AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಶತಕದ ಬಗ್ಗೆ ಯೋಚಿಸದಿದ್ದರೂ ಜನರು ಬಿಡಲಿಲ್ಲ: ದ್ರಾವಿಡ್ ಜೊತೆ ಕೊಹ್ಲಿಯ ಮನದಾಳದ ಮಾತು

Virat Kohli - Rahul Dravid: ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಹಾಗೂ ಭಾರತ ತಂಡ ಕೋಚ್ ರಾಹುಲ್ ದ್ರಾವಿಡ್ ಚಿಟ್ ಚಾಟ್ ನಡೆಸಿದ್ದರು.

Virat Kohli: ಶತಕದ ಬಗ್ಗೆ ಯೋಚಿಸದಿದ್ದರೂ ಜನರು ಬಿಡಲಿಲ್ಲ: ದ್ರಾವಿಡ್ ಜೊತೆ ಕೊಹ್ಲಿಯ ಮನದಾಳದ ಮಾತು
Virat Kohli
TV9 Web
| Edited By: |

Updated on: Mar 14, 2023 | 3:59 PM

Share

India vs Australia: ಅಹಮದಾಬಾದ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಇದು 2019 ರ ಬಳಿಕ ಕಿಂಗ್ ಕೊಹ್ಲಿ ಬ್ಯಾಟ್​ನಿಂದ  ಟೆಸ್ಟ್​ ಕ್ರಿಕೆಟ್​ನಲ್ಲಿ ಮೂಡಿಬಂದ ಮೊದಲ ಶತಕವಾಗಿದೆ. ಅಂದರೆ ಬರೋಬ್ಬರಿ 1205 ದಿನಗಳ ಬಳಿಕ ವಿರಾಟ್ ಬ್ಯಾಟ್​ನಿಂದ ಸೆಂಚುರಿ ಬಾರಿಸಿದ್ದಾರೆ. ಇದರ ನಡುವೆ ತಾನು ಎದುರಿಸಿದ ಪ್ರಶ್ನೆಗಳ ಬಗ್ಗೆ ಖುದ್ದು ವಿರಾಟ್ ಕೊಹ್ಲಿ ಮನಬಿಚ್ಚಿ ಮಾತನಾಡಿದ್ದಾರೆ. ಈ ವಿಶೇಷ ಸಂವಾದದ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ವೆಬ್​ಸೈಟ್​ನಲ್ಲಿ ಹಂಚಿಕೊಂಡಿದೆ.

ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಹಾಗೂ ಭಾರತ ತಂಡ ಕೋಚ್ ರಾಹುಲ್ ದ್ರಾವಿಡ್ ಚಿಟ್ ಚಾಟ್ ನಡೆಸಿದ್ದರು. ಈ ವೇಳೆ ದೀರ್ಘಾವಧಿಯವರೆಗೆ ಶತಕ ಬಾರಿಸದಿರುವುದು ಕಷ್ಟಕರವಾಗಿತ್ತಾ? ಎಂಬ ಪ್ರಶ್ನೆಯನ್ನು ಟೀಮ್ ಇಂಡಿಯಾ ಕೋಚ್ ಕೊಹ್ಲಿಯ ಮುಂದಿಟ್ಟಿದ್ದರು.

ಈ ಪ್ರಶ್ನೆಗೆ ಉತ್ತರಿಸಿದ ವಿರಾಟ್ ಕೊಹ್ಲಿ, ನಿಜ ಹೇಳಬೇಕೆಂದರೆ, ನನ್ನದೇ ಕೆಲ ನ್ಯೂನತೆಗಳಿಂದಾಗಿ ನಾನು ಸ್ವಲ್ಪ ಮಟ್ಟಿಗೆ ಹಿನ್ನಡೆ ಅನುಭವಿಸಿದ್ದೇನೆ. ನಾವೆಲ್ಲರೂ ಕೆಲವು ಹಂತದಲ್ಲಿ ಅಥವಾ ಇನ್ನೊಂದು ಹಂತಗಳಲ್ಲಿ ಇಂತಹ ಸಮಸ್ಯೆಗಳನ್ನು ಎದುರಿಸಿದ್ದೇವೆ. ನಾನು ಅದನ್ನು ಸ್ವಲ್ಪ ಮಟ್ಟಿಗೆ ದೀರ್ಘಾವಧಿಗೆ ಕೊಂಡೊಯ್ದಿದ್ದೇನೆ ಎಂದು ಭಾವಿಸುತ್ತೇನೆ ಎಂದರು.

ಇದನ್ನೂ ಓದಿ
Image
Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ
Image
Rishabh Pant: ಅಪಘಾತದ ಬಳಿಕ ಜೀವನ ಹೇಗಿದೆ? ಮುಕ್ತವಾಗಿ ಮಾತನಾಡಿದ ರಿಷಭ್ ಪಂತ್
Image
IPL 2023: ಐಪಿಎಲ್​ ವೇಳೆ ಜೊತೆಯಾಗಿ ಕಾಣಿಸಿಕೊಳ್ಳಲಿದ್ದಾರೆ RCB ತ್ರಿಮೂರ್ತಿಗಳು
Image
IPL 2023: ಐಪಿಎಲ್​ನಿಂದ ಬುಮ್ರಾ ಔಟ್: ಮುಂಬೈ ಇಂಡಿಯನ್ಸ್​ ಮುಂದಿದೆ 3 ಆಯ್ಕೆಗಳು

ಇದೇ ವೇಳೆ ನಾನು ಎಂದಿಗೂ ಮೈಲಿಗಲ್ಲುಗಳಿಗಾಗಿ ಆಡಲಿಲ್ಲ ಎಂದು ತಿಳಿಸಿರುವ ಕೊಹ್ಲಿ, ಶತಕ ಹಾಗೂ ದಾಖಲೆಗಳು ಎಂದಿಗೂ ನನ್ನ ಮನಸ್ಸಿರಲಿಲ್ಲ. ಶತಕ ಗಳಿಸುವ ಮುನ್ನ ನಾನು ತಂಡದ ಬಗ್ಗೆ ಯೋಚಿಸುತ್ತಿದ್ದೆ. ತಂಡಕ್ಕೆ ಏನು ಅಗತ್ಯವೋ ಅದಕ್ಕೆ ತಕ್ಕಂತೆ ಆಡುತ್ತಿದ್ದೆ.

ಹೀಗಾಗಿ ನಾನು ಯಾವತ್ತೂ ಶತಕದ ಬಗ್ಗೆ ಯೋಚಿಸುತ್ತಿರಲಿಲ್ಲ. ಆದರೆ ನಾನು ಯೋಚಿಸದಿದ್ದರೂ ಜನರು ಮಾತ್ರ ಅದನ್ನು ಮರೆಯಲು ಬಿಡುತ್ತಿರಲಿಲ್ಲ. ಟೆಸ್ಟ್‌ನಲ್ಲಿ ಶತಕ ಸಿಡಿಸದಿದ್ದಾಗ, ಈ ಪ್ರಶ್ನೆ ಎಲ್ಲೆಡೆ ಕೇಳಲಾಗುತ್ತಿತ್ತು. ಬಸ್ ಚಾಲಕ, ಹೋಟೆಲ್ ಸಿಬ್ಬಂದಿ ಅಥವಾ ಲಿಫ್ಟ್‌ಮ್ಯಾನ್…ಹೀಗೆ ಪ್ರತಿಯೊಬ್ಬರು ನೀವು ಟೆಸ್ಟ್‌ನಲ್ಲಿ ಯಾವಾಗ ಶತಕ ಬಾರಿಸುತ್ತೀರಿ ಎಂದು ನನ್ನನ್ನು ಪ್ರಶ್ನಿಸುತ್ತಿದ್ದರು ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

ಇದೀಗ ಈ ಎಲ್ಲಾ ಪ್ರಶ್ನೆಗಳಿಗೆ ಕಿಂಗ್ ಕೊಹ್ಲಿ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಮೂರುವರೆ ವರ್ಷಗಳ ಬಳಿಕ ಬ್ಯಾಟ್ ಮೇಲೆತ್ತಿದ್ದಾರೆ. ಅಷ್ಟೇ ಅಲ್ಲದೆ ಟೆಸ್ಟ್ ಕೆರಿಯರ್​ನಲ್ಲಿ 28 ಶತಕಗಳ ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ: Virat Kohli: 40 ವರ್ಷಗಳ ಹಳೆಯ ಸಾಧನೆಯನ್ನು ಪುನರಾವರ್ತಿಸಿದ ವಿರಾಟ್ ಕೊಹ್ಲಿ

ಹಾಗೆಯೇ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 75 ಶತಕ ಸಿಡಿಸಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಕಿಂಗ್ ಕೊಹ್ಲಿ ಕೂಡ ಈ ವಿಶೇಷ ಸಾಧಕರಲ್ಲಿ ಗುರುತಿಸಿಕೊಂಡಿದ್ದಾರೆ.

Follow Us
Web contact
Web contact

TV9 Kannada

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!