AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: RCB ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿರಾಟ್ ಕೊಹ್ಲಿ ಘೋಷಣೆ

virat kohli: 2013 ರಿಂದ ವಿರಾಟ್ ಕೊಹ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇದಾಗ್ಯೂ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ಚಾಂಪಿಯನ್ ಪಟ್ಟ ಅಲಂಕರಿಸಿಲ್ಲ.

IPL 2021: RCB ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿರಾಟ್ ಕೊಹ್ಲಿ ಘೋಷಣೆ
ವಿರಾಟ್ ಕೊಹ್ಲಿ
TV9 Web
| Edited By: |

Updated on:Sep 19, 2021 | 11:52 PM

Share

RCB ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿರಾಟ್ ಕೊಹ್ಲಿ (Virat Kohli) ಘೋಷಿಸಿದ್ದಾರೆ. ಮುಂದಿನ ಸೀಸನ್​ನಲ್ಲಿ ನಾನು ಆರ್​ಸಿಬಿ (RCB) ತಂಡವನ್ನು ಮುನ್ನಡೆಸುವುದಿಲ್ಲ. ಆರ್​ಸಿಬಿ ನಾಯಕನಾಗಿ ಇದು ನನ್ನ ಕೊನೆಯ ಐಪಿಎಲ್​ ಸೀಸನ್​ ಆಗಿರಲಿದೆ ಎಂದು ತಿಳಿಸಿದ್ದಾರೆ. ಅದರಂತೆ ಐಪಿಎಲ್​ 2022ರಲ್ಲಿ ಕೊಹ್ಲಿ ಆರ್​ಸಿಬಿ ತಂಡದ ನಾಯಕನಾಗಿರುವುದಿಲ್ಲ. ಕೆಲ ದಿನಗಳ ಹಿಂದೆಯಷ್ಟೇ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಮುಂಬರು ಟಿ20 ವಿಶ್ವಕಪ್​ ಬಳಿಕ ಕೊಹ್ಲಿ ನಾಯಕನ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ಇದೀಗ ಐಪಿಎಲ್​ನಲ್ಲೂ ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿ ಅಚ್ಚರಿ ಮೂಡಿಸಿದ್ದಾರೆ. ಈ ಬಗ್ಗೆ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಅಧಿಕೃತ ಟ್ವಿಟರ್​ ಖಾತೆಯಲ್ಲಿ ವಿಶೇಷ ವಿಡಿಯೋವನ್ನು ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿ ರಾಜೀನಾಮೆ ಬಗ್ಗೆ ಮಾತನಾಡಿದ್ದಾರೆ.

ಆರ್‌ಸಿಬಿಯ ನಾಯಕನಾಗಿ ಇದು ನನ್ನ ಕೊನೆಯ ಐಪಿಎಲ್. ನನ್ನ ಕೊನೆಯ ಐಪಿಎಲ್ ಪಂದ್ಯವನ್ನು ಆಡುವವರೆಗೂ ನಾನು ಆರ್‌ಸಿಬಿ ಆಟಗಾರನಾಗಿ ಮುಂದುವರಿಯುತ್ತೇನೆ. ನನ್ನನ್ನು ಬೆಂಬಲಿಸಿದ ಆರ್​ಸಿಬಿ ಅಭಿಮಾನಿಗಳಿಗೆ ಧನ್ಯವಾದಗಳು ಎಂದು ಕೊಹ್ಲಿ ವಿಡಿಯೋ ಮೂಲಕ ತಿಳಿಸಿದ್ದಾರೆ.

2013 ರಿಂದ ವಿರಾಟ್ ಕೊಹ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇದಾಗ್ಯೂ ಕೊಹ್ಲಿ ನಾಯಕತ್ವದಲ್ಲಿ ಆರ್​ಸಿಬಿ ಚಾಂಪಿಯನ್ ಪಟ್ಟ ಅಲಂಕರಿಸಿಲ್ಲ. ಇದೀಗ ಸೀಸನ್​ 14 ರ ದ್ವಿತಿಯಾರ್ಧದ ಮೊದಲ ಪಂದ್ಯ ಆರಂಭಕ್ಕೂ ಮುನ್ನ ಕೊಹ್ಲಿ ಮಹತ್ವದ ನಿರ್ಧಾರ ಪ್ರಕಟಿಸಿ ಆರ್​ಸಿಬಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಇನ್ನು ಮುಂಬರುವ ಐಪಿಎಲ್​ ಸೀಸನ್​ನಲ್ಲಿ ಒಟ್ಟು 10 ತಂಡಗಳಿರಲಿದ್ದು, ಹೀಗಾಗಿ ಮೆಗಾ ಹರಾಜು ನಡೆಯಲಿದೆ. ಈ ಕಾರಣದಿಂದ ಆರ್​ಸಿಬಿ ಕೊಹ್ಲಿಯನ್ನು ತಂಡದಲ್ಲಿ ಉಳಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

ಸೆಪ್ಟೆಂಬರ್ 16 ರಂದು ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟಿ20 ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಮುಂದಿನ ಟಿ20 ವಿಶ್ವಕಪ್​ ಬಳಿಕ ನಾಯಕನ ಸ್ಥಾನದಿಂದ ಕೆಳಗಿಳಿಯುವುದಾಗಿ ತಿಳಿಸಿದ್ದರು. ಮೂರು ಮಾದರಿಯಲ್ಲೂ ತಂಡವನ್ನು ಮುನ್ನಡೆಸುತ್ತಿರುವುದು ಹೊರೆಯಾಗುತ್ತಿದೆ. ಹೀಗಾಗಿ ಟಿ20 ಕ್ರಿಕೆಟ್​ನ ನಾಯಕತ್ವ ಜವಾಬ್ದಾರಿಯಿಂದ ಕೆಳಗಿಳಿಯುವುದಾಗಿ ಕೊಹ್ಲಿ ತಿಳಿಸಿದ್ದರು.

ಇದರ ಬೆನ್ನಲ್ಲೇ ಕೊಹ್ಲಿ ಆರ್​ಸಿಬಿ ತಂಡದ ನಾಯಕತ್ವಕ್ಕೂ ರಾಜೀನಾಮೆ ನೀಡಲಿದ್ದಾರೆ ಎಂಬ ಸುಳಿವನ್ನು ಬಾಲ್ಯದ ಕೋಚ್ ರಾಜ್ ಕುಮಾರ್ ಶರ್ಮಾ ನೀಡಿದ್ದರು. ಇದೀಗ ಮುಂದಿನ ಐಪಿಎಲ್​ನಲ್ಲಿ ಆಟಗಾರನಾಗಿ ಕಾಣಿಸಿಕೊಳ್ಳುವುದಾಗಿ ಕೊಹ್ಲಿ ಘೋಷಿಸಿದ್ದಾರೆ. ಇದರೊಂದಿಗೆ 8 ವರ್ಷಗಳ ಬಳಿಕ ಆರ್​ಸಿಬಿ ತಂಡಕ್ಕೆ ಹೊಸ ನಾಯಕ ಆಯ್ಕೆಯಾಗಲಿದ್ದಾರೆ.

ಇದನ್ನೂ ಓದಿ: IPL 2021: 5 ತಂಡಗಳಲ್ಲಿ 10 ಹೊಸ ವಿದೇಶಿ ಆಟಗಾರರು

ಇದನ್ನೂ ಓದಿ: IPL 2021: RCB ತಂಡದ ಗೇಮ್ ಚೇಂಜರ್ ಆಗಲಿದ್ದಾರೆ ಟಿಮ್ ಡೇವಿಡ್

ಇದನ್ನೂ ಓದಿ: ಗೂಗಲ್ ಬಿಗ್ ಆಫರ್: ಸ್ಮಾರ್ಟ್​ಫೋನ್ ಜೊತೆ ಕೇವಲ 1 ರೂ.ಗೆ ಸ್ಮಾರ್ಟ್​ ಸ್ಪೀಕರ್

(Virat Kohli to step down from RCB captaincy)

Published On - 10:40 pm, Sun, 19 September 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ