AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿಯ ಬಂಧನಕ್ಕೆ ಟ್ವಿಟರ್​ನಲ್ಲಿ ಆಗ್ರಹ..!

Virat Kohli vs Rohit Sharma: ವಿರಾಟ್ ಕೊಹ್ಲಿ ಹಾಗೂ ಆರ್​ಸಿಬಿ ತಂಡವನ್ನು ಅಪಹಾಸ್ಯ ಮಾಡಿದ್ದರು. ಇದರಿಂದ ಕುಪಿತಗೊಂಡ ಆರ್​ಸಿಬಿ ಅಭಿಮಾನಿ ಧರ್ಮರಾಜ್ ಗೆಳೆಯನ ಮೇಲೆ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ.

Virat Kohli: ವಿರಾಟ್ ಕೊಹ್ಲಿಯ ಬಂಧನಕ್ಕೆ ಟ್ವಿಟರ್​ನಲ್ಲಿ ಆಗ್ರಹ..!
Virat Kohli
TV9 Web
| Edited By: |

Updated on: Oct 15, 2022 | 10:09 PM

Share

ಟೀಮ್ ಇಂಡಿಯಾದ (Team India) ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು (Virat Kohli) ಬಂಧಿಸಬೇಕೆಂದು ಟ್ವಿಟರ್​ನಲ್ಲಿ ಕೆಲವರು ಒತ್ತಾಯಿಸುತ್ತಿದ್ದಾರೆ. ಇದಕ್ಕಾಗಿ #ArrestKohli ಎಂಬ ಹ್ಯಾಶ್​ಟ್ಯಾಗ್ ಸೃಷ್ಟಿಸಲಾಗಿದ್ದು, ಈ ಮೂಲಕ ಕೊಹ್ಲಿಯ ಬಂಧವನ್ನು ಆಗ್ರಹಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಅಷ್ಟಕ್ಕೂ ಕೊಹ್ಲಿ ಬಂಧನದ ಹ್ಯಾಶ್​ಟ್ಯಾಗ್ ವೈರಲ್ ಆಗಲು ಮುಖ್ಯ ಕಾರಣ ತಮಿಳುನಾಡಿನಲ್ಲಿ ನಡೆದಿರುವ ಒಂದು ಕೊಲೆ. ಕುಡಿದ ಅಮಲಿನಲ್ಲಿ ತಮಿಳುನಾಡಿನ ಅರಿಯಾಲೂರು ಜಿಲ್ಲೆಯ ಪೊಯ್ಯೂರು ಗ್ರಾಮದಲ್ಲಿ ಕೊಲೆ ನಡೆದಿತ್ತು. ಇದಕ್ಕೂ ಕೊಹ್ಲಿಗೂ ಏನು ಸಂಬಂಧ ಎಂಬ ಪ್ರಶ್ನೆ ನಿಮಗೂ ಕಾಡಬಹುದು. ಈ ಪ್ರಶ್ನೆಗೆ ಉತ್ತರ ಇಲ್ಲಿದೆ…

ಪೊಯ್ಯೂರು ಗ್ರಾಮದ ವಿಘ್ನೇಶ್ ಹಾಗೂ ಧರ್ಮರಾಜ್ ಇಬ್ಬರೂ ಅಪ್ಪಟ ಕ್ರಿಕೆಟ್ ಪ್ರೇಮಿಗಳಾಗಿದ್ದರು. ಅದರಲ್ಲೂ ಧರ್ಮರಾಜ್ ಆರ್​ಸಿಬಿ ತಂಡದ ಪಕ್ಕಾ ಅಭಿಮಾನಿ. ಮತ್ತೊಂದೆಡೆ ವಿಘ್ನೇಶ್ ಹಿಟ್​​ಮ್ಯಾನ್ ಹಾಗೂ ಮುಂಬೈ ಇಂಡಿಯನ್ಸ್ ತಂಡವನ್ನು ಇಷ್ಟಪಡುತ್ತಿದ್ದರು.

ಈ ಇಬ್ಬರು ಸ್ನೇಹಿತರು ಮಂಗಳವಾರ ರಾತ್ರಿ ಮಲ್ಲೂರು ಬಳಿಯ ಸಿಡ್ಕೊ ಇಂಡಸ್ಟ್ರಿಯಲ್ ಎಸ್ಟೇಟ್ ಪ್ರದೇಶದಲ್ಲಿ ಮದ್ಯ ಸೇವಿಸಿ ಪಾರ್ಟಿ ಮಾಡಿದ್ದರು. ಇದೇ ವೇಳೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಡುವೆ ಯಾರು ಉತ್ತಮ ಆಟಗಾರ ಎಂಬ ಚರ್ಚೆ ಶುರುವಾಗಿದೆ. ಈ ತರ್ಕವು ವಿಪರೀತ ಹಂತಕ್ಕೆ ಹೋಗಿ ಇಬ್ಬರು ಗಲಾಟೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಇದೇ ವೇಳೆ ವಿಘ್ನೇಶ್, ವಿರಾಟ್ ಕೊಹ್ಲಿ ಹಾಗೂ ಆರ್​ಸಿಬಿ ತಂಡವನ್ನು ಅಪಹಾಸ್ಯ ಮಾಡಿದ್ದರು. ಇದರಿಂದ ಕುಪಿತಗೊಂಡ ಆರ್​ಸಿಬಿ ಅಭಿಮಾನಿ ಧರ್ಮರಾಜ್ ಗೆಳೆಯನ ಮೇಲೆ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಬ್ಯಾಟ್​ನಿಂದ ತಲೆಗೆ ಹೊಡೆದಿದ್ದ. ಇದರಿಂದ ಗಂಭೀರ ಗಾಯಗೊಂಡ ವಿಘ್ನೇಶ್ ಮೃತಪಟ್ಟಿದ್ದಾರೆ. ಈ ಘಟನೆ ಬಳಿಕ ಪರಾರಿಯಾಗಿದ್ದ ಧರ್ಮರಾಜ್​ರನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

ಈ ಘಟನೆಯ ಸಂಬಂಧ ವಿರಾಟ್ ಕೊಹ್ಲಿಯನ್ನು ಸಹ ಬಂಧಿಸುವಂತೆ ಕೆಲ ಟ್ವಿಟಿಗರು #ArrestKohli ಎಂದು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸುತ್ತಿದ್ದಾರೆ. ಮತ್ತೊಂದೆಡೆ ಅಭಿಮಾನಿಗಳ ಅತಿರೇಕಕ್ಕೆ ವಿರಾಟ್ ಕೊಹ್ಲಿ ಹೇಗೆ ಹೊಣೆಯಾಗುತ್ತಾರೆ ಎಂಬ ಪ್ರಶ್ನೆಗಳನ್ನು ಕೂಡ ಅನೇಕರು ಈ ವೇಳೆ ಮುಂದಿಟ್ಟಿದ್ದಾರೆ.

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?