AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿಯ ಬಂಧನಕ್ಕೆ ಟ್ವಿಟರ್​ನಲ್ಲಿ ಆಗ್ರಹ..!

Virat Kohli vs Rohit Sharma: ವಿರಾಟ್ ಕೊಹ್ಲಿ ಹಾಗೂ ಆರ್​ಸಿಬಿ ತಂಡವನ್ನು ಅಪಹಾಸ್ಯ ಮಾಡಿದ್ದರು. ಇದರಿಂದ ಕುಪಿತಗೊಂಡ ಆರ್​ಸಿಬಿ ಅಭಿಮಾನಿ ಧರ್ಮರಾಜ್ ಗೆಳೆಯನ ಮೇಲೆ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ.

Virat Kohli: ವಿರಾಟ್ ಕೊಹ್ಲಿಯ ಬಂಧನಕ್ಕೆ ಟ್ವಿಟರ್​ನಲ್ಲಿ ಆಗ್ರಹ..!
Virat Kohli
TV9 Web
| Edited By: |

Updated on: Oct 15, 2022 | 10:09 PM

Share

ಟೀಮ್ ಇಂಡಿಯಾದ (Team India) ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು (Virat Kohli) ಬಂಧಿಸಬೇಕೆಂದು ಟ್ವಿಟರ್​ನಲ್ಲಿ ಕೆಲವರು ಒತ್ತಾಯಿಸುತ್ತಿದ್ದಾರೆ. ಇದಕ್ಕಾಗಿ #ArrestKohli ಎಂಬ ಹ್ಯಾಶ್​ಟ್ಯಾಗ್ ಸೃಷ್ಟಿಸಲಾಗಿದ್ದು, ಈ ಮೂಲಕ ಕೊಹ್ಲಿಯ ಬಂಧವನ್ನು ಆಗ್ರಹಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಅಷ್ಟಕ್ಕೂ ಕೊಹ್ಲಿ ಬಂಧನದ ಹ್ಯಾಶ್​ಟ್ಯಾಗ್ ವೈರಲ್ ಆಗಲು ಮುಖ್ಯ ಕಾರಣ ತಮಿಳುನಾಡಿನಲ್ಲಿ ನಡೆದಿರುವ ಒಂದು ಕೊಲೆ. ಕುಡಿದ ಅಮಲಿನಲ್ಲಿ ತಮಿಳುನಾಡಿನ ಅರಿಯಾಲೂರು ಜಿಲ್ಲೆಯ ಪೊಯ್ಯೂರು ಗ್ರಾಮದಲ್ಲಿ ಕೊಲೆ ನಡೆದಿತ್ತು. ಇದಕ್ಕೂ ಕೊಹ್ಲಿಗೂ ಏನು ಸಂಬಂಧ ಎಂಬ ಪ್ರಶ್ನೆ ನಿಮಗೂ ಕಾಡಬಹುದು. ಈ ಪ್ರಶ್ನೆಗೆ ಉತ್ತರ ಇಲ್ಲಿದೆ…

ಪೊಯ್ಯೂರು ಗ್ರಾಮದ ವಿಘ್ನೇಶ್ ಹಾಗೂ ಧರ್ಮರಾಜ್ ಇಬ್ಬರೂ ಅಪ್ಪಟ ಕ್ರಿಕೆಟ್ ಪ್ರೇಮಿಗಳಾಗಿದ್ದರು. ಅದರಲ್ಲೂ ಧರ್ಮರಾಜ್ ಆರ್​ಸಿಬಿ ತಂಡದ ಪಕ್ಕಾ ಅಭಿಮಾನಿ. ಮತ್ತೊಂದೆಡೆ ವಿಘ್ನೇಶ್ ಹಿಟ್​​ಮ್ಯಾನ್ ಹಾಗೂ ಮುಂಬೈ ಇಂಡಿಯನ್ಸ್ ತಂಡವನ್ನು ಇಷ್ಟಪಡುತ್ತಿದ್ದರು.

ಈ ಇಬ್ಬರು ಸ್ನೇಹಿತರು ಮಂಗಳವಾರ ರಾತ್ರಿ ಮಲ್ಲೂರು ಬಳಿಯ ಸಿಡ್ಕೊ ಇಂಡಸ್ಟ್ರಿಯಲ್ ಎಸ್ಟೇಟ್ ಪ್ರದೇಶದಲ್ಲಿ ಮದ್ಯ ಸೇವಿಸಿ ಪಾರ್ಟಿ ಮಾಡಿದ್ದರು. ಇದೇ ವೇಳೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಡುವೆ ಯಾರು ಉತ್ತಮ ಆಟಗಾರ ಎಂಬ ಚರ್ಚೆ ಶುರುವಾಗಿದೆ. ಈ ತರ್ಕವು ವಿಪರೀತ ಹಂತಕ್ಕೆ ಹೋಗಿ ಇಬ್ಬರು ಗಲಾಟೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಇದೇ ವೇಳೆ ವಿಘ್ನೇಶ್, ವಿರಾಟ್ ಕೊಹ್ಲಿ ಹಾಗೂ ಆರ್​ಸಿಬಿ ತಂಡವನ್ನು ಅಪಹಾಸ್ಯ ಮಾಡಿದ್ದರು. ಇದರಿಂದ ಕುಪಿತಗೊಂಡ ಆರ್​ಸಿಬಿ ಅಭಿಮಾನಿ ಧರ್ಮರಾಜ್ ಗೆಳೆಯನ ಮೇಲೆ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಬ್ಯಾಟ್​ನಿಂದ ತಲೆಗೆ ಹೊಡೆದಿದ್ದ. ಇದರಿಂದ ಗಂಭೀರ ಗಾಯಗೊಂಡ ವಿಘ್ನೇಶ್ ಮೃತಪಟ್ಟಿದ್ದಾರೆ. ಈ ಘಟನೆ ಬಳಿಕ ಪರಾರಿಯಾಗಿದ್ದ ಧರ್ಮರಾಜ್​ರನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

ಈ ಘಟನೆಯ ಸಂಬಂಧ ವಿರಾಟ್ ಕೊಹ್ಲಿಯನ್ನು ಸಹ ಬಂಧಿಸುವಂತೆ ಕೆಲ ಟ್ವಿಟಿಗರು #ArrestKohli ಎಂದು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸುತ್ತಿದ್ದಾರೆ. ಮತ್ತೊಂದೆಡೆ ಅಭಿಮಾನಿಗಳ ಅತಿರೇಕಕ್ಕೆ ವಿರಾಟ್ ಕೊಹ್ಲಿ ಹೇಗೆ ಹೊಣೆಯಾಗುತ್ತಾರೆ ಎಂಬ ಪ್ರಶ್ನೆಗಳನ್ನು ಕೂಡ ಅನೇಕರು ಈ ವೇಳೆ ಮುಂದಿಟ್ಟಿದ್ದಾರೆ.

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್