AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Award: ಮೊದಲ ಬಾರಿಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಗೆದ್ದ ಕಿಂಗ್ ಕೊಹ್ಲಿ..!

Virat Kohli: ಟಿ20 ವಿಶ್ವಕಪ್​ನಲ್ಲಿ ರನ್ ಮಳೆ ಹರಿಸುತ್ತಿರುವ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಐಸಿಸಿ ಅಕ್ಟೋಬರ್ ತಿಂಗಳ ಆಟಗಾರ ಪ್ರಶಸ್ತಿ ಒಲಿದಿದೆ.

ICC Award: ಮೊದಲ ಬಾರಿಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಗೆದ್ದ ಕಿಂಗ್ ಕೊಹ್ಲಿ..!
Virat Kohli
TV9 Web
| Edited By: |

Updated on:Nov 07, 2022 | 5:29 PM

Share

ಟಿ20 ವಿಶ್ವಕಪ್​ನಲ್ಲಿ (T20 World Cup) ರನ್ ಮಳೆ ಹರಿಸುತ್ತಿರುವ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ (Virat Kohli) ಐಸಿಸಿ ಅಕ್ಟೋಬರ್ ತಿಂಗಳ ಆಟಗಾರ ಪ್ರಶಸ್ತಿ ಒಲಿದಿದೆ. ಏಷ್ಯಾಕಪ್​ನಿಂದ ತನ್ನ ಹಳೆಯ ಫಾರ್ಮ್​ಗೆ ಮರಳಿರುವ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ತಮ್ಮ ಚೊಚ್ಚಲ ಶತಕ ಸೇರಿದಂತೆ ಹಲವು ಅರ್ಧಶತಕಗಳನ್ನು ಬಾರಿಸಿ ರನ್​ಗಳ ಗುಡ್ಡೆ ಹಾಕಿದ್ದರು. ಇದೀಗ ಅಕ್ಟೋಬರ್ ತಿಂಗಳ ಆಟಗಾರ ಪ್ರಶಸ್ತಿ (ICC Player of the Month) ಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದ್ದು, ಪುರುಷರ ವಿಭಾಗದಲ್ಲಿ ಕಿಂಗ್ ಕೊಹ್ಲಿಗೆ ಈ ಪ್ರಶಸ್ತಿ ಲಭಿಸಿದೆ. ಪುರುಷರ ವಿಭಾಗದಲ್ಲಿ ಈ ಪ್ರಶಸ್ತಿಗೆ ಕೊಹ್ಲಿ ಜೊತೆ ದಕ್ಷಿಣ ಆಫ್ರಿಕಾದ ಡೇವಿಡ್ ಮಿಲ್ಲರ್ ಮತ್ತು ಜಿಂಬಾಬ್ವೆಯ ಸಿಕಂದರ್ ರಾಜಾ ಕೂಡ ನಾಮನಿರ್ದೇಶನಗೊಂಡಿದ್ದರು.

ಈ ಕ್ಯಾಲೆಂಡರ್ ತಿಂಗಳಿನಲ್ಲಿ 205 ರನ್ ಗಳಿಸಿರುವ ವಿರಾಟ್ ತಮ್ಮ ಅತ್ಯುತ್ತಮ ಫಾರ್ಮ್ ಮುಂದುವರೆಸಿದ್ದಾರೆ. ಈ ವಿಶ್ವಕಪ್​ನಲ್ಲಿ ಟೀಂ ಇಂಡಿಯಾದ ಗೆಲುವಿನ ನಾಯಕನಾಗಿ ಹೊರಹೊಮ್ಮಿರುವ ವಿರಾಟ್, ಪಾಕ್ ವಿರುದ್ಧದ ಮೊದಲ ಪಂದ್ಯದಲ್ಲಿ 53 ಎಸೆತಗಳಲ್ಲಿ ಅಜೇಯ 82 ರನ್‌ಗಳ ಅವಿಸ್ಮರಣೀಯ ಇನ್ನಿಂಗ್ಸ್ ಆಡಿದ್ದರು. ಕೊಹ್ಲಿಯ ಈ ಏಕಾಂಗಿ ಹೋರಾಟದ ಫಲವಾಗಿ ಟೀಂ ಇಂಡಿಯಾ ಬದ್ಧವೈರಿ ಪಾಕಿಸ್ತಾನವನ್ನು ಸೋಲಿಸಿ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿತ್ತು. ಆ ಬಳಿಕ ನೆದರ್ಲ್ಯಾಂಡ್ಸ್ ವಿರುದ್ಧ ಅಜೇಯ 62 ರನ್ ಗಳಿಸಿದ್ದ ವಿರಾಟ್, ಬಾಂಗ್ಲಾ ವಿರುದ್ಧದ ಪಂದ್ಯದಲ್ಲೂ ಅಜೇಯ ಅರ್ಧಶತಕ ಸಿಡಿಸಿ ಮಿಂಚಿದ್ದರು.

ಈ ಪುರಸ್ಕಾರವನ್ನು ಇನ್ನಷ್ಟು ವಿಶೇಷವಾಗಿಸಿದೆ

ಪ್ರಶಸ್ತಿ ಪ್ರಕಟವಾದ ಬಳಿಕ ಮಾತನಾಡಿದ ಬಳಿಕ ಈ ಬಗ್ಗೆ ಮಾತನಾಡಿದ ಕೊಹ್ಲಿ, ಅಕ್ಟೋಬರ್ ತಿಂಗಳ ಐಸಿಸಿ ಪುರುಷರ ತಿಂಗಳ ಆಟಗಾರನಾಗಿ ಆಯ್ಕೆಯಾಗಿರುವುದು ನನಗೆ ದೊಡ್ಡ ಗೌರವವಾಗಿದೆ. ಪ್ರಪಂಚದಾದ್ಯಂತದ ಅಭಿಮಾನಿಗಳು ಮತ್ತು ಪ್ಯಾನೆಲ್‌ನಿಂದ ಈ ತಿಂಗಳ ಆಟಗಾರನಾಗಿ ಆಯ್ಕೆಯಾಗಿರುವುದು ನನಗೆ ಈ ಪುರಸ್ಕಾರವನ್ನು ಇನ್ನಷ್ಟು ವಿಶೇಷವಾಗಿಸಿದೆ. ಜೊತೆಗೆ ಅಕ್ಟೋಬರ್‌ ತಿಂಗಳಲ್ಲಿ ಉತ್ತಮ ಆಟ ಪ್ರದರ್ಶಿಸಿ ಈ ಪ್ರಶಸ್ತಿಗೆ ನಾಮನಿರ್ದೇಶಿತರಾಗಿದ್ದ ಇತರ ಆಟಗಾರರಿಗು ನಾನು ಗೌರವ ಸಲ್ಲಿಸಲು ಬಯಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

Published On - 4:39 pm, Mon, 7 November 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ