IND vs WI: ವೆಸ್ಟ್ ಇಂಡೀಸ್‌ ವಿರುದ್ಧದ ಟಿ20 ಸರಣಿಯಿಂದಲೂ ಕೊಹ್ಲಿ ಔಟ್..! ರಾಹುಲ್ ಕಥೆ ಏನು?

IND vs WI: ಕೆಎಲ್ ರಾಹುಲ್ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟಿ20 ಸರಣಿಗೆ ಮರಳಲಿದ್ದು, ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಬಹುದು ಎಂದು ಸ್ಪೋರ್ಟ್ಸ್ ಟುಡೇ ವರದಿ ಮಾಡಿದೆ.

IND vs WI: ವೆಸ್ಟ್ ಇಂಡೀಸ್‌ ವಿರುದ್ಧದ ಟಿ20 ಸರಣಿಯಿಂದಲೂ ಕೊಹ್ಲಿ ಔಟ್..! ರಾಹುಲ್ ಕಥೆ ಏನು?
ರಾಹುಲ್, ಕೊಹ್ಲಿ
Follow us
| Updated By: ಪೃಥ್ವಿಶಂಕರ

Updated on:Jul 13, 2022 | 9:34 PM

ಸದ್ಯ ಭಾರತ ತಂಡ ಇಂಗ್ಲೆಂಡ್‌ನಲ್ಲಿ ಏಕದಿನ ಸರಣಿ ಆಡುತ್ತಿದ್ದು, ಬಳಿಕ ವೆಸ್ಟ್ ಇಂಡೀಸ್‌ಗೆ ತೆರಳಬೇಕಿದೆ. ಕೆಎಲ್ ರಾಹುಲ್ (KL Rahu) ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟಿ20 ಸರಣಿಗೆ ಮರಳಲಿದ್ದು, ವಿರಾಟ್ ಕೊಹ್ಲಿ (Virat Kohli)ಗೆ ವಿಶ್ರಾಂತಿ ನೀಡಬಹುದು ಎಂದು ಕ್ರಿಕ್‌ಬಜ್ ವರದಿ ವರದಿ ಮಾಡಿದೆ. ಭಾನುವಾರ (ಜುಲೈ 17) ಇಂಗ್ಲೆಂಡ್ ವಿರುದ್ಧದ ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯವನ್ನು ಪೂರ್ಣಗೊಳಿಸಿದ ನಂತರ, ಟೀಂ ಇಂಡಿಯಾ 3 ODI ಮತ್ತು 5 T20I ಪಂದ್ಯಗಳನ್ನು ಆಡಲು ವೆಸ್ಟ್ ಇಂಡೀಸ್‌ಗೆ ತೆರಳಲಿದೆ. ಕೊನೆಯ ಎರಡು ಟಿ20 ಪಂದ್ಯಗಳು ಅಮೆರಿಕದ ಫ್ಲೋರಿಡಾದಲ್ಲಿ ನಡೆಯಲಿವೆ.

ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಬೇಕಿದೆ. ಏಕದಿನ ಸರಣಿಗೆ ತಂಡವನ್ನು ಪ್ರಕಟಿಸಲಾಗಿದೆ ಆದರೆ ಟಿ20 ಸರಣಿಗೆ ಭಾರತ ತಂಡವನ್ನು ಇನ್ನೂ ಪ್ರಕಟಿಸಲಾಗಿಲ್ಲ. ಬಿಸಿಸಿಐ ಶೀಘ್ರದಲ್ಲೇ ಈ ಸರಣಿಗೆ ತಂಡವನ್ನು ಪ್ರಕಟಿಸಬಹುದು. ಏಕದಿನ ಸರಣಿಯಿಂದ ವಿರಾಟ್ ಕೊಹ್ಲಿಗೂ ವಿಶ್ರಾಂತಿ ನೀಡಲಾಗಿದ್ದು, ಕೆಎಲ್ ರಾಹುಲ್ ಕೂಡ ಏಕದಿನ ತಂಡದಲ್ಲಿಲ್ಲ.

ಇದೀಗ ಟಿ20 ಸರಣಿಗೆ ರಾಹುಲ್ ವಾಪಸಾಗಬಹುದು ಎಂಬ ಸುದ್ದಿಯಿದೆ, ಆದರೆ ವಿರಾಟ್ ಕೊಹ್ಲಿ ವಿಶ್ರಾಂತಿಯನ್ನು ಮುಂದುವರಿಸಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೂ ಮುನ್ನ ಕೆಎಲ್ ರಾಹುಲ್ ಗಾಯಗೊಂಡಿದ್ದರು. ಆ ನಂತರ ಅವರು ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧವೂ ಆಡಲಿಲ್ಲ. ಈಗ ಅವರು ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಪುನರಾಗಮನ ಮಾಡಬಹುದು.

ಏಕದಿನ ಸರಣಿಗೂ ಕೊಹ್ಲಿ ಗೈರು

ಏಕದಿನ ಸರಣಿಗೆ ವಿಶ್ರಾಂತಿ ಪಡೆದಿರುವ ಹಿರಿಯರ ಪೈಕಿ ವಿರಾಟ್ ಕೊಹ್ಲಿ ಕೂಡ ಇದ್ದಾರೆ. ವರದಿಯ ಪ್ರಕಾರ, ಕೊಹ್ಲಿ T20 ಸರಣಿಯನ್ನು ಸಹ ಕಳೆದುಕೊಳ್ಳಲಿದ್ದಾರೆ. ವೆಸ್ಟ್ ಇಂಡೀಸ್ ಸರಣಿಗೆ ತನ್ನನ್ನು ಪರಿಗಣಿಸಬೇಡಿ ಎಂದು ಕೊಹ್ಲಿ ಬಿಸಿಸಿಐ, ತಂಡದ ಮ್ಯಾನೇಜ್‌ಮೆಂಟ್ ಮತ್ತು ಆಯ್ಕೆದಾರರಿಗೆ ಮನವಿ ಮಾಡಿದ್ದಾರೆ ಎಂದು ಕ್ರಿಕ್‌ಬಜ್ ವರದಿ ಮಾಡಿದೆ. ಹೀಗಾಗಿ ಅವರು ಸಂಪೂರ್ಣ ಕೆರಿಬಿಯನ್ ಪ್ರವಾಸದಿಂದ ಹೊರಗುಳಿಯಲು ಸಿದ್ಧರಾಗಿದ್ದಾರೆ.

ಕೊಹ್ಲಿ, ಇಂಗ್ಲೆಂಡ್ ವಿರುದ್ಧದ ODI ತಂಡದ ಭಾಗವಾಗಿದ್ದಾರೆ ಆದರೆ ಸಣ್ಣ ಇಂಜುರಿಯಿಂದ ಮೊದಲ ಪಂದ್ಯದಿಂದ ಹೊರಗುಳಿದಿದ್ದರು. ಈಗ ಗುರುವಾರ (ಜುಲೈ 14) ನಡೆಯಲಿರುವ 2ನೇ ಏಕದಿನ ಪಂದ್ಯಕ್ಕೆ ಕೊಹ್ಲಿ ಫಿಟ್ ಆಗುವ ಸಾಧ್ಯತೆ ಕಡಿಮೆ.

ಅಶ್ವಿನ್ ಕಮ್​ಬ್ಯಾಕ್

ಕ್ರಿಕ್‌ಬಜ್‌ನಲ್ಲಿನ ವರದಿ ಪ್ರಕಾರ ಆರ್ ಅಶ್ವಿನ್ ಟಿ20 ಸರಣಿಗೆ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಿವೆ. ಹಿರಿಯ ಆಫ್ ಸ್ಪಿನ್ನರ್ ಜನವರಿ 2022 ರಿಂದ ವೈಟ್-ಬಾಲ್ ಕ್ರಿಕೆಟ್​ನಿಂದ ದೂರವಿದ್ದಾರೆ. 2021 ರ T20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದ ಅಶ್ವಿನ್, ನ್ಯೂಜಿಲೆಂಡ್ ವಿರುದ್ಧ ಸ್ವದೇಶಿ T20I ಸರಣಿಯನ್ನು ಆಡಿದ್ದರು.

ಟಿ20ಐ ಸರಣಿಯಲ್ಲಿ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದರೆ, ನಾಯಕ ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ ಮತ್ತು ರಿಷಭ್ ಪಂತ್ ಕಡಿಮೆ ಸ್ವರೂಪಕ್ಕೆ ಮರಳಲಿದ್ದಾರೆ. ಏಕದಿನ ಪಂದ್ಯಗಳಲ್ಲಿ ಮೂವರಿಗೆ ವಿಶ್ರಾಂತಿ ನೀಡಲಾಗಿದೆ. ಪಾಂಡ್ಯ, ಬುಮ್ರಾ ಮತ್ತು ರಿಷಭ್ ಲಭ್ಯವಿದ್ದು, ಸರಣಿಗೆ ತಂಡದ ಉಪನಾಯಕ ಯಾರೆಂದು ಕಾದು ನೋಡಬೇಕಾಗಿದೆ. ಪ್ರಸ್ತುತ ನಡೆಯುತ್ತಿರುವ ಏಕದಿನ ಸರಣಿಗೆ ತಂಡದ ಉಪನಾಯಕರನ್ನಾಗಿ ಬಿಸಿಸಿಐ ಯಾರನ್ನು ಆಯ್ಕೆ ಮಾಡಿಲ್ಲ.

ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಸ್ಟ್ರಿಂಗ್ ತಂಡಕ್ಕೆ ರಿಷಭ್ ನಾಯಕತ್ವ ವಹಿಸಿದ್ದರೆ, ಪಾಂಡ್ಯ ಐರ್ಲೆಂಡ್ ವಿರುದ್ಧ ಮೆನ್ ಇನ್ ಬ್ಲೂ ತಂಡವನ್ನು ಮುನ್ನಡೆಸಿದರು. ತಿಂಗಳ ಆರಂಭದಲ್ಲಿ ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್‌ನಲ್ಲಿ ಬುಮ್ರಾ ಟೆಸ್ಟ್ ತಂಡವನ್ನು ಮುನ್ನಡೆಸಿದ್ದರು.

Published On - 9:21 pm, Wed, 13 July 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ