AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಕ್ಯುರಿಟಿ ಗಾರ್ಡ್​ನ ತಲೆಗೆ ಬಿದ್ದ ವಿರಾಟ್ ಕೊಹ್ಲಿಯ ಅಪ್ಪರ್ ಕಟ್ ಸಿಕ್ಸ್

Australia vs India, 1st Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್ ಪರ್ತ್​ನ ಒಪ್ಟಸ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 150 ರನ್​ಗಳಿಸಿದರೆ, ಆಸ್ಟ್ರೇಲಿಯಾ 104 ರನ್​ಗಳಿಗೆ ಆಲೌಟ್ ಆಗಿದೆ.

ಸೆಕ್ಯುರಿಟಿ ಗಾರ್ಡ್​ನ ತಲೆಗೆ ಬಿದ್ದ ವಿರಾಟ್ ಕೊಹ್ಲಿಯ ಅಪ್ಪರ್ ಕಟ್ ಸಿಕ್ಸ್
Virat Kohli
ಝಾಹಿರ್ ಯೂಸುಫ್
|

Updated on: Nov 24, 2024 | 1:23 PM

Share

ಪರ್ತ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಾರಿಸಿದ ಸಿಕ್ಸ್​ವೊಂದು ಸೆಕ್ಯುರಿಟಿ ಗಾರ್ಡ್​ನ ತಲೆಗೆ ಬಡಿದಿದೆ. ಒಪ್ಟಸ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ ದ್ವಿತೀಯ ಇನಿಂಗ್ಸ್​ನ 101ನೇ ಓವರ್‌ನಲ್ಲಿ ಮಿಚೆಲ್ ಸ್ಟಾರ್ಕ್ ಎಸೆತಕ್ಕೆ ವಿರಾಟ್ ಕೊಹ್ಲಿ ಅಪ್ಪರ್ ಕಟ್ ಶಾಟ್ ಬಾರಿಸಿದ್ದರು.

ಅತ್ತ ಚೆಂಡು ನೇರವಾಗಿ ಹೋಗಿ ಬೌಂಡರಿ ಬಳಿ ಸೆಕ್ಯುರಿಟಿಗೆ ಕೂತಿದ್ದ ಗಾರ್ಡ್​ ತಲೆಗೆ ಬಡಿದಿದೆ. ತಕ್ಷಣವೇ ಆಸ್ಟ್ರೇಲಿಯಾ ತಂಡದ ಫಿಸಿಯೋ ಸೆಕ್ಯುರಿಟಿ ಗಾರ್ಡ್​ನತ್ತ ತೆರಳಿ ಉಪಚರಿಸಿದರು. ಅಲ್ಲದೆ ಯಾವುದೇ ಗಂಭೀರ ಗಾಯವಾಗಿಲ್ಲ ಎಂದು ತಿಳಿದು ಬಂದಿದೆ.

ವಿರಾಟ್ ಕೊಹ್ಲಿಯ ಅಪ್ಪರ್ ಕಟ್ ಸಿಕ್ಸ್ ವಿಡಿಯೋ:

ಇನ್ನು ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮುಮದುವರೆಸಿದೆ. ಮೊದಲ ಇನಿಂಗ್ಸ್​ನಲ್ಲಿ ಕೇವಲ 150 ರನ್​ಗಳಿಗೆ ಆಲೌಟ್ ಆಗಿದ್ದ ಟೀಮ್ ಇಂಡಿಯಾ 2ನೇ ಇನಿಂಗ್ಸ್​ನಲ್ಲಿ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಭರ್ಜರಿ ಆರಂಭ ಒದಗಿಸಿದ್ದಾರೆ.

ಮೊದಲ ವಿಕೆಟ್​ಗೆ 201 ರನ್​ಗಳ ಜೊತೆಯಾಟವಾಡಿದ ಬಳಿಕ ಕೆಎಲ್ ರಾಹುಲ್ (77) ವಿಕೆಟ್ ಒಪ್ಪಿಸಿದರು. ಇನ್ನು ಯಶಸ್ವಿ ಜೈಸ್ವಾಲ್ 161 ರನ್​ಗಳ ಬೃಹತ್ ಇನಿಂಗ್ಸ್ ಆಡಿ ಟೀಮ್ ಇಂಡಿಯಾ ಮೊತ್ತವನ್ನು 300ರ ಗಡಿದಾಟಿಸಿದರು.

ಇದರ ನಡುವೆ ದೇವದತ್ ಪಡಿಕ್ಕಲ್ 25 ರನ್​ಗಳ ಕೊಡುಗೆ ನೀಡಿದರೆ, ರಿಷಭ್ ಪಂತ್ (1) ಹಾಗೂ ಧ್ರುವ್ ಜುರೇಲ್ (1) ನಿರಾಸೆ ಮೂಡಿಸಿದರು. ಸದ್ಯ ಕ್ರೀಸ್​ನಲ್ಲಿ ವಿರಾಟ್ ಕೊಹ್ಲಿ (40) ಹಾಗೂ ವಾಷಿಂಗ್ಟನ್ ಸುಂದರ್ (14) ಬ್ಯಾಟಿಂಗ್ ಮಾಡುತ್ತಿದ್ದು, ಟೀ ವಿರಾಮದ ವೇಳೆಗೆ ಭಾರತ ತಂಡವು 5 ವಿಕೆಟ್ ಕಳೆದುಕೊಂಡು 359 ರನ್ ಕಲೆಹಾಕಿದೆ.

ಅಲ್ಲದೆ ಮೊದಲ ಇನಿಂಗ್ಸ್​ನಲ್ಲಿನ 46 ರನ್​ಗಳ ಮುನ್ನಡೆಯೊಂದಿಗೆ ಭಾರತ ತಂಡವು ಒಟ್ಟು 405 ರನ್​ಗಳಿಸಿದ್ದು, ಮೂರನೇ ದಿನದಾಟದ ಅಂತ್ಯದವರೆಗೆ ಬ್ಯಾಟಿಂಗ್ ಮುಂದುವರೆಸಿದ ಆಸ್ಟ್ರೇಲಿಯಾಗೆ ಬೃಹತ್ ಮೊತ್ತದ ಗುರಿ ನೀಡುವ ಯೋಜನೆಯಲ್ಲಿದೆ.

ಭಾರತ ಪ್ಲೇಯಿಂಗ್ 11: ಜಸ್​ಪ್ರೀತ್ ಬುಮ್ರಾ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಇತಿಹಾಸ ನಿರ್ಮಿಸಿದ ರಿಷಭ್ ಪಂತ್

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ