AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕಿಂಗ್ ಕೊಹ್ಲಿಯ ಸಹ ಆಟಗಾರರು ಈಗ ಅಂಪೈರ್ಸ್​..!

ಅಜಿತೇಶ್ ಮತ್ತು ತನ್ಮಯ್ ಅವರು ಆಗಸ್ಟ್ 17-19 ರವರೆಗೆ ಅಹಮದಾಬಾದ್‌ನಲ್ಲಿ ನಡೆಯಲಿರುವ ಬಿಸಿಸಿಐ ಓರಿಯಂಟೇಶನ್ ಕಾರ್ಯಕ್ರಮ ಮತ್ತು ಸೆಮಿನಾರ್‌ಗಳಲ್ಲಿ ಭಾಗವಹಿಸಲಿದ್ದಾರೆ.

Virat Kohli: ಕಿಂಗ್ ಕೊಹ್ಲಿಯ ಸಹ ಆಟಗಾರರು ಈಗ ಅಂಪೈರ್ಸ್​..!
Team India
TV9 Web
| Edited By: |

Updated on: Aug 01, 2023 | 5:28 PM

Share

2008 ರಲ್ಲಿ ವಿರಾಟ್ ಕೊಹ್ಲಿ (Virat Kohli) ನಾಯಕತ್ವದಲ್ಲಿ ಭಾರತ ಕಿರಿಯರ ತಂಡ ಅಂಡರ್​ 19 ವಿಶ್ವಕಪ್​ನಲ್ಲಿ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಅಂದು ಕೊಹ್ಲಿಯ ಜೊತೆಗಿದ್ದ ಇಬ್ಬರು ಆಟಗಾರರು ಇದೀಗ ಹೊಸ ಇನಿಂಗ್ಸ್​ ಆರಂಭಿಸುತ್ತಿದ್ದಾರೆ. ಅದು ಕೂಡ ಅಂಪೈರ್​ಗಳಾಗಿ ಎಂಬುದು ವಿಶೇಷ. ವಿರಾಟ್ ಕೊಹ್ಲಿಯ ಜೊತೆಗೆ ಕ್ರಿಕೆಟ್​ ಕೆರಿಯರ್ ಆರಂಭಿಸಿದ್ದ ತನ್ಮಯ್ ಶ್ರೀವಾಸ್ತವ್ (33 ವರ್ಷ) ಮತ್ತು ಅಜಿತೇಶ್ ಅರ್ಗಲ್ (34 ವರ್ಷ) ಕೆಲ ವರ್ಷಗಳ ಹಿಂದೆ ವೃತ್ತಿ ಬದುಕಿಗೆ ವಿದಾಯ ಹೇಳಿದ್ದರು.

ಇದೀಗ ಈ ಇಬ್ಬರು ಕ್ರಿಕೆಟಿಗರು ಬಿಸಿಸಿಐ ನಡೆಸಿದ ಅಂಪೈರಿಂಗ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಅದರಂತೆ ಅಜಿತೇಶ್ ಮತ್ತು ತನ್ಮಯ್ ದೇಶೀಯ ಅಂಗಳದಲ್ಲಿ ಅಂಪೈರ್​ಗಳಾಗಿ ಕಾಣಿಸಿಕೊಳ್ಳುವ ದಿನ ದೂರವಿಲ್ಲ.

ತನ್ಮಯ್ ಶ್ರೀವಾಸ್ತವ್ – ಅಜಿತೇಶ್ ಅರ್ಗಲ್

ಬಿಸಿಸಿಐ ಸಮಿತಿಯ ಭಾಗ:

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಅಜಿತೇಶ್ ಮತ್ತು ತನ್ಮಯ್ ಅವರು ಆಗಸ್ಟ್ 17-19 ರವರೆಗೆ ಅಹಮದಾಬಾದ್‌ನಲ್ಲಿ ನಡೆಯಲಿರುವ ಬಿಸಿಸಿಐ ಓರಿಯಂಟೇಶನ್ ಕಾರ್ಯಕ್ರಮ ಮತ್ತು ಸೆಮಿನಾರ್‌ಗಳಲ್ಲಿ ಭಾಗವಹಿಸಲಿದ್ದಾರೆ. ಆ ಬಳಿಕ ಮಂಡಳಿ ಆಯೋಜಿಸುವ ಪಂದ್ಯಗಳಲ್ಲಿ ಅಧಿಕೃತವಾಗಿ ಕಾಣಿಸಿಕೊಳ್ಳಲಿದ್ದಾರೆ.

ಅದರಂತೆ ವಿರಾಟ್ ಕೊಹ್ಲಿಯ ಸಹ ಆಟಗಾರರು ಪ್ರಥಮ ದರ್ಜೆ ಪಂಧ್ಯಗಳಲ್ಲಿ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಇದಾದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅಂಪೈರಿಂಗ್ ಮಾಡಬೇಕೆಂದರೆ ಐಸಿಸಿ ನಡೆಸುವ ತೀರ್ಪುಗಾರರ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕಾಗುತ್ತದೆ. ಹೀಗಾಗಿ ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾದ ಈ ಇಬ್ಬರು ಆಟಗಾರರು ಅಂತಾರಾಷ್ಟ್ರೀಯ ಪಂದ್ಯಗಳಲ್ಲೂ ಅಂಪೈರ್​ಗಳಾಗಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್