AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಭಜಿತ ನಾಯಕತ್ವ ವದಂತಿ ಸುಳ್ಳು! ಎಲ್ಲಾ ಸ್ವರೂಪದ ಕ್ರಿಕೆಟ್​ಗೆ ಕೊಹ್ಲಿಯೇ ನಾಯಕ; ಬಿಸಿಸಿಐ ಸ್ಪಷ್ಟನೆ

ಇವೆಲ್ಲವೂ ಮಾಧ್ಯಮ ಸೃಷ್ಟಿಸಿರುವ ಸುಳ್ಳು ವದಂತಿಗಳು. ವಿಭಜಿತ ನಾಯಕತ್ವದ ಬಗ್ಗೆ ಮಂಡಳಿಯು ಚರ್ಚಿಸಿಲ್ಲ ಅಥವಾ ಯೋಚಿಸಿಲ್ಲ. ಸತ್ಯವೆಂದರೆ ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪಗಳಲ್ಲಿ ನಾಯಕನಾಗಿ ಉಳಿಯುತ್ತಾರೆ.

ವಿಭಜಿತ ನಾಯಕತ್ವ ವದಂತಿ ಸುಳ್ಳು! ಎಲ್ಲಾ ಸ್ವರೂಪದ ಕ್ರಿಕೆಟ್​ಗೆ ಕೊಹ್ಲಿಯೇ ನಾಯಕ; ಬಿಸಿಸಿಐ ಸ್ಪಷ್ಟನೆ
ವಿರಾಟ್ ಕೊಹ್ಲಿ
TV9 Web
| Updated By: ಪೃಥ್ವಿಶಂಕರ|

Updated on: Sep 13, 2021 | 2:35 PM

Share

ಟಿ 20 ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ಏಕದಿನ ಮತ್ತು ಟಿ 20 ತಂಡದ ನಾಯಕತ್ವ ತ್ಯಜಿಸಲಿದ್ದಾರೆ ಎಂಬ ಸುದ್ದಿಯ ಕೆಲವೇ ಗಂಟೆಗಳ ನಂತರ, ಬಿಸಿಸಿಐ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದೆ. ಟಿ 20 ವಿಶ್ವಕಪ್ ನಂತರ ವಿರಾಟ್ ಬದಲಿಗೆ ರೋಹಿತ್ ಶರ್ಮಾ ಅವರನ್ನು ಏಕದಿನ ಮತ್ತು ಟಿ 20 ತಂಡಗಳ ನಾಯಕನನ್ನಾಗಿ ನೇಮಿಸುವುದಾಗಿ ಹೇಳಿದ್ದ ವರದಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ನಿರಾಕರಿಸಿದೆ. ಮಂಡಳಿಯ ಖಜಾಂಚಿ ಅರುಣ್ ಧುಮಾಲ್ ಸೋಮವಾರ ಆ ವರದಿಯನ್ನು ಆಧಾರರಹಿತ ಎಂದು ಬಣ್ಣಿಸಿದ್ದಾರೆ ಮತ್ತು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯಾಗಿಯೇ ಇರುತ್ತಾರೆ ಎಂದು ಹೇಳಿದ್ದಾರೆ. ನಾಯಕತ್ವ ತೊರೆಯುವ ಸುದ್ದಿ ಸುಳ್ಳು. ಭಾರತೀಯ ಕ್ರಿಕೆಟ್ ನಲ್ಲಿ ಆ ರೀತಿ ಏನೂ ಆಗುವುದಿಲ್ಲ ಎಂದಿದ್ದಾರೆ.

ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್ ಸುದ್ದಿ ಸಂಸ್ಥೆ ಐಎಎನ್ಎಸ್ ಜೊತೆಗಿನ ಸಂಭಾಷಣೆಯಲ್ಲಿ, ಇವೆಲ್ಲವೂ ಮಾಧ್ಯಮ ಸೃಷ್ಟಿಸಿರುವ ಸುಳ್ಳು ವದಂತಿಗಳು. ವಿಭಜಿತ ನಾಯಕತ್ವದ ಬಗ್ಗೆ ಮಂಡಳಿಯು ಚರ್ಚಿಸಿಲ್ಲ ಅಥವಾ ಯೋಚಿಸಿಲ್ಲ. ಸತ್ಯವೆಂದರೆ ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪಗಳಲ್ಲಿ ನಾಯಕನಾಗಿ ಉಳಿಯುತ್ತಾರೆ.

ಹಿಂದಿನ ವರದಿ ಏನು ಹೇಳುತ್ತಿತ್ತು? ಆದಾಗ್ಯೂ, ಹಿಂದಿನ ವರದಿಯ ಪ್ರಕಾರ, ವಿರಾಟ್ ಕೊಹ್ಲಿ ಟಿ 20 ವಿಶ್ವಕಪ್ ನಂತರ ಕ್ರಿಕೆಟ್​ನ ಚಿಕ್ಕ ಸ್ವರೂಪದ ನಾಯಕತ್ವವನ್ನು ತೊರೆಯಲಿದ್ದಾರೆ. ಅವರ ಸ್ಥಾನದಲ್ಲಿ ರೋಹಿತ್ ಶರ್ಮಾ ಅವರನ್ನು ನಾಯಕನನ್ನಾಗಿ ಮಾಡಲಾಗುತ್ತದೆ ಎಂಬ ವರದಿಗಳು ಕೇಳಿಬಂದಿದ್ದವು. ಟೈಮ್ಸ್ ಆಫ್ ಇಂಡಿಯಾ ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ, ಟಿ 20 ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ಅವರೇ ತಮ್ಮ ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸುತ್ತಾರೆ. ಅವರು ತಮ್ಮ ಬ್ಯಾಟಿಂಗ್ ಮೇಲೆ ಗಮನಹರಿಸಲು ಈ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಲಾಗಿತ್ತು. ಮೂಲಗಳು ವಿರಾಟ್, ಪ್ರಸ್ತುತ ತಂಡದ ನಾಯಕ ರೋಹಿತ್‌ನೊಂದಿಗೆ ಅವರ ನಾಯಕತ್ವದ ಜವಾಬ್ದಾರಿಯನ್ನು ಹಂಚಿಕೊಳ್ಳಲು ಭಾರತ ನಿರ್ಧರಿಸಿದೆ. ಬಿಸಿಸಿಐನ ಉನ್ನತ ಅಧಿಕಾರಿಗಳ ಸಭೆಯನ್ನು ಕೂಡ ಆ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿತ್ತು. ಇದನ್ನು ಮಂಡಳಿ ಪರಿಗಣಿಸುತ್ತಿದೆ ಎಂದು ಕೂಡ ಹೇಳಲಾಗಿತ್ತು. ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ವಿಶ್ವ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಕಳೆದುಕೊಂಡ ನಂತರ ಈ ವದಂತಿಗಳಿಗೆ ಹೆಚ್ಚಿನ ರೆಕ್ಕೆಪುಕ್ಕ ಕಟ್ಟಲಾಗಿತ್ತು.

ವಿರಾಟ್ ನಾಯಕನಾಗಿರುತ್ತಾರೆ – ಬಿಸಿಸಿಐ ಆದರೆ, ಈಗ ಅರುಣ್ ಧುಮಾಲ್ ಅವರು ಮಂಡಳಿಯ ಯಾವುದೇ ಸಭೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೇರೆ ಸ್ವರೂಪಕ್ಕಾಗಿ ಬೇರೆ ಕ್ಯಾಪ್ಟನ್ ಬಗ್ಗೆ ಯಾವುದೇ ಚರ್ಚೆ ನಡೆದಿಲಿಲ್ಲ. ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪಗಳಲ್ಲೂ ನಾಯಕರಾಗಿ ಮುಂದುವರೆಯಲ್ಲಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ:Virat Kohli: ಆರ್​ಸಿಬಿ ತಂಡ ಸೇರಿಕೊಂಡ ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ