಯ ಮುಗಿದ ಬಳಿಕ ಆರ್​ಸಿಬಿ ನಾಯಕ (RCB Captain) ವಿರಾಟ್ ಕೊಹ್ಲಿ ಮಾತನಾಡಿದ್ದು ಸೋಲಿಗೆ ಪ್ರಮುಖ ಕಾರಣವನ್ನು ವಿವರಿಸಿದ್ದಾರೆ.

“ನಮಗೆ ಸಿಕ್ಕ ಟಾರ್ಗೆಟ್ ದೊಡ್ಡ ಮಟ್ಟದ್ದು ಅಲ್ಲದಾಗಿದ್ದರೂ ಗುರಿ ಬೆನ್ನಟ್ಟುವ ಸಂದರ್ಭದಲ್ಲಿ ನಾವು ಆರಂಭದಲ್ಲೇ ಮೂರು ವಿಕೆಟ್‌ಗಳನ್ನು ಕಳೆದುಕೊಂಡೆವು. ಹೀಗಾಗಿ ಉತ್ತಮವಾಗಿ ಇನ್ನಿಂಗ್ಸ್ ಬೆಳೆಸಬೇಕಾಗಿತ್ತು. ಆದರೆ ಈ ಸಂದರ್ಭದಲ್ಲಿ ಮ್ಯಾಕ್ಸ್‌ವೆಲ್ ರನೌಟ್ ಆಗಿದ್ದು ಪಂದ್ಯದ ಗತಿಯನ್ನು ಬದಲಾಯಿಸಿತು, ಇದು ಟರ್ನಿಂಗ್ ಪಾಯಿಂಟ್ ಆಯಿತು” ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

“ಎಬಿ ಡಿವಿಲಿಯರ್ಸ್ ಯಾವಾಗಲೂ ಪಂದ್ಯದಿಂದ ಹೊರಗಿರುವುದಿಲ್ಲ, ಅವರ ಗಮನ ಸಂಪೂರ್ಣ ಆಟದ ಮೇಲೆ ಇರುತ್ತದೆ. ಆದರೆ ಸರಾಗವಾಗಿ ಆಡುತ್ತಿರುವ ಆಟಗಾರನಿಗೆ ಸ್ಟ್ರೈಕ್ ಬಿಟ್ಟುಕೊಡಲು ನಿರ್ಧರಿಸಿದರು. ಅದರಿಂದಾಗಿ ರನ್ ಬೆನ್ನಟ್ಟುವುದಕ್ಕೆ ಪರಿಣಾಮ ಬೀರುವುದಿಲ್ಲ. ಈ ಹಂತದಲ್ಲಿ ಶಹ್ಬಾಜ್ ಅಹ್ಮದ್ ನಿರ್ಣಾಯಕ ಆಟವನ್ನು ಪ್ರದರ್ಶಿಸಿದರು. ಇದೊಂದು ಸಣ್ಣ ಅಂತರದ ಪಂದ್ಯವಾಗಿತ್ತು. ಈ ಸಂದರ್ಭದಲ್ಲಿ ಸನ್‌ರೈಸರ್ಸ್ ಮೈಲುಗೈ ಸಾಧಿಸುವಲ್ಲಿ ಯಶಸ್ವಿಯಾದರು. ಅದರಲ್ಲೂ ಅಂತಿಮ ಹಂತದಲ್ಲಿ ಅವರು ಕೆಲ ಎಸೆತಗಳನ್ನು ಅದ್ಭುತವಾಗಿ ಎಸೆದರು. ಈ ಮೂಲಕ ನಮಗೆ ಅವಕಾಶವನ್ನೇ ನೀಡಲಿಲ್ಲ” ಎಂದು ಪಂದ್ಯ ಮುಗಿದ ಬಳಿಕ ಕೊಹ್ಲಿ ಹೇಳಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ ಐಪಿಎಲ್ 2021 ರಲ್ಲಿ ಅತಿ ವೇಗವಾಗಿ ಬೌಲಿಂಗ್ ಮಾಡಿ ದಾಖಲೆ ಬರೆದಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡದ ಯುವ ವೇಗಿ ಉಮ್ರಾನ್ ಮಲಿಕ್ ಪ್ರದರ್ಶನದ ಬಗ್ಗೆಯೂ ವಿರಾಟ್ ಕೊಹ್ಲಿ ಪ್ರಶಂಸೆಯ ಮಾತುಗಳನ್ನಾಡಿದರು. ಆತ ಅದ್ಭುತವಾಗಿ ಬೌಲಿಂಗ್ ಮಾಡುವುದನ್ನು ನಾನು ಬಯಸುತ್ತೇನೆ ಎಂದು ಅಭಿಪ್ರಾಯಪಟ್ಟರು.

ಇನ್ನೂ ಎಸ್​ಆರ್​ಹೆಚ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಮಾತನಾಡಿ, “ಇದು ನಮಗೆ ಅತ್ಯಂತ ಕಷ್ಟದ ಸೀಸನ್ ಆಗಿತ್ತು. ಆದರೆ, ಕೆಲವೊಂದು ವಿಚಾರಗಳಲ್ಲಿ ಸುಧಾರಿಸಿರುವುದು ಸಂತಸ ತಂದಿದೆ. ನಾವು ನೀಡಿದ ಟಾರ್ಗೆಟ್ ಸವಾಲಿನದ್ದಾಗಿತ್ತು. ಎದುರಾಳಿಗೆ ಬೌಲ್ ಮೂಲಕ ಇನ್ನಷ್ಟು ಪ್ರೆಶರ್ ನೀಡಲು ಮುಂದಾದೆವು. ಪವರ್ ಪ್ಲೇನಲ್ಲಿ ಆದಷ್ಟು ಎದುರಾಳಿಯನ್ನು ಕಟ್ಟಿಹಾಕಲು ಯೋಜನೆ ಹಾಕಿಕೊಂಡೆವು ಮತ್ತು ಅದು ಯಶಸ್ವಿಯಾಯಿತು” ಎಂದು ಕೇನ್ ಹೇಳಿದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ತಂಡ 20 ಓವರ್​ನಲ್ಲಿ 7 ವಿಕೆಟ್ ನಷ್ಟಕ್ಕೆ 141 ರನ್ ಕಲೆಹಾಕಿತು. ಟಾರ್ಗೆಟ್ ಬೆನ್ನಟ್ಟಿದ ಆರ್​ಸಿಬಿ 20 ಓವರ್​ನಲ್ಲಿ 6 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಶಕ್ತವಾಗಿ ಸೊಲು ಕಂಡಿತು. ಈ ಮೂಲಕ ಆರ್​ಸಿಬಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲೇ ಉಳಿದುಕೊಂಡಿದೆ.

IPL 2021, KKR vs RR: ಕೋಲ್ಕತ್ತಾ ಪ್ಲೇ ಆಫ್ ಭವಿಷ್ಯ ಇಂದು ನಿರ್ಧಾರ: ಕುತೂಹಲ ಕೆರಳಿಸಿದ ಕೆಕೆಆರ್-ಆರ್​ಆರ್​ ಪಂದ್ಯ

IPL 2021, CSK vs PBKS: ಚೆನ್ನೈ-ಪಂಜಾಬ್​ಗೆ ಲೀಗ್ ಹಂತದ ಕೊನೇಯ ಪಂದ್ಯ: ಗೆದ್ದೇ ಬಿಡುತ್ತಾ ರಾಹುಲ್ ಪಡೆ?

(Virat Kohli told After RCB vs SRH IPl 2021 Match Glenn Maxwell run out was the game changing moment)

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ