AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ರಾರ್ ಅಹ್ಮದ್ ಸೆಲೆಬ್ರೇಷನ್​ನಲ್ಲಿ ತಪ್ಪೇನಿದೆ? ವೀರೇಂದ್ರ ಸೆಹ್ವಾಗ್ ಬೆಂಬಲ

India vs Pakistan: ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ 241 ರನ್​ ಕಲೆಹಾಕಿದರೆ, ಭಾರತ ತಂಡವು ಈ ಗುರಿಯನ್ನು ಕೇವಲ 42.3 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಗೆಲುವು ದಾಖಲಿಸಿದ್ದರು. ಈ ಪಂದ್ಯದಲ್ಲಿ ಗಿಲ್ ಅವರನ್ನು ಔಟ್ ಅಬ್ರಾರ್ ಅಹ್ಮದ್ ವಿಚಿತ್ರವಾಗಿ ಸಂಭ್ರಮಿಸಿದ್ದರು.

ಅಬ್ರಾರ್ ಅಹ್ಮದ್ ಸೆಲೆಬ್ರೇಷನ್​ನಲ್ಲಿ ತಪ್ಪೇನಿದೆ? ವೀರೇಂದ್ರ ಸೆಹ್ವಾಗ್ ಬೆಂಬಲ
Sehwag - Abrar
ಝಾಹಿರ್ ಯೂಸುಫ್
|

Updated on: Mar 11, 2025 | 2:53 PM

Share

ಭಾರತ ಮತ್ತು ಪಾಕಿಸ್ತಾನ್ ನಡುವಣ ಚಾಂಪಿಯನ್ಸ್ ಟ್ರೋಫಿ ಪಂದ್ಯದ ವೇಳೆ ಸಖತ್ ಸುದ್ದಿಯಾಗಿದ್ದು ಯುವ ಸ್ಪಿನ್ನರ್ ಅಬ್ರಾರ್ ಅಹ್ಮದ್. ಅದು ಸಹ ತನ್ನ ವಿಚಿತ್ರ ಶೈಲಿಯ ಸೆಲೆಬ್ರೇಷನ್​ನೊಂದಿಗೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ 2ನೇ ಇನಿಂಗ್ಸ್​ನ 17ನೇ ಓವರ್​ನ 3ನೇ ಎಸೆತದಲ್ಲಿ ಶುಭ್​ಮನ್ ಗಿಲ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿ ಅಬ್ರಾರ್ ಅಹ್ಮದ್ ಕಣ್ ಸನ್ನೆಯ ಮೂಲಕ ನಡಿ ಎಂದಿದ್ದರು.

ಪಾಕಿಸ್ತಾನ್ ಸ್ಪಿನ್ನರ್​ನ ಈ ವಿಚಿತ್ರ ಸೆಲೆಬ್ರೇಷನ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು. ಅಲ್ಲದೆ ಇದರಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದು ಅಬ್ರಾರ್ ಅಹ್ಮದ್ ಕೂಡ ಹೇಳಿದ್ದರು.

ಈ ವಿಚಾರ ಚರ್ಚೆಗೀಡಾಗುತ್ತಿದ್ದಂತೆ ಅಬ್ರಾರ್ ಅಹ್ಮದ್ ಅವರ ಸೆಲೆಬ್ರೇಷನ್​ನಲ್ಲಿ ಏನು ತಪ್ಪಿದೆ ಎಂದು ಪ್ರಶ್ನಿಸಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್. ಚಾನೆಲ್​ ಚರ್ಚೆಯೊಂದರಲ್ಲಿ ಕಾಣಿಸಿಕೊಂಡ ಸೆಹ್ವಾಗ್​ಗೆ ಪಾಕ್ ಸ್ಪಿನ್ನರ್​ನ ವಿಚಿತ್ರ ಸಂಭ್ರಮದ ಬಗ್ಗೆ ಕೇಳಲಾಯಿತು.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ಈ ವೇಳೆ ಮಾತನಾಡಿದ ಸೆಹ್ವಾಗ್, ನಿಜ ಹೇಳಬೇಕೆಂದರೆ ಅಬ್ರಾರ್ ಅತ್ಯುತ್ತಮ ಎಸೆತದ ಮೂಲಕ ಶುಭ್​ಮನ್ ಗಿಲ್ ಅವರನ್ನು ಔಟ್ ಮಾಡಿದ್ದರು. ಅದನ್ನು ನೀವು ಹೇಗೆ ಬೇಕಿದ್ದರೂ ಸಂಭ್ರಮಿಸಬಹುದು.

ಆತ ಯಾರಿಗೂ ಕೆಟ್ಟದಾಗಿ ಬೈದಿಲ್ಲ. ಏನನ್ನೂ ಸಹ ಹೇಳಿಲ್ಲ. ಆತ ಕಣ್ಸನ್ನೆ ಮೂಲಕ ಸೂಚನೆ ನೀಡಿದ್ದ. ಮುಂದಿನ ಪಂದ್ಯದಲ್ಲಿ ಬ್ಯಾಟ್ಸ್​ಮನ್ ಸಿಕ್ಸ್ ಸಿಡಿಸಿದ ಅದೇ ರೀತಿ ಸೂಚನೆ ನೀಡಬಹುದು ಅಷ್ಟೇ. ಇದರಲ್ಲಿ ತಪ್ಪೇನಿಲ್ಲ ಎಂದು ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.

ಈ ಮೂಲಕ ಅಬ್ರಾರ್ ಅಹ್ಮದ್ ಅವರ ಕಣ್ಸನ್ನೆಯ ಸಂಭ್ರಮಕ್ಕೆ ವೀರು ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಯಾರನ್ನೂ ಬೈಯ್ಯದೇ, ಏನನ್ನೂ ಹೇಳದೇ ಈ ರೀತಿಯಾಗಿ ಸಂಭ್ರಮಿಸುವುದರಲ್ಲಿ ಯಾವುದೇ ತಪ್ಪಿಲ್ಲ. ಇಂತಹ ಸೆಲೆಬ್ರೇಷನ್​ಗೆ ಬ್ಯಾಟ್ ಮೂಲಕ ಉತ್ತರ ನೀಡಿ ಬ್ಯಾಟ್ಸ್​ಮನ್ ಕೂಡ ಅದೇ ಶೈಲಿಯಲ್ಲಿ ಪ್ರತ್ಯುತ್ತರ ನೀಡಬಹುದು ಎಂದು ಸೆಹ್ವಾಗ್ ಹೇಳಿದ್ದಾರೆ.

ಇದನ್ನೂ ಓದಿ: ಯುಜ್ವೇಂದ್ರ ಚಹಲ್ ಲವ್ವಿ ಡವ್ವಿ: ಪತಿಯ ಫೋಟೋ ಮತ್ತೆ ಹಂಚಿಕೊಂಡ ಧನಶ್ರೀ ವರ್ಮಾ

ಇನ್ನು ಈ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ್ ತಂಡ ಸೋತರೂ, ಅಬ್ರಾರ್ ಅಹ್ಮದ್  10 ಓವರ್​ಗಳಲ್ಲಿ ಕೇವಲ 28 ರನ್ ನೀಡಿ 1 ವಿಕೆಟ್ ಕಬಳಿಸಿದ್ದರು. ಅಬ್ರಾರ್ ಅವರ ಈ ಭರ್ಜರಿ ಪ್ರದರ್ಶನಕ್ಕೆ ವಿರಾಟ್ ಕೊಹ್ಲಿ ಶ್ಲಾಘನೆ ವ್ಯಕ್ತಪಡಿಸಿದ್ದರು. ಅಲ್ಲದೆ ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ್ದೀಯಾ ಎಂದು ಅಭಿನಂದಿಸಿದ್ದರು.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ