AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Award: ಮೊದಲ ಬಾರಿಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಗೆದ್ದ ಕಿಂಗ್ ಕೊಹ್ಲಿ..!

Virat Kohli: ಟಿ20 ವಿಶ್ವಕಪ್​ನಲ್ಲಿ ರನ್ ಮಳೆ ಹರಿಸುತ್ತಿರುವ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಐಸಿಸಿ ಅಕ್ಟೋಬರ್ ತಿಂಗಳ ಆಟಗಾರ ಪ್ರಶಸ್ತಿ ಒಲಿದಿದೆ.

ICC Award: ಮೊದಲ ಬಾರಿಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಗೆದ್ದ ಕಿಂಗ್ ಕೊಹ್ಲಿ..!
Virat Kohli
TV9 Web
| Edited By: |

Updated on:Nov 07, 2022 | 5:29 PM

Share

ಟಿ20 ವಿಶ್ವಕಪ್​ನಲ್ಲಿ (T20 World Cup) ರನ್ ಮಳೆ ಹರಿಸುತ್ತಿರುವ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ (Virat Kohli) ಐಸಿಸಿ ಅಕ್ಟೋಬರ್ ತಿಂಗಳ ಆಟಗಾರ ಪ್ರಶಸ್ತಿ ಒಲಿದಿದೆ. ಏಷ್ಯಾಕಪ್​ನಿಂದ ತನ್ನ ಹಳೆಯ ಫಾರ್ಮ್​ಗೆ ಮರಳಿರುವ ಕೊಹ್ಲಿ ಟಿ20 ಕ್ರಿಕೆಟ್​ನಲ್ಲಿ ತಮ್ಮ ಚೊಚ್ಚಲ ಶತಕ ಸೇರಿದಂತೆ ಹಲವು ಅರ್ಧಶತಕಗಳನ್ನು ಬಾರಿಸಿ ರನ್​ಗಳ ಗುಡ್ಡೆ ಹಾಕಿದ್ದರು. ಇದೀಗ ಅಕ್ಟೋಬರ್ ತಿಂಗಳ ಆಟಗಾರ ಪ್ರಶಸ್ತಿ (ICC Player of the Month) ಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದ್ದು, ಪುರುಷರ ವಿಭಾಗದಲ್ಲಿ ಕಿಂಗ್ ಕೊಹ್ಲಿಗೆ ಈ ಪ್ರಶಸ್ತಿ ಲಭಿಸಿದೆ. ಪುರುಷರ ವಿಭಾಗದಲ್ಲಿ ಈ ಪ್ರಶಸ್ತಿಗೆ ಕೊಹ್ಲಿ ಜೊತೆ ದಕ್ಷಿಣ ಆಫ್ರಿಕಾದ ಡೇವಿಡ್ ಮಿಲ್ಲರ್ ಮತ್ತು ಜಿಂಬಾಬ್ವೆಯ ಸಿಕಂದರ್ ರಾಜಾ ಕೂಡ ನಾಮನಿರ್ದೇಶನಗೊಂಡಿದ್ದರು.

ಈ ಕ್ಯಾಲೆಂಡರ್ ತಿಂಗಳಿನಲ್ಲಿ 205 ರನ್ ಗಳಿಸಿರುವ ವಿರಾಟ್ ತಮ್ಮ ಅತ್ಯುತ್ತಮ ಫಾರ್ಮ್ ಮುಂದುವರೆಸಿದ್ದಾರೆ. ಈ ವಿಶ್ವಕಪ್​ನಲ್ಲಿ ಟೀಂ ಇಂಡಿಯಾದ ಗೆಲುವಿನ ನಾಯಕನಾಗಿ ಹೊರಹೊಮ್ಮಿರುವ ವಿರಾಟ್, ಪಾಕ್ ವಿರುದ್ಧದ ಮೊದಲ ಪಂದ್ಯದಲ್ಲಿ 53 ಎಸೆತಗಳಲ್ಲಿ ಅಜೇಯ 82 ರನ್‌ಗಳ ಅವಿಸ್ಮರಣೀಯ ಇನ್ನಿಂಗ್ಸ್ ಆಡಿದ್ದರು. ಕೊಹ್ಲಿಯ ಈ ಏಕಾಂಗಿ ಹೋರಾಟದ ಫಲವಾಗಿ ಟೀಂ ಇಂಡಿಯಾ ಬದ್ಧವೈರಿ ಪಾಕಿಸ್ತಾನವನ್ನು ಸೋಲಿಸಿ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿತ್ತು. ಆ ಬಳಿಕ ನೆದರ್ಲ್ಯಾಂಡ್ಸ್ ವಿರುದ್ಧ ಅಜೇಯ 62 ರನ್ ಗಳಿಸಿದ್ದ ವಿರಾಟ್, ಬಾಂಗ್ಲಾ ವಿರುದ್ಧದ ಪಂದ್ಯದಲ್ಲೂ ಅಜೇಯ ಅರ್ಧಶತಕ ಸಿಡಿಸಿ ಮಿಂಚಿದ್ದರು.

ಈ ಪುರಸ್ಕಾರವನ್ನು ಇನ್ನಷ್ಟು ವಿಶೇಷವಾಗಿಸಿದೆ

ಪ್ರಶಸ್ತಿ ಪ್ರಕಟವಾದ ಬಳಿಕ ಮಾತನಾಡಿದ ಬಳಿಕ ಈ ಬಗ್ಗೆ ಮಾತನಾಡಿದ ಕೊಹ್ಲಿ, ಅಕ್ಟೋಬರ್ ತಿಂಗಳ ಐಸಿಸಿ ಪುರುಷರ ತಿಂಗಳ ಆಟಗಾರನಾಗಿ ಆಯ್ಕೆಯಾಗಿರುವುದು ನನಗೆ ದೊಡ್ಡ ಗೌರವವಾಗಿದೆ. ಪ್ರಪಂಚದಾದ್ಯಂತದ ಅಭಿಮಾನಿಗಳು ಮತ್ತು ಪ್ಯಾನೆಲ್‌ನಿಂದ ಈ ತಿಂಗಳ ಆಟಗಾರನಾಗಿ ಆಯ್ಕೆಯಾಗಿರುವುದು ನನಗೆ ಈ ಪುರಸ್ಕಾರವನ್ನು ಇನ್ನಷ್ಟು ವಿಶೇಷವಾಗಿಸಿದೆ. ಜೊತೆಗೆ ಅಕ್ಟೋಬರ್‌ ತಿಂಗಳಲ್ಲಿ ಉತ್ತಮ ಆಟ ಪ್ರದರ್ಶಿಸಿ ಈ ಪ್ರಶಸ್ತಿಗೆ ನಾಮನಿರ್ದೇಶಿತರಾಗಿದ್ದ ಇತರ ಆಟಗಾರರಿಗು ನಾನು ಗೌರವ ಸಲ್ಲಿಸಲು ಬಯಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

Published On - 4:39 pm, Mon, 7 November 22

Follow Us
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ