AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಕಿಂಗ್ ಕೊಹ್ಲಿಯ ಸಹ ಆಟಗಾರರು ಈಗ ಅಂಪೈರ್ಸ್​..!

ಅಜಿತೇಶ್ ಮತ್ತು ತನ್ಮಯ್ ಅವರು ಆಗಸ್ಟ್ 17-19 ರವರೆಗೆ ಅಹಮದಾಬಾದ್‌ನಲ್ಲಿ ನಡೆಯಲಿರುವ ಬಿಸಿಸಿಐ ಓರಿಯಂಟೇಶನ್ ಕಾರ್ಯಕ್ರಮ ಮತ್ತು ಸೆಮಿನಾರ್‌ಗಳಲ್ಲಿ ಭಾಗವಹಿಸಲಿದ್ದಾರೆ.

Virat Kohli: ಕಿಂಗ್ ಕೊಹ್ಲಿಯ ಸಹ ಆಟಗಾರರು ಈಗ ಅಂಪೈರ್ಸ್​..!
Team India
TV9 Web
| Edited By: |

Updated on: Aug 01, 2023 | 5:28 PM

Share

2008 ರಲ್ಲಿ ವಿರಾಟ್ ಕೊಹ್ಲಿ (Virat Kohli) ನಾಯಕತ್ವದಲ್ಲಿ ಭಾರತ ಕಿರಿಯರ ತಂಡ ಅಂಡರ್​ 19 ವಿಶ್ವಕಪ್​ನಲ್ಲಿ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಅಂದು ಕೊಹ್ಲಿಯ ಜೊತೆಗಿದ್ದ ಇಬ್ಬರು ಆಟಗಾರರು ಇದೀಗ ಹೊಸ ಇನಿಂಗ್ಸ್​ ಆರಂಭಿಸುತ್ತಿದ್ದಾರೆ. ಅದು ಕೂಡ ಅಂಪೈರ್​ಗಳಾಗಿ ಎಂಬುದು ವಿಶೇಷ. ವಿರಾಟ್ ಕೊಹ್ಲಿಯ ಜೊತೆಗೆ ಕ್ರಿಕೆಟ್​ ಕೆರಿಯರ್ ಆರಂಭಿಸಿದ್ದ ತನ್ಮಯ್ ಶ್ರೀವಾಸ್ತವ್ (33 ವರ್ಷ) ಮತ್ತು ಅಜಿತೇಶ್ ಅರ್ಗಲ್ (34 ವರ್ಷ) ಕೆಲ ವರ್ಷಗಳ ಹಿಂದೆ ವೃತ್ತಿ ಬದುಕಿಗೆ ವಿದಾಯ ಹೇಳಿದ್ದರು.

ಇದೀಗ ಈ ಇಬ್ಬರು ಕ್ರಿಕೆಟಿಗರು ಬಿಸಿಸಿಐ ನಡೆಸಿದ ಅಂಪೈರಿಂಗ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಅದರಂತೆ ಅಜಿತೇಶ್ ಮತ್ತು ತನ್ಮಯ್ ದೇಶೀಯ ಅಂಗಳದಲ್ಲಿ ಅಂಪೈರ್​ಗಳಾಗಿ ಕಾಣಿಸಿಕೊಳ್ಳುವ ದಿನ ದೂರವಿಲ್ಲ.

ತನ್ಮಯ್ ಶ್ರೀವಾಸ್ತವ್ – ಅಜಿತೇಶ್ ಅರ್ಗಲ್

ಬಿಸಿಸಿಐ ಸಮಿತಿಯ ಭಾಗ:

ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಅಜಿತೇಶ್ ಮತ್ತು ತನ್ಮಯ್ ಅವರು ಆಗಸ್ಟ್ 17-19 ರವರೆಗೆ ಅಹಮದಾಬಾದ್‌ನಲ್ಲಿ ನಡೆಯಲಿರುವ ಬಿಸಿಸಿಐ ಓರಿಯಂಟೇಶನ್ ಕಾರ್ಯಕ್ರಮ ಮತ್ತು ಸೆಮಿನಾರ್‌ಗಳಲ್ಲಿ ಭಾಗವಹಿಸಲಿದ್ದಾರೆ. ಆ ಬಳಿಕ ಮಂಡಳಿ ಆಯೋಜಿಸುವ ಪಂದ್ಯಗಳಲ್ಲಿ ಅಧಿಕೃತವಾಗಿ ಕಾಣಿಸಿಕೊಳ್ಳಲಿದ್ದಾರೆ.

ಅದರಂತೆ ವಿರಾಟ್ ಕೊಹ್ಲಿಯ ಸಹ ಆಟಗಾರರು ಪ್ರಥಮ ದರ್ಜೆ ಪಂಧ್ಯಗಳಲ್ಲಿ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಇದಾದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅಂಪೈರಿಂಗ್ ಮಾಡಬೇಕೆಂದರೆ ಐಸಿಸಿ ನಡೆಸುವ ತೀರ್ಪುಗಾರರ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕಾಗುತ್ತದೆ. ಹೀಗಾಗಿ ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾದ ಈ ಇಬ್ಬರು ಆಟಗಾರರು ಅಂತಾರಾಷ್ಟ್ರೀಯ ಪಂದ್ಯಗಳಲ್ಲೂ ಅಂಪೈರ್​ಗಳಾಗಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

Follow Us
Web contact
Web contact

TV9 Kannada

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್