AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಭಾರತ ತಂಡದ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ

India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 4 ಪಂದ್ಯಗಳ ಟಿ20 ಸರಣಿಯು ನವೆಂಬರ್ 8 ರಿಂದ ಶುರುವಾಗಲಿದೆ. ಸೌತ್ ಆಫ್ರಿಕಾದಲ್ಲಿ ನಡೆಯಲಿರುವ ಈ ಸರಣಿಗಾಗಿ 15 ಸದಸ್ಯರ ಭಾರತ ತಂಡವನ್ನು ಈಗಾಗಲೇ ಘೋಷಿಸಲಾಗಿದೆ. ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. 

IND vs SA: ಭಾರತ ತಂಡದ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ನೇಮಕ
VVS Laxman
ಝಾಹಿರ್ ಯೂಸುಫ್
|

Updated on:Oct 28, 2024 | 11:20 AM

Share

ಸೌತ್ ಆಫ್ರಿಕಾ ವಿರುದ್ಧದ ಸರಣಿಗಾಗಿ ವಿವಿಎಸ್ ಲಕ್ಷ್ಮಣ್ ಅವರನ್ನು ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ. ಟೀಮ್ ಇಂಡಿಯಾ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಸರಣಿಗಾಗಿ ತೆರಳಲಿದ್ದು, ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಮುಖ್ಯ ಕೋಚ್ ಗೌತಮ್ ಗಂಭೀರ್ ಅಲಭ್ಯರಾಗಲಿದ್ದಾರೆ.

ಹೀಗಾಗಿ ಸೌತ್ ಆಫ್ರಿಕಾ ವಿರುದ್ದದ ಸರಣಿಗಾಗಿ ವಿವಿಎಸ್​ ಲಕ್ಷ್ಮಣ್ ಅವರನ್ನು ಕೋಚ್ ಆಗಿ ಕಳುಹಿಸಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ನವೆಂಬರ್ 8 ರಿಂದ ಆರಂಭವಾಗಲಿರುವ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ ಮುಖ್ಯ ಕೋಚ್ ಹುದ್ದೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ವಿವಿಎಸ್​ ಲಕ್ಷ್ಮಣ್ ಅವರೊಂದಿಗೆ ಸಾಯಿರಾಜ್ ಬಹುತುಲೆ, ಹೃಷಿಕೇಶ್ ಕಾನಿಟ್ಕರ್ ಮತ್ತು ಸುಭದೀಪ್ ಘೋಷ್ ಅವರು ಕೋಚಿಂಗ್ ಸಿಬ್ಬಂದಿಯ ಭಾಗವಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: RCB ಉಳಿಸಿಕೊಂಡ ಆರು ಆಟಗಾರರು ಯಾರೆಲ್ಲಾ ಗೊತ್ತಾ?

ಈ ಹಿಂದೆ ಕೂಡ ವಿವಿಎಸ್​ ಲಕ್ಷ್ಮಣ್ ಭಾರತ ತಂಡದ ತಾತ್ಕಾಲಿಕ ಕೋಚ್ ಹುದ್ದೆಯಲ್ಲಿ ಕಾಣಿಸಿಕೊಂಡಿದ್ದರು. ರಾಹುಲ್ ದ್ರಾವಿಡ್ ಅವರ ಅನುಪಸ್ಥಿತಿಯ ವೇಳೆ ಲಕ್ಷ್ಮಣ್ ಅವರನ್ನು ಹಲವು ಸರಣಿಗಳಿಗೆ ಕೋಚ್ ಆಗಿ ನೇಮಿಸಲಾಗಿತ್ತು. ಇದೀಗ ಎನ್​ಸಿಎ ಮುಖ್ಯಸ್ಥನ ಹುದ್ದೆಯಲ್ಲಿ ಮುಂದುವರೆದಿರುವ ಲಕ್ಷ್ಮಣ್ ಅವರು ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯ ವೇಳೆ ತಂಡದ ಕೋಚಿಂಗ್ ಜವಾಬ್ದಾರಿಯನ್ನು ಹೆಗಲೇರಿಸಿಕೊಳ್ಳಲಿದ್ದಾರೆ.

ಭಾರತ vs ಸೌತ್ ಆಫ್ರಿಕಾ ಸರಣಿ ಯಾವಾಗ ಶುರು?

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 4 ಪಂದ್ಯಗಳ ಟಿ20 ಸರಣಿಯು ನವೆಂಬರ್ 8 ರಿಂದ ಶುರುವಾಗಲಿದೆ. ಸೌತ್ ಆಫ್ರಿಕಾದಲ್ಲಿ ನಡೆಯಲಿರುವ ಈ ಸರಣಿಗಾಗಿ 15 ಸದಸ್ಯರ ಭಾರತ ತಂಡವನ್ನು ಈಗಾಗಲೇ ಘೋಷಿಸಲಾಗಿದೆ. ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ…

ತಂಡಗಳು ದಿನಾಂಕ ಸಮಯ ಸ್ಥಳ
1ನೇ ಟಿ20, ಸೌತ್ ಆಫ್ರಿಕಾ vs ಭಾರತ ಶುಕ್ರವಾರ, 8 ನವೆಂಬರ್ 2024 8:30 PM ಡರ್ಬನ್
2ನೇ ಟಿ20, ಸೌತ್ ಆಫ್ರಿಕಾ vs ಭಾರತ ಭಾನುವಾರ, 10 ನವೆಂಬರ್ 2024 8:30 PM ಗ್ಕೆಬರ್ಹಾ
3ನೇ ಟಿ20, ಸೌತ್ ಆಫ್ರಿಕಾ vs ಭಾರತ ಬುಧವಾರ, 13 ನವೆಂಬರ್ 2024 8:30 PM ಸೆಂಚುರಿಯನ್
4ನೇ ಟಿ20, ಸೌತ್ ಆಫ್ರಿಕಾ vs ಭಾರತ ಶುಕ್ರವಾರ, 15 ನವೆಂಬರ್ 2024 8:30 PM ಜೋಹಾನ್ಸ್‌ಬರ್ಗ್

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ , ಅಕ್ಷರ್ ಪಟೇಲ್, ರಮಣ್​ದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್ , ಅರ್ಷದೀಪ್ ಸಿಂಗ್, ವಿಜಯಕುಮಾರ್ ವೈಶಾಕ್, ಅವೇಶ್ ಖಾನ್, ಯಶ್ ದಯಾಳ್.

Published On - 11:19 am, Mon, 28 October 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್