AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಸ್ಲಿಪ್​ನಲ್ಲಿ ವಿರಾಟ್ ಕೊಹ್ಲಿ ಹಿಡಿದ ಕ್ಯಾಚ್ ಕಂಡು ಸ್ತಬ್ಧವಾದ ಉಭಯ ತಂಡದ ಆಟಗಾರರು: ವಿಡಿಯೋ ನೋಡಿ

IND vs WI 1st ODI: ವೆಸ್ಟ್ ಇಂಡೀಸ್ ತಂಡವನ್ನು ಕೇವಲ 114 ರನ್​ಗೆ ಆಲೌಟ್ ಮಾಡುವಲ್ಲಿ ಭಾರತದ ಫೀಲ್ಡರ್​ಗಳ ಪಾತ್ರ ಕೂಡ ಮುಖ್ಯವಾಗಿತ್ತು. ಮುಖ್ಯವಾಗಿ ವಿರಾಟ್ ಕೊಹ್ಲಿ ಹಿಡಿದ ಒಂದು ಕ್ಯಾಚ್ ವಿಂಡೀಸ್ ಅನ್ನು ಮತ್ತಷ್ಟು ಕುಗ್ಗಿಸಿತು.

Virat Kohli: ಸ್ಲಿಪ್​ನಲ್ಲಿ ವಿರಾಟ್ ಕೊಹ್ಲಿ ಹಿಡಿದ ಕ್ಯಾಚ್ ಕಂಡು ಸ್ತಬ್ಧವಾದ ಉಭಯ ತಂಡದ ಆಟಗಾರರು: ವಿಡಿಯೋ ನೋಡಿ
Virat Kohli Catch
Vinay Bhat
|

Updated on: Jul 28, 2023 | 9:16 AM

Share

ಬಾರ್ಬಡೊಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ (India vs West Indies) ಭರ್ಜರಿ ಪ್ರದರ್ಶನ ತೋರಿ 5 ವಿಕೆಟ್​ಗಳ ಅಮೋಘ ಜಯ ಸಾಧಿಸಿತು. ಕುಲ್ದೀಪ್ ಯಾದವ್ (Kuldeep Yadav) ಹಾಗೂ ರವೀಂದ್ರ ಜಡೇಜಾ ಸ್ಪಿನ್ ಬಿರುಗಾಳಿಗೆ ತತ್ತರಸಿದ ಕೆರಿಬಿಯನ್ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಯಿತು. ಈ ಗೆಲುವಿನ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಕೆರಿಬಿಯನ್ ಪಡೆಯನ್ನು ಕೇವಲ 114 ರನ್​ಗೆ ಆಲೌಟ್ ಮಾಡುವಲ್ಲಿ ಭಾರತದ ಫೀಲ್ಡರ್​ಗಳು ಪ್ರಮುಖ ಪಾತ್ರ ವಹಿಸಿದರು. ಮುಖ್ಯವಾಗಿ ವಿರಾಟ್ ಕೊಹ್ಲಿ (Virat Kohli) ಹಿಡಿದ ಒಂದು ಕ್ಯಾಚ್ ವಿಂಡೀಸ್ ಅನ್ನು ಮತ್ತಷ್ಟು ಕುಗ್ಗಿಸಿತು.

ವೆಸ್ಟ್ ಇಂಡೀಸ್ ಅದಾಗಲೇ 96 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಸಂದರ್ಭ 18ನೇ ಓವರ್​ನ ರವೀಂದ್ರ ಜಡೇಜಾ ಅವರ 4ನೇ ಎಸೆತದಲ್ಲಿ ಸ್ಪಿನ್ ಜಾದು ಅರಿಯಲು ವಿಫಲವಾದ ರೊಮರಿಯೊ ಶೆಫರ್ಡ್ ಸ್ಲಿಪ್​ನಲ್ಲಿದ್ದ ವಿರಾಟ್ ಕೊಹ್ಲಿಗೆ ಕ್ಯಾಚಿತ್ತು ನಿರ್ಗಮಿಸಿದರು. ಸೆಕೆಂಡ್ ಸ್ಲಿಪ್​ನಲ್ಲಿ ನಿತ್ತಿದ್ದ ಕೊಹ್ಲಿ ಒಂದೇ ಕೈಯಲ್ಲಿ ಡೈವ್ ಬಿದ್ದು ಅದ್ಭುತವಾಗಿ ಕ್ಯಾಚ್ ಹಿಡಿದರು. ಕೊಹ್ಲಿಯ ಈ ಮನಮೋಹಕ ಕ್ಯಾಚ್ ಕಂಡು ಎಲ್ಲ ಆಟಗಾರರು ಒಂದು ಕ್ಷಣ ದಂಗಾದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇಲ್ಲಿದೆ ನೋಡಿ ಆ ವಿಡಿಯೋ.

ಇದನ್ನೂ ಓದಿ
Image
IND vs WI: 3 ಓವರ್, 4 ವಿಕೆಟ್; ವಿಂಡೀಸ್ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಕುಲ್ದೀಪ್ ಯಾದವ್
Image
IND vs WI 1st ODI: ಅಮೋಘ ಗೆಲುವಿನ ಮೂಲಕ ವಿಂಡೀಸ್ ವಿರುದ್ಧ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
IND vs WI: 16 ಇನ್ನಿಂಗ್ಸ್‌ನಲ್ಲಿ ಫ್ಲಾಪ್ ಶೋ; ಟಿ20 ಸೂಪರ್ ಸ್ಟಾರ್ ಏಕದಿನದಲ್ಲಿ ಫೇಲ್..!
Image
IND vs WI 1st ODI: ಭಾರತದ ಸ್ಪಿನ್ ಬಿರುಗಾಳಿಗೆ ವೆಸ್ಟ್ ಇಂಡೀಸ್ ತತ್ತರ: ಇಂಡೋ-ವಿಂಡೀಸ್ ಮೊದಲ ಏಕದಿನದ ರೋಚಕ ಫೋಟೋ ನೋಡಿ

IND vs WI: ಕೈಕೊಟ್ಟ ರೋಹಿತ್- ದ್ರಾವಿಡ್ ಪ್ಲಾನ್; ಬಯಲಾಯ್ತು ಯುವ ಟೀಂ ಇಂಡಿಯಾದ ಬಂಡವಾಳ

ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಮಾಡಲು ವೆಸ್ಟ್ ಇಂಡೀಸ್ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. ನಾಯಕ ಶಾಯ್ ಹೋಪ್ ಕೆಲ ಹೊತ್ತು ಕ್ರೀಸ್​ನಲ್ಲಿ ಇದ್ದಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟರ್ ಕೂಡ ನೆರವಾಗಲಿಲ್ಲ. ಹೋಪ್ 45 ಎಸೆತಗಳಲ್ಲಿ 43 ರನ್ ಬಾರಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ವಿಂಡೀಸ್ 23 ಓವರ್​ಗಳಲ್ಲಿ ಕೇವಲ 114 ರನ್​ಗಳಿಗೆ ಆಲೌಟ್ ಆಯಿತು. ಭಾರತ ಪರ ಕುಲ್ದೀಪ 4, ಜಡೇಜಾ 3, ಹಾರ್ದಿಕ, ಮುಖೇಶ್ ಹಾಗೂ ಥಾಕೂರ್ ತಲಾ 1 ವಿಕೆಟ್ ಪಡೆದರು.

ಸುಲಭ ಟಾರ್ಗೆಟ್ ಬೆನ್ನಟ್ಟಲು ಬಂದ ಭಾರತ ತನ್ನ ಬ್ಯಾಟಿಂಗ್ ಆರ್ಡರ್​ನಲ್ಲಿ ಮಹತ್ವದ ಬದಲಾವಣೆ ಮಾಡಿತು. ಓಪನರ್ ಆಗಿ ರೋಹಿತ್ ಶರ್ಮಾ ಬಾರದೆ ಇಶಾನ್ ಕಿಶನ್ ಹಾಗೂ ಶುಭ್​ಮನ್ ಗಿಲ್ ಕಣಕ್ಕಿಳಿದರು. ಕಿಶನ್ ಸ್ಫೋಟಕ ಬ್ಯಾಟಿಂಗ್ ನಡೆದ 46 ಎಸೆತಗಳಲ್ಲಿ 52 ರನ್ ಸಿಡಿಸಿದರೆ, ಗಿಲ್ 7 ರನ್​ಗೆ ಔಟಾದರು. ಮೂರನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ 19 ರನ್​ಗೆ ಸುಸ್ತಾದರು. ನಂತರ ಬಂದ ಹಾರ್ದಿಕ್ ಪಾಂಡ್ಯ 5 ರನ್ ಗಳಿಸಿ ರನೌಟ್​ಗೆ ಬಲಿಯಾದರು.

ಶಾರ್ದೂಲ್ ಥಾಕೂರ್ 1 ರನ್​ಗೆ ಔಟಾದರು. ಬಳಿಕ 7ನೇ ಕ್ರಮಾಂಕದಲ್ಲಿ ಬಂದ ರೋಹಿತ್ ಶರ್ಮಾ (ಅಜೇಯ 12), ರವೀಂದ್ರ ಜಡೇಜಾ (ಅಜೇಯ 16) 22.5 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿ ಗೆಲುವು ಸಾಧಿಸುವಂತೆ ಮಾಡಿದರು. ವೆಸ್ಟ್ ಇಂಡೀಸ್ ತಂಡದ ಪರ ಗುಡಕೇಶ್ ಮೋಟಿ 2 ವಿಕೆಟ್, ಜೇಡನ್ ಸೀಲ್ಸ್ ಹಾಗೂ ಯಾನಿಕ್ ಕ್ಯರಿಯಾ ತಲಾ 1 ವಿಕೆಟ್ ಪಡೆದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ