AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ರಾರ್ ಅಹ್ಮದ್ ಸೆಲೆಬ್ರೇಷನ್​ನಲ್ಲಿ ತಪ್ಪೇನಿದೆ? ವೀರೇಂದ್ರ ಸೆಹ್ವಾಗ್ ಬೆಂಬಲ

India vs Pakistan: ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ 241 ರನ್​ ಕಲೆಹಾಕಿದರೆ, ಭಾರತ ತಂಡವು ಈ ಗುರಿಯನ್ನು ಕೇವಲ 42.3 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಗೆಲುವು ದಾಖಲಿಸಿದ್ದರು. ಈ ಪಂದ್ಯದಲ್ಲಿ ಗಿಲ್ ಅವರನ್ನು ಔಟ್ ಅಬ್ರಾರ್ ಅಹ್ಮದ್ ವಿಚಿತ್ರವಾಗಿ ಸಂಭ್ರಮಿಸಿದ್ದರು.

ಅಬ್ರಾರ್ ಅಹ್ಮದ್ ಸೆಲೆಬ್ರೇಷನ್​ನಲ್ಲಿ ತಪ್ಪೇನಿದೆ? ವೀರೇಂದ್ರ ಸೆಹ್ವಾಗ್ ಬೆಂಬಲ
Sehwag - Abrar
ಝಾಹಿರ್ ಯೂಸುಫ್
|

Updated on: Mar 11, 2025 | 2:53 PM

Share

ಭಾರತ ಮತ್ತು ಪಾಕಿಸ್ತಾನ್ ನಡುವಣ ಚಾಂಪಿಯನ್ಸ್ ಟ್ರೋಫಿ ಪಂದ್ಯದ ವೇಳೆ ಸಖತ್ ಸುದ್ದಿಯಾಗಿದ್ದು ಯುವ ಸ್ಪಿನ್ನರ್ ಅಬ್ರಾರ್ ಅಹ್ಮದ್. ಅದು ಸಹ ತನ್ನ ವಿಚಿತ್ರ ಶೈಲಿಯ ಸೆಲೆಬ್ರೇಷನ್​ನೊಂದಿಗೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ 2ನೇ ಇನಿಂಗ್ಸ್​ನ 17ನೇ ಓವರ್​ನ 3ನೇ ಎಸೆತದಲ್ಲಿ ಶುಭ್​ಮನ್ ಗಿಲ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿ ಅಬ್ರಾರ್ ಅಹ್ಮದ್ ಕಣ್ ಸನ್ನೆಯ ಮೂಲಕ ನಡಿ ಎಂದಿದ್ದರು.

ಪಾಕಿಸ್ತಾನ್ ಸ್ಪಿನ್ನರ್​ನ ಈ ವಿಚಿತ್ರ ಸೆಲೆಬ್ರೇಷನ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು. ಅಲ್ಲದೆ ಇದರಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದು ಅಬ್ರಾರ್ ಅಹ್ಮದ್ ಕೂಡ ಹೇಳಿದ್ದರು.

ಈ ವಿಚಾರ ಚರ್ಚೆಗೀಡಾಗುತ್ತಿದ್ದಂತೆ ಅಬ್ರಾರ್ ಅಹ್ಮದ್ ಅವರ ಸೆಲೆಬ್ರೇಷನ್​ನಲ್ಲಿ ಏನು ತಪ್ಪಿದೆ ಎಂದು ಪ್ರಶ್ನಿಸಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್. ಚಾನೆಲ್​ ಚರ್ಚೆಯೊಂದರಲ್ಲಿ ಕಾಣಿಸಿಕೊಂಡ ಸೆಹ್ವಾಗ್​ಗೆ ಪಾಕ್ ಸ್ಪಿನ್ನರ್​ನ ವಿಚಿತ್ರ ಸಂಭ್ರಮದ ಬಗ್ಗೆ ಕೇಳಲಾಯಿತು.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ಈ ವೇಳೆ ಮಾತನಾಡಿದ ಸೆಹ್ವಾಗ್, ನಿಜ ಹೇಳಬೇಕೆಂದರೆ ಅಬ್ರಾರ್ ಅತ್ಯುತ್ತಮ ಎಸೆತದ ಮೂಲಕ ಶುಭ್​ಮನ್ ಗಿಲ್ ಅವರನ್ನು ಔಟ್ ಮಾಡಿದ್ದರು. ಅದನ್ನು ನೀವು ಹೇಗೆ ಬೇಕಿದ್ದರೂ ಸಂಭ್ರಮಿಸಬಹುದು.

ಆತ ಯಾರಿಗೂ ಕೆಟ್ಟದಾಗಿ ಬೈದಿಲ್ಲ. ಏನನ್ನೂ ಸಹ ಹೇಳಿಲ್ಲ. ಆತ ಕಣ್ಸನ್ನೆ ಮೂಲಕ ಸೂಚನೆ ನೀಡಿದ್ದ. ಮುಂದಿನ ಪಂದ್ಯದಲ್ಲಿ ಬ್ಯಾಟ್ಸ್​ಮನ್ ಸಿಕ್ಸ್ ಸಿಡಿಸಿದ ಅದೇ ರೀತಿ ಸೂಚನೆ ನೀಡಬಹುದು ಅಷ್ಟೇ. ಇದರಲ್ಲಿ ತಪ್ಪೇನಿಲ್ಲ ಎಂದು ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.

ಈ ಮೂಲಕ ಅಬ್ರಾರ್ ಅಹ್ಮದ್ ಅವರ ಕಣ್ಸನ್ನೆಯ ಸಂಭ್ರಮಕ್ಕೆ ವೀರು ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಯಾರನ್ನೂ ಬೈಯ್ಯದೇ, ಏನನ್ನೂ ಹೇಳದೇ ಈ ರೀತಿಯಾಗಿ ಸಂಭ್ರಮಿಸುವುದರಲ್ಲಿ ಯಾವುದೇ ತಪ್ಪಿಲ್ಲ. ಇಂತಹ ಸೆಲೆಬ್ರೇಷನ್​ಗೆ ಬ್ಯಾಟ್ ಮೂಲಕ ಉತ್ತರ ನೀಡಿ ಬ್ಯಾಟ್ಸ್​ಮನ್ ಕೂಡ ಅದೇ ಶೈಲಿಯಲ್ಲಿ ಪ್ರತ್ಯುತ್ತರ ನೀಡಬಹುದು ಎಂದು ಸೆಹ್ವಾಗ್ ಹೇಳಿದ್ದಾರೆ.

ಇದನ್ನೂ ಓದಿ: ಯುಜ್ವೇಂದ್ರ ಚಹಲ್ ಲವ್ವಿ ಡವ್ವಿ: ಪತಿಯ ಫೋಟೋ ಮತ್ತೆ ಹಂಚಿಕೊಂಡ ಧನಶ್ರೀ ವರ್ಮಾ

ಇನ್ನು ಈ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ್ ತಂಡ ಸೋತರೂ, ಅಬ್ರಾರ್ ಅಹ್ಮದ್  10 ಓವರ್​ಗಳಲ್ಲಿ ಕೇವಲ 28 ರನ್ ನೀಡಿ 1 ವಿಕೆಟ್ ಕಬಳಿಸಿದ್ದರು. ಅಬ್ರಾರ್ ಅವರ ಈ ಭರ್ಜರಿ ಪ್ರದರ್ಶನಕ್ಕೆ ವಿರಾಟ್ ಕೊಹ್ಲಿ ಶ್ಲಾಘನೆ ವ್ಯಕ್ತಪಡಿಸಿದ್ದರು. ಅಲ್ಲದೆ ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ್ದೀಯಾ ಎಂದು ಅಭಿನಂದಿಸಿದ್ದರು.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್