AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕಿಂಗ್ ಕೊಹ್ಲಿಯ ಸಹ ಆಟಗಾರರು ಈಗ ಅಂಪೈರ್ಸ್​..!

ಅಜಿತೇಶ್ ಮತ್ತು ತನ್ಮಯ್ ಅವರು ಆಗಸ್ಟ್ 17-19 ರವರೆಗೆ ಅಹಮದಾಬಾದ್‌ನಲ್ಲಿ ನಡೆಯಲಿರುವ ಬಿಸಿಸಿಐ ಓರಿಯಂಟೇಶನ್ ಕಾರ್ಯಕ್ರಮ ಮತ್ತು ಸೆಮಿನಾರ್‌ಗಳಲ್ಲಿ ಭಾಗವಹಿಸಲಿದ್ದಾರೆ.

Virat Kohli: ಕಿಂಗ್ ಕೊಹ್ಲಿಯ ಸಹ ಆಟಗಾರರು ಈಗ ಅಂಪೈರ್ಸ್​..!
Team India
TV9 Web
| Edited By: |

Updated on: Aug 01, 2023 | 5:28 PM

Share

2008 ರಲ್ಲಿ ವಿರಾಟ್ ಕೊಹ್ಲಿ (Virat Kohli) ನಾಯಕತ್ವದಲ್ಲಿ ಭಾರತ ಕಿರಿಯರ ತಂಡ ಅಂಡರ್​ 19 ವಿಶ್ವಕಪ್​ನಲ್ಲಿ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಅಂದು ಕೊಹ್ಲಿಯ ಜೊತೆಗಿದ್ದ ಇಬ್ಬರು ಆಟಗಾರರು ಇದೀಗ ಹೊಸ ಇನಿಂಗ್ಸ್​ ಆರಂಭಿಸುತ್ತಿದ್ದಾರೆ. ಅದು ಕೂಡ ಅಂಪೈರ್​ಗಳಾಗಿ ಎಂಬುದು ವಿಶೇಷ. ವಿರಾಟ್ ಕೊಹ್ಲಿಯ ಜೊತೆಗೆ ಕ್ರಿಕೆಟ್​ ಕೆರಿಯರ್ ಆರಂಭಿಸಿದ್ದ ತನ್ಮಯ್ ಶ್ರೀವಾಸ್ತವ್ (33 ವರ್ಷ) ಮತ್ತು ಅಜಿತೇಶ್ ಅರ್ಗಲ್ (34 ವರ್ಷ) ಕೆಲ ವರ್ಷಗಳ ಹಿಂದೆ ವೃತ್ತಿ ಬದುಕಿಗೆ ವಿದಾಯ ಹೇಳಿದ್ದರು.

ಇದೀಗ ಈ ಇಬ್ಬರು ಕ್ರಿಕೆಟಿಗರು ಬಿಸಿಸಿಐ ನಡೆಸಿದ ಅಂಪೈರಿಂಗ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಅದರಂತೆ ಅಜಿತೇಶ್ ಮತ್ತು ತನ್ಮಯ್ ದೇಶೀಯ ಅಂಗಳದಲ್ಲಿ ಅಂಪೈರ್​ಗಳಾಗಿ ಕಾಣಿಸಿಕೊಳ್ಳುವ ದಿನ ದೂರವಿಲ್ಲ.

ತನ್ಮಯ್ ಶ್ರೀವಾಸ್ತವ್ – ಅಜಿತೇಶ್ ಅರ್ಗಲ್

ಬಿಸಿಸಿಐ ಸಮಿತಿಯ ಭಾಗ:

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಅಜಿತೇಶ್ ಮತ್ತು ತನ್ಮಯ್ ಅವರು ಆಗಸ್ಟ್ 17-19 ರವರೆಗೆ ಅಹಮದಾಬಾದ್‌ನಲ್ಲಿ ನಡೆಯಲಿರುವ ಬಿಸಿಸಿಐ ಓರಿಯಂಟೇಶನ್ ಕಾರ್ಯಕ್ರಮ ಮತ್ತು ಸೆಮಿನಾರ್‌ಗಳಲ್ಲಿ ಭಾಗವಹಿಸಲಿದ್ದಾರೆ. ಆ ಬಳಿಕ ಮಂಡಳಿ ಆಯೋಜಿಸುವ ಪಂದ್ಯಗಳಲ್ಲಿ ಅಧಿಕೃತವಾಗಿ ಕಾಣಿಸಿಕೊಳ್ಳಲಿದ್ದಾರೆ.

ಅದರಂತೆ ವಿರಾಟ್ ಕೊಹ್ಲಿಯ ಸಹ ಆಟಗಾರರು ಪ್ರಥಮ ದರ್ಜೆ ಪಂಧ್ಯಗಳಲ್ಲಿ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಇದಾದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅಂಪೈರಿಂಗ್ ಮಾಡಬೇಕೆಂದರೆ ಐಸಿಸಿ ನಡೆಸುವ ತೀರ್ಪುಗಾರರ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕಾಗುತ್ತದೆ. ಹೀಗಾಗಿ ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾದ ಈ ಇಬ್ಬರು ಆಟಗಾರರು ಅಂತಾರಾಷ್ಟ್ರೀಯ ಪಂದ್ಯಗಳಲ್ಲೂ ಅಂಪೈರ್​ಗಳಾಗಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ