AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಪರ ಇನಿಂಗ್ಸ್ ಆರಂಭಿಸುವವರು ಯಾರು?

IPL 2026 RCB vs GT: ಐಪಿಎಲ್​ನ 71ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಪರ ಇನಿಂಗ್ಸ್ ಆರಂಭಿಸುವರು ಯಾರು ಎಂಬುದೇ ಈಗ ಕುತೂಹಲ. ಏಕೆಂದರೆ ಆರ್​ಸಿಬಿ ತಂಡದಲ್ಲಿ ಒಟ್ಟು ಮೂವರು ಆರಂಭಿಕ ದಾಂಡಿಗರಿದ್ದಾರೆ. ಅವರೆಂದರೆ ಫಿಲ್ ಸಾಲ್ಟ್, ವೆಂಕಟೇಶ್ ಅಯ್ಯರ್ ಹಾಗೂ ಜೋರ್ಡನ್ ಕಾಕ್ಸ್​.

RCB ಪರ ಇನಿಂಗ್ಸ್ ಆರಂಭಿಸುವವರು ಯಾರು?
Rcb Image Credit source: IPL
ಝಾಹಿರ್ ಯೂಸುಫ್
|

Updated on:May 26, 2026 | 7:40 AM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹೈವೋಲ್ಟೇಜ್ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಧರ್ಮಶಾಲಾದ ಹೆಚ್​​ಪಿಸಿಎ ಮೈದಾನದಲ್ಲಿ ಇಂದು (ಮೇ 26) ನಡೆಯಲಿರುವ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ ಇನಿಂಗ್ಸ್ ಆರಂಭಿಸುವವರು ಯಾರು ಎಂಬುದೇ ಪ್ರಶ್ನೆ.

ಏಕೆಂದರೆ ಗಾಯದ ಕಾರಣ ಕಳೆದ ಕೆಲ ಪಂದ್ಯಗಳಿಂದ ಹೊರಗುಳಿದಿದ್ದ ಫಿಲ್ ಸಾಲ್ಟ್ ಇದೀಗ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಇದಾಗ್ಯೂ ಅವರು ಓಪನರ್ ಆಗಿ ಕಣಕ್ಕಿಳಿಯುವ ಬಗ್ಗೆ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಖಚಿತತೆ ನೀಡಿಲ್ಲ.

ಈ ಬಗ್ಗೆ ಮಾತನಾಡಿದ ರಜತ್ ಪಾಟಿದಾರ್, ಫಿಲ್ ಸಾಲ್ಟ್ ತಮ್ಮ ಬೆರಳಿನ ಗಾಯದಿಂದ ಚೇತರಿಸಿಕೊಂಡಿದ್ದು, ನೆಟ್ಸ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಆದರೆ, ಅವರು ಇನ್ನು ಕೂಡ ವೈದ್ಯಕೀಯ ತಂಡದ ನಿಗಾದಲ್ಲಿದ್ದು, ಧರ್ಮಶಾಲಾ ಪಿಚ್ ನೋಡಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

  • ಆರ್​ಸಿಬಿ ತಂಡದ ಆರಂಭಿಕ ಬ್ಯಾಟರ್​ಗಳು
  • ಫಿಲ್ ಸಾಲ್ಟ್
  • ಜೇಕಬ್ ಬೆಥೆಲ್ (ಗಾಯಾಳು)
  • ಜೋರ್ಡನ್ ಕಾಕ್ಸ್​
  • ವೆಂಕಟೇಶ್ ಅಯ್ಯರ್
  • ವಿರಾಟ್ ಕೊಹ್ಲಿ (ಆರಂಭಿಕನಾಗಿ ಕಣಕ್ಕಿಳಿಯುವುದು ಖಚಿತ)

ಅಂದರೆ ವಿರಾಟ್ ಕೊಹ್ಲಿ ಜೊತೆ ಫಿಲ್ ಸಾಲ್ಟ್ ಇನಿಂಗ್ಸ್ ಆರಂಭಿಸಲಿದ್ದಾರೆ ಎಂಬುದನ್ನು ಇನ್ನೂ ಕೂಡ ನಿರ್ಧರಿಸಲಾಗಿಲ್ಲ. ಪಿಚ್​ ಮೇಲ್ಮೈ ನೋಡಿದ ಬಳಿಕವಷ್ಟೇ ಅವರನ್ನು ಪ್ಲೇಯಿಂಗ್ ಇಲೆವೆನ್​ಗೆ ಸೇರಿಸಿಕೊಳ್ಳಬೇಕಾ ಅಥವಾ ಬೇಡವಾ ಎಂಬುದನ್ನು ನಿರ್ಧರಿಸಲಿದ್ದೇವೆ ಎಂದು ರಜತ್ ಪಾಟಿದಾರ್ ಹೇಳಿದ್ದಾರೆ.

ಈ ಹೇಳಿಕೆಯಿಂದಾಗಿಯೇ ಇದೀಗ ಆರ್​ಸಿಬಿ ಪರ ಇನಿಂಗ್ಸ್ ಆರಂಭಿಸುವವರು ಯಾರು ಎಂಬ ಗೊಂದಲ ಸೃಷ್ಟಿಯಾಗಿದೆ. ಏಕೆಂದರೆ ಸಾಲ್ಟ್ ಅನುಪಸ್ಥಿತಿಯಲ್ಲಿ ಕೆಲ ಮ್ಯಾಚ್​ಗಳಲ್ಲಿ ಜೇಕಬ್ ಬೆಥೆಲ್ ಇನಿಂಗ್ಸ್ ಆರಂಭಿಸಿದ್ದರು. ಇದೀಗ ಅವರು ಕೂಡ ಗಾಯಗೊಂಡು ತಂಡದಿಂದ ಹೊರಗುಳಿದಿದ್ದಾರೆ.

ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಅವರು ಕೂಡ ಕಾಣಿಸಿಕೊಳ್ಳುವುದಿಲ್ಲ. ಇತ್ತ ಜೇಕಬ್ ಬೆಥೆಲ್ ಗಾಯಗೊಂಡಿದ್ದ ಕಾರಣ ಸನ್​ರೈಸರ್ಸ್​ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ವೆಂಕಟೇಶ್ ಅಯ್ಯರ್ ಆರಂಭಿಕನಾಗಿ ಕಾಣಿಸಿಕೊಂಡಿದ್ದರು. ಸಿಕ್ಕ ಅವಕಾಶವನ್ನು ಬಳಸಿಕೊಂಡ ಅಯ್ಯರ್ ಉತ್ತಮ ಆರಂಭ ಒದಗಿಸುವಲ್ಲಿ ಯಶಸ್ವಿಯಾಗಿದ್ದರು.

ಇದೀಗ ಫಿಲ್ ಸಾಲ್ಟ್​​ಗೆ ಅವಕಾಶ ನೀಡಬೇಕಿದ್ದರೆ ಇನ್​ಫಾರ್ಮ್​ನಲ್ಲಿರುವ ವೆಂಕಟೇಶ್ ಅಯ್ಯರ್ ಅವರನ್ನು ಕೈ ಬಿಡಬೇಕಾಗಿ ಬರಬಹುದು. ಇಲ್ಲಾ ಇಂಪ್ಯಾಕ್ಟ್ ಪ್ಲೇಯರ್ ಲಿಸ್ಟ್​ನಲ್ಲಿರಿಸಬೇಕಾಗುತ್ತದೆ. ಹೀಗಾಗಿಯೇ ಇದೀಗ ಆರ್​ಸಿಬಿ ಮ್ಯಾನೇಜ್ಮೆಂಟ್​ಗೆ ಆರಂಭಿಕನ ಆಯ್ಕೆಯೇ ಗೊಂದಲವಾಗಿ ಮಾರ್ಪಟ್ಟಿದೆ.

ಇದೇ ಖಾರಣದಿಂದಾಗಿಯೇ  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್, ಆರಂಭಿಕ ಜೋಡಿಯನ್ನು ಇನ್ನೂ ಕೂಡ ನಿರ್ಧರಿಸಲಾಗಿಲ್ಲ ಎಂದು ತಿಳಿಸಿದ್ದಾರೆ. ಒಂದು ವೇಳೆ ಗಾಯದಿಂದ ಚೇತರಿಸಿಕೊಂಡಿರುವ ಸಾಲ್ಟ್​ಗೆ ಈ ಪಂದ್ಯದಲ್ಲಿ ಚಾನ್ಸ್ ನೀಡಲು ನಿರ್ಧರಿಸಿದರೆ, ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಇನಿಂಗ್ಸ್ ಆರಂಭಿಸಲಿದ್ದಾರೆ.

ಇದನ್ನೂ ಓದಿ: IPL 2026: ಐಪಿಎಲ್ ಇತಿಹಾಸದಲ್ಲೇ ಈ ರೀತಿಯ ಪ್ಲೇಆಫ್ ಇದೇ ಮೊದಲು..!

ಇಲ್ಲದಿದ್ದರೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಆರಂಭಿಕರಾಗಿ ಮುಂದುವರೆಸಲಿದ್ದಾರೆ. ಅಂದರೆ ಇಲ್ಲಿ ಫಿಲ್ ಸಾಲ್ಟ್ ಹಾಗೂ ವೆಂಕಟೇಶ್ ಅಯ್ಯರ್ ನಡುವೆ ನೇರ ಪೈಪೋಟಿ ಇದೆ. ಈ ಪೈಪೋಟಿಯ ಕಾರಣ ಆರಂಭಿಕನಾಗಿ ತಂಡದಲ್ಲಿರುವ ಮತ್ತೋರ್ವ ಆಟಗಾರ ಜೋರ್ಡನ್ ಕಾಕ್ಸ್ ಈ ಬಾರಿ ಕೂಡ ಅವಕಾಶ ಸಿಗುವುದಿಲ್ಲ ಎಂದೇ ಹೇಳಬಹುದು.

Published On - 7:27 am, Tue, 26 May 26

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರೇವತಿ ನಕ್ಷತ್ರಕ್ಕೆ ಶನಿ ಎಂಟ್ರಿ!
ರೇವತಿ ನಕ್ಷತ್ರಕ್ಕೆ ಶನಿ ಎಂಟ್ರಿ!
ಇಂದು ಹನುಮನಿಗೆ ಬೆಲ್ಲದ ದೀಪ ಹಚ್ಚಿದರೆ ಈ ರಾಶಿಯವರಿಗೆ ಭರ್ಜರಿ ಅದೃಷ್ಟ!
ಇಂದು ಹನುಮನಿಗೆ ಬೆಲ್ಲದ ದೀಪ ಹಚ್ಚಿದರೆ ಈ ರಾಶಿಯವರಿಗೆ ಭರ್ಜರಿ ಅದೃಷ್ಟ!
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ