AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಐಪಿಎಲ್ ಗೆದ್ದ ನಂತರ ವಿರಾಟ್ ಕೊಹ್ಲಿ ಇನ್​ಸ್ಟಾಗ್ರಾಮ್​​​ನಲ್ಲಿ ದೀರ್ಘ ಪೋಸ್ಟ್: ಏನು ಹೇಳಿದ್ದಾರೆ ನೋಡಿ

RCB vs PBKS, IPL 2025 Final: ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ ಫೈನಲ್ ಗೆಲುವಿನ ನಂತರ ಆರ್ಸಿಬಿ ಸ್ಟಾರ್ ವಿರಾಟ್ ಕೊಹ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿದ್ದಾರೆ. ನಾಲ್ಕು ಫೋಟೋಗಳನ್ನು ಹಂಚಿಕೊಂಡ ಅವರು ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ‘ಈ ಕನಸನ್ನು ನನಸಾಗಿಸಿದ ತಂಡ ಇದು. ಈ ಋತುವನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Virat Kohli: ಐಪಿಎಲ್ ಗೆದ್ದ ನಂತರ ವಿರಾಟ್ ಕೊಹ್ಲಿ ಇನ್​ಸ್ಟಾಗ್ರಾಮ್​​​ನಲ್ಲಿ ದೀರ್ಘ ಪೋಸ್ಟ್: ಏನು ಹೇಳಿದ್ದಾರೆ ನೋಡಿ
Virat Kohli Instagram Post
Vinay Bhat
|

Updated on: Jun 04, 2025 | 11:29 AM

Share

ಬೆಂಗಳೂರು (ಜೂ. 04): ಮಂಗಳವಾರ ರಾತ್ರಿ ವಿರಾಟ್ ಕೊಹ್ಲಿ (Virat Kohli) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬಹುವರ್ಷದ ಕನಸು ನನಸಾಯಿತು. 17 ವರ್ಷಗಳ ದೀರ್ಘ ಕಾಯುವಿಕೆಯ ನಂತರ, ಆರ್‌ಸಿಬಿ ಮೊದಲ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಶಸ್ತಿಯನ್ನು ಗೆದ್ದಿತು, ಮತ್ತು ಇದರೊಂದಿಗೆ ವಿರಾಟ್ ಕೊಹ್ಲಿಯ ವರ್ಷಗಳ ಹಳೆಯ ಕನಸು ಕೂಡ ಅಂತಿಮವಾಗಿ ನನಸಾಯಿತು. ವಿರಾಟ್ ಮೊದಲ ಸೀಸನ್‌ನಿಂದ ಆರ್‌ಸಿಬಿ ತಂಡದ ಪರವಾಗಿ ಆಡುತ್ತಿದ್ದಾರೆ. ಈ ಐತಿಹಾಸಿಕ ಗೆಲುವಿನ ನಂತರ ಕೊಹ್ಲಿ ತುಂಬಾ ಭಾವುಕರಾಗಿ ಕಂಡುಬಂದರು. ಪಂದ್ಯ ಮುಗಿಯುವ ಮೊದಲೇ ಹಾಗೂ ಆರ್​ಸಿಬಿಗೆ ಗೆಲುವು ಖಚಿತವಾಗುತ್ತಿದ್ದಂತೆ ಕೊಹ್ಲಿಯ ಕಣ್ಣುಗಳಲ್ಲಿ ನೀರು ತುಂಬಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ವಿರಾಟ್‌ಗೆ ಪ್ರತಿಕ್ರಿಯೆ

ಗೆಲುವಿನ ನಂತರ ವಿರಾಟ್ ಕೊಹ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿದ್ದಾರೆ. ನಾಲ್ಕು ಫೋಟೋಗಳನ್ನು ಹಂಚಿಕೊಂಡ ಅವರು ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ‘ಈ ಕನಸನ್ನು ನನಸಾಗಿಸಿದ ತಂಡ ಇದು. ಈ ಋತುವನ್ನು ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಕಳೆದ ಎರಡೂವರೆ ತಿಂಗಳುಗಳಿಂದ ನಾವು ಹೃದಯದಿಂದ ಆಡಿದ್ದೇವೆ ಮತ್ತು ಪ್ರತಿ ಕ್ಷಣವನ್ನು ಆನಂದಿಸಿದ್ದೇವೆ. ಈ ಗೆಲುವು ಪ್ರತಿಯೊಂದು ಕಷ್ಟದ ಸಮಯದಲ್ಲೂ ನಮ್ಮೊಂದಿಗೆ ನಿಂತ ಅಭಿಮಾನಿಗಳಿಗೆ. ಈ ಗೆಲುವು ನಾವು ಈ ತಂಡಕ್ಕಾಗಿ ಮೈದಾನದಲ್ಲಿ ನೀಡಿದ ಪ್ರತಿಯೊಂದು ಪ್ರಯತ್ನಕ್ಕೂ’ ಎಂದು ಬರೆದಿದ್ದಾರೆ.

ಇದನ್ನೂ ಓದಿ
Image
ಐಪಿಎಲ್ 2025 ರಲ್ಲಿ ಪರ್ಪಲ್ ಕ್ಯಾಪ್ ಗೆದ್ದ ಕನ್ನಡಿಗ ಪ್ರಸಿದ್ಧ್ ಕೃಷ್ಣ
Image
ವಿನ್ನರ್- ರನ್ನರ್ ಅಪ್ ತಂಡಗಳಿಗೆ ಸಿಕ್ಕ ಬಹುಮಾನದ ಮೊತ್ತವೆಷ್ಟು?
Image
ಇದು ಕೇವಲ ಕ್ಯಾಚ್ ಅಲ್ಲ.. ಕಪ್: 18 ವರ್ಷಗಳ ಕಾಯುವಿಕೆಗೆ ಕೊನೆ ಹಾಡಿದ ಕ್ಷಣ
Image
RCB ಗೆಲುವು ಖಚಿತವಾಗುತ್ತಿದ್ದಂತೆ ಮೈದಾನದಲ್ಲೇ ಕಣ್ಣೀರಿಟ್ಟ ವಿರಾಟ್ ಕೊಹ್ಲಿ
View this post on Instagram

A post shared by Virat Kohli (@virat.kohli)

ಮೂರು ಬಾರಿ ಫೈನಲ್‌ನಲ್ಲಿ ಸೋತರು:

2009 ರಲ್ಲಿ ಆರ್‌ಸಿಬಿ ಮೊದಲ ಬಾರಿಗೆ ಫೈನಲ್ ತಲುಪಿತು. ಆ ಸಂದರ್ಭ ಡೆಕ್ಕನ್ ಚಾರ್ಜರ್ಸ್ ವಿರುದ್ಧ ಸೋತಿತು. ನಂತರ 2011 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪ್ರಶಸ್ತಿ ಪಂದ್ಯದಲ್ಲಿ ಆರ್‌ಸಿಬಿಯನ್ನು ಸೋಲಿಸಿತು. 2016 ರ ಋತುವಿನಲ್ಲಿ ಆರ್‌ಸಿಬಿ ಉತ್ತಮ ಫಾರ್ಮ್‌ನಲ್ಲಿತ್ತು. ವಿರಾಟ್​ಗೆ ಕೂಡ ಅದು ಅದ್ಭುತ ಸೀಸನ್ ಆಗಿತ್ತು. ಫೈನಲ್‌ನಲ್ಲಿ ಬೆಂಗಳೂರನ್ನು ಪ್ರಬಲ ಸ್ಪರ್ಧಿ ಎಂದೇ ಪರಿಗಣಿಸಲಾಗಿತ್ತು. ತಂಡವು ಒಂದು ಸಮಯದಲ್ಲಿ ಗೆಲುವಿನ ಹತ್ತಿರ ಕೂಡ ಬಂದಿತ್ತು. ಆದರೆ, ಅಂತಿಮವಾಗಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲು ಅನುಭವಿಸಬೇಕಾಯಿತು. ಅದರ ನಂತರ ಆರ್​ಸಿಬಿಯ ಕೆಟ್ಟ ಫಾರ್ಮ್ ಪ್ರಾರಂಭವಾಯಿತು. ತಂಡವು 2020, 2021, 2022 ಮತ್ತು 2024 ರಲ್ಲಿ ಪ್ಲೇಆಫ್ ತಲುಪಿತು ಆದರೆ ಒಮ್ಮೆಯೂ ಫೈನಲ್ ತಲುಪಲು ಸಾಧ್ಯವಾಗಲಿಲ್ಲ.

RCB vs PBKS Final: ಇದು ಕೇವಲ ಕ್ಯಾಚ್ ಅಲ್ಲ.. ಕಪ್: ಇದು 18 ವರ್ಷಗಳ ಕಾಯುವಿಕೆಗೆ ಕೊನೆ ಹಾಡಿದ ಕ್ಷಣ

ಬೆಂಗಳೂರಿನಲ್ಲಿ ವಿಜಯೋತ್ಸವ ಮೆರವಣಿಗೆ:

ಮೊದಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದ ನಂತರ, ಆರ್‌ಸಿಬಿ ತನ್ನ ಅಭಿಮಾನಿಗಳೊಂದಿಗೆ ಈ ಸಂಭ್ರಮವನ್ನು ಆಚರಿಸಲು ಬಯಸಿದೆ. ಜೂನ್ 4 ರ ಬುಧವಾರ, ಆರ್‌ಸಿಬಿ ಬೆಂಗಳೂರಿನಲ್ಲಿ ಟ್ರೋಫಿಯೊಂದಿಗೆ ತೆರೆದ ಬಸ್​ನಲ್ಲಿ ಮೆರವಣಿಗೆ ನಡೆಸಲಿದೆ. ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಈ ಬಸ್ ಮೆರವಣಿಗೆ ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಗಲಿದೆ. ಈ ಬಸ್ ಮೆರವಣಿಗೆಯ ಆರಂಭಿಕ ಸ್ಥಳ ವಿಧಾನಸೌಧವಾಗಿದ್ದರೆ, ಅಂತಿಮ ಸ್ಥಳ ಎಂ ಚಿನ್ನಸ್ವಾಮಿ ಕ್ರೀಡಾಂಗಣವಾಗಿರುತ್ತದೆ. ಆರ್‌ಸಿಬಿ ಸ್ವತಃ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಮಾಹಿತಿಯನ್ನು ನೀಡಿದೆ.

ಫೈನಲ್ ಪಂದ್ಯ ಹೇಗಿತ್ತು?:

ಐಪಿಎಲ್ ಫೈನಲ್‌ನಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 190 ರನ್ ಗಳಿಸಿತು. ವಿರಾಟ್ ಕೊಹ್ಲಿ 3 ಬೌಂಡರಿಗಳ ಸಹಾಯದಿಂದ ಆರ್‌ಸಿಬಿ ಪರ ಅತಿ ಹೆಚ್ಚು 43 ರನ್ ಗಳಿಸಿದರು. ಪಂಜಾಬ್ ಪರ ಕೈಲ್ ಜೇಮಿಸನ್ ಮತ್ತು ಅರ್ಶ್‌ದೀಪ್ ಸಿಂಗ್ 3-3 ವಿಕೆಟ್ ಪಡೆದರು. 191 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಪಿಬಿಕೆಎಸ್ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 184 ರನ್ ಗಳಿಸಲು ಸಾಧ್ಯವಾಯಿತು ಮತ್ತು ಪಂದ್ಯವನ್ನು 6 ರನ್‌ಗಳಿಂದ ಸೋತಿತು. ಪಂಜಾಬ್ ಪರ ಶಶಾಂಕ್ ಸಿಂಗ್ ಅಜೇಯ 61 ರನ್ ಗಳಿಸಿದರು. ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್ ಮತ್ತು ಕೃನಾಲ್ ಪಾಂಡ್ಯ 2-2 ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ